TOP STORIES:

FOLLOW US

Cancer: ಭಾರತದಲ್ಲಿ ಹೆಡ್​ &​ ನೆಕ್​ ಕ್ಯಾನ್ಸರ್​ ಪ್ರಕರಣ ಹೆಚ್ಚಳ: ಕಾರಣ ಇಲ್ಲಿದೆ!


ನವದೆಹಲಿ: ಭಾರತದಲ್ಲಿ ಹೆಡ್​ ಆಯಂಡ್​ ನೆಕ್​ ಕ್ಯಾನ್ಸರ್​ ಉಲ್ಬಣಕ್ಕೆ ಪ್ರಮುಖ ಕಾರಣ ತಂಬಾಕು ಮತ್ತು ಆಲ್ಕೋಹಾಲ್​ ಬಳಕೆ.

 

ಪ್ರತಿ ವರ್ಷ ವರ್ಲ್ಡ್​ ಹೆಡ್​ ಆಯಂಡ್​ ನೆಕ್​ ಕ್ಯಾನ್ಸರ್​ ಡೇ ಹಿನ್ನೆಲೆಯಲ್ಲಿ ಈ ಕುರಿತು ಜಾಗೃತಿ ಮೂಡಿಸಲಾಗುತ್ತದೆ. ಸಾರ್ವಜನಿಕರಲ್ಲಿ ಇಂಥ ಕ್ಯಾನ್ಸರ್​ ಕುರಿತು ಅರಿವು ಮೂಡಿಸುವ ಅಗತ್ಯವೂ ಇದೆ. ಇದು ಪ್ರಮುಖ ಸಾರ್ವಜನಿಕ ಆರೋಗ್ಯ ಸಮಸ್ಯೆಯಾಗಿ ರೂಪುಗೊಂಡಿದೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಭಾರತಕ್ಕೆ 3ನೇ ಸ್ಥಾನ: ಜಾಗತಿಕ ಕ್ಯಾನ್ಸರ್​ ಅವಲೋಕನ ಸಂಸ್ಥೆ ಅಂದಾಜಿಸಿದಂತೆ, 2020ರಲ್ಲಿ ಜಗತ್ತಿನಾದ್ಯಂತ 19.3 ಮಿಲಿಯನ್​ ಕ್ಯಾನ್ಸರ್​ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಭಾರತ 3ನೇ ಸ್ಥಾನದಲ್ಲಿದ್ದು, ಚೀನಾ ಮತ್ತು ಅಮೆರಿಕ ಮೊದಲೆರಡು ಸ್ಥಾನದಲ್ಲಿವೆ. ಒಟ್ಟಾರೆ ಜಾಗತಿಕವಾಗಿ ದಾಖಲಾಗಿರುವ ಹೆಡ್ ಆಯಂಡ್​ ನೆಕ್​​ ಕ್ಯಾನ್ಸರ್​ನ ಶೇ 67.5ರಷ್ಟು ಪ್ರಕರಣಗಳ ಪೈಕಿ ಏಷ್ಯಾದಲ್ಲೇ ಹೆಚ್ಚು ವರದಿಯಾಗಿದ್ದು, ಭಾರತದಲ್ಲಿ ಶೇ 30 ಪ್ರಕರಣಗಳು ಕಂಡುಬಂದಿವೆ. ವಾರ್ಷಿಕವಾಗಿ, ಭಾರತದಲ್ಲಿ ಸರಿಸುಮಾರು 5,00,000 ಕ್ಯಾನ್ಸರ್​ ಪ್ರಕರಣಗಳು ದಾಖಲಾಗುತ್ತಿದ್ದು, 1,25,000 ಜನರು ಸಾವನ್ನಪ್ಪುತ್ತಿದ್ದಾರೆ.

ವೈದ್ಯರು ಹೇಳುವುದೇನು?: ಹೆಡ್​ ಆಯಂಡ್​ ನೆಕ್​ ಕ್ಯಾನ್ಸರ್​ ಎಂಬುದು ಸಾಮಾನ್ಯವಾಗಿ ನಾಲಿಗೆ, ಬಾಯಿ ಮತ್ತು ಗಂಟಲಿನ ಭಾಗದಲ್ಲಿ ಪತ್ತೆಯಾಗುತ್ತದೆ. ಓರೊಫಾರ್ನೆಕ್ಸ್​, ನಾಸೊಫಾರ್ನೆಕ್ಸ್​, ಹೈಪೋಫಾರ್ನೆಕ್ಸ್​, ಲಾಲಾರಸ ಗ್ರಂಥಿ, ಮೂಗಿನ ಭಾಗ ಮತ್ತು ಧ್ವನಿ ಪೆಟ್ಟಿಗೆ ಸೇರಿದಂತೆ ಮುಂತಾದವುಗಳನ್ನು ಒಳಗೊಂಡಿದೆ. ಈ ಕ್ಯಾನ್ಸರ್​​ ಅನೇಕ ಅಪಾಯದ ಅಂಶಗಳನ್ನು ಹೊಂದಿದೆ. ಇಂಥ ಕ್ಯಾನ್ಸರ್​​ಗೆ ತಂಬಾಕು ಮತ್ತು ಆಲ್ಕೋಹಾಲ್​ ಬಳಕೆ ಹೆಚ್ಚು ಕೊಡುಗೆ ನೀಡುತ್ತದೆ. ದೀರ್ಘಕಾಲದ ಧೂಮಪಾನ ಅಥವಾ ಗುಟ್ಕಾದಂತಹ ತಂಬಾಕು ಸೇವನೆ ಮತ್ತು ಆಲ್ಕೋಹಾಲ್​ ಸೇವನೆ ಕೋಶ ಮತ್ತು ಜೆನೆಟಿಕ್​ ಮ್ಯೂಟೆಷನ್​ ಹಾಳು ಮಾಡುತ್ತವೆ. ಇದು ಕ್ಯಾನ್ಸರ್​ ಉಲ್ಬಣಿಸುತ್ತದೆ ಎಂದು ಗುರುಗ್ರಾಮದ ಕ್ಯಾನ್ಸರ್​ ಇನ್ಸುಟಿಟ್ಯೂಟ್​ನ ವೈಸ್​ ಚೇರ್ಮಾನ್​ ಡಾ.ದೀಪಕ್​ ಸರಿನ್​ ತಿಳಿಸಿದ್ದಾರೆ.

ಭಾರತದಲ್ಲಿ ಸುಪಾರಿ ಸೇವನೆ ಮಾಡುವವರಲ್ಲಿ ಬಾಯಿಯೊಳಗಿನ ಚರ್ಮದ ಲೈನಿಂಗ್​ ಬದಲಾಗಿ ಅದೂ ಕೂಡ ಬಾಯಿ ಕ್ಯಾನ್ಸರ್​​ಗೆ ಕಾರಣವಾಗುತ್ತದೆ. ಇತ್ತೀಚೆಗೆ ಎಚ್​ಪಿವಿ ಸೋಂಕು ಕೂಡ ಗಂಟಲಿನ ಕ್ಯಾನ್ಸರ್​ನೊಂದಿಗೆ ಸಂಬಂಧ ಹೊಂದಿದೆ ಎಂದು ತಿಳಿದು ಬಂದಿದೆ. ಈ ವೈರಸ್​​ಗಳು ಓರಲ್​ ಸೆಕ್ಸ್​ ಅಥವಾ ಈ ರೀತಿಯ ಪರಿಣಾಮದಿಂದಲೂ ದೇಹ ಸೇರುತ್ತದೆ ಎಂದು ಅವರು ಹೇಳಿದ್ದಾರೆ.

ಇಂಥ ಕ್ಯಾನ್ಸರ್ ಲಕ್ಷಣಗಳೇನು?: ಕ್ಯಾನ್ಸರ್​.ನೆಟ್​ ವರದಿಯನುಸಾರು ಶೇ 70ರಿಂದ 80ರಷ್ಟು ಹೆಡ್​ ಆಯಂಡ್​ ನೆಕ್​ ಕ್ಯಾನ್ಸರ್​​ಗಳು ತಂಬಾಕು ಬಳಕೆಯೊಂದಿಗೆ ಸಂಬಂಧ ಹೊಂದಿದೆ. ಈ ಕ್ಯಾನ್ಸರ್​ ಅನ್ನು ಆರಂಭದಲ್ಲೇ ಪತ್ತೆ ಮಾಡುವುದರಿಂದ ಇದರಿಂದ ಚೇತರಿಕೆ ಹೊಂದುವ ಪ್ರಮಾಣ ಶೇ 80ರಿಂದ 90ರಷ್ಟಿದೆ. ಗಂಟಲು ಸೋರುವಿಕೆ, ಊತ, ನುಂಗಲು ಕಷ್ಟವಾಗುವುದು, ದೀರ್ಘ ಮೂಗು ಕಟ್ಟಿದ ಅನುಭವ, ಸೈನಸ್​ ಸೋಂಕು, ಬಾಯಿಯೊಳಗೆ ಕೆಂಪು ದದ್ದು ಇವುಗಳು ಈ ಕ್ಯಾನ್ಸರ್‌ನ ಪ್ರಮುಖ ಲಕ್ಷಣಗಳು. ಇಂಥ ಲಕ್ಷಣಗಳನ್ನು ಪತ್ತೆ ಮಾಡಿ ತಕ್ಷಣಕ್ಕೆ ಚಿಕಿತ್ಸೆ ಪಡೆಯುವುದು ಕೂಡ ನಿರ್ಣಾಯಕ ಎಂದು ವೈದ್ಯರು ತಿಳಿಸಿದ್ದಾರೆ.

ಪರೋಕ್ಷ ಧೂಮಪಾನಿಗಳಲ್ಲೂ ಹೆಡ್ ಆಯಂಡ್​ ನೆಕ್​ ಕ್ಯಾನ್ಸರ್​ ಅಭಿವೃದ್ಧಿ ಹೊಂದುತ್ತದೆ. ಆಲ್ಕೋಹಾಲ್​ ಕೂಡ ಇದಕ್ಕೆ ಅಪಾಯದ ಅಂಶವೇ. ಕ್ಯಾನ್ಸರ್​ನ ಪ್ರಾಥಮಿಕ ಚಿಕಿತ್ಸೆಯಲ್ಲಿ ಸರ್ಜರಿ, ರೆಡಿಯೇಷನ್​​ ಥೆರಪಿ, ಕಿಮೋಥೆರಪಿ ಮಾಡಲಾಗುತ್ತದೆ. ಇಂಥ ಥೆರಪಿಗಳು ಕೆಲವು ಅಡ್ಡ ಪರಿಣಾಮವನ್ನೂ ಹೊಂದಿದ್ದು, ಇದರಿಂದ ಮಾತಾಡಲು ಅಥವಾ ನುಂಗಲು ಕಷ್ಟಪಡಬಹುದು. ನೋವು, ಅಹಿತಕರ ಅನುಭವ, ಆಯಾಸ, ಸುಸ್ತು, ಕೂದಲು ನಷ್ಟ, ಹಸಿವು ನಷ್ಟದಂತಹ ಸಮಸ್ಯೆ ಕಾಡಬಹುದು.


Share:

More Posts

Category

Send Us A Message

Related Posts

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »

ಬಿಲ್ಲವಾಸ್ ಕತಾರ್ ನ ಇತಿಹಾಸದಲ್ಲಿ ಇನ್ನೊಂದು ಮೈಲಿಗಲ್ಲು. ಉಚಿತ ಆರೋಗ್ಯತಪಾಸಣಾ ಶಿಬಿರ ಮತ್ತು ಬಿಲ್ಲವಾಸ್ ಕತಾರ್ ನ ಅಧೀಕೃತ ಲಾಂಛನ (ಲೋಗೋ) ಬಿಡುಗಡೆ


Share       Noಹಲವು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿರುವ ಬಿಲ್ಲವಾಸ್ ಕತಾರ್ ರವರ  ವತಿಯಿಂದ ದಿನಾಂಕ ೧೧.೦೪.೨೦೨೫ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಿಮ್ಸ್ ಮೆಡಿಕಲ್ ಸೆಂಟರ್, ಅಲ್ ಮಿಶಾಫ್, ಕತಾರ್ ಅವರ


Read More »

“ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ ” ಪ್ರತಿಭಾ ಕುಳಾಯಿ ಆಯ್ಕೆ 


Share       ಮಂಗಳೂರು: ಸಮಾಜ ಸೇವೆಗಾಗಿ ಕುಳಾಯಿ ಫೌಂಡೇಶನ್ ರಚಿಸಿ ೫೦೦ಕ್ಕೂ ಹೆಚ್ಚು ಮಹಿಳೆ ಮತ್ತು ಮಕ್ಕಳಿಗೆ ಬದುಕು ಕಟ್ಟಿಕೊಡುತ್ತಿರುವ, ಯುವ ರಾಜಕಾರಣಿ ಪ್ರತಿಭಾ ಕುಳಾಯಿ, ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ಸ್ ಗೆ ಆಯ್ಕೆಯಾಗಿದ್ದಾರೆ. ರಷ್ಯಾದ


Read More »

ವಿದೇಶದ ಇಸ್ರೇಲ್ ನಲ್ಲಿದ್ದು ತುಳುನಾಡಿನ ಸಂಕಷ್ಟದ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಿದ ಮಹನೀಯ ವ್ಯಕ್ತಿ ದಿನಕರ ಪೂಜಾರಿ


Share       ನಾನು ನನ್ನವರು ಎಂಬ ಈ ಕಾಲ ಘಟ್ಟದಲ್ಲಿ ಸಮಾನ ಮನಸ್ಕರ ಜೊತೆ  ಸೇರಿ ದುಡಿದದ್ದರಲ್ಲಿ ಸ್ವಲ್ಪ ಪಾಲನ್ನು ಸಮಾಜಕ್ಕಾಗಿ ವಿನಿಯೋಗಿಸುವ ಮಹೋನ್ನತ ಕಾರ್ಯಗೈಯುತ್ತಿರುವ ವ್ಯಕ್ತಿ ದಿನಕರ ಪೂಜಾರಿ. ವಿದೇಶದಲ್ಲಿದ್ದು ಸಂಕಷ್ಟದ ಕುಟುಂಬಕ್ಕೆ ಆರ್ಥಿಕ


Read More »