TOP STORIES:

ಹೋಟೆಲಿನಲ್ಲಿ ಇಂಗ್ಲಿಷ್ ಮಾತನಾಡುವವರನ್ನು ಕಂಡು ಮೂಕನಂತೆ ನೋಡುತ್ತಿದ್ದ ಯುವಕ ಈಗ ಸಾವಿರಾರು ಬಡ ಮಕ್ಕಳಿಗೆ ಇಂಗ್ಲಿಷ್ ಕಲಿಸಿದ ಶಿಕ್ಷಣ ದಿಗ್ಗಜ ಪ್ರಕಾಶ್ ಅಂಚನ್


ಬಡತನದ ಬೇಗೆಯಿಂದ ಬಳಲುತ್ತಿದ್ದ ಕುಟುಂಬದಲ್ಲಿ ಜನಿಸಿದ ವ್ಯಕ್ತಿ. 7ನೇ ತರಗತಿಯಲ್ಲೇ ಶಿಕ್ಷಣವನ್ನು ಮೊಟಕುಗೊಳಿಸಿ ಉದ್ಯೋಗಕ್ಕಾಗಿ ಮುಂಬೈಗೆ ಹೊರಟು ಅಲ್ಲಿನ ಹೋಟೆಲುಗಳಲ್ಲಿ ಗ್ಲಾಸ್ ತೊಳೆದು ಸಂಪಾದನೆ ಮಾಡುತ್ತಿದ್ದ ಸಂದರ್ಭವದು. ನಿರರ್ಗಳವಾಗಿ ಇಂಗ್ಲಿಷ್ ಮಾತನಾಡುತ್ತಿದ್ದ ಜನರನ್ನು ಕಂಡು ಮೂಕ ವಿಸ್ಮಿತನಂತೆ ನೋಡಿ ನಾವಷ್ಟು ಕಲಿಯಲಿಲ್ಲವಲ್ಲಾ ಎಂದು ಚಿಂತಿಸಿ ಬಡವರಿಗೆ ಶಿಕ್ಷಣದ ಬಗ್ಗೆ ಅಂದೇ ಮಸ್ತಕದಲ್ಲಿ ಯೋಜನೆ ಹಾಕಿಕೊಂಡ ವ್ಯಕ್ತಿ ಅವರು.

ಅಂದು ಹಾಕಿದ ಯೋಜನೆಯ ಯೋಚನೆಯು ಇಂದು ಹೆಮ್ಮರವಾಗಿ ಬೆಳೆದು ಸಾವಿರಾರು ಬಡ ವಿದ್ಯಾರ್ಥಿಗಳಿಗೆ ದಾರಿದೀಪವಾದ ಆ ವ್ಯಕ್ತಿ ಮತ್ಯಾರೂ ಅಲ್ಲ, ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರು, “ಸರ್ಕಾರಿ ಶಾಲೆ ಉಳಿಸಿ ಬೆಳೆಸಿ” ಸಮಿತಿಯ ರಾಜ್ಯಾಧ್ಯಕ್ಷರು, ಸರ್ಕಾರಿ ಶಾಲೆ ಹೀಗೂ ಇರುತ್ತಾ ಎಂದು ಅಭಿವೃದ್ಧಿಯ ಶಕೆಯನ್ನು ಪಸರಿಸಿದ ಧೀಮಂತ ಅಕ್ಷರ ದಿಗ್ಗಜ ಪ್ರಕಾಶ್ ಅಂಚನ್

“ಹುಟ್ಟು ದರಿದ್ರ ಆದರೂ ಸಾವು ಚರಿತ್ರೆ ಆಗಬೇಕು” ಎಂಬ ಮಾತಿದೆ. ಅನೇಕ ಮಂದಿ ಬಡತನದಿಂದಲೇ ಹುಟ್ಟುತ್ತಾರೆ. ಬಡತನದ ಕಾರಣಕ್ಕೆ ಶಿಕ್ಷಣದಿಂದ ವಂಚಿತರಾದ ಜನರು ಅದೆಷ್ಟೋ. ಇಂತಹಾ ಅನೇಕ ಮಂದಿಗೆ ಆದರ್ಶ ರೂಪವಾಗಿ ಕಂಗೊಳಿಸುವ ಶಿಕ್ಷಣ ಮೂರ್ತಿ ಪ್ರಕಾಶ್ ಅಂಚನ್.

ಹಿಂದೆಯೇ ಈ ಪುಣ್ಯಾತ್ಮರ ಬಗ್ಗೆ ಅಕ್ಷರ ಚೆಲ್ಲಬೇಕು ಎಂಬ ಕನಸಿತ್ತು. ಆದರೆ ಅದು ಇಂದು ನೆರವೇರಿದೆ ಹಾಗೂ ಅವರ ಬಗ್ಗೆ ಬರೆಯಲು ಬಹಳ ಸಂತೋಷ ಪಡುತ್ತೇನೆ.ಸರ್ಕಾರಿ ಶಾಲೆಗಳು ಉನ್ನತ ಮಟ್ಟಕ್ಕೇರಬೇಕು ಎಂಬ ನಾವು ಕಟ್ಟಿಕೊಳ್ಳುತ್ತಿದ್ದ ಕನಸಿಗೆ ಯಥಾವತ್ತಾಗಿ ಒಬ್ಬ ಅಸಮಾನ್ಯ ವ್ಯಕ್ತಿ ಸಾಧಿಸಿ ತೋರಿಸುತ್ತಿದ್ದಾರೆ ಎನ್ನುವಾಗ ಸಂತೋಷ ನೂರ್ಮಡಿಗೊಳ್ಳುತ್ತಿತ್ತು. ಅದರಲ್ಲೂ ನಮ್ಮ ತುಳುವ ಮಾಣಿಕ್ಯ ಹೆಮ್ಮೆ ಜಾಸ್ತೀನೇ.

ತನ್ನಂತೆ ಮುಂದಿನ ಪೀಳಿಗೆಯ ಬಡ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಸಂಕಲ್ಪ ಇಟ್ಟುಕೊಂಡು ಮುಂಬೈನಿಂದ ಮತ್ತೆ ತನ್ನ ಸ್ವಂತ ಊರಿಗೆ ಮರಳಿದ ಪ್ರಕಾಶ್ ಅಂಚನ್ ಸೃಷ್ಟಿಸಿದ್ದು ಇತಿಹಾಸ. ಬಂಟ್ವಾಳದಲ್ಲಿ ಸಣ್ಣ ಗಾರ್ಮೆಂಟ್ಸ್ ಅಂಗಡಿ ತೆರೆದು, ಉದ್ಯಮ ಆರಂಭಿಸಿ ಆರಂಭದಲ್ಲಿ ನಾಲ್ಕು ಮಕ್ಕಳನ್ನು ದತ್ತು ಪಡೆದು ಶಿಕ್ಷಣ ನೀಡಿದ್ದ ಪ್ರಕಾಶ್ ಅಂಚನ್ ನಂತರ, 9ದೇವಸ್ಥಾನ ಅಭಿವೃದ್ಧಿ ಪಡಿಸಿ ಬ್ರಹ್ಮ ಕಲಸ ದಲ್ಲಿ ತೊಡಗಿ, ಎಂಟು ಶಾಲೆಗಳಿಗೆ ಉಚಿತ ಪುಸ್ತಕಗಳನ್ನು ನೀಡಿ, ಶಿಕ್ಷಣಕ್ಕೆ ಮಹತ್ವ ನೀಡಿದ್ದರು. ಅವರ ಯೋಚನೆಗಳು ಒಂದೇ ಸಮನೆ ಓಡಾಡುತ್ತಿದ್ದುದು ಶಿಕ್ಷಣದೆಡೆಗೆ. ಬಡ ವಿದ್ಯಾರ್ಥಿಗಳಿಗೆ ಅನ್ಯಾಯ ಆಗಬಾರದು ಎಂದು ಚಿಂತಿಸುತ್ತಿದ್ದ ಪ್ರಕಾಶ್ ಅಂಚನ್‍ರಿಗೆ ಸಿಕ್ಕಿದ್ದು ಮೂವತ್ತು ಮಕ್ಕಳನ್ನು ಹೊಂದಿದ್ದ ಬಂಟ್ವಾಳ ತಾಲೂಕಿನ ದಡ್ಡಲಕಾಡು ಪ್ರಾಥಮಿಕ ಶಾಲೆ. ಕಾಕತಾಳಿಯವೆಂದರೆ ಅದು ತಾನೇ ಕಲಿತ ಶಾಲೆಯಾಗಿತ್ತು. ಸರ್ಕಾರಿ ಶಾಲೆ ಸುಧಾರಿಸಬೇಕು ಎಂದು ಕನಸು ಕಟ್ಟಿಕೊಂಡು ಹೋರಾಡಿದ್ದ ಪ್ರಕಾಶ್ ಅಂಚನ್ ರಿಗೆ ತಾನೇ ಕಲಿತ ಶಾಲೆಯನ್ನು ಕಂಡು ಕಣ್ಣಲ್ಲಿ ನೀರು ಬಂದಿತ್ತು. ಅರೆ ಘಳಿಗೆಯೂ ಯೋಚನೆ ಮಾಡದೆ ತನ್ನ ಮಕ್ಕಳನ್ನು ಅದೇ ಶಾಲೆಗೆ ಸೇರಿಸಲು ನಿರ್ಧರಿಸಿದ್ದಲ್ಲದೆ ತನ್ನ ಸಹೋದರರ ಮಕ್ಕಳನ್ನೂ ಅದೇ ಶಾಲೆಗೆ ಸೇರ್ಪಡೆ ಮಾಡುವ ಬಗ್ಗೆ ತೀರ್ಮಾನ ಕೈಗೊಂಡರು. ನಂತರ ನಡೆದಿದ್ದೇ ಇತಿಹಾಸ. ಕೇವಲ 24 ಗಂಟೆಗಳಲ್ಲಿ 26 ಮಕ್ಕಳನ್ನು ಅದೇ ಸರ್ಕಾರಿ ಶಾಲೆಗೆ ಸೇರಿಸುವ ಮಹಾ ಕಾರ್ಯವನ್ನು ಅಂದೇ ಪೂರೈಸಿಬಿಟ್ಟರು. ಅದೇ ಸಂದರ್ಭದಲ್ಲಿ ಅವರಿಗೆ ಜೊತೆಯಾದ ಅತಿದೊಡ್ಡ ಶಕ್ತಿ ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ (ರಿ.). ಅವಿರತ ದುಡಿಯುತ್ತಿದ್ದ ಯುವಕರಿದ್ದ ಆ ಸಂಘಟನೆಯ ಅಧ್ಯಕ್ಷರಾದ ಪ್ರಕಾಶ್ ಅಂಚನ್ ನಂತರ ಅದರ ನೇತೃತ್ವದಲ್ಲೇ ದಡ್ಡಲಕಾಡು ಶಾಲೆಗೆ ಹೊಸ ಆಯಾಮ ನೀಡಿದ್ದರು. ದಿನ ಕಳೆದಂತೆ ದಡ್ಡಲಕಾಡು ಶಾಲೆಯಲ್ಲಿ ಮಕ್ಕಳು ತುಂಬಿ ತುಳುಕಾಡುತ್ತಿದ್ದರು. ಮೂವತ್ತು ಮಕ್ಕಳನ್ನು ಹೊಂದಿದ್ದ ಆ ಶಾಲೆ ಇಂದು ಆರು ನೂರಕ್ಕಿಂತಲೂ ಅಧಿಕ ಮಕ್ಕಳನ್ನು ಹೊಂದಿರುವ ಶಾಲೆಯಾಗಿ ರಾಜ್ಯದಲ್ಲೇ ಖ್ಯಾತಿ ಪಡೆದಿದೆ. ಸರ್ಕಾರಿ ಶಾಲೆಯಲ್ಲಿ ಇಂಗ್ಲಿಷ್ ಮಾಧ್ಯಮವನ್ನೂ ಕಲಿಸಬಹುದು ಎಂಬ ಹೊಸ ಆಯಾಮಕ್ಕೆ ನಾಂದಿ ಹಾಡಿದವರೇ ಪ್ರಕಾಶ್ ಅಂಚನ್. ಅವರ ಕಾರ್ಯ ಅಷ್ಟಕ್ಕೇ ಮುಗಿದಿರಲಿಲ್ಲ. ರಾಷ್ಟ್ರ ಸುತ್ತಿದ್ದರು. “ಒಂದು ರಾಷ್ಟ್ರ ಒಂದೇ ಶಿಕ್ಷಣ” ಎಂಬ ಘೋಷವಾಕ್ಯದೊಂದಿಗೆ ರಥಯಾತ್ರೆ ಕೈಗೊಂಡರು. ರಾಜ್ಯ ರಾಜ್ಯಗಳನ್ನು ಸುತ್ತಿದರು. ರಾಜ್ಯದ ಬಹುತೇಕ ಕಡೆಗಳಲ್ಲಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲು ಮುಂದಾದರು. ಇಂದು ರಾಜ್ಯದ ಶಿಕ್ಷಣ ಸಚಿವರು ಸಹಿತವಾಗಿ ಅನೇಕ ಜನಪ್ರತಿನಿಧಿಗಳು ಶಿಕ್ಷಣದ ವಿಚಾರವಾಗಿ ಪ್ರಕಾಶ್ ಅಂಚನ್ ಅವರ ಬಳಿ ಸಲಹೆಗಳನ್ನು ಪಡೆಯುತ್ತಾರೆ.

ದಡ್ಡಲಕಾಡು ಶಾಲೆಯ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ರಾಜ್ಯದ ರಾಜ್ಯಪಾಲರು ಆಡಿದ ಮಾತು ನಿಜಕ್ಕೂ ಅದ್ಭುತ. “ನಿಮ್ಮ ಸಾಧನೆ ಅಮೋಘ. ನಿಮ್ಮ ಶಿಕ್ಷಣ ಕ್ರಾಂತಿಯನ್ನು ಮುಂದುವರೆಸಿ. ಮುಂದೊಂದು ದಿನ ಈ ಶಾಲೆ ವಿಶ್ವ ವಿದ್ಯಾನಿಲಯವೂ ಆಗಬಹುದು”… ಅಬ್ಭಾ ಎಂತಹಾ ಮಾತುಗಳು. ಬಡ ಕುಟುಂಬದಲ್ಲಿ ಜನಿಸಿ, ದೂರದ ಮಹಾರಾಷ್ಟ್ರದಲ್ಲಿ ಹೋಟೆಲಿನ ಟೇಬಲ್ ತೊಳೆಯುತ್ತಿದ್ದ ಯುವಕ ಇಂದು ಸಾವಿರಾರು ಬಡ ಮಕ್ಕಳ ಪಾಲಿನ ಆದರ್ಶ ಮೂರ್ತಿಯಾಗಿದ್ದಾರೆ. ಪಠ್ಯ ಶಿಕ್ಷಣದೊಂದಿಗೆ ಕರಾಟೆ, ಸಾಂಸ್ಕೃತಿಕ ಚಟುವಟಿಕೆ, ಯೋಗ ಹೀಗೆ ಅನೇಕ ಯೋಜನೆಗಳು ಇವರ ಶಾಲೆಯಲ್ಲಿದೆ. ದಡ್ಡಲಕಾಡು ಶಾಲೆಯನ್ನು ದತ್ತು ಪಡೆದು ಅಭಿವೃದ್ಧಿ ಪತದಲ್ಲಿ ಸಾಗುತ್ತಿದೆ. ಇದೀಗ ಬೆಳ್ತಂಗಡಿ ತಾಲೂಕಿನ ಮರೋಡಿಯ ಕೂಕ್ರಬೆಟ್ಟ ಸಹಿತ ಕೆಲ ಶಾಲೆಗಳನ್ನು ದತ್ತು ತೆಗೆದುಕೊಂಡು ತಮ್ಮ ಶಿಕ್ಷಣ ಕ್ರಾಂತಿಯನ್ನು ಮುಂದುವರೆಸಿದ್ದಾರೆ.

ಬಡ ಮಕ್ಕಳಿಗೂ ಆಂಗ್ಲ ಮಾಧ್ಯಮವನ್ನು ರುಚಿಸಿದ ಪ್ರಕಾಶ್ ಅಂಚನ್ ರಿಗೆ ಶತಕೋಟಿ ನಮನಗಳು.ನಿಮ್ಮ ಶಿಕ್ಷಣ ಕ್ರಾಂತಿ ಮುಂದುವರಿದು ಮಹಾ ಕ್ರಾಂತಿಯಾಗಲಿ.


Related Posts

ಸ್ವಾಮಿಗಳ ಚಿತ್ರ ಮತ್ತು ಪ್ರತಿಮೆಯ ಮುಂದೆ ರಾಜ್ಯಪಾಲರೊಂದಿಗೆ ಇರುವ ಚಿತ್ರ


Share         ಶಿವಗಿರಿ: ರಾಜ್ಯಪಾಲ ಆರ್.ವಿ. ಅರ್ಲೆಕ್ಕರ್ ಅವರು ರಾಜಭವನದ ಅತಿಥಿ ಕೊಠಡಿಯಲ್ಲಿ ಶ್ರೀ ನಾರಾಯಣ ಗುರುಗಳ ಚಿತ್ರ ಮತ್ತು ಕಂಚಿನ ಪ್ರತಿಮೆಯನ್ನು ಸ್ವಾಮಿಗಳಿಗೆ ತೋರಿಸಿದರು. ಅತಿಥಿ ಕೊಠಡಿಯನ್ನು ಪ್ರವೇಶಿಸುವಾಗ ಮೊದಲು ನೋಡುವುದು ಗುರುಗಳ ಚಿತ್ರ.


Read More »

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »