TOP STORIES:

FOLLOW US

ಐದು ಸಾವಿರ ಜನರಿಗೆ ಕೆಲಸ ಕೊಡಿಸಿದ ಅನ್ನದಾತ ಗೋವಿಂದ ಬಾಬು ಪೂಜಾರಿ


” ಅಂದು ಬಸ್ಸಲ್ಲಿ ಎಣ್ಣೆ ಡಬ್ಬದ ಮೇಲೆ ಗೋಣಿಚೀಲ ಹಾಕಿಕೊಂಡು ಅದರ ಮೇಲೆ ಕುಳಿತು ಜೀವನವನ್ನು ಹುಡುಕಿಕೊಂಡು ಮುಂಬಯಿ ತಲುಪಿದ ಹುಡುಗ ಇಂದು ಸುಮಾರು ಐದು ಸಾವಿರ ಜನರಿಗೆ ಕೆಲಸ ಕೊಡಿಸಿದ ಅನ್ನದಾತ ”

ಸಾಮಾನ್ಯವಾಗಿ ಕೆಲವು ವರ್ಷಗಳ ಹಿಂದೆ ಕರಾವಳಿಯವರು ಜೀವನವನ್ನು ಹುಡುಕಿಕೊಂಡು ಹೋಗುತ್ತಿದ್ದುದು ಮಹಾನಗರಿ ಮುಂಬಯಿಗೆ. ಮುಖ್ಯವಾಗಿ ಹೋಟೇಲುಗಳಲ್ಲಿ ಕೆಲಸ ಮಾಡಲು. ಅಂದು ಏಳನೆಯ ತರಗತಿಯವರೆಗೆ ಓದಿದ್ದ ಆ ಹುಡುಗ ಕೂಡ ಜೀವನವನ್ನು ಹುಡುಕಿಕೊಂಡು ಮುಂಬಯಿ ಬಸ್ ಹತ್ತಿದ್ದ. ಕೈಯಲ್ಲಿ ದುಡ್ಡಿರಲಿಲ್ಲ. ಆದರೆ ಕಣ್ಣ ತುಂಬಾ ಕನಸುಗಳಿದ್ದವು. ಆ ಹುಡುಗನ ಹೆಸರು

” ಗೋವಿಂದ ಬಾಬು ಪೂಜಾರಿ “

ಊರು ಕಡಲತಡಿಯ ಬೈಂದೂರಿನ ಬಿಜೂರು. ಕಡು ಬಡತನ. ಓದು ಮುಂದುವರಿಸಲು ಸಾಧ್ಯವಾಗದ ಪರಿಸ್ಥಿತಿ. ಸಾಮಾನ್ಯವಾಗಿ ಸ್ವಲ್ಪ ಮಟ್ಟಿಗೆ ಈ ಕಷ್ಟಗಳಿಂದ ಹೊರಬರಲು ಕಣ್ಮುಂದೆ ಕಾಣಿಸುವುದೇ ಹೊಟೇಲ್ ಕೆಲಸ.
ಅಂದು ಕನಸು ತುಂಬಿದ್ದ ಕಣ್ಣುಗಳಿಂದ ಬಸ್ಸಿನಲ್ಲಿ ಎಣ್ಣೆ ಡಬ್ಬದ ಮೇಲೆ ಗೋಣಿಚೀಲ ಹಾಕಿಕೊಂಡು ಕುಳಿತು ಸುಮಾರು ಇಪ್ಪತ್ತು ಗಂಟೆ ಪ್ರಯಾಣ ಮಾಡಿ ಮುಂಬಯಿ ತಲುಪಿದ್ದ ಗೋವಿಂದ ಪೂಜಾರಿ ಆರಂಭದಲ್ಲಿ ಒಂದು ಕ್ಯಾಂಟೀನ್ ನಲ್ಲಿ ಟೀ ಮಾಡುವ ಹುಡುಗನಾಗಿ ಸೇರಿಕೊಳ್ಳುತ್ತಾರೆ. ಆಮೇಲೆ ಇನ್ನೊಂದು ಹೋಟೇಲ್ ನಲ್ಲಿ ಅಡಿಗೆಯವರಾಗಿ ಕೆಲಸಮಾಡುತ್ತಾರೆ. ಆದರೆ ತನ್ನದೇ ಆದ ಸ್ವಂತ ಉದ್ಯಮ ಮಾಡಬೇಕೆಂಬ ತುಡಿತ ಆ ಮನುಷ್ಯನಲ್ಲಿತ್ತು. ದುಡಿದು ಉಳಿಸಿದ ಹಣದಿಂದ ಒಂದು ಕಿರಾಣಿ ಅಂಗಡಿ ಆರಂಭಿಸುತ್ತಾರೆ. ಆದರೆ ವಿಪರೀತ ನಷ್ಟ ಅನುಭವಿಸುತ್ತಾರೆ.
ನಂತರ ಒಬ್ಬರ ಸಹಾಯದಿಂದ ಫೈವ್ ಸ್ಟಾರ್ ಹೋಟೆಲ್ ಒಂದರಲ್ಲಿ ಕ್ಲಿನಿಂಗ್ ಕೆಲಸಕ್ಕೆ ಸೇರುತ್ತಾರೆ. ನಂತರ ಅದೇ ಹೋಟೇಲ್ ನಲ್ಲಿ ಕಿಚನ್ ವಿಭಾಗ ಸೇರಿಕೊಳ್ಳುತ್ತಾರೆ. ಮುಂದೆ ಅನುಭವದಿಂದ ಹಾಗೂ ಪರಿಶ್ರಮದ ಫಲವಾಗಿ ನಾಲ್ಕೈದು ಫೈವ್ ಸ್ಟಾರ್ ಹೋಟೆಲ್ ಗಳಲ್ಲಿ ಶೇಫ್ ಆಗಿ ಕೆಲಸಮಾಡುತ್ತಾರೆ. ಆದರೆ ತನ್ನ ಸ್ವಂತ ಉದ್ಯಮ ಮಾಡಬೇಕೆಂಬ ತುಡಿತ ನಿದ್ದೆ ಮಾಡಲಿಕ್ಕೆ ಬಿಡಬೇಕಲ್ವ.
ಒನ್ ಫೈನ್ ಡೇ ಈ ಕೆಲಸಗಳಿಗೆಲ್ಲ ಇತೀಶ್ರೀ ಹಾಡಿ ಒಂದು ಕಂಪನಿಯಲ್ಲಿ ತಮ್ಮದೇ ಕ್ಯಾಂಟೀನ್ ಆರಂಭಿಸುತ್ತಾರೆ. ಆಗ ಕಾಲ ಸ್ತಂಭಿಸಿತು. ಮುಂದೆಂದೂ ಅವರು ಹಿಂತಿರುಗಿ ನೋಡಲಿಲ್ಲ. ನಾಲ್ಕು ಜನ ಉದ್ಯೋಗಿಗಳಿಂದ ಆರಂಭವಾಯಿತು ಆ ಕ್ಯಾಂಟೀನ್ . ಮುಂದೆ ಆಹಾರದ ಗುಣಮಟ್ಟ, ಉತ್ತಮ ಸೇವೆಗಳಿಂದ ಮುಂಬಯಿಯ ಸುಮಾರು ಮೂವತ್ತು ಕಂಪನಿಗಳಲ್ಲಿ ಇವರ ಕ್ಯಾಂಟೀನ್ ಆರಂಭವಾಗುತ್ತದೆ. ಆಮೇಲೆ ಹೈದರಾಬಾದ್, ಪುಣೆ, ಜಾರ್ಖಂಡ್, ಗುಜರಾತ್ ಮುಂತಾದ ಕಡೆಗಳಲ್ಲಿನ ಕಂಪನಿಗಳಲ್ಲಿ ತಮ್ಮ ಕ್ಯಾಂಟೀನ್ ಆರಂಭಿಸುತ್ತಾರೆ. 2007 ರಲ್ಲಿ ಇವರ ಕಂಪನಿಗೆ “ಶೆಫ್ ಟಾಕ್ ಫುಡ್ ಆ್ಯಂಡ್ ಹಾಸ್ವಿಟ್ಯಾಲಿಟಿ ಪ್ರೈವೇಟ್ ಲಿಮಿಟೆಡ್ ” ಎಂದು ನಾಮಕರಣಗೊಂಡು ಇಂದು ಸುಮಾರು ಐದಾರು ರಾಜ್ಯಗಳಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಸರಿ ಸುಮಾರು ಐದು ಸಾವಿರ ಜನರಿಗೆ ಉದ್ಯೋಗವನ್ನು ಕಲ್ಪಿಸಿದ್ದಾರೆ.
ಕೆಲವೊಂದು ವಿಷಯಗಳನ್ನು ಓದಿ ತಿಳಿದು ಕೊಳ್ಳಬಹುದು . ಆದರೆ ಹಸಿವನ್ನು ಓದಿ ತಿಳಿದುಕೊಳ್ಳಲು ಸಾಧ್ಯವಿಲ್ಲ. ಅದನ್ನು ಅನುಭವಿಸಿದವನು ಮಾತ್ರ ತಿಳಿದುಕೊಳ್ಳುತ್ತಾನೆ. ಗೋವಿಂದ ಪೂಜಾರಿ ಹಸಿವನ್ನು ಅನುಭವಿಸಿ ತಿಳಿದುಕೊಂಡವರು. ಬಡವರಿಗೆ ಸಹಾಯ ಮಾಡುವ ಉದ್ದೇಶದಿಂದ ಊರಿನಲ್ಲಿ ” ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ” ಸ್ಥಾಪಿಸಿದ್ದಾರೆ. ಇದರ ಮುಖ್ಯ ಧ್ಯೇಯ ವಿದ್ಯೆ ಮತ್ತು ಆರೋಗ್ಯ. ಕೋವಿಡ್ 19 ಸಂದರ್ಭದಲ್ಲಿ ಈ ಒಂದು ಟ್ರಸ್ಟಿನಿಂದ ಬೈಂದೂರು ಮತ್ತು ಕುಂದಾಪುರಗಳಲ್ಲಿನ ಹಲವಾರು ಕುಟುಂಬಗಳಿಗೆ ಫುಡ್ ಕಿಟ್ ವಿತರಿಸಲಾಯಿತು. ನೀರಿನ ಅಭಾವವಿದ್ದ ಬೀಜೂರು ಗ್ರಾಮಕ್ಕೆ ನೀರಿನ ವ್ಯವಸ್ಥೆ ಕಲ್ಪಿಸಲಾಯಿತು. ಸರ್ಕಾರಿ ಶಾಲಾ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಅನೂಕೂಲ ಮಾಡಿ ಕೊಡಲಾಗುತ್ತಿದೆ.
ಬೆಂಗಳೂರಿನಲ್ಲಿ ಪ್ರಜ್ಞಾಸಾಗರ್ ಹೋಟೆಲ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಅಡಿಯಲ್ಲಿ ಈಗಾಗಲೆ ನಾಲ್ಕು ಹೋಟೆಲುಗಳು ಆರಂಭಗೊಂಡಿವೆ. ಇನ್ನು ಹತ್ತು ಹೋಟೇಲುಗಳು ಆರಂಭಗೊಳ್ಳಲಿವೆ.
ಇನ್ನೂ ಹೊಸ ಪ್ರಾಡಕ್ಟ್ ” ಫಿಶ್ ಚಿಪ್ಸ್ ” ಕೂಡ ಇವರ ಕಂಪನಿಯ ವತಿಯಿಂದ ಲಾಂಚ್ ಆಗಿದೆ.
ಸುಮಾರು ಹತ್ತು ಸಾವಿರ ಉದ್ಯೋಗ ಸೃಷ್ಟಿಸಬೇಕೆಂಬ ಕನಸು ಗೋವಿಂದ ಬಾಬು ಪೂಜಾರಿಯವರದ್ದು. ಅವರ ಕನಸು ನನಸಾಗಲಿ.
ಯೂಟ್ಯೂಬ್ ನಲ್ಲಿ ಅವರ ಕೆಲವು ಸಂದರ್ಶನಗಳನ್ನು ನೋಡಿ ಶಬ್ಧ ರೂಪಕ್ಕೆ ಅಕ್ಷರ ರೂಪ ಕೊಟ್ಟಿದ್ದೇನೆ. ಇಂತವರು ಇಂದಿನ ಬಡ ವಿದ್ಯಾರ್ಥಿಗಳಿಗೆ ಆದರ್ಶವಾಗಲಿ. ಅವರ ಉದ್ಯಮದಲ್ಲಿ ಅವರು ಇನ್ನೂ ಎತ್ತರಕ್ಕೆ ಬೆಳೆಯಲಿ. ಹಸಿವನ್ನು ಅನುಭವಿಸಿ ತಿಳಿದುಕೊಂಡಿರುವ ಅವರಿಂದ ಬಹಳಷ್ಟು ಕುಟುಂಬಗಳ ಹಸಿವಿನ ಚೀಲ ತುಂಬಲಿ.

✍️ಅರುಣ್ ವಿ ಬಾರ್ಕೂರ್


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »