TOP STORIES:

ಅಕ್ಟೋಬರ್ 7 ರಿಂದ ’ಮಂಗಳೂರು ದಸರಾ’, ಭರದ ಸಿದ್ಧತೆಯಲ್ಲಿ ಕುದ್ರೋಳಿ ಕ್ಷೇತ್ರ


ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವವನ್ನು ಸರಕಾರದ ಮಾರ್ಗಸೂಚಿಯಂತೆ ಸಾಂಪ್ರದಾಯಿಕವಾಗಿ ನಡೆಸಲು ನಿರ್ಧರಿಸಲಾಗಿದ್ದು, ಇದಕ್ಕೆ ಪೂರಕ ಸಿದ್ಧತೆಗಳು ನಡೆಯುತ್ತಿದೆ ಎಂದು ದೇವಸ್ಥಾನದ ಅಧ್ಯಕ್ಷ ಹೆಚ್.ಎಸ್. ಸಾಯಿರಾಂ ತಿಳಿಸಿದ್ದಾರೆ.

ದಸರಾ ಮಹೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅ.7 ರಿಂದ ಅ.16ರವರೆಗೆ ಮಂಗಳೂರು ದಸರಾ ಮಹೋತ್ಸವ ನಡೆಯಲಿದೆ. ಈ ಬಾರಿಯ ಮಹೋತ್ಸವವೂ ಯಶಸ್ವಿಯಾಗಿ ನಡೆಯಬೇಕಾದರೆ ಸಂಘಸಂಸ್ಥೆಗಳು, ಭಕ್ತಾದಿಗಳು ಸರ್ವರ ಸಹಕಾರ ಪ್ರಮುಖವಾಗಿದೆ. ಕಳೆದ ಬಾರಿಯಂತೆ ಈ ಬಾರಿಯೂ ನಗರದ ರಾಜಬೀದಿಗಳು ವಿದ್ಯುದ್ದೀಪಗಳಿಂದ ಕಂಗೊಳಿಸಲಿವೆ ಎಂದರು.

ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ಮಾಧವ ಸುವರ್ಣ ಮಾತನಾಡಿ, ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಜನಾರ್ದನ ಪೂಜಾರಿ ಆಶಯದಂತೆ ಮಂಗಳೂರ ದಸರಾ ಮಹೋತ್ಸವ ನಡೆಯಲಿದ್ದು, ಇದು ಯಶಸ್ವಿಯಾಗಿ ನಡೆಯಬೇಕಾದರೆ ಎಲ್ಲ ಸಂಘ-ಸಂಸ್ಥೆಗಳು, ಸಾರ್ವಜನಿಕರ ಸಹಕಾರವೂ ಅಗತ್ಯವಾಗಿದೆ ಎಂದರು.

ಕಳೆದ ಬಾರಿಯೂ ‘ನಮ್ಮ ದಸರಾ-ನಮ್ಮ ಸುರಕ್ಷೆ’ ಚಿಂತನೆಯೊಂದಿಗೆ ಯಶಸ್ವಿಯಾಗಿ ನಡೆಸಲಾಗಿದೆ. ದಸರಾ ಮಹೋತ್ಸವದ ದರ್ಬಾರು ಮಂಟಪ, ಮೂರ್ತಿ ರಚನೆ ಕಾರ್ಯ ನಡೆಯುತ್ತಿದೆ. ಕಳೆದ ಬಾರಿಯೂ ಮಂಗಳೂರು ದಸರಾ ಮಹೋತ್ಸವ ಮೂಲಕ ಕರಾವಳಿಯ ಆರ್ಥಿಕ ಚೈತನ್ಯಕ್ಕೆ ಪುನಶ್ಚೇತನ ಸಿಕ್ಕಂತಾಗಿದೆ. ಇದಕ್ಕೆ ಗೋಕರ್ಣನಾಥ, ಶಾರದೆ, ನವದುರ್ಗೆಯರ ಅನುಗ್ರಹ ಕಾರಣ. ಎಲ್ಲರ ಸಹಕಾರದೊಂದಿಗೆ ಈ ಬಾರಿಯೂ ಉತ್ಸವ ಯಶಸ್ವಿಯಾಗಿ ನಡೆಯಲಿದೆ.
– ಪದ್ಮರಾಜ್ ಆರ್., ಕೋಶಾಧಿಕಾರಿ ಕುದ್ರೋಳಿ ಕ್ಷೇತ್ರ ತಿಳಿಸಿದರು.

ಸಭೆಯಲ್ಲಿ ಕುದ್ರೋಳಿ ದೇವಸ್ಥಾನದ ಉಪಾಧ್ಯಕ್ಷರಾದ ಉರ್ಮಿಳಾ ರಮೇಶ್ ಕುಮಾರ್, ಟ್ರಸ್ಟಿಗಳಾದ ರವಿಶಂಕರ್ ಮಿಜಾರು, ಜಗದೀಶ್ ಡಿ. ಸುವರ್ಣ, ಶೇಖರ್ ಪೂಜಾರಿ, ಕುದ್ರೋಳಿ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಉಪಾಧ್ಯಕ್ಷರಾದ ಡಾ. ಅನಸೂಯ, ಡಾ.ಬಿ.ಜಿ. ಸುವರ್ಣ, ಸದಸ್ಯರಾದ ಹರಿಕೃಷ್ಣ ಬಂಟ್ವಾಳ್, ರಾಧಾಕೃಷ್ಣ ಕೆ., ಶೈಲೇಂದ್ರ ಸುವರ್ಣ, ಚಿತ್ತರಂಜನ್ ಗರೋಡಿ, ಸೂರ್ಯ ಜಯ ಸಿ. ಸುವರ್ಣ,  ಜಯರಾಜ್ ಹೆಚ್ ಎಸ್, ಚಂದ್ರಹಾಸ್, ವೇದಕುಮಾರ್ ಬೆಂಗಳೂರು, ಲೀಲಾಕ್ಷ ಕರ್ಕೇರಾ ಉಪಸ್ಥಿತರಿದ್ದರು.

Subscribe our channel: https://www.youtube.com/c/BillavasWarriors


Related Posts

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »