TOP STORIES:

LPG ಗ್ರಾಹಕರಿಗೆ ಸಿಹಿ ಸುದ್ದಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 303 ರೂ.ಗಳ ರಿಯಾಯಿತಿ


ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಜನ ಸಾಮಾನ್ಯರನ್ನ ಬೆಚ್ಚಿ ಬೀಳಿಸಿದೆ. ಅಗತ್ಯ ವಸ್ತುಗಳ ಬೆಲೆಯೊಂದಿಗೆ ಪೆಟ್ರೋಲ್, ಡೀಸೆಲ್ ಬೆಲೆಯೂ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಜೊತೆಗೆ ಅಡುಗೆ ಅನಿಲದ ಬೆಲೆಯೂ ಏರಿಕೆಯಾಗಿದೆ.

ಇತ್ತೀಚಿನ ದಿನಗಳಲ್ಲಿ ಗ್ಯಾಸ್ ಬೆಲೆ ಸಾರ್ವಕಾಲಿಕ ಗರಿಷ್ಠ 900 ರೂ.ಗೆ ಏರಿಕೆಯಾಗಿದೆ. ಅದ್ರಂತೆ, ದಿನ ಬಳಕೆಯ ವಸ್ತುಗಳ ಜತೆಗೆ 900 ರೂ.ಗೆ ಗ್ಯಾಸ್ ಸಿಲಿಂಡರ್ ಖರೀದಿಸುವುದು ಜನ ಸಾಮಾನ್ಯರಿಗೆ ಹೊರೆಯಾಗಿ ಪರಿಣಮಿಸಿದೆ. ಇನ್ನು ಕೆಲ ದಿನಗಳಿಂದ ಸರ್ಕಾರ ನೀಡುವ ಗ್ಯಾಸ್ ಸಬ್ಸಿಡಿ ಬಾರದೇ ಇದ್ದದ್ದು, ಮತ್ತಷ್ಟು ಹೊರೆಯಾಗಿತ್ತು. ಆದ್ರೆ, ಈಗ ನೀವು ಸಬ್ಸಿಡಿ ಬಗ್ಗೆ ಚಿಂತಿಸಬೇಕಾಗಿಲ್ಲ. ಯಾಕಂದ್ರೆ, ಕೇಂದ್ರ ಸರ್ಕಾರ ಗ್ಯಾಸ್ ಸಬ್ಸಿಡಿ ಪುನಶ್ಚೇತನಕ್ಕೆ ಚಿಂತನೆ ನಡೆಸಿದೆ. ಈ ನಿಟ್ಟಿನಲ್ಲಿ ಹಣಕಾಸು ಸಚಿವಾಲಯದಿಂದಲೂ ಪ್ರಸ್ತಾವನೆಗಳು ಬಂದಿವೆ. ಅದ್ರಂತೆ, ಪ್ರಸ್ತುತ ಪರಿಗಣನೆಯಲ್ಲಿರುವ ಮಾಹಿತಿ ಪ್ರಕಾರ, ಸಧ್ಯ ಪ್ರಸ್ತುತ ಛತ್ತೀಸ್‌ಗಢ, ಜಾರ್ಖಂಡ್, ಮಧ್ಯಪ್ರದೇಶ, ಈಶಾನ್ಯ ರಾಜ್ಯಗಳಲ್ಲಿ ದೇಶೀಯ ಅನಿಲಕ್ಕೆ ಸಬ್ಸಿಡಿ ನೀಡಲಾಗುತ್ತದೆ ಜೊತೆಗೆ ಇಡೀ ದೇಶಕ್ಕೆ ಗ್ಯಾಸ್ ಸಬ್ಸಿಡಿ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.

 

ತೈಲ ಮಾರುಕಟ್ಟೆ ಕಂಪನಿಗಳು (OMC) ಕೇಂದ್ರ ಸರ್ಕಾರದ ನಿರ್ದೇಶನದಂತೆ ಗ್ಯಾಸ್ ಡೀಲರ್‌ಗಳಿಗೆ 303 ರೂ ಸಬ್ಸಿಡಿ ನೀಡುತ್ತವೆ. ಇದರೊಂದಿಗೆ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 303 ರೂ.ಗಳ ರಿಯಾಯಿತಿ ನೀಡಲಿವೆ.ಈ ಮೂಲಕ ಈಗ 900 ರೂಪಾಯಿಯ ಗ್ಯಾಸ್ ಸಿಲಿಂಡರ್‌ಗೆ 587 ರೂಪಾಯಿಗೆ ಲಭ್ಯವಿರುತ್ತದೆ.

ಇನ್ನು ನೀವು ಕೂಡ ಗ್ಯಾಸ್ ಸಬ್ಸಿಡಿ ಪಡೆಯಲು ಇಚ್ಚಿಸಿದ್ರೆ, ನಿಮ್ಮ ಗ್ಯಾಸ್ ಸಂಪರ್ಕದೊಂದಿಗೆ ನಿಮ್ಮ ಆಧಾರ್ ಸಂಖ್ಯೆಯನ್ನ ಲಿಂಕ್ ಮಾಡಿ. ಆಧಾರ್ ಲಿಂಕ್ ಮಾಡಿದ ನಂತ್ರ ನಿಮ್ಮ ಬ್ಯಾಂಕ್ ಖಾತೆಯಲ್ಲಿ ಸಬ್ಸಿಡಿ ಮೊತ್ತವನ್ನ ನೀವು ಪಡೆಯುತ್ತೀರಿ. ಇದರೊಂದಿಗೆ ನಗದು ಠೇವಣಿ ಮಾಹಿತಿಯ ಬಗ್ಗೆ ನಿಮ್ಗೆ ಸಂದೇಶವೂ ಬರುತ್ತದೆ.


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »