TOP STORIES:

FOLLOW US

ಇಂಡಿಯನ್ ಟಾಯ್ಲೆಟ್ V/s ವೆಸ್ಟರ್ನ್ ಟಾಯ್ಲೆಟ್ ಸೀಟ್, ಆರೋಗ್ಯಕ್ಕೆ ಯಾವುದು ಬೆಸ್ಟ್?


ಬದಲಾದ ಕಾಲಕ್ಕೆ ತಕ್ಕಂತೆ ಎಲ್ಲವೂ ಬದಲಾಗುತ್ತದೆ. ಹಾಗೆಯೇ ಇತ್ತೀಚಿನ ದಿನಗಳಲ್ಲಿ ಬಹುತೇಕ ಎಲ್ಲಾ ಮನೆಗಳಲ್ಲಿ ವೆಸ್ಟರ್ನ್‌ ಟಾಯ್ಲೆಟ್‌ಗಳ ಬಳಕೆ ಹೆಚ್ಚುತ್ತಿದೆ. ಹಳೆಯ ಕಾಲದ ಕೆಲವೇ ಕೆಲವು ಮನೆಗಳಲ್ಲಿ ಮಾತ್ರ ಇಂಡಿಯನ್‌ ಟಾಯ್ಲೆಟ್ ಬಳಕೆಯಲ್ಲಿದೆ. ಆದ್ರೆ ಇವೆರಡರಲ್ಲೂ ಆರೋಗ್ಯಕ್ಕೆ ಯಾವ ರೀತಿಯ ಟಾಯ್ಲೆಟ್ ಬಳಸೋದು ಉತ್ತಮ ತಿಳಿಯೋಣ.

ಭಾರತೀಯ ಶೌಚಾಲಯ ಬಳಕೆಯ ಪ್ರಯೋಜನಗಳು
ಭಾರತೀಯ ಶೌಚಾಲಯ ದೇಹ (Body)ವನ್ನು ಸದೃಢವಾಗಿರಿಸುತ್ತದೆ: ಭಾರತೀಯ ಶೌಚಾಲಯಗಳಲ್ಲಿ ಕುಳಿತುಕೊಳ್ಳುವ, ಏಳುವ ಅಭ್ಯಾಸ ಪ್ರತಿದಿನದ ವ್ಯಾಯಾಮ (Exercise)ದಂತೆ ಆಗುತ್ತದೆ. ಇದು ಒಟ್ಟಾರೆ ಆರೋಗ್ಯಕ್ಕೆ (Health) ಒಳ್ಳೆಯದು. ನಮ್ಮಲ್ಲಿ ಹೆಚ್ಚಿನವರು ವ್ಯಾಯಾಮದ ಪ್ರಾಮುಖ್ಯತೆಯನ್ನು ತಿಳಿದಿದ್ದರೂ, ಅದನ್ನು ನಿರ್ಲಕ್ಷಿಸುತ್ತಾರೆ. ಭಾರತೀಯ ಟಾಯ್ಲೆಟ್‌ಗಳಲ್ಲಿ ಕುಳಿತುಕೊಳ್ಳುವುದು ಸಣ್ಣ ಮಟ್ಟಿನ ವ್ಯಾಯಾಮ ಚಟುವಟಿಕೆಯಂತೆ ಆಗುತ್ತದೆ. ಇದು ರಕ್ತ ಪರಿಚಲನೆಯನ್ನು ಹೆಚ್ಚಿಸುತ್ತದೆ ಮತ್ತು ನಿಮ್ಮ ಕೈ ಮತ್ತು ಕಾಲುಗಳಿಗೆ ಉತ್ತಮ ವ್ಯಾಯಾಮವಾಗಿದೆ ಎಂದು ಹೇಳಲಾಗುತ್ತದೆ.

ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ: ಸ್ಕ್ವಾಟಿಂಗ್ ನಿಮ್ಮ ಹೊಟ್ಟೆಯನ್ನು ಹಿಂಡುತ್ತದೆ, ಇದು ಹೊಟ್ಟೆಯಲ್ಲಿರುವ ಆಹಾರವನ್ನು ಒತ್ತುವ, ಒತ್ತಡದ ಮೂಲಕ ಜೀರ್ಣಕ್ರಿಯೆಗೆ (Digestion) ಸಹಾಯ ಮಾಡುತ್ತದೆ. ಪಾಶ್ಚಿಮಾತ್ಯ ಶೈಲಿಯ ಶೌಚಾಲಯದಲ್ಲಿ ಕುಳಿತುಕೊಳ್ಳುವುದು ಹೊಟ್ಟೆಯ ಮೇಲೆ ಯಾವುದೇ ಒತ್ತಡವನ್ನು ಬೀರುವುದಿಲ್ಲ.

ಭಾರತೀಯ ಶೌಚಾಲಯಗಳು ಪರಿಸರ ಸ್ನೇಹಿ: ಪಾಶ್ಚಿಮಾತ್ಯ ಶೌಚಾಲಯಗಳಲ್ಲಿ ಟಾಯ್ಲೆಟ್ ಪೇಪರ್‌ನ್ನು ಬಳಸಬೇಕಾಗುತ್ತದೆ. ಇದು ಕಾಗದದ ವ್ಯರ್ಥಕ್ಕೆ ಕಾರಣವಾಗುತ್ತದೆ. ಭಾರತೀಯ ಶೌಚಾಲಯಗಳಲ್ಲಿ ಪೇಪರ್ ವೇಸ್ಟ್ ಆಗುವುದಿಲ್ಲ. ಭಾರತೀಯ ಶೌಚಾಲಯಗಳಿಗೆ ಹೋಲಿಸಿದರೆ ಪಾಶ್ಚಿಮಾತ್ಯ ಶೌಚಾಲಯಗಳಿಗೆ ಇನ್ನೂ ಹೆಚ್ಚಿನ ನೀರಿನ ಅಗತ್ಯವಿರುತ್ತದೆ.

ಹೊತ್ತು ಗೊತ್ತಿಲ್ಲದ ಹೊತ್ತಲ್ಲಿ ಟಾಯ್ಲೆಟ್‌ಗೆ ಹೋಗೋದು ಅನಾರೋಗ್ಯದ ಲಕ್ಷಣ!

ಭಾರತೀಯ ಶೌಚಾಲಯಗಳು ಗರ್ಭಿಣಿಯರಿಗೆ ಒಳ್ಳೆಯದು: ಭಾರತೀಯ ಶೌಚಾಲಯಗಳನ್ನು ಬಳಸುವುದು ಗರ್ಭಿಣಿಯರಿಗೆ (Pregnant) ಪ್ರಯೋಜನಕಾರಿಯಾಗಿದೆ ಏಕೆಂದರೆ ಅವುಗಳನ್ನು ಬಳಸುವಾಗ ಅವರು ಕುಳಿತುಕೊಳ್ಳಬೇಕಾಗುತ್ತದೆ. ಗರ್ಭಿಣಿ ಮಹಿಳೆ ಭಾರತೀಯ ಶೌಚಾಲಯದಲ್ಲಿ ಕುಳಿತುಕೊಳ್ಳುವಾಗ ಗರ್ಭಾಶಯದ ಮೇಲೆ ಯಾವುದೇ ಒತ್ತಡವಿಲ್ಲ. ಭಾರತೀಯ ಶೌಚಾಲಯವನ್ನು ನಿಯಮಿತವಾಗಿ ಬಳಸುವುದರಿಂದ ಗರ್ಭಿಣಿಯರು ಸುಗಮ ಮತ್ತು ನೈಸರ್ಗಿಕ ಹೆರಿಗೆಗೆ ಸಿದ್ಧರಾಗುತ್ತಾರೆ ಎಂದು ಹೇಳಲಾಗುತ್ತದೆ.

ಕರುಳಿನ ಕ್ಯಾನ್ಸರ್ ಮತ್ತು ಇತರ ಕಾಯಿಲೆಗಳನ್ನು ತಡೆಯುತ್ತದೆ: ಸ್ಕ್ವಾಟಿಂಗ್ ನಮ್ಮ ದೇಹದಲ್ಲಿನ ಕೊಲೊನ್‌ನಿಂದ ಮಲವನ್ನು ಸಂಪೂರ್ಣವಾಗಿ ಹೊರಹಾಕಲು ಸಹಾಯ ಮಾಡುತ್ತದೆ. ಇದು ಮಲಬದ್ಧತೆ, ಅಪೆಂಡಿಸೈಟಿಸ್ ಮತ್ತು ಕರುಳಿನ ಕ್ಯಾನ್ಸರ್‌ಗೆ ಕಾರಣವಾಗುವ ಇತರ ಅಂಶಗಳ ಸಾಧ್ಯತೆಗಳನ್ನು ತಡೆಯುತ್ತದೆ.

ವೆಸ್ಟರ್ನ್ ಶೌಚಾಲಯ ಬಳಕೆಯಿಂದಾಗುವ ತೊಂದರೆಗಳು
ವೆಸ್ಟರ್ನ್ ಟಾಯ್ಲೆಟ್ ಶೀಟ್ ಕೂಡ ಅನೇಕ ಪ್ರಯೋಜನಗಳನ್ನ ಹೊಂದಿದೆ. ವೆಸ್ಟರ್ನ್ ಟಾಯ್ಲೆಟ್ ವಿಶೇಷವಾಗಿ ಕಾಲುನೋವಿನ ಸಮಸ್ಯೆಯಿಂದ ಕುಳಿತುಕೊಳ್ಳಲು ಸಾಧ್ಯವಾಗದವರಿಗೆ, ಕೀಲು ನೋವಿನಿಂದ ಬಳಲುತ್ತಿರುವ ಜನರಿಗೆ ತುಂಬಾ ಆರಾಮದಾಯಕವಾಗಿದೆ. ಆದರೆ ಇದರಿಂದಾಗುವ ಅನಾನುಕೂಲಗಳು ಹೆಚ್ಚು. ವಿಪರ್ಯಾಸವೆಂದರೆ ಆರೋಗ್ಯವಂತರೂ ಇದನ್ನು ಬಳಸುತ್ತಿದ್ದಾರೆ. ಆದ್ರೆ, ವಸ್ಟರ್ನ್ ಶೌಚಾಲಯವು ಅನುಕೂಲಗಳನ್ನ ಹೊಂದಿದೆ. ಈ ಕಾರಣದಿಂದಾಗಿ, ವ್ಯಕ್ತಿಯು ಅನಾರೋಗ್ಯಕ್ಕೆ ಒಳಗಾಗುತ್ತಾನೆ. ಪಾಶ್ಚಿಮಾತ್ಯ ಶೌಚಾಲಯಕ್ಕೆ ಹೋಗುವ ಅಭ್ಯಾಸ ದೇಹದ ಸೋಂಕಿನ ಅಪಾಯವನ್ನ ಹೆಚ್ಚಿಸುತ್ತದೆ. ಇದು ಅತಿಸಾರ ಮತ್ತು ಅನೇಕ ಹೊಟ್ಟೆ ಸಮಸ್ಯೆಗಳನ್ನ ಉಂಟು ಮಾಡಬಹುದು. ಯಾಕಂದ್ರೆ, ವೆಸ್ಟರ್ನ್ ಟಾಯ್ಲೆಟ್ ಸೀಟ್ ಬಳಸುವಾಗ ಚರ್ಮ ಸಂಪರ್ಕಕ್ಕೆ ಬರುತ್ತದೆ. ಇದರಿಂದ ರೋಗಾಣುಗಳು ಸುಲಭವಾಗಿ ಹರಡಬಹುದು.


Share:

More Posts

Category

Send Us A Message

Related Posts

ಶ್ರೀ ಸತೀಶ್ ಕುಮಾರ್ ಬಜಾಲ್ ರಿಗೆ “ ಬಿಲ್ಲವ ಸಂಜೀವಿನಿ “ ಬಿರುದು ಗೌರವ ಪ್ರಧಾನ – ಬಿಲ್ಲವ ಸಂಘ ಪುಣೆ


Share       ವರ್ಲ್ಡ್ ಬಿಲ್ಲವಾಸ್ ಪ್ರೀಮಿಯರ್ ಲೀಗ್ 2025 ನ ಅದ್ಭುತ ಕಾರ್ಯಕ್ರಮದಲ್ಲಿ ಸೌಧಿ ಬಿಲ್ಲವಾಸ್ ದಮ್ಮಾಮ್ ಸಂಘದ ಅಧ್ಯಕ್ಷರಾದ ಶ್ರೀ ಸತೀಶ್ ಕುಮಾರ್ ಅಂಚನ್ ಬಜಾಲ್ ರಿಗೆ ಬಿಲ್ಲವ ಸಂಘ ಪುಣೆ ಯು ಅತಿಥಿ


Read More »

ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ


Share       ಮಂಗಳೂರು: ಸಾಧಕರ ಜೊತೆ ಕದ್ರಿ ಶ್ರೀ ಮಂಜುನಾಥ ಕ್ಷೇತ್ರದ ಆಡಳಿತ ಸಮಿತಿಗೆ ನೇಮಕದ ಬಗ್ಗೆ ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ. ಕಲ್ಕೂರ ಪ್ರತಿಷ್ಠಾನದ ವತಿಯಿಂದ ಯುಗಾದಿ ಮಹೋತ್ಸವ, ವಿಷು


Read More »

ಪೊಲೀಸ್ ಸಬ್ ಇನ್ಸಸ್ಪೆಕ್ಟರ್ ಪ್ರದೀಪ್ ಪೂಜಾರಿಯವರಿಗೆ ಮುಖ್ಯಮಂತ್ರಿ ಚಿನ್ನದ ಪದಕ


Share       ಕೆಯ್ಯೂರು: ಕೆಯ್ಯೂರು ಗ್ರಾಮದ ಪಿ.ಎಸ್.ಐ ಪ್ರದೀಪ್ ಪೂಜಾರಿ 2023ನೇ ವರ್ಷದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಮೂರನೇ ಬೆಟಾಲಿಯನ್ ಫೆರೆಡ್ ಗ್ರೌಂಡ್ ಕೆಎಸ್ಆರ್ಪಿ  ಕೊರಮಂಗಲ ಬೆಂಗಳೂರಿನಲ್ಲಿ ಎ.2ರಂದು ಪ್ರಶಸ್ತಿ ಪ್ರಧಾನ ನಡೆಯಲಿದೆ ಪ್ರದೀಪ್ ಪೂಜಾರಿ


Read More »

ಕದ್ರಿ ಮಂಜುನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ರಾಜೇಂದ್ರ ಚಿಲಿಂಬಿ ಆಯ್ಕೆ


Share       ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಇವರು ಸಲ್ಲಿಸಿರುವ  ಸೇವೆಯನ್ನು ಪರಿಗಣಿಸಿ ಈ ಆಯ್ಕೆ ನಡೆದಿರುತ್ತದೆ. ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ  ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮಾಧ್ಯಮ ವಕ್ತಾರ, ಮಂಗಳೂರು ಚಿಲಿಂಬಿ ಸ್ವಾಮಿ


Read More »

ಜವಾಹರ್ ಬಾಲ್ ಮಂಚ್ ಇದರ ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಸಂಯೋಜಕರಾಗಿ ನ್ಯಾಯವಾದಿ ಶ್ರೀಮತಿ ಶೈಲಜಾ ರಾಜೇಶ್ ಆಯ್ಕೆ


Share       ಬಂಟ್ವಾಳ : ಕರ್ನಾಟಕ ಸರ್ಕಾರದ ಪ್ರತಿಷ್ಟಿತ ಕಿತ್ತೂರು ರಾಣಿ ಚೆನ್ನಮ್ಮ ಪುರಸ್ಕೃತರು, ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ರಿ ಇದರ ಸಂಸ್ಥಾಪಕರು, ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಅಧ್ಯಕ್ಷೆ,


Read More »

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »