TOP STORIES:

ಅವರು ನಾರಾಯಣ ಗುರುಗಳನ್ನು ಹಿಂದೆಯೂ ತಿರಸ್ಕರಿಸಿದ್ದರು, ಮುಂದೆಯೂ ತಿರಸ್ಕರಿಸುತ್ತಾರೆ-ದಿನೇಶ್ ಅಮೀನ್ ಮಟ್ಟು


ಗಣರಾಜ್ಯೋತ್ಸವ ಪರೇಡ್ ನಲ್ಲಿ ನಾರಾಯಣ ಗುರುಗಳ ಮೂರ್ತಿ ಇದ್ದ ಸ್ಥಬ್ದಚಿತ್ರವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ್ದರಲ್ಲಿ ಯಾವ ಆಶ್ಚರ್ಯವೂ ಇಲ್ಲ. ಇದನ್ನು ಯಾರೂ ವಿರೋಧಿಸಬೇಕಾಗಿಲ್ಲ, ಬದಲಿಗೆ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಆಡಳಿತಾರೂಢ ಬಿಜೆಪಿಯ ಪ್ರಾಮಾಣಿಕ ನಡವಳಿಕೆಗಾಗಿ ಎಲ್ಲರೂ ಅಭಿನಂದಿಸಬೇಕು.
ಇದೇ ರೀತಿಯ ಪ್ರಾಮಾಣಿಕತೆಯಿಂದ ಬುದ್ದ,ಬಸವ, ಅಂಬೇಡ್ಕರ್, ಕನಕ, ಕಬೀರ, ವಾಲ್ಮೀಕಿಯೂ ಸೇರಿದಂತೆ ಎಲ್ಲ ಮಹಾ ಪುರುಷರ ಬಗೆಗಿನ ತಮ್ಮ ವಿರೋಧವನ್ನು ಬಿಜೆಪಿ ಮತ್ತು ಅದರ ಸರ್ಕಾರಗಳು ಮುಕ್ತವಾಗಿ ದಾಖಲಿಸಬೇಕು ಎಂದು ನಾವೆಲ್ಲರೂ ಕೂಡಿ ಒತ್ತಾಯಿಸಬೇಕು.
ಸಾವರ್ಕರ್, ಗೋಲ್ವಾಲ್ಕರ್, ಹೆಗಡೆವಾರ್ , ಗೋಡ್ಸೆ ಸೇರಿದಂತೆ ರಾಜಕೀಯ ಹಿಂದುತ್ವದ ಪ್ರಚಾರಕರ ವಿರುದ್ದ ನಮ್ಮ ವಿರೋಧವನ್ನು ನಾವು ಹೇಗೆ ಮುಕ್ತವಾಗಿ ಮಂಡಿಸುತ್ತೇವೆಯೋ ಹಾಗೆ ಅವರು ಆತ್ಮವಂಚನೆ ಮಾಡಿಕೊಳ್ಳದೆ ನಾವು ಆದರ್ಶಪ್ರಾಯರೆಂದು ತಿಳಿದುಕೊಂಡ ಮತ್ತು ಅವರು ಮನಸ್ಸಿನೊಳಗೆ ವಿರೋಧಿಸುತ್ತಿರುವ ಮಹಾಪುರುಷರ ವಿರುದ್ದದ ತಮ್ಮ ಅಭಿಪ್ರಾಯವನ್ನು ಪ್ರಾಮಾಣಿಕತೆಯಿಂದ ಮುಕ್ತವಾಗಿ ಹೇಳಿಕೊಳ್ಳಬೇಕು.
ನಡೆಯಲಿ ಇಂತಹದ್ದೊಂದು ಸೈದ್ದಾಂತಿಕ ಸಂಘರ್ಷ. ಗಟ್ಟಿಯಾಗಿರುವುದು ಉಳಿಯುತ್ತದೆ, ಉಳಿದದ್ದು ಇತಿಹಾಸದ ಕಸದ ಬುಟ್ಟಿಗೆ ಸೇರುತ್ತದೆ. ಹೊಡೆದು, ಬಡಿದು, ಕಡಿದು ಯಾವ ಸಿದ್ದಾಂತವನ್ನೂ ನೆಲೆ ಗೊಳಿಸಲಾಗುವುದಿಲ್ಲ.
ಇಂತಹದ್ದೊಂದು ದಾರಿಯನ್ನು ಹೇಳಿಕೊಟ್ಟವರೇ ನಾರಾಯಣ ಗುರುಗಳು. ಅವರು ತನ್ನ ಜನರಿಗೆ ಉಳಿದ ಸಮಾಜ ಸುಧಾರಕರಂತೆ ದೇವಸ್ಥಾನದೊಳಗೆ ಪ್ರವೇಶ ನೀಡಿ ಎಂದು ಅಂಗಲಾಚಲಿಲ್ಲ. ಅಲ್ಲಿಯೇ ಇದ್ದ ನದಿಯೊಳಗೆ ಧುಮುಕಿ ಶಿವಲಿಂಗವನ್ನು ಎದೆಗಪ್ಪಿಕೊಂಡು ಬಂದು ಅರವಿಪುರಂನಲ್ಲಿ ಸ್ಥಾಪಿಸಿ ಇದು ನಿಮ್ಮ ಶಿವ ಎಂದು ತನ್ನ ಜನರಿಗೆ ಹೇಳಿದರು.
ಪ್ರಶ್ನಿಸಿದ ಪುರೋಹಿತರಿಗೆ ‘ನಿಮ್ಮ ಶಿವ ನಿಮ್ಮಲ್ಲಿಯೇ ಇದ್ದಾನೆ, ಇದು ಈಳವರ ಶಿವ. ನೀವು ನಿಮ್ಮ ಪಾಡಿಗೆ ನಿಮ್ಮ ದೇವರನ್ನು ಪೂಜಿಸಿ, ನನ್ನ ಜನ ಅವರು ನಂಬಿದ ದೇವರನ್ನು ಪೂಜಿಸುತ್ತಾರೆ.. ’’ ಎಂದು ಬಾಯಿ ಮುಚ್ಚಿಸಿದ್ದರು.
ಅವರು ದೇವಾಲಯದೊಳಗೆ ಜನರನ್ನು ನುಗ್ಗಿಸಲಿಲ್ಲ, ದೇವರಮೂರ್ತಿಯನ್ನು ಒಡೆದುಹಾಕಲಿಲ್ಲ, ಅರ್ಚಕರನ್ನು ಪ್ರಶ್ನಿಸಲೂ ಇಲ್ಲ.. ಇದು ಯುದ್ಧದಲ್ಲಿ ಶಸ್ತ್ರ ಪ್ರಯೋಗ ಮಾಡದೆ ಶತ್ರುವನ್ನು ನಿಶಸ್ತ್ರಗೊಳಿಸುವ ಅಪರೂಪದ ಹೋರಾಟ.
ತಿರುವಾಂಕೂರು ಸಂಸ್ಥಾನದಲ್ಲಿ ಇಂದು ಕೇಂದ್ರ ಸರ್ಕಾರದಲ್ಲಿರುವಂತಹರದ್ದೇ ಪ್ರಭುತ್ವ ಇತ್ತು. ಅವರೊಡನೆ ನಾರಾಯಣ ಗುರುಗಳು ಸಂಘರ್ಷಕ್ಕಿಳಿದಿರಲಿಲ್ಲ. ವೈಕಂ ನಲ್ಲಿ ದೇವಸ್ಥಾನದ ಎದುರಿನ ಹಾದಿಯಲ್ಲಿ ನಡೆದುಕೊಂಡು ಹೋಗುವ ಸ್ವಾತಂತ್ರ್ಯಕ್ಕಾಗಿ ನಡೆದ ಸತ್ಯಾಗ್ರಹದ ಬಗ್ಗೆಯೂ ನಾರಾಯಣ ಗುರುಗಳ ವಿರೋಧ ಇತ್ತು. ‘’ಅವರು ಕಟ್ಟಿಕೊಂಡ ದೇವಸ್ಥಾನ, ಅದರ ಎದುರಿನ ಹಾದಿಯನ್ನು ಕಟ್ಟಿಕೊಂಡು ನೀವ್ಯಾಕೆ ಬಡಿದಾಡಿಕೊಳ್ಳುತ್ತೀರಿ,ನಿಮ್ಮ ದೇವಸ್ಥಾನವನ್ನು ನೀವೇ ಕಟ್ಟಿಕೊಳ್ಳಿ’’, ಎಂದು ಹೇಳುತ್ತಿದ್ದರು ನಾರಾಯಣ ಗುರುಗಳು.
ಆದರೆ ನಾರಾಯಣ ಗುರುಗಳು ಕಟ್ಟಿದ ದೇವಸ್ಥಾನಗಳನ್ನಷ್ಟೇ ಉಳಿಸಿಕೊಂಡಿರುವ ಅವರ ಅನುಯಾಯಿಗಳು ಅವರು ಹೇಳಿಕೊಟ್ಟಿರುವ ಚಿಂತನೆಯ ಪಾಠವನ್ನು ಮರೆತುಬಿಟ್ಟಿದ್ದಾರೆ.
ಮಂಗಳೂರಿನ ಕುದ್ರೋಳಿಯಲ್ಲಿ ಅಸ್ಪೃಶ್ಯ ಬಿಲ್ಲವರಿಗಾಗಿ ನಾರಾಯಣ ಗುರುಗಳೂ ಬಂದು ಸ್ಥಾಪಿಸಿದ್ದ ದೇವಸ್ಥಾನವನ್ನು ಹತ್ತಾರು ಕೋಟಿ ರೂಪಾಯಿ ವೆಚ್ಚದಲ್ಲಿ ನವೀಕರಿಸಲಾಗಿದೆ. ಆದರೆ ಬಿಲ್ಲವರು ಧಾರ್ಮಿಕ ಪ್ರವಾಸಕ್ಕೆ ಹೋದ ರೀತಿ ಅಲ್ಲಿಗೆ ಹೋಗಿ ಕೊಂಡಾಡಿ ಸೆಲ್ಪಿ ತೆಗೆಸಿಕೊಂಡು ಬರುತ್ತಾರೆ. ಅಲ್ಲಿಂದ ಉಡುಪಿ ಮಠ, ಕಟೀಲು, ಧರ್ಮಸ್ಥಳಗಳಿಗೆ ಹೋಗಿ ತಾವು ಕಷ್ಟ ಪಟ್ಟು ದುಡಿದ ದುಡ್ಡನ್ನು ಸುರಿದು ಬರುತ್ತಾರೆ.
ಉಡುಪಿ ಮಠದ ಸ್ವಾಮಿಗಳು, ಕಟೀಲಿನ ಆಸ್ರಣ್ಣರು ಮತ್ತು ಧರ್ಮಸ್ಥಳದ ಹೆಗಡೆಯವರು ಇಲ್ಲವೆ ಅವರ ಸಮುದಾಯದವರು ಎಂದಾದರೂ ಕುದ್ರೋಳಿ ದೇವಸ್ಥಾನಕ್ಕೆ ಭಕ್ತರಂತೆ ಬಂದು ಕೈಮುಗಿದು ನಾರಾಯಣ ಗುರುಗಳಿಗೆ ನಮಿಸಿ ಹೋಗಿದ್ದಾರೆಯೇ?
ಮತ್ತೆ ಯಾಕೆ ಗಣರಾಜ್ಯೋತ್ಸವದಲ್ಲಿ ನಾರಾಯಣ ಗುರುಗಳ ಸ್ಥಬ್ದಚಿತ್ರವನ್ನು ತಿರಸ್ಕರಿಸಿದ್ದಾರೆ ಎಂದು ಗೋಳು ಹೋಯ್ಕೊಳ್ತೀರಿ? ಅವರು ನಾರಾಯಣ ಗುರುಗಳನ್ನು ಹಿಂದೆಯೂ ತಿರಸ್ಕರಿಸಿದ್ದರು, ಮುಂದೆಯೂ ತಿರಸ್ಕರಿಸುತ್ತಾರೆ. ಅವರನ್ನು ವಿರೋಧಿಸುವುದನ್ನು ಬಿಟ್ಟು ನಾರಾಯಣ ಗುರುಗಳ ಅನುಯಾಯಿಗಳು ನಿಜವಾಗಿ ತಮ್ಮನ್ನು ತಾವೇ ಪ್ರಶ್ನೆ ಮಾಡಬೇಕಾಗಿದೆ. ನಾರಾಯಣ ಗುರುಗಳನ್ನು ತಿರಸ್ಕರಿಸಿದವರನ್ನು ನಾವು ಯಾಕೆ ಪುರಸ್ಕರಿಸುತ್ತಿದ್ದೇವೆ? ಎಂದು.
ಇದಕ್ಕಾಗಿಯೇ ಕುವೆಂಪು “…ಹುಲಿಗೆ ಗುಂಡು ಹೊಡೆಯುವ ಮೊದಲು ನಿಮ್ಮ ಮೆದುಳಿಗೆ ಹೊಡೆಯಬೇಕು..” ಹೇಳಿದ್ದು.

Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »