TOP STORIES:

FOLLOW US

ರಕ್ತಹೀನತೆಯಿಂದ ಬಳಲುತ್ತಿರುವವರು ಹುರುಳಿ ಸೇವನೆ ಮಾಡಿ


ಹುರುಳಿ ನಾಲಿಗೆಗೆ ರುಚಿ ನೀಡುವುದರ ಜೊತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಇದು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಭಂಡಾರವಾಗಿದೆ. ಇದು ದೇಹಕ್ಕೆ ಅಗತ್ಯ ಪ್ರಯೋಜನಗಳನ್ನು ನೀಡುವ ಧಾನ್ಯವಾಗಿದೆ. ಅದರಲ್ಲಿಯೂ ಚಳಿಗಾಲದ ಸಂದರ್ಭದಲ್ಲಿ ಇದರ ಸೇವನೆ ಮಾಡುವುದು ದೇಹಕ್ಕೆ ತ್ವರಿತ ಶಕ್ತಿಯನ್ನು ನೀಡುತ್ತದೆ ಎಂದು ತಜ್ಞರು ಹೇಳುತ್ತಾರೆ. ಹಾಗಾದರೆ ಇದರಿಂದ ಸಿಗುವ ಪ್ರಯೋಜನಗಳೇನು ತಿಳಿದುಕೊಳ್ಳಿ.

ನಮ್ಮ ಸಾಂಪ್ರದಾಯಿಕ ಆಹಾರದಲ್ಲಿ ಹುರುಳಿಗೆ ವಿಶೇಷ ಸ್ಥಾನವಿದೆ. ನೀವು ಇದರಿಂದ ರುಚಿ ರುಚಿಯಾದ ಅಡುಗೆಗಳನ್ನು ತಯಾರಿಸಿರಬಹುದು. ಇವು ನಾಲಿಗೆಗೆ ರುಚಿ ನೀಡುವುದರ ಜೊತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಇದು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಭಂಡಾರವಾಗಿದೆ. ಇದು ದೇಹಕ್ಕೆ ಅಗತ್ಯ ಪ್ರಯೋಜನಗಳನ್ನು ನೀಡುವ ಧಾನ್ಯವಾಗಿದೆ. ಅದರಲ್ಲಿಯೂ ಚಳಿಗಾಲದ ಸಂದರ್ಭದಲ್ಲಿ ಇದರ ಸೇವನೆ ಮಾಡುವುದು ದೇಹಕ್ಕೆ ತ್ವರಿತ ಶಕ್ತಿಯನ್ನು ನೀಡುತ್ತದೆ ಎಂದು ತಜ್ಞರು ಹೇಳುತ್ತಾರೆ. ಹಾಗಾದರೆ ಇದರಿಂದ ಸಿಗುವ ಪ್ರಯೋಜನಗಳೇನು ತಿಳಿದುಕೊಳ್ಳಿ.

ಅಜೀರ್ಣ ಸಮಸ್ಯೆಗೆ ಪರಿಹಾರ ನೀಡುತ್ತದೆ

ಸಾಮಾನ್ಯವಾಗಿ ಹುರುಳಿ ಕಾಳಿನಲ್ಲಿ ಫೈಬರ್ ಅಧಿಕವಾಗಿರುತ್ತದೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಹಾಗಾಗಿ ಪದೇ ಪದೇ ಅಜೀರ್ಣ ಸಮಸ್ಯೆ ಕಾಡುತ್ತಿದ್ದರೆ ಪ್ರತಿದಿನ ಹುರುಳಿ ಕಾಳಿನ ಸೇವನೆ ಮಾಡುವ ಮೂಲಕ ಜೀರ್ಣಕಾರಿ ಸಮಸ್ಯೆಗಳಿಂದ ಪರಿಹಾರ ಪಡೆದುಕೊಳ್ಳಬಹುದು. ಜೊತೆಗೆ ಇದು ಕರುಳಿನ ಆರೋಗ್ಯವನ್ನು ಕಾಪಾಡುತ್ತದೆ. ಇದರಲ್ಲಿರುವ ನಾರಿನಾಂಶ ದೇಹಕ್ಕೆ ತಕ್ಷಣದ ಶಕ್ತಿಯನ್ನು ಒದಗಿಸುತ್ತವೆ ಮತ್ತು ಆಯಾಸದಿಂದ ದೂರವಿಡುತ್ತವೆ.

ಮಧುಮೇಹಿಗಳಿಗೆ ಒಳ್ಳೆಯದು

ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಹುರುಳಿ ಪ್ರಮುಖ ಪಾತ್ರ ವಹಿಸುತ್ತದೆ. ಅಲ್ಲದೆ ಇದು ಇನ್ಸುಲಿನ್ ಪ್ರತಿರೋಧವನ್ನು ಕಡಿಮೆ ಮಾಡುವ ಗುಣಗಳನ್ನು ಹೊಂದಿದೆ. ಈ ಗುಣಲಕ್ಷಣಗಳಿಂದಾಗಿ, ಮಧುಮೇಹ ಇರುವವರು ಈ ಕಾಳುಗಳನ್ನು ಆಹಾರದಲ್ಲಿ ಸೇರಿಸಬಹುದು.

ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ

ರಕ್ತಹೀನತೆಯ ಸಮಸ್ಯೆಗಳನ್ನು ಕಡಿಮೆ ಮಾಡಲು ಹುರುಳಿ ಬಹಳ ಉಪಯುಕ್ತವಾಗಿವೆ. ರಕ್ತಹೀನತೆಯಿಂದ ಬಳಲುತ್ತಿರುವವರು ಈ ಧಾನ್ಯವನ್ನು ಸೇವನೆ ಮಾಡಿದಲ್ಲಿ ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಸುಧಾರಿಸಬಹುದು. ಇದಲ್ಲದೆ, ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕರಗಿಸುವಲ್ಲಿ ಇದು ಪ್ರಮುಖ ಪಾತ್ರವಹಿಸುತ್ತವೆ. ಜೊತೆಗೆ ಹೃದಯ ಸಂಬಂಧಿ ಸಮಸ್ಯೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ ಮತ್ತು ರಕ್ತನಾಳಗಳ ಕಾರ್ಯನಿರ್ವಹಣೆಯನ್ನು ಸುಧಾರಿಸುತ್ತದೆ.

ತೂಕ ಕಡಿಮೆ ಮಾಡಿಕೊಳ್ಳಲು ಸಹಕಾರಿ

ಹುರುಳಿಯಲ್ಲಿರುವ ಪ್ರೋಟೀನ್ ಮತ್ತು ಫೈಬರ್ ಅಂಶವು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಇದನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ತೂಕವನ್ನು ಸುಲಭವಾಗಿ ನಿಯಂತ್ರಿಸಬಹುದು. ಜೊತೆಗೆ ಇದನ್ನು ಸೂಪ್ ಅಥವಾ ಕಷಾಯದ ರೂಪದಲ್ಲಿ ಕುಡಿಯುವುದರಿಂದ ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ.

ಕೂದಲಿನ ಪೋಷಣೆಗೆ ಒಳ್ಳೆಯದು

ಹುರುಳಿ ಚರ್ಮದ ಆರೋಗ್ಯ ಮತ್ತು ಕೂದಲಿನ ಪೋಷಣೆಗೆ ಬಹಳ ಒಳ್ಳೆಯದು. ಇದು ಬ್ಯಾಕ್ಟೀರಿಯಾ ವಿರೋಧಿ ಮತ್ತು ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳಿಂದ ಸಮೃದ್ಧವಾಗಿದ್ದು, ಚರ್ಮದ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ಉತ್ಕರ್ಷಣ ನಿರೋಧಕಗಳು ಮತ್ತು ಖನಿಜ ಲವಣಗಳು ಚರ್ಮಕ್ಕೆ ಅಗತ್ಯವಾದ ಪೋಷಣೆಯನ್ನು ಒದಗಿಸುತ್ತವೆ ಮತ್ತು ಕೂದಲಿನ ಆರೋಗ್ಯವನ್ನು ಕಾಪಾಡುತ್ತದೆ. ಇದರೊಂದಿಗೆ, ದೇಹವು ದಿನವಿಡೀ ಸಕ್ರಿಯವಾಗಿರುತ್ತದೆ.


Share:

More Posts

Category

Send Us A Message

Related Posts

ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ


Share       ಮಂಗಳೂರು: ಸಾಧಕರ ಜೊತೆ ಕದ್ರಿ ಶ್ರೀ ಮಂಜುನಾಥ ಕ್ಷೇತ್ರದ ಆಡಳಿತ ಸಮಿತಿಗೆ ನೇಮಕದ ಬಗ್ಗೆ ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ. ಕಲ್ಕೂರ ಪ್ರತಿಷ್ಠಾನದ ವತಿಯಿಂದ ಯುಗಾದಿ ಮಹೋತ್ಸವ, ವಿಷು


Read More »

ಪೊಲೀಸ್ ಸಬ್ ಇನ್ಸಸ್ಪೆಕ್ಟರ್ ಪ್ರದೀಪ್ ಪೂಜಾರಿಯವರಿಗೆ ಮುಖ್ಯಮಂತ್ರಿ ಚಿನ್ನದ ಪದಕ


Share       ಕೆಯ್ಯೂರು: ಕೆಯ್ಯೂರು ಗ್ರಾಮದ ಪಿ.ಎಸ್.ಐ ಪ್ರದೀಪ್ ಪೂಜಾರಿ 2023ನೇ ವರ್ಷದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಮೂರನೇ ಬೆಟಾಲಿಯನ್ ಫೆರೆಡ್ ಗ್ರೌಂಡ್ ಕೆಎಸ್ಆರ್ಪಿ  ಕೊರಮಂಗಲ ಬೆಂಗಳೂರಿನಲ್ಲಿ ಎ.2ರಂದು ಪ್ರಶಸ್ತಿ ಪ್ರಧಾನ ನಡೆಯಲಿದೆ ಪ್ರದೀಪ್ ಪೂಜಾರಿ


Read More »

ಕದ್ರಿ ಮಂಜುನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ರಾಜೇಂದ್ರ ಚಿಲಿಂಬಿ ಆಯ್ಕೆ


Share       ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಇವರು ಸಲ್ಲಿಸಿರುವ  ಸೇವೆಯನ್ನು ಪರಿಗಣಿಸಿ ಈ ಆಯ್ಕೆ ನಡೆದಿರುತ್ತದೆ. ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ  ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮಾಧ್ಯಮ ವಕ್ತಾರ, ಮಂಗಳೂರು ಚಿಲಿಂಬಿ ಸ್ವಾಮಿ


Read More »

ಜವಾಹರ್ ಬಾಲ್ ಮಂಚ್ ಇದರ ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಸಂಯೋಜಕರಾಗಿ ನ್ಯಾಯವಾದಿ ಶ್ರೀಮತಿ ಶೈಲಜಾ ರಾಜೇಶ್ ಆಯ್ಕೆ


Share       ಬಂಟ್ವಾಳ : ಕರ್ನಾಟಕ ಸರ್ಕಾರದ ಪ್ರತಿಷ್ಟಿತ ಕಿತ್ತೂರು ರಾಣಿ ಚೆನ್ನಮ್ಮ ಪುರಸ್ಕೃತರು, ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ರಿ ಇದರ ಸಂಸ್ಥಾಪಕರು, ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಅಧ್ಯಕ್ಷೆ,


Read More »

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »

ಮುಂಬಯಿ ಎನ್‌ಸಿಪಿ (ಎಸ್‌ಪಿ) ಈಶಾನ್ಯ ಜಿಲ್ಲಾ ನಿರೀಕ್ಷಕರಾಗಿ ಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಆಯ್ಕೆ


Share       ಮುಂಬಯಿ, ಮಾ. 21: ಎನ್‌ಸಿಪಿ (ಎಸ್‌ಪಿ) ಈಶಾನ್ಯ (ಉತ್ತರ ಮುಂಬಯಿ) ಜಿಲ್ಲಾ ನಿರೀಕ್ಷಕರಾಗಿ ತುಳು-ಕನ್ನಡಿಗಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಅವರನ್ನು ಪಕ್ಷದ ಅಧ್ಯಕ್ಷೆ ರಾಖಿ ಜಾಧವ್ ಅವರು ನೇಮಕ ಮಾಡಿದ್ದಾರೆ. ಮಂಗಳೂರು ಚಿತ್ರಾಪು


Read More »