TOP STORIES:

FOLLOW US

ಇಂದು ರಾತ್ರಿಯಿಂದಲೇ ನೈಟ್ ಕರ್ಪ್ಯೂ ಜಾರಿ: ಯಾವುದಕ್ಕೆ ಅನುಮತಿ.? ಯಾವುದಕ್ಕೆ ಇಲ್ಲ.? ಇಲ್ಲಿದೆ ಮಾಹಿತಿ


ಬೆಂಗಳೂರು: ರಾಜ್ಯ ಸರ್ಕಾರದಿಂದ ಕೊರೋನಾ ( Corona Virus ) ಹಾಗೂ ಓಮಿಕ್ರಾನ್ ( Omicron Variant ) ನಿಯಂತ್ರಣಕ್ಕೆ ತಡೆ ನೀಡೋ ಕಾರಣದಿಂದಾಗಿ ಡಿಸೆಂಬರ್ 28, 2021ರ ಇಂದಿನಿಂದ ಜಾರಿಗೆ ಬರುವಂತೆ ನೈಟ್ ಕರ್ಪ್ಯೂ ( Night Curfew ) ಜಾರಿಗೊಳಿಸಲಾಗಿದೆ.

ಇದಷ್ಟೇ ಅಲ್ಲದೇ ಡಿಸೆಂಬರ್ 30 ರಿಂದ ಜನವರಿ 2ರವರೆಗೆ ರೆಸ್ಟೋರೆಂಟ್, ಹೋಟೆಲ್, ಕ್ಲಬ್, ಪಬ್ ಗಳಿಗೆ ಶೇ.50ರಷ್ಟು ಜನರಿಗೆ ಮಿತಿಯನ್ನು ಹೇರಿ ಹೊಸ ಮಾರ್ಗಸೂಚಿಯನ್ನು ( Guideline ) ಜಾರಿಗೊಳಿಸಿದೆ. ಈ ಸಂದರ್ಭದಲ್ಲಿ ಯಾವುದಕ್ಕೆ ಅನುಮತಿ, ಯಾವುದಕ್ಕೆ ಇಲ್ಲ ಎನ್ನುವ ಬಗ್ಗೆ ಮುಂದೆ ಓದಿ..

ಈ ಬಗ್ಗೆ ರಾಜ್ಯ ಸರ್ಕಾರದ ( Karnataka Government ) ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು ನೂತನ ಮಾರ್ಗಸೂಚಿಯನ್ನು ಪ್ರಕಟಿಸಿದ್ದು, ದಿನಾಂಕ 28-12-2021ರಿಂದ 07-01-2022ರವರೆಗೆ ರಾಜ್ಯಾಧ್ಯಂತ ನೈಟ್ ಕರ್ಪ್ಯೂವನ್ನು ಜಾರಿಗೊಳಿಸಲಾಗಿದೆ.

ದಿನಾಂಕ 30-12-2021ರಿಂದ ದಿನಾಂಕ 02-01-2022ರವರೆಗೆ ಹೋಟೆಲ್, ರೆಸ್ಟೋರೆಂಟ್, ಕ್ಲಬ್, ಪಬ್ ಗಳಲ್ಲಿ ಶೇ.50ರಷ್ಟು ಜನರು ಸೇರೋದಕ್ಕೆ ಅವಕಾಶ ನೀಡಲಾಗಿದೆ. ಎಲ್ಲಾ ಸಿಬ್ಬಂದಿಗಳು ಕೋವಿಡ್ ನೆಗೆಟಿವ್ ವರದಿ ಕಡ್ಡಾಯವಾಗಿದೆ. ಅಲ್ಲದೇ ಸಂಪೂರ್ಣ ಲಸಿಕೆ ಪಡೆದವರಿಗೆ ಮಾತ್ರವೇ ಅವಕಾಶ ನೀಡುವಂತೆ ಸೂಚಿಸಲಾಗಿದೆ.

ದಿನಾಂಕ 28-12-2022ರಿಂದ ಸಭೆ, ಸಮಾರಂಭ, ಕಾನ್ಫೆರೆನ್ಸ್, ಮದುವೆ ಸೇರಿದಂತೆ ಇತರೆ ಹೆಚ್ಚು ಜನರು ಸೇರುವಂತ ಕಾರ್ಯಕ್ರಮಗಳಿಗೆ 300 ಜನರಿಗೆ ಮಾತ್ರವೇ ಸೇರೋದಕ್ಕೆ ಅವಕಾಶ ನೀಡಲಾಗಿದೆ. ಈ ಸಭೆ-ಸಮಾರಂಭಗಳಲ್ಲಿ ಕಡ್ಡಾಯವಾಗಿ ಕೋವಿಡ್ ನಿಯಂತ್ರಣ ಕ್ರಮಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.

ಇನ್ನೂ ರಾಜ್ಯದ ಗಡಿ ಭಾಗಗಳಲ್ಲಿ ಅದರಲ್ಲೂ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಿಂದ ಬರೋ ಪ್ರಯಾಣಿಕರಿಗೆ ತಪಾಸಣೆಗೆ ಹಾಗೂ ಕೋವಿಡ್ ನೆಗೆಟಿವ್, ಇಲ್ಲವೇ ಸಂಪೂರ್ಣ ಲಸಿಕೆ ಪಡೆದಿರೋ ವರದಿ ಕಡ್ಡಾಯವಾಗಿ ಪರಿಶೀಲಿಸುವಂತೆ ತಿಳಿಸಲಾಗಿದೆ.

ನೈಟ್ ಕರ್ಪ್ಯೂ ಸಂದರ್ಭದಲ್ಲಿ ಯಾವುಕ್ಕೆ ಅನುಮತಿ.? ಯಾವುದಕ್ಕೆ ಇಲ್ಲ.?

ನೈಟ್ ಕರ್ಪ್ಯೂ ಸಂದರ್ಭದಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶ ಇಲ್ಲ ರಾತ್ರಿ ಕರ್ಪ್ಯೂ ಸಂದರ್ಭದಲ್ಲಿ ಕೇವಲ ತುರ್ತು ಸಂದರ್ಭದಲ್ಲಿ ಮಾತ್ರವೇ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

ಎಲ್ಲಾ ಕೈಗಾರಿಕೆಗಳಿಗೆ ರಾತ್ರಿ ವೇಳೆಯಲ್ಲಿ ಕಾರ್ಯ ನಿರ್ವಹಿಸೋದಕ್ಕೆ ಅನುಮತಿ ನೀಡಲಾಗಿದೆ. ನೌಕರರು ಐಡಿ ಕಾರ್ಡ್ ತೋರಿಸಿ ಸಂಚರಿಸಲು ಅವಕಾಶ ನೀಡಲಾಗಿದೆ. ಟೆಲಿಕಾಂ, ಇಂಟರ್ನೆಟ್ ಪ್ರವೈಡರ್ ಓಡಾಟಕ್ಕೂ ಅವಕಾಶ ನೀಡಲಾಗಿದೆ. ಅಗತ್ಯ ಸೇವೆ ಒದಗಿಸುವಂತ ಸಿಬ್ಬಂದಿಗಳ ಓಡಾಟಕ್ಕೆ ನೈಟ್ ಕರ್ಪ್ಯೂ ಸಂದರ್ಭದಲ್ಲಿ ಅನುಮತಿಸಲಾಗಿದೆ.  ಐಟಿ-ಬಿಟಿ ಕಂಪನಿಗಳ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂಗೆ ಮಾತ್ರವೇ ಅವಕಾಶ ನೀಡಲಾಗಿದೆ.
ಮೆಡಿಕಲ್ ಶಾಪ್ ಗಳು ನೈಟ್ ಕರ್ಪ್ಯೂ ಸಂದರ್ಭದಲ್ಲಿ ತೆರೆದಿರುತ್ತದೆ.  ಯಾವುದೇ ಕಮರ್ಷಿಯಲ್ ಶಾಪ್ ಗಳನ್ನು ತೆರೆಯೋದಕ್ಕೆ ಅವಕಾಶವಿಲ್ಲ
ಹೋಂ ಡಿಲಿವರಿ ಪುಡ್ ಸರಬರಾಜಿಗೆ ನೈಟ್ ಕರ್ಪ್ಯೂ ಸಂದರ್ಭದಲ್ಲಿ ಅನುಮತಿಸಲಾಗಿದೆ. ಗೂಡ್ಸ್ ವೆಹಿಕಲ್, ಟ್ರಕ್, ಗೂಡ್ಸ್ ಕ್ಯಾರಿಯರ್, ಖಾಲಿ ಗೂಡ್ಸ್ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ರಾತ್ರಿ ಸಂದರ್ಭದಲ್ಲಿ ಬಸ್, ಟ್ರೈನ್, ಮೆಟ್ರೋ ರೈಲ್ ಹಾಗೂ ವಿಮಾನ ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ. ನೈಟ್ ಕರ್ಪ್ಯೂ ಸಂದರ್ಭದಲ್ಲಿ ಟ್ಯಾಕ್ಸಿ, ಬಸ್, ಆಟೋ ಸಂಚಾರಕ್ಕೆ ಅವಕಾಶ ನೀಡಲಾಗಿದೆ.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »