TOP STORIES:

ರಕ್ತಹೀನತೆಯಿಂದ ಬಳಲುತ್ತಿರುವವರು ಹುರುಳಿ ಸೇವನೆ ಮಾಡಿ


ಹುರುಳಿ ನಾಲಿಗೆಗೆ ರುಚಿ ನೀಡುವುದರ ಜೊತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಇದು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಭಂಡಾರವಾಗಿದೆ. ಇದು ದೇಹಕ್ಕೆ ಅಗತ್ಯ ಪ್ರಯೋಜನಗಳನ್ನು ನೀಡುವ ಧಾನ್ಯವಾಗಿದೆ. ಅದರಲ್ಲಿಯೂ ಚಳಿಗಾಲದ ಸಂದರ್ಭದಲ್ಲಿ ಇದರ ಸೇವನೆ ಮಾಡುವುದು ದೇಹಕ್ಕೆ ತ್ವರಿತ ಶಕ್ತಿಯನ್ನು ನೀಡುತ್ತದೆ ಎಂದು ತಜ್ಞರು ಹೇಳುತ್ತಾರೆ. ಹಾಗಾದರೆ ಇದರಿಂದ ಸಿಗುವ ಪ್ರಯೋಜನಗಳೇನು ತಿಳಿದುಕೊಳ್ಳಿ.

ನಮ್ಮ ಸಾಂಪ್ರದಾಯಿಕ ಆಹಾರದಲ್ಲಿ ಹುರುಳಿಗೆ ವಿಶೇಷ ಸ್ಥಾನವಿದೆ. ನೀವು ಇದರಿಂದ ರುಚಿ ರುಚಿಯಾದ ಅಡುಗೆಗಳನ್ನು ತಯಾರಿಸಿರಬಹುದು. ಇವು ನಾಲಿಗೆಗೆ ರುಚಿ ನೀಡುವುದರ ಜೊತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಇದು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಭಂಡಾರವಾಗಿದೆ. ಇದು ದೇಹಕ್ಕೆ ಅಗತ್ಯ ಪ್ರಯೋಜನಗಳನ್ನು ನೀಡುವ ಧಾನ್ಯವಾಗಿದೆ. ಅದರಲ್ಲಿಯೂ ಚಳಿಗಾಲದ ಸಂದರ್ಭದಲ್ಲಿ ಇದರ ಸೇವನೆ ಮಾಡುವುದು ದೇಹಕ್ಕೆ ತ್ವರಿತ ಶಕ್ತಿಯನ್ನು ನೀಡುತ್ತದೆ ಎಂದು ತಜ್ಞರು ಹೇಳುತ್ತಾರೆ. ಹಾಗಾದರೆ ಇದರಿಂದ ಸಿಗುವ ಪ್ರಯೋಜನಗಳೇನು ತಿಳಿದುಕೊಳ್ಳಿ.

ಅಜೀರ್ಣ ಸಮಸ್ಯೆಗೆ ಪರಿಹಾರ ನೀಡುತ್ತದೆ

ಸಾಮಾನ್ಯವಾಗಿ ಹುರುಳಿ ಕಾಳಿನಲ್ಲಿ ಫೈಬರ್ ಅಧಿಕವಾಗಿರುತ್ತದೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಹಾಗಾಗಿ ಪದೇ ಪದೇ ಅಜೀರ್ಣ ಸಮಸ್ಯೆ ಕಾಡುತ್ತಿದ್ದರೆ ಪ್ರತಿದಿನ ಹುರುಳಿ ಕಾಳಿನ ಸೇವನೆ ಮಾಡುವ ಮೂಲಕ ಜೀರ್ಣಕಾರಿ ಸಮಸ್ಯೆಗಳಿಂದ ಪರಿಹಾರ ಪಡೆದುಕೊಳ್ಳಬಹುದು. ಜೊತೆಗೆ ಇದು ಕರುಳಿನ ಆರೋಗ್ಯವನ್ನು ಕಾಪಾಡುತ್ತದೆ. ಇದರಲ್ಲಿರುವ ನಾರಿನಾಂಶ ದೇಹಕ್ಕೆ ತಕ್ಷಣದ ಶಕ್ತಿಯನ್ನು ಒದಗಿಸುತ್ತವೆ ಮತ್ತು ಆಯಾಸದಿಂದ ದೂರವಿಡುತ್ತವೆ.

ಮಧುಮೇಹಿಗಳಿಗೆ ಒಳ್ಳೆಯದು

ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಹುರುಳಿ ಪ್ರಮುಖ ಪಾತ್ರ ವಹಿಸುತ್ತದೆ. ಅಲ್ಲದೆ ಇದು ಇನ್ಸುಲಿನ್ ಪ್ರತಿರೋಧವನ್ನು ಕಡಿಮೆ ಮಾಡುವ ಗುಣಗಳನ್ನು ಹೊಂದಿದೆ. ಈ ಗುಣಲಕ್ಷಣಗಳಿಂದಾಗಿ, ಮಧುಮೇಹ ಇರುವವರು ಈ ಕಾಳುಗಳನ್ನು ಆಹಾರದಲ್ಲಿ ಸೇರಿಸಬಹುದು.

ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ

ರಕ್ತಹೀನತೆಯ ಸಮಸ್ಯೆಗಳನ್ನು ಕಡಿಮೆ ಮಾಡಲು ಹುರುಳಿ ಬಹಳ ಉಪಯುಕ್ತವಾಗಿವೆ. ರಕ್ತಹೀನತೆಯಿಂದ ಬಳಲುತ್ತಿರುವವರು ಈ ಧಾನ್ಯವನ್ನು ಸೇವನೆ ಮಾಡಿದಲ್ಲಿ ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಸುಧಾರಿಸಬಹುದು. ಇದಲ್ಲದೆ, ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕರಗಿಸುವಲ್ಲಿ ಇದು ಪ್ರಮುಖ ಪಾತ್ರವಹಿಸುತ್ತವೆ. ಜೊತೆಗೆ ಹೃದಯ ಸಂಬಂಧಿ ಸಮಸ್ಯೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ ಮತ್ತು ರಕ್ತನಾಳಗಳ ಕಾರ್ಯನಿರ್ವಹಣೆಯನ್ನು ಸುಧಾರಿಸುತ್ತದೆ.

ತೂಕ ಕಡಿಮೆ ಮಾಡಿಕೊಳ್ಳಲು ಸಹಕಾರಿ

ಹುರುಳಿಯಲ್ಲಿರುವ ಪ್ರೋಟೀನ್ ಮತ್ತು ಫೈಬರ್ ಅಂಶವು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಇದನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ತೂಕವನ್ನು ಸುಲಭವಾಗಿ ನಿಯಂತ್ರಿಸಬಹುದು. ಜೊತೆಗೆ ಇದನ್ನು ಸೂಪ್ ಅಥವಾ ಕಷಾಯದ ರೂಪದಲ್ಲಿ ಕುಡಿಯುವುದರಿಂದ ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ.

ಕೂದಲಿನ ಪೋಷಣೆಗೆ ಒಳ್ಳೆಯದು

ಹುರುಳಿ ಚರ್ಮದ ಆರೋಗ್ಯ ಮತ್ತು ಕೂದಲಿನ ಪೋಷಣೆಗೆ ಬಹಳ ಒಳ್ಳೆಯದು. ಇದು ಬ್ಯಾಕ್ಟೀರಿಯಾ ವಿರೋಧಿ ಮತ್ತು ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳಿಂದ ಸಮೃದ್ಧವಾಗಿದ್ದು, ಚರ್ಮದ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ಉತ್ಕರ್ಷಣ ನಿರೋಧಕಗಳು ಮತ್ತು ಖನಿಜ ಲವಣಗಳು ಚರ್ಮಕ್ಕೆ ಅಗತ್ಯವಾದ ಪೋಷಣೆಯನ್ನು ಒದಗಿಸುತ್ತವೆ ಮತ್ತು ಕೂದಲಿನ ಆರೋಗ್ಯವನ್ನು ಕಾಪಾಡುತ್ತದೆ. ಇದರೊಂದಿಗೆ, ದೇಹವು ದಿನವಿಡೀ ಸಕ್ರಿಯವಾಗಿರುತ್ತದೆ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »