TOP STORIES:

FOLLOW US

Cancer: ಭಾರತದಲ್ಲಿ ಹೆಡ್​ &​ ನೆಕ್​ ಕ್ಯಾನ್ಸರ್​ ಪ್ರಕರಣ ಹೆಚ್ಚಳ: ಕಾರಣ ಇಲ್ಲಿದೆ!


ನವದೆಹಲಿ: ಭಾರತದಲ್ಲಿ ಹೆಡ್​ ಆಯಂಡ್​ ನೆಕ್​ ಕ್ಯಾನ್ಸರ್​ ಉಲ್ಬಣಕ್ಕೆ ಪ್ರಮುಖ ಕಾರಣ ತಂಬಾಕು ಮತ್ತು ಆಲ್ಕೋಹಾಲ್​ ಬಳಕೆ.

 

ಪ್ರತಿ ವರ್ಷ ವರ್ಲ್ಡ್​ ಹೆಡ್​ ಆಯಂಡ್​ ನೆಕ್​ ಕ್ಯಾನ್ಸರ್​ ಡೇ ಹಿನ್ನೆಲೆಯಲ್ಲಿ ಈ ಕುರಿತು ಜಾಗೃತಿ ಮೂಡಿಸಲಾಗುತ್ತದೆ. ಸಾರ್ವಜನಿಕರಲ್ಲಿ ಇಂಥ ಕ್ಯಾನ್ಸರ್​ ಕುರಿತು ಅರಿವು ಮೂಡಿಸುವ ಅಗತ್ಯವೂ ಇದೆ. ಇದು ಪ್ರಮುಖ ಸಾರ್ವಜನಿಕ ಆರೋಗ್ಯ ಸಮಸ್ಯೆಯಾಗಿ ರೂಪುಗೊಂಡಿದೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಭಾರತಕ್ಕೆ 3ನೇ ಸ್ಥಾನ: ಜಾಗತಿಕ ಕ್ಯಾನ್ಸರ್​ ಅವಲೋಕನ ಸಂಸ್ಥೆ ಅಂದಾಜಿಸಿದಂತೆ, 2020ರಲ್ಲಿ ಜಗತ್ತಿನಾದ್ಯಂತ 19.3 ಮಿಲಿಯನ್​ ಕ್ಯಾನ್ಸರ್​ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಭಾರತ 3ನೇ ಸ್ಥಾನದಲ್ಲಿದ್ದು, ಚೀನಾ ಮತ್ತು ಅಮೆರಿಕ ಮೊದಲೆರಡು ಸ್ಥಾನದಲ್ಲಿವೆ. ಒಟ್ಟಾರೆ ಜಾಗತಿಕವಾಗಿ ದಾಖಲಾಗಿರುವ ಹೆಡ್ ಆಯಂಡ್​ ನೆಕ್​​ ಕ್ಯಾನ್ಸರ್​ನ ಶೇ 67.5ರಷ್ಟು ಪ್ರಕರಣಗಳ ಪೈಕಿ ಏಷ್ಯಾದಲ್ಲೇ ಹೆಚ್ಚು ವರದಿಯಾಗಿದ್ದು, ಭಾರತದಲ್ಲಿ ಶೇ 30 ಪ್ರಕರಣಗಳು ಕಂಡುಬಂದಿವೆ. ವಾರ್ಷಿಕವಾಗಿ, ಭಾರತದಲ್ಲಿ ಸರಿಸುಮಾರು 5,00,000 ಕ್ಯಾನ್ಸರ್​ ಪ್ರಕರಣಗಳು ದಾಖಲಾಗುತ್ತಿದ್ದು, 1,25,000 ಜನರು ಸಾವನ್ನಪ್ಪುತ್ತಿದ್ದಾರೆ.

ವೈದ್ಯರು ಹೇಳುವುದೇನು?: ಹೆಡ್​ ಆಯಂಡ್​ ನೆಕ್​ ಕ್ಯಾನ್ಸರ್​ ಎಂಬುದು ಸಾಮಾನ್ಯವಾಗಿ ನಾಲಿಗೆ, ಬಾಯಿ ಮತ್ತು ಗಂಟಲಿನ ಭಾಗದಲ್ಲಿ ಪತ್ತೆಯಾಗುತ್ತದೆ. ಓರೊಫಾರ್ನೆಕ್ಸ್​, ನಾಸೊಫಾರ್ನೆಕ್ಸ್​, ಹೈಪೋಫಾರ್ನೆಕ್ಸ್​, ಲಾಲಾರಸ ಗ್ರಂಥಿ, ಮೂಗಿನ ಭಾಗ ಮತ್ತು ಧ್ವನಿ ಪೆಟ್ಟಿಗೆ ಸೇರಿದಂತೆ ಮುಂತಾದವುಗಳನ್ನು ಒಳಗೊಂಡಿದೆ. ಈ ಕ್ಯಾನ್ಸರ್​​ ಅನೇಕ ಅಪಾಯದ ಅಂಶಗಳನ್ನು ಹೊಂದಿದೆ. ಇಂಥ ಕ್ಯಾನ್ಸರ್​​ಗೆ ತಂಬಾಕು ಮತ್ತು ಆಲ್ಕೋಹಾಲ್​ ಬಳಕೆ ಹೆಚ್ಚು ಕೊಡುಗೆ ನೀಡುತ್ತದೆ. ದೀರ್ಘಕಾಲದ ಧೂಮಪಾನ ಅಥವಾ ಗುಟ್ಕಾದಂತಹ ತಂಬಾಕು ಸೇವನೆ ಮತ್ತು ಆಲ್ಕೋಹಾಲ್​ ಸೇವನೆ ಕೋಶ ಮತ್ತು ಜೆನೆಟಿಕ್​ ಮ್ಯೂಟೆಷನ್​ ಹಾಳು ಮಾಡುತ್ತವೆ. ಇದು ಕ್ಯಾನ್ಸರ್​ ಉಲ್ಬಣಿಸುತ್ತದೆ ಎಂದು ಗುರುಗ್ರಾಮದ ಕ್ಯಾನ್ಸರ್​ ಇನ್ಸುಟಿಟ್ಯೂಟ್​ನ ವೈಸ್​ ಚೇರ್ಮಾನ್​ ಡಾ.ದೀಪಕ್​ ಸರಿನ್​ ತಿಳಿಸಿದ್ದಾರೆ.

ಭಾರತದಲ್ಲಿ ಸುಪಾರಿ ಸೇವನೆ ಮಾಡುವವರಲ್ಲಿ ಬಾಯಿಯೊಳಗಿನ ಚರ್ಮದ ಲೈನಿಂಗ್​ ಬದಲಾಗಿ ಅದೂ ಕೂಡ ಬಾಯಿ ಕ್ಯಾನ್ಸರ್​​ಗೆ ಕಾರಣವಾಗುತ್ತದೆ. ಇತ್ತೀಚೆಗೆ ಎಚ್​ಪಿವಿ ಸೋಂಕು ಕೂಡ ಗಂಟಲಿನ ಕ್ಯಾನ್ಸರ್​ನೊಂದಿಗೆ ಸಂಬಂಧ ಹೊಂದಿದೆ ಎಂದು ತಿಳಿದು ಬಂದಿದೆ. ಈ ವೈರಸ್​​ಗಳು ಓರಲ್​ ಸೆಕ್ಸ್​ ಅಥವಾ ಈ ರೀತಿಯ ಪರಿಣಾಮದಿಂದಲೂ ದೇಹ ಸೇರುತ್ತದೆ ಎಂದು ಅವರು ಹೇಳಿದ್ದಾರೆ.

ಇಂಥ ಕ್ಯಾನ್ಸರ್ ಲಕ್ಷಣಗಳೇನು?: ಕ್ಯಾನ್ಸರ್​.ನೆಟ್​ ವರದಿಯನುಸಾರು ಶೇ 70ರಿಂದ 80ರಷ್ಟು ಹೆಡ್​ ಆಯಂಡ್​ ನೆಕ್​ ಕ್ಯಾನ್ಸರ್​​ಗಳು ತಂಬಾಕು ಬಳಕೆಯೊಂದಿಗೆ ಸಂಬಂಧ ಹೊಂದಿದೆ. ಈ ಕ್ಯಾನ್ಸರ್​ ಅನ್ನು ಆರಂಭದಲ್ಲೇ ಪತ್ತೆ ಮಾಡುವುದರಿಂದ ಇದರಿಂದ ಚೇತರಿಕೆ ಹೊಂದುವ ಪ್ರಮಾಣ ಶೇ 80ರಿಂದ 90ರಷ್ಟಿದೆ. ಗಂಟಲು ಸೋರುವಿಕೆ, ಊತ, ನುಂಗಲು ಕಷ್ಟವಾಗುವುದು, ದೀರ್ಘ ಮೂಗು ಕಟ್ಟಿದ ಅನುಭವ, ಸೈನಸ್​ ಸೋಂಕು, ಬಾಯಿಯೊಳಗೆ ಕೆಂಪು ದದ್ದು ಇವುಗಳು ಈ ಕ್ಯಾನ್ಸರ್‌ನ ಪ್ರಮುಖ ಲಕ್ಷಣಗಳು. ಇಂಥ ಲಕ್ಷಣಗಳನ್ನು ಪತ್ತೆ ಮಾಡಿ ತಕ್ಷಣಕ್ಕೆ ಚಿಕಿತ್ಸೆ ಪಡೆಯುವುದು ಕೂಡ ನಿರ್ಣಾಯಕ ಎಂದು ವೈದ್ಯರು ತಿಳಿಸಿದ್ದಾರೆ.

ಪರೋಕ್ಷ ಧೂಮಪಾನಿಗಳಲ್ಲೂ ಹೆಡ್ ಆಯಂಡ್​ ನೆಕ್​ ಕ್ಯಾನ್ಸರ್​ ಅಭಿವೃದ್ಧಿ ಹೊಂದುತ್ತದೆ. ಆಲ್ಕೋಹಾಲ್​ ಕೂಡ ಇದಕ್ಕೆ ಅಪಾಯದ ಅಂಶವೇ. ಕ್ಯಾನ್ಸರ್​ನ ಪ್ರಾಥಮಿಕ ಚಿಕಿತ್ಸೆಯಲ್ಲಿ ಸರ್ಜರಿ, ರೆಡಿಯೇಷನ್​​ ಥೆರಪಿ, ಕಿಮೋಥೆರಪಿ ಮಾಡಲಾಗುತ್ತದೆ. ಇಂಥ ಥೆರಪಿಗಳು ಕೆಲವು ಅಡ್ಡ ಪರಿಣಾಮವನ್ನೂ ಹೊಂದಿದ್ದು, ಇದರಿಂದ ಮಾತಾಡಲು ಅಥವಾ ನುಂಗಲು ಕಷ್ಟಪಡಬಹುದು. ನೋವು, ಅಹಿತಕರ ಅನುಭವ, ಆಯಾಸ, ಸುಸ್ತು, ಕೂದಲು ನಷ್ಟ, ಹಸಿವು ನಷ್ಟದಂತಹ ಸಮಸ್ಯೆ ಕಾಡಬಹುದು.


Share:

More Posts

Category

Send Us A Message

Related Posts

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಚುನಾವಣಾ ಪ್ರಚಾರಕ್ಕಾಗಿ ಶ್ರೀ ನಾರಾಯಣ ಗುರು ಹಾಗೂ ಕೋಟಿ-ಚೆನ್ನಯರ ದುರ್ಬಳಕೆ


Share       ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ತಮ್ಮ ಚುನಾವಣಾ ಪ್ರಚಾರಕ್ಕಾಗಿ ಸಮಾಜ ಸುಧಾರಕ ಶ್ರೀ ನಾರಾಯಣ ಗುರು ಹಾಗೂ ತುಳುನಾಡಿನ ಅವಳಿ ಯೋಧರಾದ ಕೋಟಿ-ಚೆನ್ನಯರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ, ಪುಷ್ಪ ನಮನ ನಾಟಕ ಬಿಲ್ಲವ


Read More »

ಬಿಲ್ಲವ ಸಮಾಜದ ಜನರ ಭಾವನೆ ಜತೆ ಚೆಲ್ಲಾಟ ಬೇಡ:ಸತ್ಯಜಿತ್ ಸುರತ್ಕಲ್


Share       ಸಮುದಾಯ ಭಾವನೆ ಜತೆ ಚೆಲ್ಲಾಟ ಬೇಡ:ಸತ್ಯಜಿತ್ ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರು, ಕೋಟಿ ಚೆನ್ನಯರ ಹೆಸರಿನಲ್ಲಿ ಬಿಲ್ಲವ ಸಮಾಜದ ಜನರ ಭಾವನೆಗಳ ಜತೆಗೆ ಚೆಲ್ಲಾಟವಾಡುವ ಪ್ರಯತ್ನ ಮುಂದುವರಿಸಿದರೆ, ಈ ಬಾರಿ ಅದಕ್ಕೆ ತಕ್ಕ ಉತ್ತರವನ್ನು


Read More »

ಸಾರ್ವಜನಿಕರೇ ಗಮನಿಸಿ : ‘ಮತದಾರರ ಪಟ್ಟಿ’ಯಲ್ಲಿ ನಿಮ್ಮ ಹೆಸರನ್ನು ನೋಂದಾಯಿಸಲು ಇಲ್ಲಿದೆ ಸುಲಭ ವಿಧಾನ


Share       ಭಾರತದಂತಹ ಪ್ರಜಾಪ್ರಭುತ್ವದಲ್ಲಿ ಮತದಾನ ಕೇವಲ ಹಕ್ಕು ಮಾತ್ರವಲ್ಲ, ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಇದು ರಾಷ್ಟ್ರದ ಭವಿಷ್ಯವನ್ನು ರೂಪಿಸುವ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ಅಧಿಕಾರವಾಗಿದೆ. ನೀವು ಭಾರತದಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದರೆ ಮತ್ತು ಇನ್ನೂ ನೋಂದಾಯಿಸದಿದ್ದರೆ,


Read More »

ನಾಮಪತ್ರ ಸಲ್ಲಿಸುವ ಮುನ್ನ ನನ್ನ ಮಾತೃಶ್ರೀಯವರ ಆಶೀರ್ವಾದ ಪಡೆದ‌ ಕೋಟ ಶ್ರೀನಿವಾಸ್ ಪೂಜಾರಿ


Share       ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಮುನ್ನ ತಾಯಿ ಮನೆಗೆ ಹೋಗಿ ನನ್ನ ಮಾತೃಶ್ರೀಯವರ ಲಚ್ಚಿ ಪೂಜಾರ್ದಿ ಅವರ  ಆಶೀರ್ವಾದ ಪಡೆದ ನಂತದ


Read More »

ಸರ್ವಧರ್ಮದವರನ್ನು ಸಮಾನರನ್ನಾಗಿ ಕಾಣುವ ಮಾಣಿಕ್ಯ ಪದ್ಮರಾಜ್ ಆರ್


Share       ಇವರು ಸದಾ ಹಸನ್ಮುಖಿ… ಎಲ್ಲರಲ್ಲೂ ನಗುಮುಖದಿಂದಲೇ ಮಾತನಾಡಿಸುತ್ತ ಸಮಸ್ಯೆ ಆಲಿಸುವ ಸರಳ ಸಜ್ಜನಿಕೆಯ ಗುಣಹೊಂದಿದವರು ನೇರ ನಡೆನುಡಿಯ ಧೀಮಂತ ವ್ಯಕ್ತಿತ್ವದ ಪದ್ಮರಾಜ್ ಆರ್. ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶ, ಸಮಾಜಸೇವೆಯನ್ನು ಮೈಗೂಡಿಸಿಕೊಂಡು, ಕುದ್ರೋಳಿ ಗೋಕರ್ಣನಾಥ ದೇವಳದ


Read More »

ಶ್ರೀಮತಿ ಶಾರದಾ ಅಂಚನ್ ಅವರಿಗೆ “ಪ್ರೊ| ನಳಿನಿ ವಿಶ್ವನಾಥ್ ಕಾರ್ನಾಡ್  ಸಂಸ್ಮರಣಾ ಪ್ರಶಸ್ತಿ”


Share       ಶ್ರೀಮತಿ ಶಾರದಾ ಅಂಚನ್ ಅವರಿಗೆ “ಪ್ರೊ| ನಳಿನಿ ವಿಶ್ವನಾಥ್ ಕಾರ್ನಾಡ್  ಸಂಸ್ಮರಣಾ ಪ್ರಶಸ್ತಿ” ಗೋರೆಗಾಂವ್ ಕರ್ನಾಟಕ ಸಂಘದ ಮಹಿಳಾ ವಿಭಾಗದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಮಾ. 8ರಂದು ಅಪರಾಹ್ನ 4ರಿಂದ ಸಂಘದ ಅಧ್ಯಕ್ಷ ನಿತ್ಯಾನಂದ ಡಿ.


Read More »