TOP STORIES:

ಈಡಿಗ ಉಪ ಪಂಗಡಗಳನ್ನು ಒಗ್ಗೂಡಿಸುವುದು ಯುವಕರ ಜವಾಬ್ದಾರಿ: ಸತ್ಯಜಿತ್ ಸುರತ್ಕಲ್


ಬೆಂಗಳೂರು: ‘ಪ್ರಬಲ ಸಮುದಾಯಗಳು ಹಿಂದುಳಿದ ವರ್ಗಗಳ ಪ್ರವರ್ಗ ‘2-ಎ’ ಮೀಸಲಾತಿ ಪಡೆಯಲು ಪ್ರಯತ್ನ ನಡೆಸುತ್ತಿವೆ. ಇದರಿಂದ ಈಡಿಗ ಸಮುದಾಯ ಅವಕಾಶಗಳಿಂದ ವಂಚಿತವಾಗುತ್ತದೆ. ಆದುದರಿಂದ 26 ಉಪ ಪಂಗಡಗಳನ್ನು ಒಗ್ಗೂಡಿಸುವ ಕೆಲಸ ಯುವಕರ ಜವಾಬ್ದಾರಿಯಾಗಿದೆ’ ಎಂದು ನಾರಾಯಣ ಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಕರೆ ನೀಡಿದ್ದಾರೆ.

ರವಿವಾರ ಬೆಂಗಳೂರಿನಲ್ಲಿ ನಾರಾಯಣ ಗುರು ವಿಚಾರ ವೇದಿಕೆ ಘಟಕ ಉದ್ಘಾಟಿಸಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಮೀಸಲಾತಿಯ ಕೂಗು ಕೇಳಿ ಬರುತ್ತಿದೆ. ಪ್ರಬಲ ಸಮುದಾಯಗಳು 2ಎ ಮೀಸಲಾತಿ ಪಟ್ಟಿಗೆ ಸೇರಿದರೆ, ಸವಲತ್ತುಗಳಿಂದ ವಂಚಿತರಾಗಿರುವ ನಮಗೆ ದೊಡ್ಡ ಅಪಾಯ. ಈ ಹಿನ್ನಲೆಯಲ್ಲಿ ಈಡಿಗ ಸಮುದಾಯ ತಮ್ಮ ಸಿಗಬೇಕಾದ ಸವಲತ್ತುಗಳಿಗಾಗಿ ಒಗ್ಗೂಡಿ ಹೋರಾಟ ನಡೆಸಬೇಕಾದ ಅವಶ್ಯಕತೆ ಇದೆ ಎಂದು ಪ್ರತಿಪಾದಿಸಿದರು.

 

ಸಹಾಯಕ ಪೋಲಿಸ್ ಆಯುಕ್ತೆ ರೀನಾ ಸುವರ್ಣ ಮಾತನಾಡಿ, ಯಾವುದೇ ಪಕ್ಷದಲ್ಲಿ ಯಾರೇ ದೊಡ್ಡದಾಗಿ ಬೆಳೆದಿದ್ದರೂ ಅವರು ಸಮಾಜದ ವಿಚಾರ ಬಂದಾಗ ಪಕ್ಷ ಬೇಧ ಮರೆತು ಕೆಲಸ ನಿರ್ವಹಿಸುವ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ 26 ಉಪ ಪಂಗಡಗಳನ್ನು ಒಳಗೊಂಡ ಇಂತಹ ಸಮುದಾಯ ಒಂದೆಡೆಯಲ್ಲಿ ಒಗ್ಗೂಡುವ ಅಗತ್ಯವಿದೆ. ಈಡಿಗ ಸಮುದಾಯ ಸಮಾಜಕ್ಕೆ ಬಹುದೊಡ್ಡ ಕೊಡುಗೆಯನ್ನು ನೀಡಿದೆ ಎಂದರು.

 

ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಮುದಾಯದ ಗಣ್ಯರನ್ನು ಗೌರವಿಸಲಾಯಿತು. ಕಾಂಗ್ರೆಸ್ ಪಕ್ಷದ ಡಾ.ರಾಜ ನಂದಿನಿ ಕಾಗೋಡು ತಿಮ್ಮಪ್ಪ, ಉದ್ಯಮಿ ಗೋವಿಂದ ಬಾಬು ಪೂಜಾರಿ, ಚಿತ್ರನಟ ನಕುಲ್ ಗೋವಿಂದ, ಸಂಘಟನೆಯ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಸುಂಟರಹಳ್ಳಿ, ಖಚಾಂಚಿ ದಿನೇಶ್ ಮಳಲಗದ್ದೆ, ಸಂಘಟನಾ ಕಾರ್ಯದರ್ಶಿ ಗಣೇಶ್, ಭಾಸ್ಕರ್ ಪೂಜಾರಿ ಉಪಸ್ಥಿತರಿದ್ದರು.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »