TOP STORIES:

ಯುವ ವಾಹಿನಿಯ ಸಮಾಜಮುಖಿ ಕಾರ್ಯಕ್ಕೆ ಶಕ್ತಿ ತುಂಬುವ ಕೆಲಸ ಶ್ಲಾಘನೀಯ : ಮಹೇಶ್ ಕುಮಾರ್


ಯುವವಾಹಿನಿ( ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ನಾಟಕ ಪ್ರದರ್ಶನ

ಯುವ ವಾಹಿನಿಯ ಸಮಾಜಮುಖಿ ಕಾರ್ಯಕ್ಕೆ ಶಕ್ತಿ ತುಂಬುವ ಕೆಲಸ ಶ್ಲಾಘನೀಯ : ಮಹೇಶ್ ಕುಮಾರ್

ಮಂಗಳೂರು : ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಸಮಾಜಮುಖಿ ಕಾರ್ಯಕ್ಕೆ ಸಮಾಜದ ಸರ್ವರ ಬೆಂಬಲ ಅತ್ಯಂತ ಸಂತಸ ತಂದಿದೆ, ಆರ್ಥಿಕ ಕ್ರೋಡೀಕರಣಕ್ಕಾಗಿ ನಡೆದ ನಾಟಕ ಪ್ರದರ್ಶನದಲ್ಲಿ ಪುರಭವನದ ಜನಸ್ತೋಮದಿಂದ ತುಂಬಿರುವುದು ಮಹಿಳಾ ಘಟಕದ ಶ್ರಮಕ್ಕೆ ಸಂದ ಪ್ರತಿಫಲ ಎಂದು ಅಸಿಸ್ಟೆಂಟ್ ಕಮಿಷನರ್ ಅಫ್ ಪೋಲಿಸ್ ಮಹೇಶ್ ಕುಮಾರ್ ತಿಳಿಸಿದರು.

ಅವರು ಮಂಗಳೂರು ಮಹಿಳಾ ಘಟಕದ  ಆಶ್ರಯದಲ್ಲಿ ಘಟಕದ ಆರ್ಥಿಕ ಬಲವರ್ಧನೆಗಾಗಿ ದಿನಾಂಕ 30-01-2024 ರಂದು ಮಂಗಳೂರಿನ ಪುರಭವನದಲ್ಲಿ “ಕಥೆ ಎಡ್ಡೆಂಡು”* ನಾಟಕ ಪ್ರದರ್ಶನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.

ವಿಶ್ವಬಿಲ್ಲವ ಮಹಿಳಾ ಸಂಘದ ಅಧ್ಯಕ್ಷರಾದ

ಊರ್ಮಿಳಾ ರಮೇಶ್, ಅಖಿಲ ಭಾರತ ಬಿಲ್ಲವರ ಯೂನಿಯನ್ ಮಹಿಳಾ ವಿಭಾಗದ ಅಧ್ಯಕ್ಷರಾದ ಸುಮಲತಾ ಸುವರ್ಣ, ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜೇಶ್ ಬಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಶಶಿಧರ ಹೆಗ್ಡೆ ಇವರನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು,

ನಾಟಕ ಪ್ರದರ್ಶನಕ್ಕೆ ಆರ್ಥಿಕ ಬಲ ತುಂಬಿದ ದಾನಿಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.

ಆರ್ಥಿಕ ಕ್ರೋಡೀಕರಣಕ್ಕಾಗಿ ನಡೆಸಿದ ಕಥೆ ಎಡ್ಡೆಂಡು ನಾಟಕವು,ತುಂಬಿ ತುಳುಕಿದ ಪುರಭವನ ಹಾಗು ಪ್ರೇಕ್ಷಕರ ಮೆಚ್ಚುಗೆಯ ಮಾತುಗಳಿಂದ ಯಶಸ್ವಿಯಾಗಿ ಸಂಪನ್ನಗೊಂಡಿತು.

ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ ಶುಭ ರಾಜೇಂದ್ರ ಸ್ವಾಗತಿಸಿದರು, ಕಾರ್ಯದರ್ಶಿ ದಿವ್ಯ ವಂದಿಸಿದರು, ಮಾಜಿ ಅಧ್ಯಕ್ಷೆ ವಿದ್ಯಾ ರಾಕೇಶ್ ನಿರೂಪಿಸಿದರು.

ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಶುಭಾ ರಾಜೇಂದ್ರ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »