TOP STORIES:

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು.

ಅಂದು ನಾಡು ನುಡಿ ಕಲೆ ಮತ್ತು. ಸಂಸ್ಕ್ರತಿಗಳ ನವಿರುತನಕ್ಕೆ ಹಾಗು ಸಂಘಟನ ಕ್ಷೇತ್ರಕ್ಕೆ ಸಲ್ಲಿಸಿದ ಅನುಪಮ ಕೊಡುಗೆಯನ್ನು ಪರಿಗಣಿಸಿ “ನವ ಕರ್ನಾಟಕ ರತ್ನ “ ಪ್ರಶಸ್ತಿ ಗೌರವ ಪುರಸ್ಕಾರವನ್ನು ಸತೀಶ್ ಕುಮಾರ್ ಬಜಾಲ್ ಗೆ ಪ್ರಾಧಾನ ಮಾಡಲಿದ್ದಾರೆ.

ಸೌದಿ ಅರೇಬಿಯಾದ ದಮ್ಮಮ್ ನಲ್ಲಿ 24*7 ಲಭ್ಯವಾಗುವ , ಆಶಕ್ತರ ಪಾಲಿಗೆ ಆಸರೆಯಾಗುವ ಏಕೈಕ ವ್ಯಕ್ತಿ -ಸದಾ ಸಮಾಜ ಸೇವೆಗೆ ತನ್ನನ್ನು ತಾನು ತೊಡಗಿಸಿಕೊಂಡಿರುವವರು. ಅರಬ್ ರಾಷ್ಟ್ರ ಗಳಲ್ಲಿ ತೊಂದರೆಗೆ ಸಿಲುಕಿದ ಅನಿವಾಸಿ ಭಾರತೀಯರಿಗೆ ಮಿಡಿಯುವ ಹೃದಯ , ಅನಾರೋಗ್ಯ ಪೀಡಿತ ಅಸಹಾಕರಿಗೆ ಚಿಕಿತ್ಸೆ ಗೆ ಸ್ಪಂದಿಸುವ , ಪ್ರತಿಭಾನ್ವಿತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹಿಸಿ ಜಾತಿ ಮತ ಭೇದವಿಲ್ಲದೆ ಸ್ಪಂದಿಸುವ ಮೂಲಕ ಜನಮನ ಗೆದ್ದಿದಾರೆ .

ಇತ್ತೀಚೆಗೆ ಯುವಕ ಮಂಡಲದ ಮೂಲಕ ತನ್ನ ಹುಟ್ಟೂರಿಗೆ ಉಚಿತವಾಗಿ ಅಂಬುಲೆನ್ಸ್ ವ್ಯವಸ್ಥೆಯನ್ನು ಮಾಡುವಲ್ಲಿ ಮಹತ್ತರ ಪಾತ್ರವನ್ನು ವಹಿಸಿರುತ್ತೀರಿ.

ಸೌದಿ ಅರೇಬಿಯಾ ದಮ್ಮಾಮ್ ನಲ್ಲಿ ಇತಿಹಾಸ ಸ್ರಷ್ಠಿಸಿದ 17 ನೇ ವಿಶ್ವ ಕನ್ನಡ ಸಮ್ಮೇಳನ ವನ್ನು ಆಯೋಜಿಸಿ ನಮ್ಮ ಜಿಲ್ಲೆ ಹಾಗೂ ರಾಜ್ಯದ ಸಂಸ್ಕತಿಯನ್ನು , ಕಲೆಯನ್ನು ಪಸರಿಸಿದ ಹಾಗೂ ಅದರ ಸ್ವಾಗತ ಸಮಿತಿ ಅದ್ಯಕ್ಷರಾಗಿ ಯಶಸ್ವಿಗೊಳಿಸಿದ ಕೀರ್ತಿ ಅವರದ್ದು. ಅಂದು ಕಾರ್ಯಕ್ರಮದಲ್ಲಿ ಅವರನ್ನು “ವಿಶ್ವ ಮಾನ್ಯ” ಪ್ರಶಸ್ತಿ 2024 (Global Man 2024 Award ). ಪುರಸ್ಕಾರ ನೀಡಿ ವಿಶ್ವ ಕನ್ನಡ ಸಂಸ್ಕತಿ ಸಂಸ್ಥೆ ಯು , ಸಮ್ಮೇಳನದಲ್ಲಿ ಗೌರವಿಸಲಾಯಿತು .ಸೌದಿ ಅರೇಬಿಯಾದ ಇತಿಹಾಸದಲ್ಲಿ ಪ್ರಥಮ ಭಾರಿಗೆ ತುಳು ಚಲನಚಿತ್ರ ಬಿಡುಗಡೆ ಮತ್ತು ಪ್ರೀಮಿಯರ್ ಶೋ. ಮಾಡಿ ಚರಿತ್ರೆ ನಿರ್ಮಿಸಿದ್ದೀರಿ. ಸೌದಿ ಹವ್ಯಾಸಿ ಕಲಾವಿದರನ್ನು ಒಟ್ಟುಸೆೇರಿಸಿ ಬಹರೇನಲ್ಲಿ ಕನ್ನಡ ಸಂಘ ಬಹರೇನ್ ಇದರ ಸಹಕಾರದೋಂದಿಗೆ ಸಂಪೂರ್ಣ ದೇವಿ ಮಹಾತ್ಮೆ ,/ಅಸುರ ವಧೆ ಯಕ್ಷಗಾನ ಪ್ರದರ್ಶನ ಮಾಡಿಸುವಲ್ಲಿ ಮಹತ್ತರ ಪಾತ್ರ ವಹಿಸಿದಲ್ಲದೆ ತಾನೂ ಕೈಟಪ ಪಾತ್ರ ಮಾಡಿ ಎಲ್ಲರ ಮೆಚ್ಚುಗೆ ಗಳಿಸಿದ್ದಿರಿ. ಸೌದಿ ಅರೇಬಿಯಾದಲ್ಲಿ ಕನ್ನಡ, ತುಳು ಸಂಸ್ಕೃತಿಯನ್ನು ಉತ್ತೇಜಿಸುವುದರ ಮೂಲಕ ಜನಮನ ಗೆದ್ದಿರುತ್ತೀರಿ.

ಸಮಾಜ ಸೇವೆ ಹಾಗೂ ಸಾಂಸ್ಕೃತಿಕ ರಂಗಕ್ಕೆನಿೇಡಿದ ಸೇವೆಯನ್ನು ಗುರುತಿಸಿ 2024 ರ ಸಾಲಿನ 49 ನೇಯ ವಾರ್ಷಿಕ ‘ಆರ್ಯಭಟ ಅಂತರ್ ರಾಷ್ಟ್ರೀಯ ಪುರಸ್ಕಾರವನ್ನು ನೀಡಿ ಗೌರವಿಸಿದರು.

ಮಂಗಳೂರು ಅಸೋಸಿಯೇಶನ್ ಸೌದಿ ಅರೇಬಿಯಾ ( MASA) ಮಾಜಿ ಅಧ್ಯಕ್ಷರು. Kudla Adventure Cultural Foundation Dammam (KAD)- ಪ್ರದಾನ ಸ್ಥಾಪಕರು. ಅಧ್ಯಕ್ಷರು : ಕರಾವಳಿ ಮಾಣಿಕ್ಯ ಸೇವ ಸಂಸ್ಥೆ (Regd.) ಮಂಗಳೂರು. ಮಾಜಿ ಪ್ರಧಾನ ಕಾರ್ಯದರ್ಶಿ : ಹವ್ಯಾಸಿ ಕಲಾವಿದರು , ದಮ್ಮಾಮ್. ಹಾಗು ಹಲವು ಸಂಘ ಸಂಸ್ಥೆಗಳ ಮಾರ್ಗದರ್ಶಕರು.

ಸಮಾಜ ಸೇವೆ ಮತ್ತು ಕೋರೋನ ಸಮಯದಲ್ಲಿ ಮಾಡಿದ ಸೇವೆಗೆ ಬಿಲ್ಲವ ಅಸೋಸಿಯೇಷನ್ Saudi Arabia Riyad – ‘ಅಪದ್ಬಾಂದವ ‘ ಬಿರುದನ್ನು 2021 ರಂದು ನೀಡಿ ಗೌರವಿಸಿದೆ.

‘MASA MAN OF THE YEAR’ ( ವರ್ಷದ ವ್ಯಕ್ತಿ- 2019 ) ಪ್ರಶಸ್ತಿ, , Corona Warrior: (ಕೋರೊನ ವಾರಿಯರ್)2021 & 22 . ಪ್ರಶಸ್ತಿಯನ್ನು – ಮಂಗಳೂರು ಅಸೋಸಿಯೇಶನ್ ಸೌದಿ ಅರೇಬಿಯಾ. Regd. ದಮ್ಮಾಮ್ ನಿೇಡಿ ಗೌರವಿಸಿದೆ.

ಸತೀಶ್ ಅಂಚನ್ ಅವರು ಅಸಂಖ್ಯಾತ ಆರ್ಥಿಕ ಬಡ ಕುಟುಂಬಗಳಿಗೆ ಸಹಾಯ ಹಸ್ತ ನೀಡಿದವರು. ಚಂದ್ರಶೇಖರ ಕುಂದರ್ ಕೊಡಿಯಾಲ್ ಬೈಲ್ ಮತ್ತು ಶಾರದ ಅಂಚನ್ ದಂಪತಿಗಳ ಪುತ್ರನಾದ ಸತೀಶ್ ಅಂಚನ್ ಅವರು ಮೂಲತಃ ಪಕ್ಕಲಡ್ಕ ಬಜಾಲ್ ನ ಕಂಕನಾಡಿಯವರು. ಚಂದ್ರಶೇಖರ ಕುಂದರ್ ದಂಪತಿಗಳ ಮೂವರು ಗಂಡು ಮಕ್ಕಳಲ್ಲಿ ಸತೀಶ್  ಕುಮಾರ್ ಅಂಚನ್ ಕಿರಿಯಾವರಾಗಿದ್ದು ಕೇವಲ ಮೂರು ವರ್ಷದವರಾಗಿದ್ದಾಗ ತಮ್ಮ ತಾಯಿಯನ್ನು ಕಳೆದುಕೊಂಡರು. ನಂತರ ಸತೀಶ್ ಅವರು ಅಜ್ಜಿ ಮತ್ತು ಚಿಕ್ಕಪ್ಪ ರಾಘವ ಅಂಚನ್ ಅವರ ಆರೈಕೆಯಲ್ಲಿ ಬೆಳೆದರು.

ಸತೀಶ್ ಅಂಚನ್ ಅವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಬಜಾಲ್‌ನ ಸೈಂಟ್ ಜೋಸೆಫ್ ಹೈಯರ್ ಪ್ರೈಮರಿ ಶಾಲೆಯಲ್ಲಿ ಪೂರ್ಣಗೊಳಿಸಿ ಮಾಧ್ಯಮಿಕ ಶಿಕ್ಷಣವನ್ನು ರೊಸಾರಿಯೊ ಹೈಸ್ಕೂಲ್‌ ನಲ್ಲಿ ಮಾಡಿದರು. ಬಳಿಕ ಪಿಯುಸಿ ಶಿಕ್ಷಣವನ್ನು ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಮತ್ತು ಪದವಿಯನ್ನು ಸೈಂಟ್ ಅಲೋಶಿಯಸ್ ಈವಿನಿಂಗ್ ಕಾಲೇಜಿನಲ್ಲಿ ಪೂರ್ಣಗೊಳಿಸಿದ್ದಾರೆ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »