TOP STORIES:

ವಿಜಯನಗರ ಸಾಮ್ರಾಜ್ಯ ಸ್ಥಾಪನೆಯಲ್ಲಿ ಬಿಲ್ಲವರು: ಸಾಹಿತಿ ಸಂಶೋಧಕ ಬಾಬು ಶಿವ ಪೂಜಾರಿ


”ವಿಜಯನಗರ ಸ್ಥಾಪನೆಯಲ್ಲಿ ಬಿಲ್ಲವರಿದ್ದಾರೆ ಎಂಬುದಕ್ಕೆ ಎರಡು ವೀರಗಲ್ಲುಗಳು ಸಾಕ್ಷಿಯಾಗಿವೆ. ಮೇಲ್ವರ್ಗದವರು ಇತಿಹಾಸವನ್ನು ಹೇಗೆ ತಮಗೆ ತಕ್ಕಂತೆ ಬದಲಾವಣೆ ಮಾಡುತ್ತಾರೆ ಎಂಬುದಕ್ಕೆ ಉದಾಹರಣೆಯಾಗಿ ನಾನು ನನ್ನ ಮುಂಬರುವ ಪುಸ್ತಕದಲ್ಲಿ ದಾಖಲೆಗಳನ್ನು ಪ್ರಸ್ತುತಪಡಿಸಲಿದ್ದೇನೆ” ಎಂದು ಹಿರಿಯ ಸಾಹಿತಿ, ಸಂಶೋಧಕ ಬಾಬು ಶಿವ ಪೂಜಾರಿ ಹೇಳಿದ್ದಾರೆ.

ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಹಾಗೂ ವಿಶುಕುಮಾ‌ರ್ ದತ್ತಿನಿಧಿ ಸಮಿತಿ ವತಿಯಿಂದ ಹಾಗೂ ಯುವವಾಹಿನಿ ಪಣಂಬೂರು-ಕುಳಾಯಿ ಘಟಕದ ಆತಿಥ್ಯದಲ್ಲಿ ಉರ್ವಸ್ಟೋರ್‌ನ ತುಳುಭವನದಲ್ಲಿ ರವಿವಾರ ಜರುಗಿದ 2024ನೇ ಸಾಲಿನ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.

“ವಿಜಯನಗರವನ್ನು ಸ್ಥಾಪನೆ ಮಾಡಿದವರಲ್ಲಿ ವಿದ್ಯಾರಣ್ಯರು ಪ್ರಮುಖರು ಎನ್ನಲಾಗುತ್ತದೆ. ನಾನು ಬರೆದ ವಿಜಯನಗರ ತುಳುವರು ಮತ್ತು ಬಿಲ್ಲವರ ಕುರಿತಾದ ಅಧ್ಯಯನ ಕೃತಿ ಮುಂದಿನ ಎರಡು ತಿಂಗಳಲ್ಲಿ ಪ್ರಕಟಗೊಳ್ಳಲಿದ್ದು, ಅದರಲ್ಲಿ ಒಂದು ಅಧ್ಯಾಯ ವಿದ್ಯಾರಣ್ಯರಿಗೆ ಮೀಸಲಿಟ್ಟಿದ್ದೇನೆ. ವಿಜಯನಗರ ಸ್ಥಾಪನೆಯಾಗಿದ್ದು 1336 ಎಪ್ರಿಲ್ 18ರ ಶುಕ್ರವಾರ. ಈ ಸಮಯದಲ್ಲಿ ವಿದ್ಯಾರಣ್ಯರ ಪ್ರಾಯ ಕೇವಲ 5 ವರ್ಷ. ಆ ಮಗು ಹೇಗೆ ರಾಜಗುರು ಆಗುತ್ತದೆ? ಹೇಗೆ ಸನ್ಯಾಸಿಯಾಗುತ್ತದೆ? ಎಂಬುದಕ್ಕೆ ಉತ್ತರ ಸಿಗಬೇಕಿದೆ. ಇತಿಹಾಸದಲ್ಲಿ ತಳವರ್ಗವನ್ನು ತಳಕ್ಕೆ ದೂಡಲಾಗುತ್ತದೆ ಎಂಬುದಕ್ಕೆ ಇದೊಂದು ಉದಾಹರಣೆ. ನಾವು ಯಾರನ್ನೂ ದೂಷಿಸುತ್ತಿಲ್ಲ. ಆದರೆ ತಳವರ್ಗದ ಇತಿ ಹಾಸವನ್ನು ಯಾಕೆ ಮುಚ್ಚಲಾಗುತ್ತದೆ ಎಂಬುದಕ್ಕೆ ಉತ್ತರ ಬೇಕಿದೆ” ಎಂದವರು ಹೇಳಿದರು.

ಸದ್ಯ ಸನಾತನ ಧರ್ಮದ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ. ಆದರೆ ದಾಸ ಪರಂಪರೆಯಲ್ಲಿ 222 ಮಂದಿ ದಾಸರ ಉಲ್ಲೇಖವಿದೆ ಆದರೆ ದಾಸ ಸಾಹಿತ್ಯದಲ್ಲಿ ಸೂಫಿ ಸಂತರಿಂದ ಮತ ಪರಿವರ್ತನೆ ಆಗಿದ್ದರ ಬಗ್ಗೆ ಯಾಕೆ ಯಾರೊಬ್ಬರೂ ಧ್ವನಿ ಎತ್ತಿಲ್ಲ? ಇಂದು ಯಾಕೆ ಮುಸ್ಲಿಮರ ವಿರುದ್ಧ ಧ್ವನಿ ಎತ್ತಲಾಗುತ್ತಿದೆ? ನಾನು ಸಾಕಷ್ಟು ದಾಸ ಪುಸ್ತಕಗಳ ಅಧ್ಯಯನ ನಡೆಸಿದ್ದೇನೆ. ನಮ್ಮ ತುಳು ಸಂಸ್ಕೃತಿ, ಸಭ್ಯತೆಯಲ್ಲಿ ಎಲ್ಲ ಜನಾಂಗದವರನ್ನು ಸೇರಿಸಿಕೊಂಡು ಒಟ್ಟಿಗೆ ಕೂಡಿ ಬಾಳಿದೆ ಇದು ನಾರಾಯಣಗುರುಗಳ ತತ್ವವಾಗಿದೆ ಎಂದು ಬಾಬು ಶಿವ ಪೂಜಾರಿ ವಿಶ್ಲೇಷಿಸಿದರು.

“ತುಳು ಭಾಷೆಯ ಲಿಪಿಯ ಬಗ್ಗೆ ಚರ್ಚಿತ ವಿಚಾರ. 14ನೇ ಶತಮಾನದಲ್ಲಿ ತುಳು ಲಿಪಿಯನ್ನು ತಮ್ಮ ಸಾಹಿತ್ಯದಲ್ಲಿ ಬಳಸಲಾಗಿದೆ ಎಂಬ ಉಲ್ಲೇಖ ಮಲಯಾಳಂ ಸಾಹಿತ್ಯದಲ್ಲಿದ್ದು ತುಳು ಲಿಪಿ ತುಳುವರದ್ದೇ ಎಂಬುದಕ್ಕೆ ಬೇರೆ ದಾಖಲೆ ಬೇಕಾಗಿಲ್ಲ. 2ನೇ ಶತಮಾನದ ತಮಿಳು ಸಾಹಿತ್ಯದಲ್ಲಿ ತುಳುವಿನ ಬಗ್ಗೆ ಉಲ್ಲೇಖವಿದೆ. 2010 ಮತ್ತು 12ರಲ್ಲಿ ಎರಡು ಬಾರಿ ತಮಿಳುನಾಡಿನ ಗ್ರಾಮಾಂತರ ಪ್ರದೇಶಕ್ಕೆ ಭೇಟಿ ನೀಡಿ ಅನೇಕ ತುಳು ಪೂರ್ವಿಕರನ್ನು ಭೇಟಿಯಾಗಿದ್ದೇನೆ ಹಾಗಾಗಿ ತುಳು ಪ್ರಾಚೀನ ಭಾಷೆ ಗ್ರೀಕ್‌ನಲ್ಲೂ ತುಳುವಿಗೆ ಸಂಬಂಧಿಸಿದ ವಿಚಾರವಿದೆ. ಕೆಲ ವರ್ಷಗಳ ಹಿಂದೆ ಗ್ರೀಕ್‌ನಿಂದ ಕೆಲವೊಂದು ವೀಡಿಯೊಗ್ರಫಿ ತರಿಸಿಕೊಂಡಿದ್ದು, ನೀರೆತ್ತುವ ರಾಟೆ, ನಮ್ಮಲ್ಲಿ ತೆಂಗಿನಮರಕ್ಕೆ ಕಟ್ಟುವ ಕಟ್ಟಿ ಅಲ್ಲಿ ಖರ್ಜೂರದ ಮರಕ್ಕೆ ಕಟ್ಟೆ ಕಟ್ಟುವ ತದ್ರೂಪವಿದೆ. ಆದರೆ ತುಳುನಾಡಿನಲ್ಲಿ ಸಿಗುವ ಎಲ್ಲಾ ಶಾಸನಗಳು ಕನ್ನಡದಲ್ಲಿವೆ. ಅದಕ್ಕೆ ಕಾರಣ ತುಳುನಾಡು ಒಂದು ಕಾಲದಲ್ಲಿ ಹಾಸನದವರೆಗೆ ಹಬ್ಬಿತ್ತು. ಅಲ್ಲಿ ಆದಿ ಬಿಲ್ಲೇಶ್ವರ ಎಂಬ ಬಿಲ್ಲವರ ಆದಿ ದೇವಸ್ಥಾನವಿದೆ” ಎಂದವರು ವಿವರಿಸಿದರು.

“ನನ್ನ ಹುಟ್ಟುಭಾಷೆ ಕುಂದಾಪುರ ಕನ್ನಡ, ಆದರೆ ಬಡತನ ಮುಂಬೈನ ಹೊರನಾಡಿಗೆ ಕಳುಹಿಸಿ ಅಲ್ಲಿನ ಭಾಷೆಯೊಂದಿಗೆ ಬೆರೆಯುವಂತೆ ಮಾಡಿತು. ದುಡಿಮೆಯ ಜತೆ ಕಲಿಕೆಯನ್ನು ಮುಂದುವರಿಸಿದ್ದ ನನಗೆ ಶಿಕ್ಷಣಕ್ಕೆ ನೆರವಾಗಿದ್ದು ಮುಂಬೈನಲ್ಲಿ ನಡೆಯುತ್ತಿದ್ದ ರಾತ್ರಿ ಶಾಲೆ ಅಲ್ಲಿದ್ದ ಬಹುತೇಕ ಉಪಾಧ್ಯಾಯರು ಉಚಿತವಾಗಿ ಶಿಕ್ಷಣ ನೀಡುತ್ತಿದ್ದ ಕಾರಣ ಶಿಕ್ಷಣದ ಜತೆಗೆ ನಾನು ಬರೆಯಲೂ ಕಾರಣವಾಯಿತು. ಅಂತಹ ಉಪಾಧ್ಯಾಯರಿಗೆ ನನಗೆ ಸಿಕ್ಕ ಗೌರವವನ್ನು ಅರ್ಪಿಸುತ್ತೇನೆ’ ಎಂದು ಬಾಬು ಶಿವ ಪೂಜಾರಿ ಹೇಳಿದರು.

ಈ ಸಂಧರ್ಭದಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ, ಪದ್ಮರಾಜ್ ಆರ್ ಕುದ್ರೋಳಿ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ ಗಟ್ಟಿ, ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಎಲ್. ಧರ್ಮ, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಕೆ ಪೂಜಾರಿ, ವಿಶುಕುಮಾರ್ ದತ್ತಿನಿಧಿ ಸಮಿತಿಯ ಸಂಚಾಲಕ ಸುರೇಶ್ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »