TOP STORIES:

ಬಿರುವೆರ್ ಕುಡ್ಲದ ಫುಡ್‍ಫೆಸ್ಟ್ ಲಾಭಾಂಶದ 2.50ಲ.ರೂ ಚಿಕಿತ್ಸೆಗೆ ಹಸ್ತಾಂತರ


ಬಿರುವೆರ್ ಕುಡ್ಲದ ಫುಡ್‍ಫೆಸ್ಟ್ ಲಾಭಾಂಶದ 2.50ಲ.ರೂ ಚಿಕಿತ್ಸೆಗೆ ಹಸ್ತಾಂತರ

ಸಂಸದ ನಳಿನ್ ಕುಮಾರ್ ಕಟೀಲ್ ಶ್ಲಾಘನೆ

ಕುದ್ರೋಳಿ,ಜ.31: ಉದಯ ಪೂಜಾರಿ ಬಳ್ಳಾಲ್ ಬಾಗ್ ನೇತೃತ್ವದಲ್ಲಿ ಫ್ರೆಂಡ್ಸ್ ಬಳ್ಳಾಲ್‍ಬಾಗ್ ,ಬಿರುವೆರ್ ಕುಡ್ಲದ ಯುವಕರ ಸಮೂಹ ಮಾಡುತ್ತಿರುವ ಸಮಾಜಮುಖೀ ಕೆಲಸವು ಮನಸ್ಸಿದ್ದರೆ ಮಾರ್ಗ ಎಂಬುದಕ್ಕೆ ಉತ್ತಮ ನಿದರ್ಶನ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಮೆಚ್ಚುಗೆ ವ್ಯಕ್ತಪಡಿಸಿದರು.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬುಧವಾರ  ಫ್ರೆಂಡ್ಸ್ ಬಳ್ಳಾಳ್ ಭಾಗ್ ಬಿರುವೆರ್ ಕುಡ್ಲ ಸಂಸ್ಥೆಯು ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಆಯೋಜಿಸಿರುವ ಸ್ಟ್ರೀಟ್ ಫುಡ್ ಉತ್ಸವದಲ್ಲಿ ಲಸ್ಸಿ ಸ್ಟಾಲ್ ಇಟ್ಟಿದ್ದು, ಇದರಲ್ಲಿ ಬಂದ  2.50 ಲಕ್ಷ ರೂ.ಪೂರ್ಣ ಲಾಭಾಂಶವನ್ನು ಐದು ಕುಟುಂಬಗಳ ಚಿಕಿತ್ಸೆಗಾಗಿ ಧನ ಸಹಾಯವನ್ನು ಹಸ್ತಾಂತರಿಸಿ ಮಾತನಾಡಿದರು.

ಈ ಸಂಸ್ಥೆ ಅಸ್ಥಿತ್ವಕ್ಕೆ ಬಂದಾಗಿನಿಂದ ಸುಮಾರು 10 ಕೋ.ರೂಗಳಷ್ಟು ನಿಧಿಯನ್ನು ಅಶಕ್ತರ ಚಿಕಿತ್ಸೆಗೆ, ಶಿಕ್ಷಣಕ್ಕೆ, ವೀಲ್‍ಚೇರ್ ಸೇರಿದಂತೆ ವಿವಿಧ ಸಲಕರಣೆಯ ವಿತರಣೆ, ಸಾಂಸ್ಕೃತಿಕ ಕಾರ್ಯಕ್ರಮ ಮೂಲಕ ಹಿಂದೂ ಸಮಾಜದ ಒಗ್ಗಟ್ಟು ಹೀಗೆ ವಿವಿಧ ರೀತಿಯಲ್ಲಿ ಕೆಲಸ ಮಾಡುತ್ತಾ ಬರುತ್ತಿದೆ.ಇಂತಹ ಉತ್ತಮ ಕೆಲಸಗಳಿಗೆ ನಮ್ಮ ಬೆಂಬಲ ಸದಾ ಇದೆ ಎಂದರು.

*ರಾಜ್ಯ ವಿಧಾನಸಭೆಯ ಸಭಾಪತಿ ಯು.ಟಿ ಖಾದರ್* ಅವರು ಮಾತನಾಡಿ, ಯಾವುದೇ ಜಾತಿ ಮತ ನೋಡದೆ ಬಿರುವೆರ್ ಕುಡ್ಲ ಚಿಕಿತ್ಸೆಗಾಗಿ ಹಣಕಾಸಿನ ನೆರವು ನೀಡುತ್ತಾ ಬರುತ್ತಿರುವುದನ್ನು ಗಮನಿಸಿದ್ದೇನೆ.ಇಂತಹ ಸಂಘಟನೆಗಳ ಸಂಖ್ಯೆ ಇನ್ನೂ ಹೆಚ್ಚಾಗಬೇಕು.ಬಡವರ್ಗಕ್ಕೆ ನೆರವು ಸಿಗುವಂತಾಗಬೇಕೆಂದರು.

ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಬಿರುವೆರ್ ಕುಡ್ಲ ಸಂಸ್ಥೆಗೆ ಸಮಾಜದಲ್ಲಿನ ಕಷ್ಟಗಳನ್ನು ನೀಗಿಸಲು ದೇವರು ಶಕ್ತಿ ನೀಡಲಿ,ಒಗ್ಗಟ್ಟಿನಿಂದ ಈ ಸಂಸ್ಥೆಯಿಂದ ಉತ್ತಮ ಸಮಾಜ ಮುಖಿ ಕೆಲಸ ಕಾರ್ಯಗಳು ನಿರಂತರವಾಗಿ ನಡೆಯಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕುದ್ರೋಳಿ ಶ್ರೀ ಗೋಕರ್ಣ ನಾಥ ಕ್ಷೇತ್ರದ ಅಧ್ಯಕ್ಷರಾದ  ಎಚ್. ಎಸ್ ಸಾಯಿರಾಮ್, ಮುಡಾ ಮಾಜಿ ಅಧ್ಯಕ್ಷ ರವಿ ಶಂಕರ್ ಮಿಜಾರ್,ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವ ಅಧ್ಯಕ್ಷ  ಗಿರಿಧರ್ ಶೆಟ್ಟಿ, ರಣದೀಪ್ ಕಾಂಚನ್,ಜೋಸೆಫ್ ಕ್ರಾಸ್ತ ಮಾರ್ಟೀನ್,ರಾಧಾಕೃಷ್ಣ, ವಸಂತ ಪೂಜಾರಿ, ಉದಯಪೂಜಾರಿ ಬಳ್ಳಾಲ್‍ಬಾಗ್, ಜಿತೇಶ್ ಜೈನ್,ದರ್ಶನ್ ಜೈನ್, ಪ್ರಕಾಶ್ ಪಾಂಡೇಶ್ವರ,ಪ್ರಮೋದ್ ಬಳ್ಳಾಲ್ ಭಾಗ್,ರಜನಿ ಶೆಟ್ಟಿ,ರಾಕೇಶ್ ಪೂಜಾರಿ,ಲತೀಶ್ ಪೂಜಾರಿ,ರಾಕೇಶ್ ಚಿಲಿಂಬಿ, ವಿನೀತ್ ಬಂಗೇರ, ಮಹೇಶ್ ಪೂಜಾರಿ,ಕಿರಣ್ ಪೂಜಾರಿ ಬಂಟ್ವಾಳ,ರಾಮ , ಲೋಹಿತ್ ಗಟ್ಟಿ,ದಿನಿಲ್, ವಿಖ್ಯಾತ್ ಪೂಜಾರಿ,ರೋಷನ್ ಮೆನೆಜಸ್ ಬೋಳೂರು,ರಾಜೇಶ್ ಉರ್ವ,ವಾಝಿ ಪದವಿನಂಗಡಿ,ಕಿರಣ್ ಶೆಟ್ಟಿ,ರೋಷನ್ ಬಳ್ಳಾಲ್‍ಬಾಗ್, ಸುನೀಲ್ ಶೆಟ್ಟಿ ಬಳ್ಳಾಲ್‍ಬಾಗ್, ಜಗದೀಶ್ ಕದ್ರಿ,ರೂಪೇಶ್ ಶೆಟ್ಟಿ,ಪೃಥ್ವಿ ಅಂಬರ್,ಶರಣ್, ವಾಸೀಮ್ ಮತ್ತಿತರಿದ್ದರು.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »