TOP STORIES:

FOLLOW US

ಬಿರುವೆರ್ ಕುಡ್ಲದ ಫುಡ್‍ಫೆಸ್ಟ್ ಲಾಭಾಂಶದ 2.50ಲ.ರೂ ಚಿಕಿತ್ಸೆಗೆ ಹಸ್ತಾಂತರ


ಬಿರುವೆರ್ ಕುಡ್ಲದ ಫುಡ್‍ಫೆಸ್ಟ್ ಲಾಭಾಂಶದ 2.50ಲ.ರೂ ಚಿಕಿತ್ಸೆಗೆ ಹಸ್ತಾಂತರ

ಸಂಸದ ನಳಿನ್ ಕುಮಾರ್ ಕಟೀಲ್ ಶ್ಲಾಘನೆ

ಕುದ್ರೋಳಿ,ಜ.31: ಉದಯ ಪೂಜಾರಿ ಬಳ್ಳಾಲ್ ಬಾಗ್ ನೇತೃತ್ವದಲ್ಲಿ ಫ್ರೆಂಡ್ಸ್ ಬಳ್ಳಾಲ್‍ಬಾಗ್ ,ಬಿರುವೆರ್ ಕುಡ್ಲದ ಯುವಕರ ಸಮೂಹ ಮಾಡುತ್ತಿರುವ ಸಮಾಜಮುಖೀ ಕೆಲಸವು ಮನಸ್ಸಿದ್ದರೆ ಮಾರ್ಗ ಎಂಬುದಕ್ಕೆ ಉತ್ತಮ ನಿದರ್ಶನ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಮೆಚ್ಚುಗೆ ವ್ಯಕ್ತಪಡಿಸಿದರು.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬುಧವಾರ  ಫ್ರೆಂಡ್ಸ್ ಬಳ್ಳಾಳ್ ಭಾಗ್ ಬಿರುವೆರ್ ಕುಡ್ಲ ಸಂಸ್ಥೆಯು ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಆಯೋಜಿಸಿರುವ ಸ್ಟ್ರೀಟ್ ಫುಡ್ ಉತ್ಸವದಲ್ಲಿ ಲಸ್ಸಿ ಸ್ಟಾಲ್ ಇಟ್ಟಿದ್ದು, ಇದರಲ್ಲಿ ಬಂದ  2.50 ಲಕ್ಷ ರೂ.ಪೂರ್ಣ ಲಾಭಾಂಶವನ್ನು ಐದು ಕುಟುಂಬಗಳ ಚಿಕಿತ್ಸೆಗಾಗಿ ಧನ ಸಹಾಯವನ್ನು ಹಸ್ತಾಂತರಿಸಿ ಮಾತನಾಡಿದರು.

ಈ ಸಂಸ್ಥೆ ಅಸ್ಥಿತ್ವಕ್ಕೆ ಬಂದಾಗಿನಿಂದ ಸುಮಾರು 10 ಕೋ.ರೂಗಳಷ್ಟು ನಿಧಿಯನ್ನು ಅಶಕ್ತರ ಚಿಕಿತ್ಸೆಗೆ, ಶಿಕ್ಷಣಕ್ಕೆ, ವೀಲ್‍ಚೇರ್ ಸೇರಿದಂತೆ ವಿವಿಧ ಸಲಕರಣೆಯ ವಿತರಣೆ, ಸಾಂಸ್ಕೃತಿಕ ಕಾರ್ಯಕ್ರಮ ಮೂಲಕ ಹಿಂದೂ ಸಮಾಜದ ಒಗ್ಗಟ್ಟು ಹೀಗೆ ವಿವಿಧ ರೀತಿಯಲ್ಲಿ ಕೆಲಸ ಮಾಡುತ್ತಾ ಬರುತ್ತಿದೆ.ಇಂತಹ ಉತ್ತಮ ಕೆಲಸಗಳಿಗೆ ನಮ್ಮ ಬೆಂಬಲ ಸದಾ ಇದೆ ಎಂದರು.

*ರಾಜ್ಯ ವಿಧಾನಸಭೆಯ ಸಭಾಪತಿ ಯು.ಟಿ ಖಾದರ್* ಅವರು ಮಾತನಾಡಿ, ಯಾವುದೇ ಜಾತಿ ಮತ ನೋಡದೆ ಬಿರುವೆರ್ ಕುಡ್ಲ ಚಿಕಿತ್ಸೆಗಾಗಿ ಹಣಕಾಸಿನ ನೆರವು ನೀಡುತ್ತಾ ಬರುತ್ತಿರುವುದನ್ನು ಗಮನಿಸಿದ್ದೇನೆ.ಇಂತಹ ಸಂಘಟನೆಗಳ ಸಂಖ್ಯೆ ಇನ್ನೂ ಹೆಚ್ಚಾಗಬೇಕು.ಬಡವರ್ಗಕ್ಕೆ ನೆರವು ಸಿಗುವಂತಾಗಬೇಕೆಂದರು.

ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಬಿರುವೆರ್ ಕುಡ್ಲ ಸಂಸ್ಥೆಗೆ ಸಮಾಜದಲ್ಲಿನ ಕಷ್ಟಗಳನ್ನು ನೀಗಿಸಲು ದೇವರು ಶಕ್ತಿ ನೀಡಲಿ,ಒಗ್ಗಟ್ಟಿನಿಂದ ಈ ಸಂಸ್ಥೆಯಿಂದ ಉತ್ತಮ ಸಮಾಜ ಮುಖಿ ಕೆಲಸ ಕಾರ್ಯಗಳು ನಿರಂತರವಾಗಿ ನಡೆಯಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕುದ್ರೋಳಿ ಶ್ರೀ ಗೋಕರ್ಣ ನಾಥ ಕ್ಷೇತ್ರದ ಅಧ್ಯಕ್ಷರಾದ  ಎಚ್. ಎಸ್ ಸಾಯಿರಾಮ್, ಮುಡಾ ಮಾಜಿ ಅಧ್ಯಕ್ಷ ರವಿ ಶಂಕರ್ ಮಿಜಾರ್,ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವ ಅಧ್ಯಕ್ಷ  ಗಿರಿಧರ್ ಶೆಟ್ಟಿ, ರಣದೀಪ್ ಕಾಂಚನ್,ಜೋಸೆಫ್ ಕ್ರಾಸ್ತ ಮಾರ್ಟೀನ್,ರಾಧಾಕೃಷ್ಣ, ವಸಂತ ಪೂಜಾರಿ, ಉದಯಪೂಜಾರಿ ಬಳ್ಳಾಲ್‍ಬಾಗ್, ಜಿತೇಶ್ ಜೈನ್,ದರ್ಶನ್ ಜೈನ್, ಪ್ರಕಾಶ್ ಪಾಂಡೇಶ್ವರ,ಪ್ರಮೋದ್ ಬಳ್ಳಾಲ್ ಭಾಗ್,ರಜನಿ ಶೆಟ್ಟಿ,ರಾಕೇಶ್ ಪೂಜಾರಿ,ಲತೀಶ್ ಪೂಜಾರಿ,ರಾಕೇಶ್ ಚಿಲಿಂಬಿ, ವಿನೀತ್ ಬಂಗೇರ, ಮಹೇಶ್ ಪೂಜಾರಿ,ಕಿರಣ್ ಪೂಜಾರಿ ಬಂಟ್ವಾಳ,ರಾಮ , ಲೋಹಿತ್ ಗಟ್ಟಿ,ದಿನಿಲ್, ವಿಖ್ಯಾತ್ ಪೂಜಾರಿ,ರೋಷನ್ ಮೆನೆಜಸ್ ಬೋಳೂರು,ರಾಜೇಶ್ ಉರ್ವ,ವಾಝಿ ಪದವಿನಂಗಡಿ,ಕಿರಣ್ ಶೆಟ್ಟಿ,ರೋಷನ್ ಬಳ್ಳಾಲ್‍ಬಾಗ್, ಸುನೀಲ್ ಶೆಟ್ಟಿ ಬಳ್ಳಾಲ್‍ಬಾಗ್, ಜಗದೀಶ್ ಕದ್ರಿ,ರೂಪೇಶ್ ಶೆಟ್ಟಿ,ಪೃಥ್ವಿ ಅಂಬರ್,ಶರಣ್, ವಾಸೀಮ್ ಮತ್ತಿತರಿದ್ದರು.


Share:

More Posts

Category

Send Us A Message

Related Posts

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »