TOP STORIES:

ಸರ್ಕಾರಿ ಆಸ್ಪತ್ರೆಗಳಲ್ಲಿದೆ ಗುಣಮಟ್ಟದ ಚಿಕಿತ್ಸೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಶ್ಲಾಘನೆ


ಮಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲೂ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವುದಕ್ಕೆ ವೆನ್ಲಾಕ್ ಆಸ್ಪತ್ರೆ ಉತ್ತಮ ನಿದರ್ಶನ. ಸರ್ಕಾರಿ ಆಸ್ಪತ್ರೆಗಳ ಬಗ್ಗೆ ತಾತ್ಸಾರ ಬೇಡ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.

 

ಮಂಗಳೂರಿನ ವೆನ್ಲಾಕ್ ಸರ್ಕಾರಿ ಆಸ್ಪತ್ರೆಯ ಸಿಟಿವಿಎಸ್ ತಂಡ ವಿಶೇಷ ಶಸ್ತ್ರಚಿಕಿತ್ಸೆ ನಡೆಸಿ 12 ವರ್ಷದ ಬಾಲಕನ ಕುತ್ತಿಗೆಯ ಮೂಲಕ ಎದೆಗೂಡಿಗೆ ಸೇರಿದ ತೆಂಗಿನಗರಿ ಹಾಗೂ ಬಾಲಕನ ಕುತ್ತಿಗೆಗೆ ಹಾಕಿಕೊಂಡಿದ್ದ ಚೈನ್ ಹೊರತೆಗೆಯುವ ಮೂಲಕ ಜೀವದಾನ ನೀಡಿರುವ ವೈದ್ಯರ ಸಾಧನೆಯನ್ನು ಗುರುತಿಸಿ ವೈದ್ಯರ ತಂಡವನ್ನು ಸನ್ಮಾನಿಸಿ ಮಾತನಾಡಿದರು.

ವೆನ್ಲಾಕ್ ಆಸ್ಪತ್ರೆಯ ಹೃದ್ರೋಗ ವಿಭಾಗ ಮುಖ್ಯಸ್ಥ ಡಾ.ಸುರೇಶ್ ಪೈ ನೇತೃತ್ವದ ತಂಡ ಅಪೂರ್ವ ಶಸ್ತ್ರಚಿಕಿತ್ಸೆ ಮೂಲಕ ಬಾಲಕನಿಗೆ ಜೀವದಾನ ನೀಡುವ ಮೂಲಕ ದೇಶಕ್ಕೆ ಉತ್ತಮ ಸಂದೇಶ ನೀಡಿದೆ. ಇವರ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಸುರೇಶ್ ಪೈ, ವೆನ್ಲಾಕ್ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಸಿಗುತ್ತಿದೆ. ಇಲ್ಲಿನ ಚಿಕಿತ್ಸೆ ಬಗ್ಗೆ ಯಾವುದೇ ಮುಜುಗರಬೇಡ. ಖಾಸಗಿ ಆಸ್ಪತ್ರೆಗೂ ಮೀರುವಂತಹ ಚಿಕಿತ್ಸೆ ಇಲ್ಲಿ ನೀಡಲಾಗುತ್ತದೆ. ಆದರೆ ಪ್ರಚಾರದಲ್ಲಿ ಹಿಂದೆ ಬಿದ್ದಿದ್ದೇವೆ ಎಂದರು.

 

ಕಾರ್ಡಿಯೋಥೋರಾಸಿಕ್ ಮತ್ತು ವ್ಯಾಸ್ ಕ್ಯುಲರ್ ಸರ್ಜರಿ ವಿಭಾಗದ ಡಾ.ಸುರೇಶ್ ಪೈ, ಡಾ.ಸೂರಜ್ ಪೈ, ನರ್ಸಿಂಗ್ ಅಧಿಕಾರಿ ವಹೀದಾ , ಡಾ.ಪ್ರಣವ್, ಡಾ.ಶುಭಂ ಗುಪ್ತಾ, ಜಿಲ್ಲಾ ವೈದ್ಯಾಧಿಕಾರಿ ಡಾ.ಶಿವಪ್ರಕಾಶ್, ಪ್ರಾದೇಶಿಕ ವೈದ್ಯಕೀಯ ಅಧಿಕಾರಿ ಡಾ.ಸುಧಾಕರ್, ಜಿಲ್ಲಾ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಪದ್ಮನಾಭ ಅಮೀನ್, ಪ್ರಮೀಳಾ ಈಶ್ವರ್, ಶಶೀಧರ ಕೊಠಾರಿ, ಅನೀಲ್, ನಾಮನಿದೇಶೀತ ಪಾಲಿಕೆ ಸದಸ್ಯ ಸತೀಶ್, ಕೊಂಕಣಿ ಸಾಹಿತ್ಯ ಅಕಾಡೆಮಿ ಸದಸ್ಯ ಸಮರ್ಥ್ ಭಟ್, ಕಾರ್ಮಿಕ ಘಟಕದ ರಾಜ್ಯ ಪ್ರ.ಕಾರ್ಯದರ್ಶಿ ವಹಬ್‌ ಕುದ್ರೋಳಿ, ಸಾಮಾಜಿಕ ಕಾರ್ಯಕರ್ತೆ ಮಂಜುಳಾ ನಾಯಕ್, ಟಿ.ಸಿ ಗಣೇಶ್ , ಕಾರ್ಮಿಕ ಘಟಕದ ಮುಖಂಡರಾದ ಜಯರಾಜ್ ಅಂಚನ್, ಸೀತಾರಾಮ್ ಶೆಟ್ಟಿ , ನನೀತ್ ಶರಣ್ ಮತ್ತಿತರು ಉಪಸ್ತಿತರಿದ್ದರು.

 

ಮಡಿಕೇರಿಯಲ್ಲಿ ಕಾಫಿ ಎಸ್ಟೇಟ್‌ನಲ್ಲಿ ಶನಿವಾರ ಕಮಲ್ ಹುಸೇನ್ (12) ಎಂಬಾತ ಆಟವಾಡುತ್ತಿದ್ದಾಗ ಹತ್ತಿರದಲ್ಲಿದ್ದ ತೆಂಗಿನ ಮರದ ಗರಿ ಬಾಲಕನ ಮೇಲೆ ಬಿದ್ದು ಅವಘಡ ಸಂಭವಿಸಿತ್ತು. ಇದರಿಂದ ತೆಂಗಿನಗರಿಯ (ಅಂದಾಜು 20 ಸೆಂ.ಮೀ. ಉದ್ದ) ಭಾಗ ಬಾಲಕನ ಕುತ್ತಿಗೆಯಲ್ಲಿ ಹಾಕಿಕೊಂಡಿದ್ದ ಸ್ಟೀಲ್ ಚೈನ್‌ನೊಂದಿಗೆ ಎದೆಯೊಳಗೆ ಹೊಕ್ಕಿತ್ತು. ಮಡಿಕೇರಿ ಸರಕಾರಿ ಆಸ್ಪತ್ರೆಯಲ್ಲಿ ಬಾಲಕನಿಗೆ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆಸ್ಲಾಕ್ ಆಸ್ಪತ್ರೆಗೆ ರೆಫರ್ ಮಾಡಲಾಗಿತ್ತು. ತಕ್ಷಣವೇ ಮಂಗಳೂರಿನ ವೆನ್ಸಾಕ್ ಸರಕಾರಿ ಆಸ್ಪತ್ರೆಯನ್ನು ಸಂಪರ್ಕಿಸಿ ಬಾಲಕನಿಗೆ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ತೆಂಗಿನ ಗರಿಯ ತುಂಡು ಹಾಗೂ ಚೈನ್ ಹೊರತೆಗೆದು ಬಾಲಕನಿಗೆ ಹೊಸ ಬದುಕು ನೀಡಲಾಗಿತ್ತು.


Related Posts

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »