TOP STORIES:

ಆರ್ಥಿಕವಾಗಿ ದಿಕ್ಕು ತೋಚದ ಪಡುಬಿದ್ರಿ ಕಂಚಿನಡ್ಕ ನಿವಾಸಿ ದಿ.ಉದಯ ಪೂಜಾರಿ ಕುಟುಂಬಕ್ಕೆ ಗುರುಬೆಳದಿಂಗಳು ಆಸರೆ


ಆರ್ಥಿಕವಾಗಿ ದಿಕ್ಕು ತೋಚದ ಕುಟುಂಬಕ್ಕೆ ಗುರುಬೆಳದಿಂಗಳು ಆಸರೆ

ಪಡುಬಿದ್ರಿ: ಅನಾರೋಗ್ಯ ಪೀಡಿತ ತಂದೆ ಹಾಗೂ ಇಬ್ಬರು ಸಹೋದರರನ್ನು ಕಳೆದುಕೊಂಡ ಕಂಚಿನಡ್ಕ ನಿವಾಸಿ ದಿ.ಉದಯ ಪೂಜಾರಿ ಕುಟುಂಬಕ್ಕೆ ಗುರುಬೆಳದಿಂಗಳು ಫೌಂಡೇಶನ್ ವತಿಯಿಂದ 50,000ರೂ. ನೆರವು ನೀಡಲಾಯಿತು.

ಕುಟುಂಬದ ಆಧಾರವಾಗಿದ್ದ ಸಹೋದರರನ್ನು ಕಳೆದುಕೊಂಡು ಆರ್ಥಿಕವಾಗಿ ತೀರಾ ಸಂಕಷ್ಟದಲ್ಲಿದ್ದ ವೃದ್ಧೆ ತಾಯಿ ಹಾಗೂ ಅವಿವಾಹಿತ ಸಹೋದರಿಯರ ಮನೆಗೆ ಭೇಟಿ ನೀಡಿ ಅವರ ಪರಿಸ್ಥಿತಿ ಅವಲೋಕಿಸಿ ಸಹಾಯಧನ ವಿತರಿಸಲಾಯಿತು.

ಅನಾರೋಗ್ಯಪೀಡಿತ ತಂದೆ ಹಾಗೂ ಸಹೋದರರ ಚಿಕಿತ್ಸೆಗೆ ಸಾಕಷ್ಟು ಹಣ ವ್ಯಯಿಸಿ, ಇದ್ದ ಮನೆಯ ಮೇಲೆ ಕೂಡ ಸಾಲ ಮಾಡಿ ದಿಕ್ಕೇ ತೋಚದಂತಿದ್ದ ಕುಟುಂಬದ ಪರಿಸ್ಥಿತಿ ಕರುಣಾಜನಕವಾಗಿತ್ತು. ಹಾಗಾಗಿ ನಮ್ಮ ಸಂಸ್ಥೆಯ ವತಿಯಿಂದ ಅವರ ಮನೆಗೆ ಭೇಟಿ ನೀಡಿ, ಧೈರ್ಯ ತುಂಬಿ, ಆರ್ಥಿಕ ಸಹಾಯ ನೀಡಿದ್ದೇವೆ ಎಂದು ಗುರುಬೆಳದಿಂಗಳು ಸಂಸ್ಥೆ ಅಧ್ಯಕ್ಷ ಪದ್ಮರಾಜ್ ಆರ್. ಹೇಳಿದರು.

ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಪದಾಧಿಕಾರಿ ಯೋಗೀಶ್ ಕೋಟ್ಯಾನ್, ಗೆಜ್ಜೆಗಿರಿ ಕ್ಷೇತ್ರದ ಆಡಳಿತ ಮಂಡಳಿ ಉಪಾಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಯುವವಾಹಿನಿ ಪಡುಬಿದ್ರಿ ಘಟಕದ ಮಾಜಿ ಅಧ್ಯಕ್ಷ ಯೋಗೀಶ್ ಪೂಜಾರಿ ಪಾದೆಬೆಟ್ಟು, ಗುರುಬೆಳದಿಂಗಳು ಸಂಸ್ಥೆ ಸದಸ್ಯರಾದ ಪ್ರವೀಣ್ ಅಂಚನ್, ವಿವೇಕ್ ಕೋಟ್ಯಾನ್ ಉಪಸ್ಥಿತರಿದ್ದರು.

ನಮ್ಮೊಂದಿಗೆ ನೀವೂ ಕೈಜೋಡಿಸಬಹುದು:

ಜಾತಿ- ಮತ- ಪಕ್ಷ ಭೇದ ರಹಿತವಾಗಿ ಸಮಾಜಸೇವೆಗೆ ಕಟಿಬದ್ಧರಾಗುವ ನಿಟ್ಟಿನಲ್ಲಿ, ಶಿಕ್ಷಣ, ಆರೋಗ್ಯ, ಆಸರೆ ಎಂಬ ಧ್ಯೇಯಗಳೊಂದಿಗೆ ಗುರುಬೆಳದಿಂಗಳು ಯೋಜನೆ ಅನುಷ್ಠಾನಗೊಂಡಿದ್ದು, ವಿದ್ಯಾರ್ಥಿಗಳಿಗೆ ಸರಸ್ವತಿಯಾಗಿ, ರೋಗಿಗಳಿಗೆ ಸಂಜೀವಿನಿಯಾಗಿ, ನೊಂದವರಿಗೆ ಕರುಣಾಮಯಿಯಾಗಿರುವ ಯೋಜನೆಯೇ ಗುರುಬೆಳದಿಂಗಳು. ಈಗಾಗಲೇ ಗುರುಬೆಳದಿಂಗಳು ಫೌಂಡೇಶನ್ ಮೂಲಕ ನೊಂದವರಿಗೆ ಮನೆ ನಿರ್ಮಾಣ, ಬಡ ಹೆಣ್ಣುಮಕ್ಕಳ ಮದುವೆ, ನೂರಾರು ರೋಗಿಗಳಗೆ ಔಷಧಕ್ಕೆ ನೆರವು, ನೂರಾರು ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗಿದೆ. ನಮ್ಮ ಸಾರ್ಥಕ ಸೇವೆಗೆ ನೀವೂ ಕೈಜೋಡಿಸಬಹುದು.

Name : GURU BELADINGALU

Bank: CANARA BANK

Account No: 110000894880

IFSC Code: CNRB0010241

Google Pay Phone Pay :  919901246123

UPI : 301617062894880@cnrb


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »