TOP STORIES:

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು.

ಅಂದು ನಾಡು ನುಡಿ ಕಲೆ ಮತ್ತು. ಸಂಸ್ಕ್ರತಿಗಳ ನವಿರುತನಕ್ಕೆ ಹಾಗು ಸಂಘಟನ ಕ್ಷೇತ್ರಕ್ಕೆ ಸಲ್ಲಿಸಿದ ಅನುಪಮ ಕೊಡುಗೆಯನ್ನು ಪರಿಗಣಿಸಿ “ನವ ಕರ್ನಾಟಕ ರತ್ನ “ ಪ್ರಶಸ್ತಿ ಗೌರವ ಪುರಸ್ಕಾರವನ್ನು ಸತೀಶ್ ಕುಮಾರ್ ಬಜಾಲ್ ಗೆ ಪ್ರಾಧಾನ ಮಾಡಲಿದ್ದಾರೆ.

ಸೌದಿ ಅರೇಬಿಯಾದ ದಮ್ಮಮ್ ನಲ್ಲಿ 24*7 ಲಭ್ಯವಾಗುವ , ಆಶಕ್ತರ ಪಾಲಿಗೆ ಆಸರೆಯಾಗುವ ಏಕೈಕ ವ್ಯಕ್ತಿ -ಸದಾ ಸಮಾಜ ಸೇವೆಗೆ ತನ್ನನ್ನು ತಾನು ತೊಡಗಿಸಿಕೊಂಡಿರುವವರು. ಅರಬ್ ರಾಷ್ಟ್ರ ಗಳಲ್ಲಿ ತೊಂದರೆಗೆ ಸಿಲುಕಿದ ಅನಿವಾಸಿ ಭಾರತೀಯರಿಗೆ ಮಿಡಿಯುವ ಹೃದಯ , ಅನಾರೋಗ್ಯ ಪೀಡಿತ ಅಸಹಾಕರಿಗೆ ಚಿಕಿತ್ಸೆ ಗೆ ಸ್ಪಂದಿಸುವ , ಪ್ರತಿಭಾನ್ವಿತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹಿಸಿ ಜಾತಿ ಮತ ಭೇದವಿಲ್ಲದೆ ಸ್ಪಂದಿಸುವ ಮೂಲಕ ಜನಮನ ಗೆದ್ದಿದಾರೆ .

ಇತ್ತೀಚೆಗೆ ಯುವಕ ಮಂಡಲದ ಮೂಲಕ ತನ್ನ ಹುಟ್ಟೂರಿಗೆ ಉಚಿತವಾಗಿ ಅಂಬುಲೆನ್ಸ್ ವ್ಯವಸ್ಥೆಯನ್ನು ಮಾಡುವಲ್ಲಿ ಮಹತ್ತರ ಪಾತ್ರವನ್ನು ವಹಿಸಿರುತ್ತೀರಿ.

ಸೌದಿ ಅರೇಬಿಯಾ ದಮ್ಮಾಮ್ ನಲ್ಲಿ ಇತಿಹಾಸ ಸ್ರಷ್ಠಿಸಿದ 17 ನೇ ವಿಶ್ವ ಕನ್ನಡ ಸಮ್ಮೇಳನ ವನ್ನು ಆಯೋಜಿಸಿ ನಮ್ಮ ಜಿಲ್ಲೆ ಹಾಗೂ ರಾಜ್ಯದ ಸಂಸ್ಕತಿಯನ್ನು , ಕಲೆಯನ್ನು ಪಸರಿಸಿದ ಹಾಗೂ ಅದರ ಸ್ವಾಗತ ಸಮಿತಿ ಅದ್ಯಕ್ಷರಾಗಿ ಯಶಸ್ವಿಗೊಳಿಸಿದ ಕೀರ್ತಿ ಅವರದ್ದು. ಅಂದು ಕಾರ್ಯಕ್ರಮದಲ್ಲಿ ಅವರನ್ನು “ವಿಶ್ವ ಮಾನ್ಯ” ಪ್ರಶಸ್ತಿ 2024 (Global Man 2024 Award ). ಪುರಸ್ಕಾರ ನೀಡಿ ವಿಶ್ವ ಕನ್ನಡ ಸಂಸ್ಕತಿ ಸಂಸ್ಥೆ ಯು , ಸಮ್ಮೇಳನದಲ್ಲಿ ಗೌರವಿಸಲಾಯಿತು .ಸೌದಿ ಅರೇಬಿಯಾದ ಇತಿಹಾಸದಲ್ಲಿ ಪ್ರಥಮ ಭಾರಿಗೆ ತುಳು ಚಲನಚಿತ್ರ ಬಿಡುಗಡೆ ಮತ್ತು ಪ್ರೀಮಿಯರ್ ಶೋ. ಮಾಡಿ ಚರಿತ್ರೆ ನಿರ್ಮಿಸಿದ್ದೀರಿ. ಸೌದಿ ಹವ್ಯಾಸಿ ಕಲಾವಿದರನ್ನು ಒಟ್ಟುಸೆೇರಿಸಿ ಬಹರೇನಲ್ಲಿ ಕನ್ನಡ ಸಂಘ ಬಹರೇನ್ ಇದರ ಸಹಕಾರದೋಂದಿಗೆ ಸಂಪೂರ್ಣ ದೇವಿ ಮಹಾತ್ಮೆ ,/ಅಸುರ ವಧೆ ಯಕ್ಷಗಾನ ಪ್ರದರ್ಶನ ಮಾಡಿಸುವಲ್ಲಿ ಮಹತ್ತರ ಪಾತ್ರ ವಹಿಸಿದಲ್ಲದೆ ತಾನೂ ಕೈಟಪ ಪಾತ್ರ ಮಾಡಿ ಎಲ್ಲರ ಮೆಚ್ಚುಗೆ ಗಳಿಸಿದ್ದಿರಿ. ಸೌದಿ ಅರೇಬಿಯಾದಲ್ಲಿ ಕನ್ನಡ, ತುಳು ಸಂಸ್ಕೃತಿಯನ್ನು ಉತ್ತೇಜಿಸುವುದರ ಮೂಲಕ ಜನಮನ ಗೆದ್ದಿರುತ್ತೀರಿ.

ಸಮಾಜ ಸೇವೆ ಹಾಗೂ ಸಾಂಸ್ಕೃತಿಕ ರಂಗಕ್ಕೆನಿೇಡಿದ ಸೇವೆಯನ್ನು ಗುರುತಿಸಿ 2024 ರ ಸಾಲಿನ 49 ನೇಯ ವಾರ್ಷಿಕ ‘ಆರ್ಯಭಟ ಅಂತರ್ ರಾಷ್ಟ್ರೀಯ ಪುರಸ್ಕಾರವನ್ನು ನೀಡಿ ಗೌರವಿಸಿದರು.

ಮಂಗಳೂರು ಅಸೋಸಿಯೇಶನ್ ಸೌದಿ ಅರೇಬಿಯಾ ( MASA) ಮಾಜಿ ಅಧ್ಯಕ್ಷರು. Kudla Adventure Cultural Foundation Dammam (KAD)- ಪ್ರದಾನ ಸ್ಥಾಪಕರು. ಅಧ್ಯಕ್ಷರು : ಕರಾವಳಿ ಮಾಣಿಕ್ಯ ಸೇವ ಸಂಸ್ಥೆ (Regd.) ಮಂಗಳೂರು. ಮಾಜಿ ಪ್ರಧಾನ ಕಾರ್ಯದರ್ಶಿ : ಹವ್ಯಾಸಿ ಕಲಾವಿದರು , ದಮ್ಮಾಮ್. ಹಾಗು ಹಲವು ಸಂಘ ಸಂಸ್ಥೆಗಳ ಮಾರ್ಗದರ್ಶಕರು.

ಸಮಾಜ ಸೇವೆ ಮತ್ತು ಕೋರೋನ ಸಮಯದಲ್ಲಿ ಮಾಡಿದ ಸೇವೆಗೆ ಬಿಲ್ಲವ ಅಸೋಸಿಯೇಷನ್ Saudi Arabia Riyad – ‘ಅಪದ್ಬಾಂದವ ‘ ಬಿರುದನ್ನು 2021 ರಂದು ನೀಡಿ ಗೌರವಿಸಿದೆ.

‘MASA MAN OF THE YEAR’ ( ವರ್ಷದ ವ್ಯಕ್ತಿ- 2019 ) ಪ್ರಶಸ್ತಿ, , Corona Warrior: (ಕೋರೊನ ವಾರಿಯರ್)2021 & 22 . ಪ್ರಶಸ್ತಿಯನ್ನು – ಮಂಗಳೂರು ಅಸೋಸಿಯೇಶನ್ ಸೌದಿ ಅರೇಬಿಯಾ. Regd. ದಮ್ಮಾಮ್ ನಿೇಡಿ ಗೌರವಿಸಿದೆ.

ಸತೀಶ್ ಅಂಚನ್ ಅವರು ಅಸಂಖ್ಯಾತ ಆರ್ಥಿಕ ಬಡ ಕುಟುಂಬಗಳಿಗೆ ಸಹಾಯ ಹಸ್ತ ನೀಡಿದವರು. ಚಂದ್ರಶೇಖರ ಕುಂದರ್ ಕೊಡಿಯಾಲ್ ಬೈಲ್ ಮತ್ತು ಶಾರದ ಅಂಚನ್ ದಂಪತಿಗಳ ಪುತ್ರನಾದ ಸತೀಶ್ ಅಂಚನ್ ಅವರು ಮೂಲತಃ ಪಕ್ಕಲಡ್ಕ ಬಜಾಲ್ ನ ಕಂಕನಾಡಿಯವರು. ಚಂದ್ರಶೇಖರ ಕುಂದರ್ ದಂಪತಿಗಳ ಮೂವರು ಗಂಡು ಮಕ್ಕಳಲ್ಲಿ ಸತೀಶ್  ಕುಮಾರ್ ಅಂಚನ್ ಕಿರಿಯಾವರಾಗಿದ್ದು ಕೇವಲ ಮೂರು ವರ್ಷದವರಾಗಿದ್ದಾಗ ತಮ್ಮ ತಾಯಿಯನ್ನು ಕಳೆದುಕೊಂಡರು. ನಂತರ ಸತೀಶ್ ಅವರು ಅಜ್ಜಿ ಮತ್ತು ಚಿಕ್ಕಪ್ಪ ರಾಘವ ಅಂಚನ್ ಅವರ ಆರೈಕೆಯಲ್ಲಿ ಬೆಳೆದರು.

ಸತೀಶ್ ಅಂಚನ್ ಅವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಬಜಾಲ್‌ನ ಸೈಂಟ್ ಜೋಸೆಫ್ ಹೈಯರ್ ಪ್ರೈಮರಿ ಶಾಲೆಯಲ್ಲಿ ಪೂರ್ಣಗೊಳಿಸಿ ಮಾಧ್ಯಮಿಕ ಶಿಕ್ಷಣವನ್ನು ರೊಸಾರಿಯೊ ಹೈಸ್ಕೂಲ್‌ ನಲ್ಲಿ ಮಾಡಿದರು. ಬಳಿಕ ಪಿಯುಸಿ ಶಿಕ್ಷಣವನ್ನು ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಮತ್ತು ಪದವಿಯನ್ನು ಸೈಂಟ್ ಅಲೋಶಿಯಸ್ ಈವಿನಿಂಗ್ ಕಾಲೇಜಿನಲ್ಲಿ ಪೂರ್ಣಗೊಳಿಸಿದ್ದಾರೆ.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »