TOP STORIES:

ಅಮೇರಿಕಾದಲ್ಲಿ ಪ್ರಧಾನಿ ಮೋದಿಗೆ ಮತ್ತೆ “ಆನಂದ”ದ ಆತಿಥ್ಯ ಹೋಟೇಲ್ ಉದ್ಯಮಿ ಆನಂದ್‌ ಪೂಜಾರಿ ಅವರದಾಗಿತ್ತು


ಕುಂದಾಪುರ: ಮೂರು ದಿನಗಳ ಕಾಲ ಅಮೆರಿಕ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಸ್ಯಾಹಾರತಯಾರಿಸಿಕೊಡುವ ಜವಾಬ್ದಾರಿ ಕುಂದಾಪುರದ ಆಲೂರು ಮೂಲದ ಅನಿವಾಸಿ ಭಾರತೀಯ ಹೊಟೇಲ್‌ ಉದ್ಯಮಿ ಆನಂದ್‌ಪೂಜಾರಿ ಅವರದಾಗಿತ್ತು.

ಮೋದಿ ಅವರು ವಾಷಿಂಗ್ಟನ್‌ ಡಿ.ಸಿ.ಯಲ್ಲಿ ವಾಸ್ತವ್ಯವಿದ್ದ ಮೂರು ದಿನ ಊಟೋಪಚಾರದ ನೇತೃತ್ವ ವಹಿಸಿದವರು ಆಲೂರುಆನಂದ ಪೂಜಾರಿ. ಮೂಲಕ ಆನಂದ್‌ ಅವರು ಮೋದಿ ಅವರಿಗೆ ಐದನೇ ಬಾರಿಗೆ ಊಟದ ಆತಿಥ್ಯದ ಜವಾಬ್ದಾರಿನೋಡಿಕೊಂಡಂತಾಗಿದೆ.

ವಾಷಿಂಗ್ಟನ್‌ ಡಿಸಿಯಲ್ಲಿ 35 ವರ್ಷಗಳಿಂದ ನೆಲೆಸಿರುವ ಆನಂದ ಪೂಜಾರಿ ಮತ್ತು ಪತ್ನಿ ಸುಮಿತಾ ದಂಪತಿ 25 ವರ್ಷಗಳಿಗೂ ಹೆಚ್ಚುಕಾಲದಿಂದ ವುಡ್‌ಲ್ಯಾಂಡ್ಸ್‌ ಹೊಟೇಲನ್ನು ನಡೆಸುತ್ತಿದ್ದಾರೆ. ಇವರು ಬೈಂದೂರು ತಾಲೂಕಿನ ಆಲೂರು ಗ್ರಾಮದ ಕಲ್ಲಂಗಡಿ ಮನೆಯನಿವಾಸಿ ಬಡಿಯ ಪೂಜಾರಿ ಹಾಗೂ ಗಿರಿಜಾ ದಂಪತಿಯ ಪುತ್ರ.

ವಾಷಿಂಗ್ಟನ್‌ ಡಿಸಿಯಲ್ಲಿಯೇ ಇವರ ಹೊಟೇಲ್‌ ಇರುವುದರಿಂದ ಭಾರತದಿಂದ ಅಮೆರಿಕಕ್ಕೆ ಕೇಂದ್ರ ಸಚಿವರ ಸಹಿತ ಗಣ್ಯರು ಭೇಟಿನೀಡಿದರೆ, ಅವರಿಗೆಲ್ಲ ಆತಿಥ್ಯ ಇವರದೇ ಆಗಿದೆ.2023 ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷವಾದ್ದರಿಂದ ಮೊದಲ ದಿನ ರಾತ್ರಿಯೂಟಕ್ಕೆ ಸಿರಿಧಾನ್ಯಗಳದೇ ಬಿಸಿಬೇಳೆ ಬಾತ್‌ಮಾಡಿದ್ದರು. ಉಳಿದಂತೆ ಮೋದಿಯವರು ಗುಜರಾತಿ ಶೈಲಿಯಲ್ಲಿ ಕಿಚಡಿ, ಢೋಕ್ಲಾ, ಹಸಿ ಅಥವಾ ಬೇಯಿಸಿದ ತಾಜಾ ತರಕಾರಿಗಳು, ಹಣ್ಣುಗಳು ಇತ್ಯಾದಿಯನ್ನಷ್ಟೇ ಬಯಸುವುದರಿಂದ ಮತ್ತು . ಭಾರತೀಯ ವಿಶೇಷಗಳಾದ ಇಡ್ಲಿಚಟ್ನಿ, ವಡೆಸಾಂಬಾರ್‌ ಸಹಅವರಿಗೆ ಇಷ್ಟವೇ ಆದ್ದರಿಂದ, ಪುನರಾವರ್ತನೆ ಆಗದಂತೆ ನೋಡಿಕೊಂಡು ಶುದ್ಧ ಸಸ್ಯಹಾರ ಆಹಾರವನ್ನೇ ಒದಗಿಸಿದ್ದಾರೆ. “ತರಕಾರಿಗಳೆಲ್ಲ ಭಾರತದವೇ ಆಗಬೇಕೆಂದು ಎಲ್ಲೆಲ್ಲಿಂದ ಹುಡುಕಿ ತರುವ ಕಷ್ಟ ತಗೋಬೇಡಿ. ಸ್ಥಳೀಯವಾಗಿ ಬೆಳೆದ, ಇದುವರೆಗೆನನಗೆ ಅಪರಿಚಿತ ತರಕಾರಿಗಳಿದ್ದರೆ ದಯವಿಟ್ಟು ಅವುಗಳನ್ನೇ ಬಳಸಿಎಂದು ಮೋದಿಯವರು ಸೂಚನೆ ಕೊಟ್ಟಿದ್ದರು ಎನ್ನಲಾಗಿದೆ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »