TOP STORIES:

Cancer: ಭಾರತದಲ್ಲಿ ಹೆಡ್​ &​ ನೆಕ್​ ಕ್ಯಾನ್ಸರ್​ ಪ್ರಕರಣ ಹೆಚ್ಚಳ: ಕಾರಣ ಇಲ್ಲಿದೆ!


ನವದೆಹಲಿ: ಭಾರತದಲ್ಲಿ ಹೆಡ್​ ಆಯಂಡ್​ ನೆಕ್​ ಕ್ಯಾನ್ಸರ್​ ಉಲ್ಬಣಕ್ಕೆ ಪ್ರಮುಖ ಕಾರಣ ತಂಬಾಕು ಮತ್ತು ಆಲ್ಕೋಹಾಲ್​ ಬಳಕೆ.

 

ಪ್ರತಿ ವರ್ಷ ವರ್ಲ್ಡ್​ ಹೆಡ್​ ಆಯಂಡ್​ ನೆಕ್​ ಕ್ಯಾನ್ಸರ್​ ಡೇ ಹಿನ್ನೆಲೆಯಲ್ಲಿ ಈ ಕುರಿತು ಜಾಗೃತಿ ಮೂಡಿಸಲಾಗುತ್ತದೆ. ಸಾರ್ವಜನಿಕರಲ್ಲಿ ಇಂಥ ಕ್ಯಾನ್ಸರ್​ ಕುರಿತು ಅರಿವು ಮೂಡಿಸುವ ಅಗತ್ಯವೂ ಇದೆ. ಇದು ಪ್ರಮುಖ ಸಾರ್ವಜನಿಕ ಆರೋಗ್ಯ ಸಮಸ್ಯೆಯಾಗಿ ರೂಪುಗೊಂಡಿದೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಭಾರತಕ್ಕೆ 3ನೇ ಸ್ಥಾನ: ಜಾಗತಿಕ ಕ್ಯಾನ್ಸರ್​ ಅವಲೋಕನ ಸಂಸ್ಥೆ ಅಂದಾಜಿಸಿದಂತೆ, 2020ರಲ್ಲಿ ಜಗತ್ತಿನಾದ್ಯಂತ 19.3 ಮಿಲಿಯನ್​ ಕ್ಯಾನ್ಸರ್​ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಭಾರತ 3ನೇ ಸ್ಥಾನದಲ್ಲಿದ್ದು, ಚೀನಾ ಮತ್ತು ಅಮೆರಿಕ ಮೊದಲೆರಡು ಸ್ಥಾನದಲ್ಲಿವೆ. ಒಟ್ಟಾರೆ ಜಾಗತಿಕವಾಗಿ ದಾಖಲಾಗಿರುವ ಹೆಡ್ ಆಯಂಡ್​ ನೆಕ್​​ ಕ್ಯಾನ್ಸರ್​ನ ಶೇ 67.5ರಷ್ಟು ಪ್ರಕರಣಗಳ ಪೈಕಿ ಏಷ್ಯಾದಲ್ಲೇ ಹೆಚ್ಚು ವರದಿಯಾಗಿದ್ದು, ಭಾರತದಲ್ಲಿ ಶೇ 30 ಪ್ರಕರಣಗಳು ಕಂಡುಬಂದಿವೆ. ವಾರ್ಷಿಕವಾಗಿ, ಭಾರತದಲ್ಲಿ ಸರಿಸುಮಾರು 5,00,000 ಕ್ಯಾನ್ಸರ್​ ಪ್ರಕರಣಗಳು ದಾಖಲಾಗುತ್ತಿದ್ದು, 1,25,000 ಜನರು ಸಾವನ್ನಪ್ಪುತ್ತಿದ್ದಾರೆ.

ವೈದ್ಯರು ಹೇಳುವುದೇನು?: ಹೆಡ್​ ಆಯಂಡ್​ ನೆಕ್​ ಕ್ಯಾನ್ಸರ್​ ಎಂಬುದು ಸಾಮಾನ್ಯವಾಗಿ ನಾಲಿಗೆ, ಬಾಯಿ ಮತ್ತು ಗಂಟಲಿನ ಭಾಗದಲ್ಲಿ ಪತ್ತೆಯಾಗುತ್ತದೆ. ಓರೊಫಾರ್ನೆಕ್ಸ್​, ನಾಸೊಫಾರ್ನೆಕ್ಸ್​, ಹೈಪೋಫಾರ್ನೆಕ್ಸ್​, ಲಾಲಾರಸ ಗ್ರಂಥಿ, ಮೂಗಿನ ಭಾಗ ಮತ್ತು ಧ್ವನಿ ಪೆಟ್ಟಿಗೆ ಸೇರಿದಂತೆ ಮುಂತಾದವುಗಳನ್ನು ಒಳಗೊಂಡಿದೆ. ಈ ಕ್ಯಾನ್ಸರ್​​ ಅನೇಕ ಅಪಾಯದ ಅಂಶಗಳನ್ನು ಹೊಂದಿದೆ. ಇಂಥ ಕ್ಯಾನ್ಸರ್​​ಗೆ ತಂಬಾಕು ಮತ್ತು ಆಲ್ಕೋಹಾಲ್​ ಬಳಕೆ ಹೆಚ್ಚು ಕೊಡುಗೆ ನೀಡುತ್ತದೆ. ದೀರ್ಘಕಾಲದ ಧೂಮಪಾನ ಅಥವಾ ಗುಟ್ಕಾದಂತಹ ತಂಬಾಕು ಸೇವನೆ ಮತ್ತು ಆಲ್ಕೋಹಾಲ್​ ಸೇವನೆ ಕೋಶ ಮತ್ತು ಜೆನೆಟಿಕ್​ ಮ್ಯೂಟೆಷನ್​ ಹಾಳು ಮಾಡುತ್ತವೆ. ಇದು ಕ್ಯಾನ್ಸರ್​ ಉಲ್ಬಣಿಸುತ್ತದೆ ಎಂದು ಗುರುಗ್ರಾಮದ ಕ್ಯಾನ್ಸರ್​ ಇನ್ಸುಟಿಟ್ಯೂಟ್​ನ ವೈಸ್​ ಚೇರ್ಮಾನ್​ ಡಾ.ದೀಪಕ್​ ಸರಿನ್​ ತಿಳಿಸಿದ್ದಾರೆ.

ಭಾರತದಲ್ಲಿ ಸುಪಾರಿ ಸೇವನೆ ಮಾಡುವವರಲ್ಲಿ ಬಾಯಿಯೊಳಗಿನ ಚರ್ಮದ ಲೈನಿಂಗ್​ ಬದಲಾಗಿ ಅದೂ ಕೂಡ ಬಾಯಿ ಕ್ಯಾನ್ಸರ್​​ಗೆ ಕಾರಣವಾಗುತ್ತದೆ. ಇತ್ತೀಚೆಗೆ ಎಚ್​ಪಿವಿ ಸೋಂಕು ಕೂಡ ಗಂಟಲಿನ ಕ್ಯಾನ್ಸರ್​ನೊಂದಿಗೆ ಸಂಬಂಧ ಹೊಂದಿದೆ ಎಂದು ತಿಳಿದು ಬಂದಿದೆ. ಈ ವೈರಸ್​​ಗಳು ಓರಲ್​ ಸೆಕ್ಸ್​ ಅಥವಾ ಈ ರೀತಿಯ ಪರಿಣಾಮದಿಂದಲೂ ದೇಹ ಸೇರುತ್ತದೆ ಎಂದು ಅವರು ಹೇಳಿದ್ದಾರೆ.

ಇಂಥ ಕ್ಯಾನ್ಸರ್ ಲಕ್ಷಣಗಳೇನು?: ಕ್ಯಾನ್ಸರ್​.ನೆಟ್​ ವರದಿಯನುಸಾರು ಶೇ 70ರಿಂದ 80ರಷ್ಟು ಹೆಡ್​ ಆಯಂಡ್​ ನೆಕ್​ ಕ್ಯಾನ್ಸರ್​​ಗಳು ತಂಬಾಕು ಬಳಕೆಯೊಂದಿಗೆ ಸಂಬಂಧ ಹೊಂದಿದೆ. ಈ ಕ್ಯಾನ್ಸರ್​ ಅನ್ನು ಆರಂಭದಲ್ಲೇ ಪತ್ತೆ ಮಾಡುವುದರಿಂದ ಇದರಿಂದ ಚೇತರಿಕೆ ಹೊಂದುವ ಪ್ರಮಾಣ ಶೇ 80ರಿಂದ 90ರಷ್ಟಿದೆ. ಗಂಟಲು ಸೋರುವಿಕೆ, ಊತ, ನುಂಗಲು ಕಷ್ಟವಾಗುವುದು, ದೀರ್ಘ ಮೂಗು ಕಟ್ಟಿದ ಅನುಭವ, ಸೈನಸ್​ ಸೋಂಕು, ಬಾಯಿಯೊಳಗೆ ಕೆಂಪು ದದ್ದು ಇವುಗಳು ಈ ಕ್ಯಾನ್ಸರ್‌ನ ಪ್ರಮುಖ ಲಕ್ಷಣಗಳು. ಇಂಥ ಲಕ್ಷಣಗಳನ್ನು ಪತ್ತೆ ಮಾಡಿ ತಕ್ಷಣಕ್ಕೆ ಚಿಕಿತ್ಸೆ ಪಡೆಯುವುದು ಕೂಡ ನಿರ್ಣಾಯಕ ಎಂದು ವೈದ್ಯರು ತಿಳಿಸಿದ್ದಾರೆ.

ಪರೋಕ್ಷ ಧೂಮಪಾನಿಗಳಲ್ಲೂ ಹೆಡ್ ಆಯಂಡ್​ ನೆಕ್​ ಕ್ಯಾನ್ಸರ್​ ಅಭಿವೃದ್ಧಿ ಹೊಂದುತ್ತದೆ. ಆಲ್ಕೋಹಾಲ್​ ಕೂಡ ಇದಕ್ಕೆ ಅಪಾಯದ ಅಂಶವೇ. ಕ್ಯಾನ್ಸರ್​ನ ಪ್ರಾಥಮಿಕ ಚಿಕಿತ್ಸೆಯಲ್ಲಿ ಸರ್ಜರಿ, ರೆಡಿಯೇಷನ್​​ ಥೆರಪಿ, ಕಿಮೋಥೆರಪಿ ಮಾಡಲಾಗುತ್ತದೆ. ಇಂಥ ಥೆರಪಿಗಳು ಕೆಲವು ಅಡ್ಡ ಪರಿಣಾಮವನ್ನೂ ಹೊಂದಿದ್ದು, ಇದರಿಂದ ಮಾತಾಡಲು ಅಥವಾ ನುಂಗಲು ಕಷ್ಟಪಡಬಹುದು. ನೋವು, ಅಹಿತಕರ ಅನುಭವ, ಆಯಾಸ, ಸುಸ್ತು, ಕೂದಲು ನಷ್ಟ, ಹಸಿವು ನಷ್ಟದಂತಹ ಸಮಸ್ಯೆ ಕಾಡಬಹುದು.


Related Posts

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »