TOP STORIES:

Cancer: ಭಾರತದಲ್ಲಿ ಹೆಡ್​ &​ ನೆಕ್​ ಕ್ಯಾನ್ಸರ್​ ಪ್ರಕರಣ ಹೆಚ್ಚಳ: ಕಾರಣ ಇಲ್ಲಿದೆ!


ನವದೆಹಲಿ: ಭಾರತದಲ್ಲಿ ಹೆಡ್​ ಆಯಂಡ್​ ನೆಕ್​ ಕ್ಯಾನ್ಸರ್​ ಉಲ್ಬಣಕ್ಕೆ ಪ್ರಮುಖ ಕಾರಣ ತಂಬಾಕು ಮತ್ತು ಆಲ್ಕೋಹಾಲ್​ ಬಳಕೆ.

 

ಪ್ರತಿ ವರ್ಷ ವರ್ಲ್ಡ್​ ಹೆಡ್​ ಆಯಂಡ್​ ನೆಕ್​ ಕ್ಯಾನ್ಸರ್​ ಡೇ ಹಿನ್ನೆಲೆಯಲ್ಲಿ ಈ ಕುರಿತು ಜಾಗೃತಿ ಮೂಡಿಸಲಾಗುತ್ತದೆ. ಸಾರ್ವಜನಿಕರಲ್ಲಿ ಇಂಥ ಕ್ಯಾನ್ಸರ್​ ಕುರಿತು ಅರಿವು ಮೂಡಿಸುವ ಅಗತ್ಯವೂ ಇದೆ. ಇದು ಪ್ರಮುಖ ಸಾರ್ವಜನಿಕ ಆರೋಗ್ಯ ಸಮಸ್ಯೆಯಾಗಿ ರೂಪುಗೊಂಡಿದೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಭಾರತಕ್ಕೆ 3ನೇ ಸ್ಥಾನ: ಜಾಗತಿಕ ಕ್ಯಾನ್ಸರ್​ ಅವಲೋಕನ ಸಂಸ್ಥೆ ಅಂದಾಜಿಸಿದಂತೆ, 2020ರಲ್ಲಿ ಜಗತ್ತಿನಾದ್ಯಂತ 19.3 ಮಿಲಿಯನ್​ ಕ್ಯಾನ್ಸರ್​ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಭಾರತ 3ನೇ ಸ್ಥಾನದಲ್ಲಿದ್ದು, ಚೀನಾ ಮತ್ತು ಅಮೆರಿಕ ಮೊದಲೆರಡು ಸ್ಥಾನದಲ್ಲಿವೆ. ಒಟ್ಟಾರೆ ಜಾಗತಿಕವಾಗಿ ದಾಖಲಾಗಿರುವ ಹೆಡ್ ಆಯಂಡ್​ ನೆಕ್​​ ಕ್ಯಾನ್ಸರ್​ನ ಶೇ 67.5ರಷ್ಟು ಪ್ರಕರಣಗಳ ಪೈಕಿ ಏಷ್ಯಾದಲ್ಲೇ ಹೆಚ್ಚು ವರದಿಯಾಗಿದ್ದು, ಭಾರತದಲ್ಲಿ ಶೇ 30 ಪ್ರಕರಣಗಳು ಕಂಡುಬಂದಿವೆ. ವಾರ್ಷಿಕವಾಗಿ, ಭಾರತದಲ್ಲಿ ಸರಿಸುಮಾರು 5,00,000 ಕ್ಯಾನ್ಸರ್​ ಪ್ರಕರಣಗಳು ದಾಖಲಾಗುತ್ತಿದ್ದು, 1,25,000 ಜನರು ಸಾವನ್ನಪ್ಪುತ್ತಿದ್ದಾರೆ.

ವೈದ್ಯರು ಹೇಳುವುದೇನು?: ಹೆಡ್​ ಆಯಂಡ್​ ನೆಕ್​ ಕ್ಯಾನ್ಸರ್​ ಎಂಬುದು ಸಾಮಾನ್ಯವಾಗಿ ನಾಲಿಗೆ, ಬಾಯಿ ಮತ್ತು ಗಂಟಲಿನ ಭಾಗದಲ್ಲಿ ಪತ್ತೆಯಾಗುತ್ತದೆ. ಓರೊಫಾರ್ನೆಕ್ಸ್​, ನಾಸೊಫಾರ್ನೆಕ್ಸ್​, ಹೈಪೋಫಾರ್ನೆಕ್ಸ್​, ಲಾಲಾರಸ ಗ್ರಂಥಿ, ಮೂಗಿನ ಭಾಗ ಮತ್ತು ಧ್ವನಿ ಪೆಟ್ಟಿಗೆ ಸೇರಿದಂತೆ ಮುಂತಾದವುಗಳನ್ನು ಒಳಗೊಂಡಿದೆ. ಈ ಕ್ಯಾನ್ಸರ್​​ ಅನೇಕ ಅಪಾಯದ ಅಂಶಗಳನ್ನು ಹೊಂದಿದೆ. ಇಂಥ ಕ್ಯಾನ್ಸರ್​​ಗೆ ತಂಬಾಕು ಮತ್ತು ಆಲ್ಕೋಹಾಲ್​ ಬಳಕೆ ಹೆಚ್ಚು ಕೊಡುಗೆ ನೀಡುತ್ತದೆ. ದೀರ್ಘಕಾಲದ ಧೂಮಪಾನ ಅಥವಾ ಗುಟ್ಕಾದಂತಹ ತಂಬಾಕು ಸೇವನೆ ಮತ್ತು ಆಲ್ಕೋಹಾಲ್​ ಸೇವನೆ ಕೋಶ ಮತ್ತು ಜೆನೆಟಿಕ್​ ಮ್ಯೂಟೆಷನ್​ ಹಾಳು ಮಾಡುತ್ತವೆ. ಇದು ಕ್ಯಾನ್ಸರ್​ ಉಲ್ಬಣಿಸುತ್ತದೆ ಎಂದು ಗುರುಗ್ರಾಮದ ಕ್ಯಾನ್ಸರ್​ ಇನ್ಸುಟಿಟ್ಯೂಟ್​ನ ವೈಸ್​ ಚೇರ್ಮಾನ್​ ಡಾ.ದೀಪಕ್​ ಸರಿನ್​ ತಿಳಿಸಿದ್ದಾರೆ.

ಭಾರತದಲ್ಲಿ ಸುಪಾರಿ ಸೇವನೆ ಮಾಡುವವರಲ್ಲಿ ಬಾಯಿಯೊಳಗಿನ ಚರ್ಮದ ಲೈನಿಂಗ್​ ಬದಲಾಗಿ ಅದೂ ಕೂಡ ಬಾಯಿ ಕ್ಯಾನ್ಸರ್​​ಗೆ ಕಾರಣವಾಗುತ್ತದೆ. ಇತ್ತೀಚೆಗೆ ಎಚ್​ಪಿವಿ ಸೋಂಕು ಕೂಡ ಗಂಟಲಿನ ಕ್ಯಾನ್ಸರ್​ನೊಂದಿಗೆ ಸಂಬಂಧ ಹೊಂದಿದೆ ಎಂದು ತಿಳಿದು ಬಂದಿದೆ. ಈ ವೈರಸ್​​ಗಳು ಓರಲ್​ ಸೆಕ್ಸ್​ ಅಥವಾ ಈ ರೀತಿಯ ಪರಿಣಾಮದಿಂದಲೂ ದೇಹ ಸೇರುತ್ತದೆ ಎಂದು ಅವರು ಹೇಳಿದ್ದಾರೆ.

ಇಂಥ ಕ್ಯಾನ್ಸರ್ ಲಕ್ಷಣಗಳೇನು?: ಕ್ಯಾನ್ಸರ್​.ನೆಟ್​ ವರದಿಯನುಸಾರು ಶೇ 70ರಿಂದ 80ರಷ್ಟು ಹೆಡ್​ ಆಯಂಡ್​ ನೆಕ್​ ಕ್ಯಾನ್ಸರ್​​ಗಳು ತಂಬಾಕು ಬಳಕೆಯೊಂದಿಗೆ ಸಂಬಂಧ ಹೊಂದಿದೆ. ಈ ಕ್ಯಾನ್ಸರ್​ ಅನ್ನು ಆರಂಭದಲ್ಲೇ ಪತ್ತೆ ಮಾಡುವುದರಿಂದ ಇದರಿಂದ ಚೇತರಿಕೆ ಹೊಂದುವ ಪ್ರಮಾಣ ಶೇ 80ರಿಂದ 90ರಷ್ಟಿದೆ. ಗಂಟಲು ಸೋರುವಿಕೆ, ಊತ, ನುಂಗಲು ಕಷ್ಟವಾಗುವುದು, ದೀರ್ಘ ಮೂಗು ಕಟ್ಟಿದ ಅನುಭವ, ಸೈನಸ್​ ಸೋಂಕು, ಬಾಯಿಯೊಳಗೆ ಕೆಂಪು ದದ್ದು ಇವುಗಳು ಈ ಕ್ಯಾನ್ಸರ್‌ನ ಪ್ರಮುಖ ಲಕ್ಷಣಗಳು. ಇಂಥ ಲಕ್ಷಣಗಳನ್ನು ಪತ್ತೆ ಮಾಡಿ ತಕ್ಷಣಕ್ಕೆ ಚಿಕಿತ್ಸೆ ಪಡೆಯುವುದು ಕೂಡ ನಿರ್ಣಾಯಕ ಎಂದು ವೈದ್ಯರು ತಿಳಿಸಿದ್ದಾರೆ.

ಪರೋಕ್ಷ ಧೂಮಪಾನಿಗಳಲ್ಲೂ ಹೆಡ್ ಆಯಂಡ್​ ನೆಕ್​ ಕ್ಯಾನ್ಸರ್​ ಅಭಿವೃದ್ಧಿ ಹೊಂದುತ್ತದೆ. ಆಲ್ಕೋಹಾಲ್​ ಕೂಡ ಇದಕ್ಕೆ ಅಪಾಯದ ಅಂಶವೇ. ಕ್ಯಾನ್ಸರ್​ನ ಪ್ರಾಥಮಿಕ ಚಿಕಿತ್ಸೆಯಲ್ಲಿ ಸರ್ಜರಿ, ರೆಡಿಯೇಷನ್​​ ಥೆರಪಿ, ಕಿಮೋಥೆರಪಿ ಮಾಡಲಾಗುತ್ತದೆ. ಇಂಥ ಥೆರಪಿಗಳು ಕೆಲವು ಅಡ್ಡ ಪರಿಣಾಮವನ್ನೂ ಹೊಂದಿದ್ದು, ಇದರಿಂದ ಮಾತಾಡಲು ಅಥವಾ ನುಂಗಲು ಕಷ್ಟಪಡಬಹುದು. ನೋವು, ಅಹಿತಕರ ಅನುಭವ, ಆಯಾಸ, ಸುಸ್ತು, ಕೂದಲು ನಷ್ಟ, ಹಸಿವು ನಷ್ಟದಂತಹ ಸಮಸ್ಯೆ ಕಾಡಬಹುದು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »