TOP STORIES:

FOLLOW US

ಆರ್ಥಿಕವಾಗಿ ದಿಕ್ಕು ತೋಚದ ಪಡುಬಿದ್ರಿ ಕಂಚಿನಡ್ಕ ನಿವಾಸಿ ದಿ.ಉದಯ ಪೂಜಾರಿ ಕುಟುಂಬಕ್ಕೆ ಗುರುಬೆಳದಿಂಗಳು ಆಸರೆ


ಆರ್ಥಿಕವಾಗಿ ದಿಕ್ಕು ತೋಚದ ಕುಟುಂಬಕ್ಕೆ ಗುರುಬೆಳದಿಂಗಳು ಆಸರೆ

ಪಡುಬಿದ್ರಿ: ಅನಾರೋಗ್ಯ ಪೀಡಿತ ತಂದೆ ಹಾಗೂ ಇಬ್ಬರು ಸಹೋದರರನ್ನು ಕಳೆದುಕೊಂಡ ಕಂಚಿನಡ್ಕ ನಿವಾಸಿ ದಿ.ಉದಯ ಪೂಜಾರಿ ಕುಟುಂಬಕ್ಕೆ ಗುರುಬೆಳದಿಂಗಳು ಫೌಂಡೇಶನ್ ವತಿಯಿಂದ 50,000ರೂ. ನೆರವು ನೀಡಲಾಯಿತು.

ಕುಟುಂಬದ ಆಧಾರವಾಗಿದ್ದ ಸಹೋದರರನ್ನು ಕಳೆದುಕೊಂಡು ಆರ್ಥಿಕವಾಗಿ ತೀರಾ ಸಂಕಷ್ಟದಲ್ಲಿದ್ದ ವೃದ್ಧೆ ತಾಯಿ ಹಾಗೂ ಅವಿವಾಹಿತ ಸಹೋದರಿಯರ ಮನೆಗೆ ಭೇಟಿ ನೀಡಿ ಅವರ ಪರಿಸ್ಥಿತಿ ಅವಲೋಕಿಸಿ ಸಹಾಯಧನ ವಿತರಿಸಲಾಯಿತು.

ಅನಾರೋಗ್ಯಪೀಡಿತ ತಂದೆ ಹಾಗೂ ಸಹೋದರರ ಚಿಕಿತ್ಸೆಗೆ ಸಾಕಷ್ಟು ಹಣ ವ್ಯಯಿಸಿ, ಇದ್ದ ಮನೆಯ ಮೇಲೆ ಕೂಡ ಸಾಲ ಮಾಡಿ ದಿಕ್ಕೇ ತೋಚದಂತಿದ್ದ ಕುಟುಂಬದ ಪರಿಸ್ಥಿತಿ ಕರುಣಾಜನಕವಾಗಿತ್ತು. ಹಾಗಾಗಿ ನಮ್ಮ ಸಂಸ್ಥೆಯ ವತಿಯಿಂದ ಅವರ ಮನೆಗೆ ಭೇಟಿ ನೀಡಿ, ಧೈರ್ಯ ತುಂಬಿ, ಆರ್ಥಿಕ ಸಹಾಯ ನೀಡಿದ್ದೇವೆ ಎಂದು ಗುರುಬೆಳದಿಂಗಳು ಸಂಸ್ಥೆ ಅಧ್ಯಕ್ಷ ಪದ್ಮರಾಜ್ ಆರ್. ಹೇಳಿದರು.

ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಪದಾಧಿಕಾರಿ ಯೋಗೀಶ್ ಕೋಟ್ಯಾನ್, ಗೆಜ್ಜೆಗಿರಿ ಕ್ಷೇತ್ರದ ಆಡಳಿತ ಮಂಡಳಿ ಉಪಾಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಯುವವಾಹಿನಿ ಪಡುಬಿದ್ರಿ ಘಟಕದ ಮಾಜಿ ಅಧ್ಯಕ್ಷ ಯೋಗೀಶ್ ಪೂಜಾರಿ ಪಾದೆಬೆಟ್ಟು, ಗುರುಬೆಳದಿಂಗಳು ಸಂಸ್ಥೆ ಸದಸ್ಯರಾದ ಪ್ರವೀಣ್ ಅಂಚನ್, ವಿವೇಕ್ ಕೋಟ್ಯಾನ್ ಉಪಸ್ಥಿತರಿದ್ದರು.

ನಮ್ಮೊಂದಿಗೆ ನೀವೂ ಕೈಜೋಡಿಸಬಹುದು:

ಜಾತಿ- ಮತ- ಪಕ್ಷ ಭೇದ ರಹಿತವಾಗಿ ಸಮಾಜಸೇವೆಗೆ ಕಟಿಬದ್ಧರಾಗುವ ನಿಟ್ಟಿನಲ್ಲಿ, ಶಿಕ್ಷಣ, ಆರೋಗ್ಯ, ಆಸರೆ ಎಂಬ ಧ್ಯೇಯಗಳೊಂದಿಗೆ ಗುರುಬೆಳದಿಂಗಳು ಯೋಜನೆ ಅನುಷ್ಠಾನಗೊಂಡಿದ್ದು, ವಿದ್ಯಾರ್ಥಿಗಳಿಗೆ ಸರಸ್ವತಿಯಾಗಿ, ರೋಗಿಗಳಿಗೆ ಸಂಜೀವಿನಿಯಾಗಿ, ನೊಂದವರಿಗೆ ಕರುಣಾಮಯಿಯಾಗಿರುವ ಯೋಜನೆಯೇ ಗುರುಬೆಳದಿಂಗಳು. ಈಗಾಗಲೇ ಗುರುಬೆಳದಿಂಗಳು ಫೌಂಡೇಶನ್ ಮೂಲಕ ನೊಂದವರಿಗೆ ಮನೆ ನಿರ್ಮಾಣ, ಬಡ ಹೆಣ್ಣುಮಕ್ಕಳ ಮದುವೆ, ನೂರಾರು ರೋಗಿಗಳಗೆ ಔಷಧಕ್ಕೆ ನೆರವು, ನೂರಾರು ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗಿದೆ. ನಮ್ಮ ಸಾರ್ಥಕ ಸೇವೆಗೆ ನೀವೂ ಕೈಜೋಡಿಸಬಹುದು.

Name : GURU BELADINGALU

Bank: CANARA BANK

Account No: 110000894880

IFSC Code: CNRB0010241

Google Pay Phone Pay :  919901246123

UPI : 301617062894880@cnrb


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »