TOP STORIES:

ವಿಜಯನಗರ ಸಾಮ್ರಾಜ್ಯ ಸ್ಥಾಪನೆಯಲ್ಲಿ ಬಿಲ್ಲವರು: ಸಾಹಿತಿ ಸಂಶೋಧಕ ಬಾಬು ಶಿವ ಪೂಜಾರಿ


”ವಿಜಯನಗರ ಸ್ಥಾಪನೆಯಲ್ಲಿ ಬಿಲ್ಲವರಿದ್ದಾರೆ ಎಂಬುದಕ್ಕೆ ಎರಡು ವೀರಗಲ್ಲುಗಳು ಸಾಕ್ಷಿಯಾಗಿವೆ. ಮೇಲ್ವರ್ಗದವರು ಇತಿಹಾಸವನ್ನು ಹೇಗೆ ತಮಗೆ ತಕ್ಕಂತೆ ಬದಲಾವಣೆ ಮಾಡುತ್ತಾರೆ ಎಂಬುದಕ್ಕೆ ಉದಾಹರಣೆಯಾಗಿ ನಾನು ನನ್ನ ಮುಂಬರುವ ಪುಸ್ತಕದಲ್ಲಿ ದಾಖಲೆಗಳನ್ನು ಪ್ರಸ್ತುತಪಡಿಸಲಿದ್ದೇನೆ” ಎಂದು ಹಿರಿಯ ಸಾಹಿತಿ, ಸಂಶೋಧಕ ಬಾಬು ಶಿವ ಪೂಜಾರಿ ಹೇಳಿದ್ದಾರೆ.

ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಹಾಗೂ ವಿಶುಕುಮಾ‌ರ್ ದತ್ತಿನಿಧಿ ಸಮಿತಿ ವತಿಯಿಂದ ಹಾಗೂ ಯುವವಾಹಿನಿ ಪಣಂಬೂರು-ಕುಳಾಯಿ ಘಟಕದ ಆತಿಥ್ಯದಲ್ಲಿ ಉರ್ವಸ್ಟೋರ್‌ನ ತುಳುಭವನದಲ್ಲಿ ರವಿವಾರ ಜರುಗಿದ 2024ನೇ ಸಾಲಿನ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.

“ವಿಜಯನಗರವನ್ನು ಸ್ಥಾಪನೆ ಮಾಡಿದವರಲ್ಲಿ ವಿದ್ಯಾರಣ್ಯರು ಪ್ರಮುಖರು ಎನ್ನಲಾಗುತ್ತದೆ. ನಾನು ಬರೆದ ವಿಜಯನಗರ ತುಳುವರು ಮತ್ತು ಬಿಲ್ಲವರ ಕುರಿತಾದ ಅಧ್ಯಯನ ಕೃತಿ ಮುಂದಿನ ಎರಡು ತಿಂಗಳಲ್ಲಿ ಪ್ರಕಟಗೊಳ್ಳಲಿದ್ದು, ಅದರಲ್ಲಿ ಒಂದು ಅಧ್ಯಾಯ ವಿದ್ಯಾರಣ್ಯರಿಗೆ ಮೀಸಲಿಟ್ಟಿದ್ದೇನೆ. ವಿಜಯನಗರ ಸ್ಥಾಪನೆಯಾಗಿದ್ದು 1336 ಎಪ್ರಿಲ್ 18ರ ಶುಕ್ರವಾರ. ಈ ಸಮಯದಲ್ಲಿ ವಿದ್ಯಾರಣ್ಯರ ಪ್ರಾಯ ಕೇವಲ 5 ವರ್ಷ. ಆ ಮಗು ಹೇಗೆ ರಾಜಗುರು ಆಗುತ್ತದೆ? ಹೇಗೆ ಸನ್ಯಾಸಿಯಾಗುತ್ತದೆ? ಎಂಬುದಕ್ಕೆ ಉತ್ತರ ಸಿಗಬೇಕಿದೆ. ಇತಿಹಾಸದಲ್ಲಿ ತಳವರ್ಗವನ್ನು ತಳಕ್ಕೆ ದೂಡಲಾಗುತ್ತದೆ ಎಂಬುದಕ್ಕೆ ಇದೊಂದು ಉದಾಹರಣೆ. ನಾವು ಯಾರನ್ನೂ ದೂಷಿಸುತ್ತಿಲ್ಲ. ಆದರೆ ತಳವರ್ಗದ ಇತಿ ಹಾಸವನ್ನು ಯಾಕೆ ಮುಚ್ಚಲಾಗುತ್ತದೆ ಎಂಬುದಕ್ಕೆ ಉತ್ತರ ಬೇಕಿದೆ” ಎಂದವರು ಹೇಳಿದರು.

ಸದ್ಯ ಸನಾತನ ಧರ್ಮದ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ. ಆದರೆ ದಾಸ ಪರಂಪರೆಯಲ್ಲಿ 222 ಮಂದಿ ದಾಸರ ಉಲ್ಲೇಖವಿದೆ ಆದರೆ ದಾಸ ಸಾಹಿತ್ಯದಲ್ಲಿ ಸೂಫಿ ಸಂತರಿಂದ ಮತ ಪರಿವರ್ತನೆ ಆಗಿದ್ದರ ಬಗ್ಗೆ ಯಾಕೆ ಯಾರೊಬ್ಬರೂ ಧ್ವನಿ ಎತ್ತಿಲ್ಲ? ಇಂದು ಯಾಕೆ ಮುಸ್ಲಿಮರ ವಿರುದ್ಧ ಧ್ವನಿ ಎತ್ತಲಾಗುತ್ತಿದೆ? ನಾನು ಸಾಕಷ್ಟು ದಾಸ ಪುಸ್ತಕಗಳ ಅಧ್ಯಯನ ನಡೆಸಿದ್ದೇನೆ. ನಮ್ಮ ತುಳು ಸಂಸ್ಕೃತಿ, ಸಭ್ಯತೆಯಲ್ಲಿ ಎಲ್ಲ ಜನಾಂಗದವರನ್ನು ಸೇರಿಸಿಕೊಂಡು ಒಟ್ಟಿಗೆ ಕೂಡಿ ಬಾಳಿದೆ ಇದು ನಾರಾಯಣಗುರುಗಳ ತತ್ವವಾಗಿದೆ ಎಂದು ಬಾಬು ಶಿವ ಪೂಜಾರಿ ವಿಶ್ಲೇಷಿಸಿದರು.

“ತುಳು ಭಾಷೆಯ ಲಿಪಿಯ ಬಗ್ಗೆ ಚರ್ಚಿತ ವಿಚಾರ. 14ನೇ ಶತಮಾನದಲ್ಲಿ ತುಳು ಲಿಪಿಯನ್ನು ತಮ್ಮ ಸಾಹಿತ್ಯದಲ್ಲಿ ಬಳಸಲಾಗಿದೆ ಎಂಬ ಉಲ್ಲೇಖ ಮಲಯಾಳಂ ಸಾಹಿತ್ಯದಲ್ಲಿದ್ದು ತುಳು ಲಿಪಿ ತುಳುವರದ್ದೇ ಎಂಬುದಕ್ಕೆ ಬೇರೆ ದಾಖಲೆ ಬೇಕಾಗಿಲ್ಲ. 2ನೇ ಶತಮಾನದ ತಮಿಳು ಸಾಹಿತ್ಯದಲ್ಲಿ ತುಳುವಿನ ಬಗ್ಗೆ ಉಲ್ಲೇಖವಿದೆ. 2010 ಮತ್ತು 12ರಲ್ಲಿ ಎರಡು ಬಾರಿ ತಮಿಳುನಾಡಿನ ಗ್ರಾಮಾಂತರ ಪ್ರದೇಶಕ್ಕೆ ಭೇಟಿ ನೀಡಿ ಅನೇಕ ತುಳು ಪೂರ್ವಿಕರನ್ನು ಭೇಟಿಯಾಗಿದ್ದೇನೆ ಹಾಗಾಗಿ ತುಳು ಪ್ರಾಚೀನ ಭಾಷೆ ಗ್ರೀಕ್‌ನಲ್ಲೂ ತುಳುವಿಗೆ ಸಂಬಂಧಿಸಿದ ವಿಚಾರವಿದೆ. ಕೆಲ ವರ್ಷಗಳ ಹಿಂದೆ ಗ್ರೀಕ್‌ನಿಂದ ಕೆಲವೊಂದು ವೀಡಿಯೊಗ್ರಫಿ ತರಿಸಿಕೊಂಡಿದ್ದು, ನೀರೆತ್ತುವ ರಾಟೆ, ನಮ್ಮಲ್ಲಿ ತೆಂಗಿನಮರಕ್ಕೆ ಕಟ್ಟುವ ಕಟ್ಟಿ ಅಲ್ಲಿ ಖರ್ಜೂರದ ಮರಕ್ಕೆ ಕಟ್ಟೆ ಕಟ್ಟುವ ತದ್ರೂಪವಿದೆ. ಆದರೆ ತುಳುನಾಡಿನಲ್ಲಿ ಸಿಗುವ ಎಲ್ಲಾ ಶಾಸನಗಳು ಕನ್ನಡದಲ್ಲಿವೆ. ಅದಕ್ಕೆ ಕಾರಣ ತುಳುನಾಡು ಒಂದು ಕಾಲದಲ್ಲಿ ಹಾಸನದವರೆಗೆ ಹಬ್ಬಿತ್ತು. ಅಲ್ಲಿ ಆದಿ ಬಿಲ್ಲೇಶ್ವರ ಎಂಬ ಬಿಲ್ಲವರ ಆದಿ ದೇವಸ್ಥಾನವಿದೆ” ಎಂದವರು ವಿವರಿಸಿದರು.

“ನನ್ನ ಹುಟ್ಟುಭಾಷೆ ಕುಂದಾಪುರ ಕನ್ನಡ, ಆದರೆ ಬಡತನ ಮುಂಬೈನ ಹೊರನಾಡಿಗೆ ಕಳುಹಿಸಿ ಅಲ್ಲಿನ ಭಾಷೆಯೊಂದಿಗೆ ಬೆರೆಯುವಂತೆ ಮಾಡಿತು. ದುಡಿಮೆಯ ಜತೆ ಕಲಿಕೆಯನ್ನು ಮುಂದುವರಿಸಿದ್ದ ನನಗೆ ಶಿಕ್ಷಣಕ್ಕೆ ನೆರವಾಗಿದ್ದು ಮುಂಬೈನಲ್ಲಿ ನಡೆಯುತ್ತಿದ್ದ ರಾತ್ರಿ ಶಾಲೆ ಅಲ್ಲಿದ್ದ ಬಹುತೇಕ ಉಪಾಧ್ಯಾಯರು ಉಚಿತವಾಗಿ ಶಿಕ್ಷಣ ನೀಡುತ್ತಿದ್ದ ಕಾರಣ ಶಿಕ್ಷಣದ ಜತೆಗೆ ನಾನು ಬರೆಯಲೂ ಕಾರಣವಾಯಿತು. ಅಂತಹ ಉಪಾಧ್ಯಾಯರಿಗೆ ನನಗೆ ಸಿಕ್ಕ ಗೌರವವನ್ನು ಅರ್ಪಿಸುತ್ತೇನೆ’ ಎಂದು ಬಾಬು ಶಿವ ಪೂಜಾರಿ ಹೇಳಿದರು.

ಈ ಸಂಧರ್ಭದಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ, ಪದ್ಮರಾಜ್ ಆರ್ ಕುದ್ರೋಳಿ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ ಗಟ್ಟಿ, ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಎಲ್. ಧರ್ಮ, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಕೆ ಪೂಜಾರಿ, ವಿಶುಕುಮಾರ್ ದತ್ತಿನಿಧಿ ಸಮಿತಿಯ ಸಂಚಾಲಕ ಸುರೇಶ್ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »