TOP STORIES:

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ – ಕೋಟಿ ಚೆನ್ನಯರ ಭವ್ಯ ಆಲಯ ನಿರ್ಮಾಣಗೊಂಡಿದೆ.

ಕ್ಷೇತ್ರದ ನಿರ್ಮಾಣ-ಬ್ರಹ್ಮಕಲಶ ಕಾರ್ಯ ಇಡೀ ತುಳುನಾಡಿದ ಧಾರ್ಮಿಕ ಪರಂಪರೆಯಲ್ಲಿ ಹೊಸ ಇತಿಹಾಸವನ್ನು ಸೃಷ್ಟಿಸಿದ್ದು ಇಂದಿಗೂ ನಿತ್ಯ- ನಿರಂತರ ಕ್ಷೇತ್ರಕ್ಕೆ ನೂರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುವುದು ಗೆಜ್ಜೆಗಿರಿ ಕಾರಣಿಕ ಶಕ್ತಿಯನ್ನು ಜಗತ್ತಿಗೆ ಸಾರುತ್ತಿದೆ.

ಏರಾರ್ಜೆ ಬರ್ಕೆ ಎಂಬ ಪ್ರತಿಷ್ಠಿತ ಮನೆತನದ ನೆಲವೇ ಗೆಜ್ಜೆಗಿರಿ ನಂದನಬಿತ್ತಲ್, ಸಾವಿರಾರು ವರ್ಷಗಳ ಇತಿಹಾಸ ಇರುವ ಈ ಮನೆತನ ಪಡುಮಲೆ ಅರಸು ಬಳ್ಳಾಲರ ಸಂಸ್ಥಾನದಲ್ಲಿ ಮಹತ್ವದ ಸ್ಥಾನ ಮಾನ ಪಡೆದ ಮಣ್ಣು ಗುರು ಸಾಯನ ಬೈದ್ಯರು ಈ ಮನೆತನದಲ್ಲಿ ಯಜಮಾನರಾಗಿ ಮೆರೆದಿದ್ದು ಸುಮಾರು 500 ವರ್ಷಗಳ ಇತಿಹಾಸವನ್ನು ಕ್ಷೇತ್ರ ಪರಿಚಯಿಸುತ್ತದೆ. ಮಾತೆ ದೇಯಿ ಬೈದೈತಿಗೆ ಗುರು ಸಾಯನರು ಪುನರ್ಜನ್ಮ ನೀಡಿದ ನೆಲ ಗೆಜ್ಜೆಗಿರಿಯಾಗಿದ್ದು, ಕೋಟಿ ಚೆನ್ನಯರ ಜೀವನ ಕಥಾನಕವನ್ನು ಈ ಪುಣ್ಯಭೂಮಿ ಭಕ್ತ ವೃಂದಕ್ಕೆ ವಿವರಿಸುತ್ತದೆ.

ತುಳುನಾಡಿನ ಅವಳಿ ವೀರ ಪುರುಷರಾಗಿ ಮೆರೆದಾಡಿದ ಕೋಟಿ- ಚೆನ್ನಯರು ಬದುಕಿನ ಬಹುಪಾಲನ್ನು ಕಳೆದ ತಾಣವಾಗಿರುವ ಗೆಜ್ಜೆಗಿರಿಯು ವೀರರ ತಾಯಿ, ಮಾವನವರು ವಾಸಿಸಿದ್ದ ಕೌಟುಂಬದ ಮೂಲವಿದು. ಧರ್ಮದೈವ ಧೂಮಾವತಿಯ ತಾಣವಾಗಿಯೂ ಕಾರಣೀಕತೆಯನ್ನು ತೋರಿಸುತ್ತದೆ. ಒಟ್ಟಾರೆಯಾಗಿ ಹೇಳಬೇಕಾದರೆ ಕೋಟಿ ಚೆನ್ನಯರ ಪಾಲಿಗಿದು ಮೂಲಸ್ಥಾನವೇ ಆಗಿದೆ.

ಗೆಜ್ಜೆಗಿರಿಯ ಮಣ್ಣಲ್ಲಿ ಸತ್ಯಧರ್ಮ ಚಾವಡಿ

ಈ ಮೂರು ತಲೆಮಾರುಗಳ ಕಾರಣಿಕ ಶಕ್ತಿಗಳು ಮಾನವ ರೂಪದಲ್ಲಿ ವಾಸಿಸಿದ್ದ ಮನೆ ಪ್ರಸ್ತುತ ಸಂಪೂರ್ಣ ಪುನರುಥಾನಗೊಂಡು ಸತ್ಯಧರ್ಮ ಚಾವಡಿಯಾಗಿ ಕಂಗೊಳಿಸುತ್ತಿದೆ. ಆ ಕಾಲದ ಧರ್ಮದೈವ ಧೂಮಾವತಿ ಮತ್ತು ಸಪರಿವಾರ ದೈವಗಳ ತಾಣವೂ ಸುಂದರವಾಗಿ ನಿರ್ಮಾಣಗೊಂಡಿದೆ. ಚಾರಿತ್ರಿಕ ಸರೋಳಿ ಸೈಮಂಜ ಕಟ್ಟೆಗೆ ನವಸ್ಪರ್ಶವನ್ನು ಪಡೆದಿದೆ.

ಪಾರಂಪರಿಕ ಶೈಲಿಯಲ್ಲಿ ಪುನರ್ ನಿರ್ಮಾಣ ಗೊಂಡಿರುವ ದೇಯಿ ಮಾತೆಯ ಮಹಾಸಮಾಧಿಯು ಆಸ್ತಿಕ ಬಂಧುಗಳ ಮೈರೋಮಾಂಚನ ಗೊಳಿಸುತ್ತದೆ. ಸಾಯನ ಬೈದ್ಯರ ಗುರುಪೀಠವು ಗುರುಪರಂಪರೆಯ ಭಕ್ತಿಯನ್ನು ಇಮ್ಮಡಿಗೊಳಿಸುತ್ತದೆ. ಅವಳಿ ವೀರರಿಗೆ ಮೂಲ ಮಣ್ಣಲ್ಲಿ ಮೂಲಸ್ಥಾನ ಗರಡಿ ನಿರ್ಮಾಣಗೊಂಡಿದೆ. ಬೆರ್ಮೆರ್ ಗುಂಡವೂ ಮೂಡಿಬಂದಿದ್ದು ಸಮಗ್ರ ಮೂಲಸ್ಥಾನ ಭವ್ಯವಾಗಿ ಪುನರುತ್ಥಾನಗೊಂಡು ಭಕ್ತರ ಪಾಲಿಗೆ ಅಮೃತ ಸಂಜೀವಿನಿಯಾಗಿ ಹತ್ತೂರಿನ ಭಕ್ತರನ್ನೂ ತನ್ನತ್ತ ಕೈಬೀಸಿ ಕರೆಯುತ್ತಿದೆ.

ಇವತ್ತು ಗೆಜ್ಜೆಗಿರಿಯಲ್ಲಿ ನಡೆಯುತ್ತಿರುವ ಆರಾಧನೆ ಇದೇ ಮೂಲಸ್ಥಾನದ ಕಲ್ಪನೆಯಲ್ಲಿದೆ. ಇಲ್ಲಿ ಸಾಯನ ಗುರುಗಳು, ಸಹೋದರಿ ದೇಯಿ ಬೈದೈತಿ ಮತ್ತು ಅಳಿಯಂದಿರಾದ ಕೋಟಿ ಚೆನ್ನಯರ ಆರಾಧನೆ ನಡೆಯುತ್ತದೆ. ಈ ಶಕ್ತಿಗಳು ಅವತಾರ ರೂಪದಲ್ಲಿ ಬದುಕಿದ್ದಾಗ ನಂಬಿಕೊಂಡಿದ್ದ ಧರ್ಮದೈವ ಧೂಮಾವತಿಯ ಉಪಾಸನೆಯೂ ಇಲ್ಲಿದೆ. ಜತೆಗೆ ನಾಗಾರಾಧನೆ, ಸಪರಿವಾದ ದೈವಗಳ ಉಪಾಸನೆಯೂ ಇದೆ. ಒಟ್ಟಾರೆಯಾಗಿ ಹೇಳುವುದಿದ್ದರೆ ತುಳುನಾಡಿನ ಮೂಲಸ್ಥಾನ (ತರವಾಡು) ಕಲ್ಪನೆಯ ಸಮಗ್ರ ಚಿತ್ರಣ ಗೆಜ್ಜೆಗಿರಿಯಲ್ಲಿದೆ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »