TOP STORIES:

ವಿಜಯನಗರ ಸಾಮ್ರಾಜ್ಯ ಸ್ಥಾಪನೆಯಲ್ಲಿ ಬಿಲ್ಲವರು: ಸಾಹಿತಿ ಸಂಶೋಧಕ ಬಾಬು ಶಿವ ಪೂಜಾರಿ


”ವಿಜಯನಗರ ಸ್ಥಾಪನೆಯಲ್ಲಿ ಬಿಲ್ಲವರಿದ್ದಾರೆ ಎಂಬುದಕ್ಕೆ ಎರಡು ವೀರಗಲ್ಲುಗಳು ಸಾಕ್ಷಿಯಾಗಿವೆ. ಮೇಲ್ವರ್ಗದವರು ಇತಿಹಾಸವನ್ನು ಹೇಗೆ ತಮಗೆ ತಕ್ಕಂತೆ ಬದಲಾವಣೆ ಮಾಡುತ್ತಾರೆ ಎಂಬುದಕ್ಕೆ ಉದಾಹರಣೆಯಾಗಿ ನಾನು ನನ್ನ ಮುಂಬರುವ ಪುಸ್ತಕದಲ್ಲಿ ದಾಖಲೆಗಳನ್ನು ಪ್ರಸ್ತುತಪಡಿಸಲಿದ್ದೇನೆ” ಎಂದು ಹಿರಿಯ ಸಾಹಿತಿ, ಸಂಶೋಧಕ ಬಾಬು ಶಿವ ಪೂಜಾರಿ ಹೇಳಿದ್ದಾರೆ.

ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಹಾಗೂ ವಿಶುಕುಮಾ‌ರ್ ದತ್ತಿನಿಧಿ ಸಮಿತಿ ವತಿಯಿಂದ ಹಾಗೂ ಯುವವಾಹಿನಿ ಪಣಂಬೂರು-ಕುಳಾಯಿ ಘಟಕದ ಆತಿಥ್ಯದಲ್ಲಿ ಉರ್ವಸ್ಟೋರ್‌ನ ತುಳುಭವನದಲ್ಲಿ ರವಿವಾರ ಜರುಗಿದ 2024ನೇ ಸಾಲಿನ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.

“ವಿಜಯನಗರವನ್ನು ಸ್ಥಾಪನೆ ಮಾಡಿದವರಲ್ಲಿ ವಿದ್ಯಾರಣ್ಯರು ಪ್ರಮುಖರು ಎನ್ನಲಾಗುತ್ತದೆ. ನಾನು ಬರೆದ ವಿಜಯನಗರ ತುಳುವರು ಮತ್ತು ಬಿಲ್ಲವರ ಕುರಿತಾದ ಅಧ್ಯಯನ ಕೃತಿ ಮುಂದಿನ ಎರಡು ತಿಂಗಳಲ್ಲಿ ಪ್ರಕಟಗೊಳ್ಳಲಿದ್ದು, ಅದರಲ್ಲಿ ಒಂದು ಅಧ್ಯಾಯ ವಿದ್ಯಾರಣ್ಯರಿಗೆ ಮೀಸಲಿಟ್ಟಿದ್ದೇನೆ. ವಿಜಯನಗರ ಸ್ಥಾಪನೆಯಾಗಿದ್ದು 1336 ಎಪ್ರಿಲ್ 18ರ ಶುಕ್ರವಾರ. ಈ ಸಮಯದಲ್ಲಿ ವಿದ್ಯಾರಣ್ಯರ ಪ್ರಾಯ ಕೇವಲ 5 ವರ್ಷ. ಆ ಮಗು ಹೇಗೆ ರಾಜಗುರು ಆಗುತ್ತದೆ? ಹೇಗೆ ಸನ್ಯಾಸಿಯಾಗುತ್ತದೆ? ಎಂಬುದಕ್ಕೆ ಉತ್ತರ ಸಿಗಬೇಕಿದೆ. ಇತಿಹಾಸದಲ್ಲಿ ತಳವರ್ಗವನ್ನು ತಳಕ್ಕೆ ದೂಡಲಾಗುತ್ತದೆ ಎಂಬುದಕ್ಕೆ ಇದೊಂದು ಉದಾಹರಣೆ. ನಾವು ಯಾರನ್ನೂ ದೂಷಿಸುತ್ತಿಲ್ಲ. ಆದರೆ ತಳವರ್ಗದ ಇತಿ ಹಾಸವನ್ನು ಯಾಕೆ ಮುಚ್ಚಲಾಗುತ್ತದೆ ಎಂಬುದಕ್ಕೆ ಉತ್ತರ ಬೇಕಿದೆ” ಎಂದವರು ಹೇಳಿದರು.

ಸದ್ಯ ಸನಾತನ ಧರ್ಮದ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ. ಆದರೆ ದಾಸ ಪರಂಪರೆಯಲ್ಲಿ 222 ಮಂದಿ ದಾಸರ ಉಲ್ಲೇಖವಿದೆ ಆದರೆ ದಾಸ ಸಾಹಿತ್ಯದಲ್ಲಿ ಸೂಫಿ ಸಂತರಿಂದ ಮತ ಪರಿವರ್ತನೆ ಆಗಿದ್ದರ ಬಗ್ಗೆ ಯಾಕೆ ಯಾರೊಬ್ಬರೂ ಧ್ವನಿ ಎತ್ತಿಲ್ಲ? ಇಂದು ಯಾಕೆ ಮುಸ್ಲಿಮರ ವಿರುದ್ಧ ಧ್ವನಿ ಎತ್ತಲಾಗುತ್ತಿದೆ? ನಾನು ಸಾಕಷ್ಟು ದಾಸ ಪುಸ್ತಕಗಳ ಅಧ್ಯಯನ ನಡೆಸಿದ್ದೇನೆ. ನಮ್ಮ ತುಳು ಸಂಸ್ಕೃತಿ, ಸಭ್ಯತೆಯಲ್ಲಿ ಎಲ್ಲ ಜನಾಂಗದವರನ್ನು ಸೇರಿಸಿಕೊಂಡು ಒಟ್ಟಿಗೆ ಕೂಡಿ ಬಾಳಿದೆ ಇದು ನಾರಾಯಣಗುರುಗಳ ತತ್ವವಾಗಿದೆ ಎಂದು ಬಾಬು ಶಿವ ಪೂಜಾರಿ ವಿಶ್ಲೇಷಿಸಿದರು.

“ತುಳು ಭಾಷೆಯ ಲಿಪಿಯ ಬಗ್ಗೆ ಚರ್ಚಿತ ವಿಚಾರ. 14ನೇ ಶತಮಾನದಲ್ಲಿ ತುಳು ಲಿಪಿಯನ್ನು ತಮ್ಮ ಸಾಹಿತ್ಯದಲ್ಲಿ ಬಳಸಲಾಗಿದೆ ಎಂಬ ಉಲ್ಲೇಖ ಮಲಯಾಳಂ ಸಾಹಿತ್ಯದಲ್ಲಿದ್ದು ತುಳು ಲಿಪಿ ತುಳುವರದ್ದೇ ಎಂಬುದಕ್ಕೆ ಬೇರೆ ದಾಖಲೆ ಬೇಕಾಗಿಲ್ಲ. 2ನೇ ಶತಮಾನದ ತಮಿಳು ಸಾಹಿತ್ಯದಲ್ಲಿ ತುಳುವಿನ ಬಗ್ಗೆ ಉಲ್ಲೇಖವಿದೆ. 2010 ಮತ್ತು 12ರಲ್ಲಿ ಎರಡು ಬಾರಿ ತಮಿಳುನಾಡಿನ ಗ್ರಾಮಾಂತರ ಪ್ರದೇಶಕ್ಕೆ ಭೇಟಿ ನೀಡಿ ಅನೇಕ ತುಳು ಪೂರ್ವಿಕರನ್ನು ಭೇಟಿಯಾಗಿದ್ದೇನೆ ಹಾಗಾಗಿ ತುಳು ಪ್ರಾಚೀನ ಭಾಷೆ ಗ್ರೀಕ್‌ನಲ್ಲೂ ತುಳುವಿಗೆ ಸಂಬಂಧಿಸಿದ ವಿಚಾರವಿದೆ. ಕೆಲ ವರ್ಷಗಳ ಹಿಂದೆ ಗ್ರೀಕ್‌ನಿಂದ ಕೆಲವೊಂದು ವೀಡಿಯೊಗ್ರಫಿ ತರಿಸಿಕೊಂಡಿದ್ದು, ನೀರೆತ್ತುವ ರಾಟೆ, ನಮ್ಮಲ್ಲಿ ತೆಂಗಿನಮರಕ್ಕೆ ಕಟ್ಟುವ ಕಟ್ಟಿ ಅಲ್ಲಿ ಖರ್ಜೂರದ ಮರಕ್ಕೆ ಕಟ್ಟೆ ಕಟ್ಟುವ ತದ್ರೂಪವಿದೆ. ಆದರೆ ತುಳುನಾಡಿನಲ್ಲಿ ಸಿಗುವ ಎಲ್ಲಾ ಶಾಸನಗಳು ಕನ್ನಡದಲ್ಲಿವೆ. ಅದಕ್ಕೆ ಕಾರಣ ತುಳುನಾಡು ಒಂದು ಕಾಲದಲ್ಲಿ ಹಾಸನದವರೆಗೆ ಹಬ್ಬಿತ್ತು. ಅಲ್ಲಿ ಆದಿ ಬಿಲ್ಲೇಶ್ವರ ಎಂಬ ಬಿಲ್ಲವರ ಆದಿ ದೇವಸ್ಥಾನವಿದೆ” ಎಂದವರು ವಿವರಿಸಿದರು.

“ನನ್ನ ಹುಟ್ಟುಭಾಷೆ ಕುಂದಾಪುರ ಕನ್ನಡ, ಆದರೆ ಬಡತನ ಮುಂಬೈನ ಹೊರನಾಡಿಗೆ ಕಳುಹಿಸಿ ಅಲ್ಲಿನ ಭಾಷೆಯೊಂದಿಗೆ ಬೆರೆಯುವಂತೆ ಮಾಡಿತು. ದುಡಿಮೆಯ ಜತೆ ಕಲಿಕೆಯನ್ನು ಮುಂದುವರಿಸಿದ್ದ ನನಗೆ ಶಿಕ್ಷಣಕ್ಕೆ ನೆರವಾಗಿದ್ದು ಮುಂಬೈನಲ್ಲಿ ನಡೆಯುತ್ತಿದ್ದ ರಾತ್ರಿ ಶಾಲೆ ಅಲ್ಲಿದ್ದ ಬಹುತೇಕ ಉಪಾಧ್ಯಾಯರು ಉಚಿತವಾಗಿ ಶಿಕ್ಷಣ ನೀಡುತ್ತಿದ್ದ ಕಾರಣ ಶಿಕ್ಷಣದ ಜತೆಗೆ ನಾನು ಬರೆಯಲೂ ಕಾರಣವಾಯಿತು. ಅಂತಹ ಉಪಾಧ್ಯಾಯರಿಗೆ ನನಗೆ ಸಿಕ್ಕ ಗೌರವವನ್ನು ಅರ್ಪಿಸುತ್ತೇನೆ’ ಎಂದು ಬಾಬು ಶಿವ ಪೂಜಾರಿ ಹೇಳಿದರು.

ಈ ಸಂಧರ್ಭದಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ, ಪದ್ಮರಾಜ್ ಆರ್ ಕುದ್ರೋಳಿ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ ಗಟ್ಟಿ, ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಎಲ್. ಧರ್ಮ, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಕೆ ಪೂಜಾರಿ, ವಿಶುಕುಮಾರ್ ದತ್ತಿನಿಧಿ ಸಮಿತಿಯ ಸಂಚಾಲಕ ಸುರೇಶ್ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.


Related Posts

ಬಿಲ್ಲವರ ಉನ್ನತಿಯಲ್ಲಿ ನಾರಾಯಣ ಗುರುಗಳ ಪಾತ್ರ ಗುರುತರವಾದುದು ಡಾ.ಮುಕೇಶ್ ಕುಮಾರ್


Share        ಮುಂಬಯಿ ಒಂದು ಕಾಲದಲ್ಲಿ ಮೇಲ್ವರ್ಗದವರಿಂದ ಅಸ್ಪ್ರಶ್ಯರೆನಿಸಿಕೊಂಡು ಸಮಾಜದಿಂದ ಬಹಿಷ್ಕೃತರಾದ ಬಿಲ್ಲವರು ಶ್ರೀಮಂತವಾದ ಸಂಸ್ಕೃತಿಯ ಹಿನ್ನೆಲೆಯಿಂದ ಬಂದವರು. ದಾರ್ಶನಿಕ ನಾರಾಯಣ ಗುರುಗಳ ಮಾರ್ಗದರ್ಶನವನ್ನೇ ಸ್ಫೂರ್ತಿಯಾಗಿಸಿಕೊಂಡು ಹಲವಾರು ಸಂಘರ್ಷಗಳನ್ನು ಎದುರಿಸಿಯೂ ಬಿಲ್ಲರು ಉನ್ನತ ಸ್ಥಾನಮಾನವನ್ನು ಗಳಿಸಿಕೊಂಡರು.


Read More »

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »