TOP STORIES:

FOLLOW US

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು.

ಅಂದು ನಾಡು ನುಡಿ ಕಲೆ ಮತ್ತು. ಸಂಸ್ಕ್ರತಿಗಳ ನವಿರುತನಕ್ಕೆ ಹಾಗು ಸಂಘಟನ ಕ್ಷೇತ್ರಕ್ಕೆ ಸಲ್ಲಿಸಿದ ಅನುಪಮ ಕೊಡುಗೆಯನ್ನು ಪರಿಗಣಿಸಿ “ನವ ಕರ್ನಾಟಕ ರತ್ನ “ ಪ್ರಶಸ್ತಿ ಗೌರವ ಪುರಸ್ಕಾರವನ್ನು ಸತೀಶ್ ಕುಮಾರ್ ಬಜಾಲ್ ಗೆ ಪ್ರಾಧಾನ ಮಾಡಲಿದ್ದಾರೆ.

ಸೌದಿ ಅರೇಬಿಯಾದ ದಮ್ಮಮ್ ನಲ್ಲಿ 24*7 ಲಭ್ಯವಾಗುವ , ಆಶಕ್ತರ ಪಾಲಿಗೆ ಆಸರೆಯಾಗುವ ಏಕೈಕ ವ್ಯಕ್ತಿ -ಸದಾ ಸಮಾಜ ಸೇವೆಗೆ ತನ್ನನ್ನು ತಾನು ತೊಡಗಿಸಿಕೊಂಡಿರುವವರು. ಅರಬ್ ರಾಷ್ಟ್ರ ಗಳಲ್ಲಿ ತೊಂದರೆಗೆ ಸಿಲುಕಿದ ಅನಿವಾಸಿ ಭಾರತೀಯರಿಗೆ ಮಿಡಿಯುವ ಹೃದಯ , ಅನಾರೋಗ್ಯ ಪೀಡಿತ ಅಸಹಾಕರಿಗೆ ಚಿಕಿತ್ಸೆ ಗೆ ಸ್ಪಂದಿಸುವ , ಪ್ರತಿಭಾನ್ವಿತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹಿಸಿ ಜಾತಿ ಮತ ಭೇದವಿಲ್ಲದೆ ಸ್ಪಂದಿಸುವ ಮೂಲಕ ಜನಮನ ಗೆದ್ದಿದಾರೆ .

ಇತ್ತೀಚೆಗೆ ಯುವಕ ಮಂಡಲದ ಮೂಲಕ ತನ್ನ ಹುಟ್ಟೂರಿಗೆ ಉಚಿತವಾಗಿ ಅಂಬುಲೆನ್ಸ್ ವ್ಯವಸ್ಥೆಯನ್ನು ಮಾಡುವಲ್ಲಿ ಮಹತ್ತರ ಪಾತ್ರವನ್ನು ವಹಿಸಿರುತ್ತೀರಿ.

ಸೌದಿ ಅರೇಬಿಯಾ ದಮ್ಮಾಮ್ ನಲ್ಲಿ ಇತಿಹಾಸ ಸ್ರಷ್ಠಿಸಿದ 17 ನೇ ವಿಶ್ವ ಕನ್ನಡ ಸಮ್ಮೇಳನ ವನ್ನು ಆಯೋಜಿಸಿ ನಮ್ಮ ಜಿಲ್ಲೆ ಹಾಗೂ ರಾಜ್ಯದ ಸಂಸ್ಕತಿಯನ್ನು , ಕಲೆಯನ್ನು ಪಸರಿಸಿದ ಹಾಗೂ ಅದರ ಸ್ವಾಗತ ಸಮಿತಿ ಅದ್ಯಕ್ಷರಾಗಿ ಯಶಸ್ವಿಗೊಳಿಸಿದ ಕೀರ್ತಿ ಅವರದ್ದು. ಅಂದು ಕಾರ್ಯಕ್ರಮದಲ್ಲಿ ಅವರನ್ನು “ವಿಶ್ವ ಮಾನ್ಯ” ಪ್ರಶಸ್ತಿ 2024 (Global Man 2024 Award ). ಪುರಸ್ಕಾರ ನೀಡಿ ವಿಶ್ವ ಕನ್ನಡ ಸಂಸ್ಕತಿ ಸಂಸ್ಥೆ ಯು , ಸಮ್ಮೇಳನದಲ್ಲಿ ಗೌರವಿಸಲಾಯಿತು .ಸೌದಿ ಅರೇಬಿಯಾದ ಇತಿಹಾಸದಲ್ಲಿ ಪ್ರಥಮ ಭಾರಿಗೆ ತುಳು ಚಲನಚಿತ್ರ ಬಿಡುಗಡೆ ಮತ್ತು ಪ್ರೀಮಿಯರ್ ಶೋ. ಮಾಡಿ ಚರಿತ್ರೆ ನಿರ್ಮಿಸಿದ್ದೀರಿ. ಸೌದಿ ಹವ್ಯಾಸಿ ಕಲಾವಿದರನ್ನು ಒಟ್ಟುಸೆೇರಿಸಿ ಬಹರೇನಲ್ಲಿ ಕನ್ನಡ ಸಂಘ ಬಹರೇನ್ ಇದರ ಸಹಕಾರದೋಂದಿಗೆ ಸಂಪೂರ್ಣ ದೇವಿ ಮಹಾತ್ಮೆ ,/ಅಸುರ ವಧೆ ಯಕ್ಷಗಾನ ಪ್ರದರ್ಶನ ಮಾಡಿಸುವಲ್ಲಿ ಮಹತ್ತರ ಪಾತ್ರ ವಹಿಸಿದಲ್ಲದೆ ತಾನೂ ಕೈಟಪ ಪಾತ್ರ ಮಾಡಿ ಎಲ್ಲರ ಮೆಚ್ಚುಗೆ ಗಳಿಸಿದ್ದಿರಿ. ಸೌದಿ ಅರೇಬಿಯಾದಲ್ಲಿ ಕನ್ನಡ, ತುಳು ಸಂಸ್ಕೃತಿಯನ್ನು ಉತ್ತೇಜಿಸುವುದರ ಮೂಲಕ ಜನಮನ ಗೆದ್ದಿರುತ್ತೀರಿ.

ಸಮಾಜ ಸೇವೆ ಹಾಗೂ ಸಾಂಸ್ಕೃತಿಕ ರಂಗಕ್ಕೆನಿೇಡಿದ ಸೇವೆಯನ್ನು ಗುರುತಿಸಿ 2024 ರ ಸಾಲಿನ 49 ನೇಯ ವಾರ್ಷಿಕ ‘ಆರ್ಯಭಟ ಅಂತರ್ ರಾಷ್ಟ್ರೀಯ ಪುರಸ್ಕಾರವನ್ನು ನೀಡಿ ಗೌರವಿಸಿದರು.

ಮಂಗಳೂರು ಅಸೋಸಿಯೇಶನ್ ಸೌದಿ ಅರೇಬಿಯಾ ( MASA) ಮಾಜಿ ಅಧ್ಯಕ್ಷರು. Kudla Adventure Cultural Foundation Dammam (KAD)- ಪ್ರದಾನ ಸ್ಥಾಪಕರು. ಅಧ್ಯಕ್ಷರು : ಕರಾವಳಿ ಮಾಣಿಕ್ಯ ಸೇವ ಸಂಸ್ಥೆ (Regd.) ಮಂಗಳೂರು. ಮಾಜಿ ಪ್ರಧಾನ ಕಾರ್ಯದರ್ಶಿ : ಹವ್ಯಾಸಿ ಕಲಾವಿದರು , ದಮ್ಮಾಮ್. ಹಾಗು ಹಲವು ಸಂಘ ಸಂಸ್ಥೆಗಳ ಮಾರ್ಗದರ್ಶಕರು.

ಸಮಾಜ ಸೇವೆ ಮತ್ತು ಕೋರೋನ ಸಮಯದಲ್ಲಿ ಮಾಡಿದ ಸೇವೆಗೆ ಬಿಲ್ಲವ ಅಸೋಸಿಯೇಷನ್ Saudi Arabia Riyad – ‘ಅಪದ್ಬಾಂದವ ‘ ಬಿರುದನ್ನು 2021 ರಂದು ನೀಡಿ ಗೌರವಿಸಿದೆ.

‘MASA MAN OF THE YEAR’ ( ವರ್ಷದ ವ್ಯಕ್ತಿ- 2019 ) ಪ್ರಶಸ್ತಿ, , Corona Warrior: (ಕೋರೊನ ವಾರಿಯರ್)2021 & 22 . ಪ್ರಶಸ್ತಿಯನ್ನು – ಮಂಗಳೂರು ಅಸೋಸಿಯೇಶನ್ ಸೌದಿ ಅರೇಬಿಯಾ. Regd. ದಮ್ಮಾಮ್ ನಿೇಡಿ ಗೌರವಿಸಿದೆ.

ಸತೀಶ್ ಅಂಚನ್ ಅವರು ಅಸಂಖ್ಯಾತ ಆರ್ಥಿಕ ಬಡ ಕುಟುಂಬಗಳಿಗೆ ಸಹಾಯ ಹಸ್ತ ನೀಡಿದವರು. ಚಂದ್ರಶೇಖರ ಕುಂದರ್ ಕೊಡಿಯಾಲ್ ಬೈಲ್ ಮತ್ತು ಶಾರದ ಅಂಚನ್ ದಂಪತಿಗಳ ಪುತ್ರನಾದ ಸತೀಶ್ ಅಂಚನ್ ಅವರು ಮೂಲತಃ ಪಕ್ಕಲಡ್ಕ ಬಜಾಲ್ ನ ಕಂಕನಾಡಿಯವರು. ಚಂದ್ರಶೇಖರ ಕುಂದರ್ ದಂಪತಿಗಳ ಮೂವರು ಗಂಡು ಮಕ್ಕಳಲ್ಲಿ ಸತೀಶ್  ಕುಮಾರ್ ಅಂಚನ್ ಕಿರಿಯಾವರಾಗಿದ್ದು ಕೇವಲ ಮೂರು ವರ್ಷದವರಾಗಿದ್ದಾಗ ತಮ್ಮ ತಾಯಿಯನ್ನು ಕಳೆದುಕೊಂಡರು. ನಂತರ ಸತೀಶ್ ಅವರು ಅಜ್ಜಿ ಮತ್ತು ಚಿಕ್ಕಪ್ಪ ರಾಘವ ಅಂಚನ್ ಅವರ ಆರೈಕೆಯಲ್ಲಿ ಬೆಳೆದರು.

ಸತೀಶ್ ಅಂಚನ್ ಅವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಬಜಾಲ್‌ನ ಸೈಂಟ್ ಜೋಸೆಫ್ ಹೈಯರ್ ಪ್ರೈಮರಿ ಶಾಲೆಯಲ್ಲಿ ಪೂರ್ಣಗೊಳಿಸಿ ಮಾಧ್ಯಮಿಕ ಶಿಕ್ಷಣವನ್ನು ರೊಸಾರಿಯೊ ಹೈಸ್ಕೂಲ್‌ ನಲ್ಲಿ ಮಾಡಿದರು. ಬಳಿಕ ಪಿಯುಸಿ ಶಿಕ್ಷಣವನ್ನು ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಮತ್ತು ಪದವಿಯನ್ನು ಸೈಂಟ್ ಅಲೋಶಿಯಸ್ ಈವಿನಿಂಗ್ ಕಾಲೇಜಿನಲ್ಲಿ ಪೂರ್ಣಗೊಳಿಸಿದ್ದಾರೆ.


Share:

More Posts

Category

Send Us A Message

Related Posts

ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಬಿಡುಗಡೆ


Share       ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ  ಆಮಂತ್ರಣ ಬಿಡುಗಡೆ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಯುವವಾಹಿನಿ ಪದಗ್ರಹಣ ಕಾರ್ಯಕ್ರಮದಲ್ಲಿ ಯುವ ವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್


Read More »

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »

ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ ಆಯ್ಕೆ


Share       ಪುತ್ತೂರು: ಸವಣೂರಿನ ಅಖಿಲ ಪೂಜಾರಿ ಅವರು ಪೊಲೀಸ್ ಇಲಾಖೆಯ ಎಸ್.ಐ. ಹುದ್ದೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ


Read More »