TOP STORIES:

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ ನ್ಯೂಸ್‌ ವತಿಯಿಂದ ಗೌರವಿಸಲಾಯಿತು.

 

ಬೆಂಗಳೂರಿನ ಪ್ರತಿಷ್ಠಿತ ದಿ ರಿಟ್ಜ್‌ ಕಾರ್ಲ್ಟ್ರನ್‌ ಹೋಟೆಲ್‌ನಲ್ಲಿ ನಡೆದ ವರ್ಣರಂಜಿತ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಪೀಠಾಧಿಪತಿ ಶ್ರೀ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಘನ ಉಪಸ್ಥಿತಿ ವಹಿಸಿದ್ದರು. ರಾಜ್ಯದ ವಿವಿಧ ಸಾಧಕರಿಗೆ ಡಿ.ಕೆ.ಶಿವಕುಮಾರ್ ಅವರು ಸನ್ಮಾನಿಸಿ ಪ್ರಶಸ್ತಿ ಪ್ರದಾನ ಮಾಡಿ ಅಭಿನಂದಿಸಿದರು.

 

ಅಸಿಸ್ಟೆಂಟ್‌ ಕಮೀಶನರ್‌ ಆಫ್‌ ಪೋಲಿಸ್‌ ಆಗಿ ಕಾರ್ಯ ನಿರ್ವಹಿಸುತ್ತಿರುವ ರೀನಾ ಸುವರ್ಣಾ. ಎನ್‌ ಅವರನ್ನು ಸಹ ಈ ಸಂದರ್ಭದಲ್ಲಿ ಗೌರವಿಸಲಾಯಿತು.

ರೀನಾ ಸುವರ್ಣಾ. ಎನ್‌ ಅವರು 2014 ರಂದು ಪೊಲೀಸ್ ಇಲಾಖೆಗೆ ಸೇರಿ ಪ್ರೊಬೇಷನರಿ ಅವಧಿಯ ಕಾರ್ಯದಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳ ಗಮನ ಸೆಳೆದರು, ಅಪರಾಧ ಪ್ರಕರಣಗಳ ಮಿಂಚಿನ ಕಾರ್ಯದಲ್ಲಿ ನಿರತವಾಗಿ ಹಾಗೂ ಸಾಮಾಜಿಕ ಕಾರ್ಯಗಳನ್ನು ಮಾಡಿ ಜನಮನ ಗೆದ್ದ ದಕ್ಷ ಅಧಿಕಾರಿ ಎಂದು ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಭಾಜನರಾದರು.


Related Posts

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ


Share         ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ


Read More »