TOP STORIES:

ಅನಂತಾಡಿಯಲ್ಲಿ ಕುದ್ರೋಳಿ ಗುರು ಬೆಳದಿಂಗಳು ಸಂಘಟನೆಯಿಂದ ‘ಗುರುವನ’ ಲೋಕಾರ್ಪಣೆ


ಬದುಕಿನಲ್ಲಿ ಕನಸು ಕಾಣುವುದು ಸುಲಭ ಆದರೆ ಅದನ್ನು ನನಸು ಮಾಡುವುದು ಬಲುಕಷ್ಟತ್ಯಾಗ, ಪರಿಶ್ರಮ, ಇಚ್ಚಾಶಕ್ತಿ ಇರುವತಂಡವೊಂದಿದ್ದರೆ ಯಾವುದನ್ನು ಸಾಧಿಸಲು ಸಾಧ್ಯ ಎಂದು ಹಿಂದುಳಿದ ವರ್ಗ ಹಾಗೂ ಸಮಾಜಕಲ್ಯಾಣ ಸಚಿವರಾದ ಕೋಟಶ್ರೀನಿವಾಸ ಪೂಜಾರಿರವರು ಹೇಳಿದರು.

ಅವರು   ಗುರು ಬೆಳದಿಂಗಳು ರಿ. ಕುದ್ರೋಳಿ ಇದರ ವತಿಯಿಂದ ಅನಂತಾಡಿ ಬಾಕಿಲಗುತ್ತು ಶ್ರೀ ಉಳ್ಳಾಲ್ತಿ ವೈದ್ಯನಾಥೇಶ್ವರ, ಶ್ರೀಬ್ರಹ್ಮಬೈದರ್ಕಳ ಗರಡಿಯಲ್ಲಿ  ಬ್ರಹ್ಮ ಶ್ರೀ ನಾರಾಯಣ ಗುರುಗಳ ೧೬೭ನೇ ಜನ್ಮದಿನಾಚರಣೆಯ ಪ್ರಯುಕ್ತ ೧೬೭ ಔಷದೀಯ ಸಸಿನೆಡುವ ಕಾರ್ಯಕ್ರಮ ಹಾಗೂ ನೂತನವಾಗಿ ನಿರ್ಮಿಸಿರುವ  ಗುರುವವನ್ನು ಲೋಕಾರ್ಪಣೆಗೊಳಿಸಿ ಬಳಿಕ ನಡೆದ ಸಭಾಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಮ್ಮ ಬದುಕಿನ ಜೊತೆಗೆ ಪರಿಸರವನ್ನು ಉಳಿಸಿಬೆಳೆಸುವ ಕೆಲಸ ಎಲ್ಲರಿಂದ ಆಗಬೇಕಾಗಿದೆ. ನನ್ನ ಅಧಿಕಾರದ ಅವಧಿಯಲ್ಲಿಸಮಾಜದಲ್ಲಿರುವ ಕಟ್ಟಕಡೇಯ ವ್ಯಕ್ತಿಗೂ ಸಹಕಾರ ಮಾಡಬೇಕೆನ್ನುವುದು ಆಶಯ ನನ್ನದಾಗಿದೆ. ಗುರುಬೆಳದಿಂಗಳು ಸಂಸ್ಥೆಯಯೋಜನೆ ಯೋಚನೆಗಳು ಹಲವಿದ್ದು ಅವೆಲ್ಲವೂ ಸಫಲವಾಗಲಿ ಎಂದರು.

ಮುಖ್ಯ ಅತಿಥಿಯಾಗಿ ಆಗಮಿಸಿದ  ಮಾಜಿ ಸಚಿವರಾದ ರಮಾನಾಥ ರೈರವರು ಮಾತನಾಡಿ ಗುರುಗಳು ನಡೆದು ಬಂದ ಹಾದಿಅವಿಸ್ಮರಣೀಯ. ಈಗಿನ ಪೀಳಿಗೆ ಹಿಂದಿನ ಪೀಳಿಗೆಯನ್ನು ಅರ್ಥಮಾಡಿಕೊಂಡು ಮುನ್ನಡೆಯ ಬೇಕಾದುದು ಅಗತ್ಯ. ಗುರುಬೆಳದಿಂಗಳು ವತಿಯಿಂದ ಹಲವಾರು ಸಮಾಜಮುಖಿ ಕಾರ್ಯಗಳು ನಡೆಯುತ್ತಾ ಬರುತ್ತಿದೆ. ದೈವಗಳ ಸಾನಿಧ್ಯವಿರುವ ಬಾಕಿಲದ ಮಣ್ಣಿನಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಔಷದೀಯ ವನವನ್ನು ನಿರ್ಮಿಸಿರುವುದು ಒಂದು ಒಳ್ಳೆಯಬೆಳವಣಿಗೆಯಾಗಿದೆ ಎಂದರು.

ಗುರುಬೆಳದಿಂಗಳು ರಿ.ಕುದ್ರೋಳಿ ಇದರ ಅಧ್ಯಕ್ಷರಾದ ಪದ್ಮರಾಜ್ ಆರ್. ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅತಿಥಿಗಳನ್ನುಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿ ಜಿಲ್ಲೆಯ ವಿವಿಧ ಪುಣ್ಯ ಕ್ಷೇತ್ರಗಳಲ್ಲಿ ಗಿಡಗಳನ್ನು ನೆಡುವ ಮೂಲಕ ಬ್ರಹ್ಮ ಶ್ರೀನಾರಾಯಣಗುರುಗಳ ೧೬೭ನೇ ಜನ್ಮದಿನಾಚರಣೆಯನ್ನು ಆಚರಿಸಿಕೊಂಡು ಬಂದಿದ್ದೇವೆ. ಬಾಕಿಲಗುತ್ತಿವಿನಲ್ಲಿ ೧೬೭ಔಷದೀಯಗಿಡಗಳನ್ನು‌ ನೆಟ್ಟು ಇದೀಗ  ಗುರುವನವನ್ನು ಲೋಕಾರ್ಪಣೆ ಗೊಳಿಸಲಾಗಿದೆ. ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಸಿದ್ದಂತವನ್ನುನಾವೆಲ್ಲರೂ ಸಾಧಿಸುತ್ತೇವೆ. ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಗೆ ಸಹಾಯ, ನಿರ್ಗತಿಕರಿಗೆ ಆಸರೆ, ಅನಾರೋಗ್ಯದಿಂದಿರುವ ಬಡವರನ್ನುಚಿಕಿತ್ಸೆಗೆ ಸಹಕಾರ ನೀಡುತ್ತಾ ಬಂದಿದ್ದೇವೆ. ಇನ್ನು ಮುಂದಿನ ದಿನಗಳಲ್ಲಿ ಹಲವಾರು ಸಮಾಜ ಮುಖಿ‌ಕಾರ್ಯವನ್ನು ನಡೆಸುವ ಇರಾದೆಇದೆ ಎಂದು ಅವರು ಹೇಳಿದರು.

ಮುಖ್ಯ ಅತಿಥಿಯಾಗಿ  ಬಂದರು ಹಾಗೂ ಮೀನುಗಾರಿಕ ಸಚಿವರಾದ ಅಂಗಾರ ಎಸ್., ಬಂಟ್ವಾಳ ಶಾಸಕರಾದ ರಾಜೇಶ್ನಾಯ್ಕ್,ರವರು ಆಗಮಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿ ಸಮಿತಿಅಧ್ಯಕ್ಷರಾದ ದೇವೇಂದ್ರ ಪೂಜಾರಿ, ಅನಂತಾಡಿ ಬಾಕಿಲಗುತ್ತು ಶ್ರೀ ಉಳ್ಳಾಲ್ತಿ ವೈದ್ಯನಾಥೇಶ್ವರ ಕ್ಷೇತ್ರದ ಆಡಳಿತ ಅಧ್ಯಕ್ಷ ವಸಂತಪೂಜಾರಿ, ಗುರು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಜಯಾನಾಂದ, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಡಾ. ರಾಜಾರಾಮ್ಕೆ.ಬಿ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ದಿನೇಶ್ ರಾಯಿ ಕಾರ್ಯಕ್ರಮ ನಿರೂಪಿಸಿದರು‌.

ಇಂತಹ ಕಾರ್ಯಕ್ರಮ ರಾಜ್ಯದ್ಯಂತ ನಡೆಯಬೇಕು:

ಎಸ್. ಅಂಗಾರ

ಕಾರ್ಯಕ್ರಮಕ್ಕೆ ಆಗಮಿಸಿದ ಬಂದರು ಹಾಗೂ ಮೀನುಗಾರಿಕ ಸಚಿವರಾದ ಎಸ್ ಅಂಗಾರರವರು ಪತ್ರಕರ್ತರೊಂದಿಗೆ ಮಾತನಾಡಿ

ಗಿಡಮೂಲಿಕೆಗಳ ಸಸಿಗಳನ್ನು ನೆಟ್ಟು ಬ್ರಹ್ಮ ಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಬಾಕಿಲದಲ್ಲಿ ಔಷದೀಯ ವನವನ್ನುನಿರ್ಮಿಸಿರುವುದು ಉತ್ತಮ ಬೆಳವಣಿಗೆಯಾಗಿದೆ. ಮುಂದಿನ ದಿನಗಳಲ್ಲಿ ಅಳಿವಿನಂಚಿನಲ್ಲಿರುವ ಗಿಡಮೂಲಿಕೆ ಗಿಡಗಳನ್ನು ನೆಟ್ಟುಬೆಳೆಸುವುದು ಅಗತ್ಯವಾಗಿದೆ. ಇಂತಹ ಮಹತ್ಕಾರ್ಯಗಳಿಗೆ ಸರಕಾರದ ಭಾಗದಿಂದ ಸಹಕಾರವನ್ನು ನೀಡಲು ಶ್ರಮಿಸುತ್ತೇನೆ. ಇಂತಹಕಾರ್ಯಕ್ರಮಗಳು ನಮ್ಮ ಜಿಲ್ಲೆಗೆ ಮಾತ್ರ ಸೀಮಿತವಾಗದೆ  ರಾಜ್ಯಾದ್ಯಾಂತ ಔಷದೀಯ ಸಸಿಗಳನ್ನು ನೆಟ್ಟು ಬೆಳೆಸುವಕಾರ್ಯವಾಗಬೇಕು ಎಂದರು


Related Posts

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »