TOP STORIES:

FOLLOW US

ಅವರು ನಾರಾಯಣ ಗುರುಗಳನ್ನು ಹಿಂದೆಯೂ ತಿರಸ್ಕರಿಸಿದ್ದರು, ಮುಂದೆಯೂ ತಿರಸ್ಕರಿಸುತ್ತಾರೆ-ದಿನೇಶ್ ಅಮೀನ್ ಮಟ್ಟು


ಗಣರಾಜ್ಯೋತ್ಸವ ಪರೇಡ್ ನಲ್ಲಿ ನಾರಾಯಣ ಗುರುಗಳ ಮೂರ್ತಿ ಇದ್ದ ಸ್ಥಬ್ದಚಿತ್ರವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ್ದರಲ್ಲಿ ಯಾವ ಆಶ್ಚರ್ಯವೂ ಇಲ್ಲ. ಇದನ್ನು ಯಾರೂ ವಿರೋಧಿಸಬೇಕಾಗಿಲ್ಲ, ಬದಲಿಗೆ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಆಡಳಿತಾರೂಢ ಬಿಜೆಪಿಯ ಪ್ರಾಮಾಣಿಕ ನಡವಳಿಕೆಗಾಗಿ ಎಲ್ಲರೂ ಅಭಿನಂದಿಸಬೇಕು.
ಇದೇ ರೀತಿಯ ಪ್ರಾಮಾಣಿಕತೆಯಿಂದ ಬುದ್ದ,ಬಸವ, ಅಂಬೇಡ್ಕರ್, ಕನಕ, ಕಬೀರ, ವಾಲ್ಮೀಕಿಯೂ ಸೇರಿದಂತೆ ಎಲ್ಲ ಮಹಾ ಪುರುಷರ ಬಗೆಗಿನ ತಮ್ಮ ವಿರೋಧವನ್ನು ಬಿಜೆಪಿ ಮತ್ತು ಅದರ ಸರ್ಕಾರಗಳು ಮುಕ್ತವಾಗಿ ದಾಖಲಿಸಬೇಕು ಎಂದು ನಾವೆಲ್ಲರೂ ಕೂಡಿ ಒತ್ತಾಯಿಸಬೇಕು.
ಸಾವರ್ಕರ್, ಗೋಲ್ವಾಲ್ಕರ್, ಹೆಗಡೆವಾರ್ , ಗೋಡ್ಸೆ ಸೇರಿದಂತೆ ರಾಜಕೀಯ ಹಿಂದುತ್ವದ ಪ್ರಚಾರಕರ ವಿರುದ್ದ ನಮ್ಮ ವಿರೋಧವನ್ನು ನಾವು ಹೇಗೆ ಮುಕ್ತವಾಗಿ ಮಂಡಿಸುತ್ತೇವೆಯೋ ಹಾಗೆ ಅವರು ಆತ್ಮವಂಚನೆ ಮಾಡಿಕೊಳ್ಳದೆ ನಾವು ಆದರ್ಶಪ್ರಾಯರೆಂದು ತಿಳಿದುಕೊಂಡ ಮತ್ತು ಅವರು ಮನಸ್ಸಿನೊಳಗೆ ವಿರೋಧಿಸುತ್ತಿರುವ ಮಹಾಪುರುಷರ ವಿರುದ್ದದ ತಮ್ಮ ಅಭಿಪ್ರಾಯವನ್ನು ಪ್ರಾಮಾಣಿಕತೆಯಿಂದ ಮುಕ್ತವಾಗಿ ಹೇಳಿಕೊಳ್ಳಬೇಕು.
ನಡೆಯಲಿ ಇಂತಹದ್ದೊಂದು ಸೈದ್ದಾಂತಿಕ ಸಂಘರ್ಷ. ಗಟ್ಟಿಯಾಗಿರುವುದು ಉಳಿಯುತ್ತದೆ, ಉಳಿದದ್ದು ಇತಿಹಾಸದ ಕಸದ ಬುಟ್ಟಿಗೆ ಸೇರುತ್ತದೆ. ಹೊಡೆದು, ಬಡಿದು, ಕಡಿದು ಯಾವ ಸಿದ್ದಾಂತವನ್ನೂ ನೆಲೆ ಗೊಳಿಸಲಾಗುವುದಿಲ್ಲ.
ಇಂತಹದ್ದೊಂದು ದಾರಿಯನ್ನು ಹೇಳಿಕೊಟ್ಟವರೇ ನಾರಾಯಣ ಗುರುಗಳು. ಅವರು ತನ್ನ ಜನರಿಗೆ ಉಳಿದ ಸಮಾಜ ಸುಧಾರಕರಂತೆ ದೇವಸ್ಥಾನದೊಳಗೆ ಪ್ರವೇಶ ನೀಡಿ ಎಂದು ಅಂಗಲಾಚಲಿಲ್ಲ. ಅಲ್ಲಿಯೇ ಇದ್ದ ನದಿಯೊಳಗೆ ಧುಮುಕಿ ಶಿವಲಿಂಗವನ್ನು ಎದೆಗಪ್ಪಿಕೊಂಡು ಬಂದು ಅರವಿಪುರಂನಲ್ಲಿ ಸ್ಥಾಪಿಸಿ ಇದು ನಿಮ್ಮ ಶಿವ ಎಂದು ತನ್ನ ಜನರಿಗೆ ಹೇಳಿದರು.
ಪ್ರಶ್ನಿಸಿದ ಪುರೋಹಿತರಿಗೆ ‘ನಿಮ್ಮ ಶಿವ ನಿಮ್ಮಲ್ಲಿಯೇ ಇದ್ದಾನೆ, ಇದು ಈಳವರ ಶಿವ. ನೀವು ನಿಮ್ಮ ಪಾಡಿಗೆ ನಿಮ್ಮ ದೇವರನ್ನು ಪೂಜಿಸಿ, ನನ್ನ ಜನ ಅವರು ನಂಬಿದ ದೇವರನ್ನು ಪೂಜಿಸುತ್ತಾರೆ.. ’’ ಎಂದು ಬಾಯಿ ಮುಚ್ಚಿಸಿದ್ದರು.
ಅವರು ದೇವಾಲಯದೊಳಗೆ ಜನರನ್ನು ನುಗ್ಗಿಸಲಿಲ್ಲ, ದೇವರಮೂರ್ತಿಯನ್ನು ಒಡೆದುಹಾಕಲಿಲ್ಲ, ಅರ್ಚಕರನ್ನು ಪ್ರಶ್ನಿಸಲೂ ಇಲ್ಲ.. ಇದು ಯುದ್ಧದಲ್ಲಿ ಶಸ್ತ್ರ ಪ್ರಯೋಗ ಮಾಡದೆ ಶತ್ರುವನ್ನು ನಿಶಸ್ತ್ರಗೊಳಿಸುವ ಅಪರೂಪದ ಹೋರಾಟ.
ತಿರುವಾಂಕೂರು ಸಂಸ್ಥಾನದಲ್ಲಿ ಇಂದು ಕೇಂದ್ರ ಸರ್ಕಾರದಲ್ಲಿರುವಂತಹರದ್ದೇ ಪ್ರಭುತ್ವ ಇತ್ತು. ಅವರೊಡನೆ ನಾರಾಯಣ ಗುರುಗಳು ಸಂಘರ್ಷಕ್ಕಿಳಿದಿರಲಿಲ್ಲ. ವೈಕಂ ನಲ್ಲಿ ದೇವಸ್ಥಾನದ ಎದುರಿನ ಹಾದಿಯಲ್ಲಿ ನಡೆದುಕೊಂಡು ಹೋಗುವ ಸ್ವಾತಂತ್ರ್ಯಕ್ಕಾಗಿ ನಡೆದ ಸತ್ಯಾಗ್ರಹದ ಬಗ್ಗೆಯೂ ನಾರಾಯಣ ಗುರುಗಳ ವಿರೋಧ ಇತ್ತು. ‘’ಅವರು ಕಟ್ಟಿಕೊಂಡ ದೇವಸ್ಥಾನ, ಅದರ ಎದುರಿನ ಹಾದಿಯನ್ನು ಕಟ್ಟಿಕೊಂಡು ನೀವ್ಯಾಕೆ ಬಡಿದಾಡಿಕೊಳ್ಳುತ್ತೀರಿ,ನಿಮ್ಮ ದೇವಸ್ಥಾನವನ್ನು ನೀವೇ ಕಟ್ಟಿಕೊಳ್ಳಿ’’, ಎಂದು ಹೇಳುತ್ತಿದ್ದರು ನಾರಾಯಣ ಗುರುಗಳು.
ಆದರೆ ನಾರಾಯಣ ಗುರುಗಳು ಕಟ್ಟಿದ ದೇವಸ್ಥಾನಗಳನ್ನಷ್ಟೇ ಉಳಿಸಿಕೊಂಡಿರುವ ಅವರ ಅನುಯಾಯಿಗಳು ಅವರು ಹೇಳಿಕೊಟ್ಟಿರುವ ಚಿಂತನೆಯ ಪಾಠವನ್ನು ಮರೆತುಬಿಟ್ಟಿದ್ದಾರೆ.
ಮಂಗಳೂರಿನ ಕುದ್ರೋಳಿಯಲ್ಲಿ ಅಸ್ಪೃಶ್ಯ ಬಿಲ್ಲವರಿಗಾಗಿ ನಾರಾಯಣ ಗುರುಗಳೂ ಬಂದು ಸ್ಥಾಪಿಸಿದ್ದ ದೇವಸ್ಥಾನವನ್ನು ಹತ್ತಾರು ಕೋಟಿ ರೂಪಾಯಿ ವೆಚ್ಚದಲ್ಲಿ ನವೀಕರಿಸಲಾಗಿದೆ. ಆದರೆ ಬಿಲ್ಲವರು ಧಾರ್ಮಿಕ ಪ್ರವಾಸಕ್ಕೆ ಹೋದ ರೀತಿ ಅಲ್ಲಿಗೆ ಹೋಗಿ ಕೊಂಡಾಡಿ ಸೆಲ್ಪಿ ತೆಗೆಸಿಕೊಂಡು ಬರುತ್ತಾರೆ. ಅಲ್ಲಿಂದ ಉಡುಪಿ ಮಠ, ಕಟೀಲು, ಧರ್ಮಸ್ಥಳಗಳಿಗೆ ಹೋಗಿ ತಾವು ಕಷ್ಟ ಪಟ್ಟು ದುಡಿದ ದುಡ್ಡನ್ನು ಸುರಿದು ಬರುತ್ತಾರೆ.
ಉಡುಪಿ ಮಠದ ಸ್ವಾಮಿಗಳು, ಕಟೀಲಿನ ಆಸ್ರಣ್ಣರು ಮತ್ತು ಧರ್ಮಸ್ಥಳದ ಹೆಗಡೆಯವರು ಇಲ್ಲವೆ ಅವರ ಸಮುದಾಯದವರು ಎಂದಾದರೂ ಕುದ್ರೋಳಿ ದೇವಸ್ಥಾನಕ್ಕೆ ಭಕ್ತರಂತೆ ಬಂದು ಕೈಮುಗಿದು ನಾರಾಯಣ ಗುರುಗಳಿಗೆ ನಮಿಸಿ ಹೋಗಿದ್ದಾರೆಯೇ?
ಮತ್ತೆ ಯಾಕೆ ಗಣರಾಜ್ಯೋತ್ಸವದಲ್ಲಿ ನಾರಾಯಣ ಗುರುಗಳ ಸ್ಥಬ್ದಚಿತ್ರವನ್ನು ತಿರಸ್ಕರಿಸಿದ್ದಾರೆ ಎಂದು ಗೋಳು ಹೋಯ್ಕೊಳ್ತೀರಿ? ಅವರು ನಾರಾಯಣ ಗುರುಗಳನ್ನು ಹಿಂದೆಯೂ ತಿರಸ್ಕರಿಸಿದ್ದರು, ಮುಂದೆಯೂ ತಿರಸ್ಕರಿಸುತ್ತಾರೆ. ಅವರನ್ನು ವಿರೋಧಿಸುವುದನ್ನು ಬಿಟ್ಟು ನಾರಾಯಣ ಗುರುಗಳ ಅನುಯಾಯಿಗಳು ನಿಜವಾಗಿ ತಮ್ಮನ್ನು ತಾವೇ ಪ್ರಶ್ನೆ ಮಾಡಬೇಕಾಗಿದೆ. ನಾರಾಯಣ ಗುರುಗಳನ್ನು ತಿರಸ್ಕರಿಸಿದವರನ್ನು ನಾವು ಯಾಕೆ ಪುರಸ್ಕರಿಸುತ್ತಿದ್ದೇವೆ? ಎಂದು.
ಇದಕ್ಕಾಗಿಯೇ ಕುವೆಂಪು “…ಹುಲಿಗೆ ಗುಂಡು ಹೊಡೆಯುವ ಮೊದಲು ನಿಮ್ಮ ಮೆದುಳಿಗೆ ಹೊಡೆಯಬೇಕು..” ಹೇಳಿದ್ದು.

Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »