TOP STORIES:

ಬಿರುವೆರ್ ಕುಡ್ಲದ ಫುಡ್‍ಫೆಸ್ಟ್ ಲಾಭಾಂಶದ 2.50ಲ.ರೂ ಚಿಕಿತ್ಸೆಗೆ ಹಸ್ತಾಂತರ


ಬಿರುವೆರ್ ಕುಡ್ಲದ ಫುಡ್‍ಫೆಸ್ಟ್ ಲಾಭಾಂಶದ 2.50ಲ.ರೂ ಚಿಕಿತ್ಸೆಗೆ ಹಸ್ತಾಂತರ

ಸಂಸದ ನಳಿನ್ ಕುಮಾರ್ ಕಟೀಲ್ ಶ್ಲಾಘನೆ

ಕುದ್ರೋಳಿ,ಜ.31: ಉದಯ ಪೂಜಾರಿ ಬಳ್ಳಾಲ್ ಬಾಗ್ ನೇತೃತ್ವದಲ್ಲಿ ಫ್ರೆಂಡ್ಸ್ ಬಳ್ಳಾಲ್‍ಬಾಗ್ ,ಬಿರುವೆರ್ ಕುಡ್ಲದ ಯುವಕರ ಸಮೂಹ ಮಾಡುತ್ತಿರುವ ಸಮಾಜಮುಖೀ ಕೆಲಸವು ಮನಸ್ಸಿದ್ದರೆ ಮಾರ್ಗ ಎಂಬುದಕ್ಕೆ ಉತ್ತಮ ನಿದರ್ಶನ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಮೆಚ್ಚುಗೆ ವ್ಯಕ್ತಪಡಿಸಿದರು.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬುಧವಾರ  ಫ್ರೆಂಡ್ಸ್ ಬಳ್ಳಾಳ್ ಭಾಗ್ ಬಿರುವೆರ್ ಕುಡ್ಲ ಸಂಸ್ಥೆಯು ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಆಯೋಜಿಸಿರುವ ಸ್ಟ್ರೀಟ್ ಫುಡ್ ಉತ್ಸವದಲ್ಲಿ ಲಸ್ಸಿ ಸ್ಟಾಲ್ ಇಟ್ಟಿದ್ದು, ಇದರಲ್ಲಿ ಬಂದ  2.50 ಲಕ್ಷ ರೂ.ಪೂರ್ಣ ಲಾಭಾಂಶವನ್ನು ಐದು ಕುಟುಂಬಗಳ ಚಿಕಿತ್ಸೆಗಾಗಿ ಧನ ಸಹಾಯವನ್ನು ಹಸ್ತಾಂತರಿಸಿ ಮಾತನಾಡಿದರು.

ಈ ಸಂಸ್ಥೆ ಅಸ್ಥಿತ್ವಕ್ಕೆ ಬಂದಾಗಿನಿಂದ ಸುಮಾರು 10 ಕೋ.ರೂಗಳಷ್ಟು ನಿಧಿಯನ್ನು ಅಶಕ್ತರ ಚಿಕಿತ್ಸೆಗೆ, ಶಿಕ್ಷಣಕ್ಕೆ, ವೀಲ್‍ಚೇರ್ ಸೇರಿದಂತೆ ವಿವಿಧ ಸಲಕರಣೆಯ ವಿತರಣೆ, ಸಾಂಸ್ಕೃತಿಕ ಕಾರ್ಯಕ್ರಮ ಮೂಲಕ ಹಿಂದೂ ಸಮಾಜದ ಒಗ್ಗಟ್ಟು ಹೀಗೆ ವಿವಿಧ ರೀತಿಯಲ್ಲಿ ಕೆಲಸ ಮಾಡುತ್ತಾ ಬರುತ್ತಿದೆ.ಇಂತಹ ಉತ್ತಮ ಕೆಲಸಗಳಿಗೆ ನಮ್ಮ ಬೆಂಬಲ ಸದಾ ಇದೆ ಎಂದರು.

*ರಾಜ್ಯ ವಿಧಾನಸಭೆಯ ಸಭಾಪತಿ ಯು.ಟಿ ಖಾದರ್* ಅವರು ಮಾತನಾಡಿ, ಯಾವುದೇ ಜಾತಿ ಮತ ನೋಡದೆ ಬಿರುವೆರ್ ಕುಡ್ಲ ಚಿಕಿತ್ಸೆಗಾಗಿ ಹಣಕಾಸಿನ ನೆರವು ನೀಡುತ್ತಾ ಬರುತ್ತಿರುವುದನ್ನು ಗಮನಿಸಿದ್ದೇನೆ.ಇಂತಹ ಸಂಘಟನೆಗಳ ಸಂಖ್ಯೆ ಇನ್ನೂ ಹೆಚ್ಚಾಗಬೇಕು.ಬಡವರ್ಗಕ್ಕೆ ನೆರವು ಸಿಗುವಂತಾಗಬೇಕೆಂದರು.

ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಬಿರುವೆರ್ ಕುಡ್ಲ ಸಂಸ್ಥೆಗೆ ಸಮಾಜದಲ್ಲಿನ ಕಷ್ಟಗಳನ್ನು ನೀಗಿಸಲು ದೇವರು ಶಕ್ತಿ ನೀಡಲಿ,ಒಗ್ಗಟ್ಟಿನಿಂದ ಈ ಸಂಸ್ಥೆಯಿಂದ ಉತ್ತಮ ಸಮಾಜ ಮುಖಿ ಕೆಲಸ ಕಾರ್ಯಗಳು ನಿರಂತರವಾಗಿ ನಡೆಯಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕುದ್ರೋಳಿ ಶ್ರೀ ಗೋಕರ್ಣ ನಾಥ ಕ್ಷೇತ್ರದ ಅಧ್ಯಕ್ಷರಾದ  ಎಚ್. ಎಸ್ ಸಾಯಿರಾಮ್, ಮುಡಾ ಮಾಜಿ ಅಧ್ಯಕ್ಷ ರವಿ ಶಂಕರ್ ಮಿಜಾರ್,ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವ ಅಧ್ಯಕ್ಷ  ಗಿರಿಧರ್ ಶೆಟ್ಟಿ, ರಣದೀಪ್ ಕಾಂಚನ್,ಜೋಸೆಫ್ ಕ್ರಾಸ್ತ ಮಾರ್ಟೀನ್,ರಾಧಾಕೃಷ್ಣ, ವಸಂತ ಪೂಜಾರಿ, ಉದಯಪೂಜಾರಿ ಬಳ್ಳಾಲ್‍ಬಾಗ್, ಜಿತೇಶ್ ಜೈನ್,ದರ್ಶನ್ ಜೈನ್, ಪ್ರಕಾಶ್ ಪಾಂಡೇಶ್ವರ,ಪ್ರಮೋದ್ ಬಳ್ಳಾಲ್ ಭಾಗ್,ರಜನಿ ಶೆಟ್ಟಿ,ರಾಕೇಶ್ ಪೂಜಾರಿ,ಲತೀಶ್ ಪೂಜಾರಿ,ರಾಕೇಶ್ ಚಿಲಿಂಬಿ, ವಿನೀತ್ ಬಂಗೇರ, ಮಹೇಶ್ ಪೂಜಾರಿ,ಕಿರಣ್ ಪೂಜಾರಿ ಬಂಟ್ವಾಳ,ರಾಮ , ಲೋಹಿತ್ ಗಟ್ಟಿ,ದಿನಿಲ್, ವಿಖ್ಯಾತ್ ಪೂಜಾರಿ,ರೋಷನ್ ಮೆನೆಜಸ್ ಬೋಳೂರು,ರಾಜೇಶ್ ಉರ್ವ,ವಾಝಿ ಪದವಿನಂಗಡಿ,ಕಿರಣ್ ಶೆಟ್ಟಿ,ರೋಷನ್ ಬಳ್ಳಾಲ್‍ಬಾಗ್, ಸುನೀಲ್ ಶೆಟ್ಟಿ ಬಳ್ಳಾಲ್‍ಬಾಗ್, ಜಗದೀಶ್ ಕದ್ರಿ,ರೂಪೇಶ್ ಶೆಟ್ಟಿ,ಪೃಥ್ವಿ ಅಂಬರ್,ಶರಣ್, ವಾಸೀಮ್ ಮತ್ತಿತರಿದ್ದರು.


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »