TOP STORIES:

ಕಂಬಳ ಲೋಕದ ಕಿಂಗ್‌ ‘ತಾಟೆ’: ₹ 8 ಲಕ್ಷಕ್ಕೂ ಅಧಿಕ ದರಕ್ಕೆ ಮಾರಾಟವಾಗಿದ್ದ ಕೋಣದ ಸಾಧನೆ ಏನು..?


ಮಂಗಳೂರು, ನವೆಂಬರ್‌ 6: ಕರಾವಳಿಯಲ್ಲಿ ಕಂಬಳ ಕಲರವ ಆರಂಭವಾಗಿದೆ. ಋತುವಿನ ಆರಂಭದ ಎರಡೂಕಂಬಳಗಳು ಭರ್ಜರಿ ಯಶಸ್ಸುಗಳಿಸಿದೆ.

ಜೊತೆಗೆ ಕಂಬಳ ಕ್ಷೇತ್ರದ ಅತೀ ವೇಗದ ಓಟದ ಕೋಣ ಎಂಬ ಬಿರುದು ಪಡೆದತಾಟೆಎಂಬ ಕಂಬಳ ಕೋಣದ ಯಶಸ್ಸಿನನಾಗಲೋಟವೂ ಮುಂದುವರಿದಿದೆ. ಕಳೆದ ಎರಡು ಕಂಬಳದಲ್ಲೂ ಅಡ್ಡಹಲಗೆ ವಿಭಾಗದಲ್ಲಿತಾಟೆಕೋಣ ಪ್ರಥಮಸ್ಥಾನವನ್ನು ಪಡೆದಿದೆ.

ಕ್ರಿಕೆಟ್ ಲೋಕದ ದಿ ಬೆಸ್ಟ್ ಫಿನಿಷರ್ ಮಹೇಂದ್ರ ಸಿಂಗ್ ಧೋನಿಯಾದರೆ ಕಂಬಳ ಕ್ಷೇತ್ರದ ದಿ ಬೆಸ್ಟ್ ಫಿನೀಶರ್ ತಾಟೆಕೋಣ ಎನ್ನುವುದು ಕಂಬಳ ಕೂಟದ ಲಕ್ಷಾಂತರ ಮಂದಿ ಕಂಬಳ ಕೂಟದ ಅಭಿಮಾನಿಗಳ ಮಾತಾಗಿದೆ.


ಎಂಟೂ ಮುಕ್ಕಾಲು ಲಕ್ಷ ರೂಪಾಯಿಗೆ ಮಾರಾಟವಾಗಿದ್ದ ತಾಟೆ

ಕೊನೆಯ ಹತ್ತು ಮೀಟರ್ ದೂರದಲ್ಲಿ ಗಾಳಿಯನ್ನು ಸೀಳಿ ಮುನ್ನುಗ್ಗುವ ತಾಟೆ ಎಲ್ಲರ ಹುಬ್ಬೇರಿಸುವಂತೆ ವಿಜಯದ ಗುರಿತಲುಪುತ್ತದೆ. ಇದೇ ಮಾದರಿಯಲ್ಲಿ ನೂರಾರು ಪ್ರಶಸ್ತಿಯನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ. ಕಂಬಳ ಕ್ಷೇತ್ರಕ್ಕೆ ಹಗ್ಗ ಕಿರಿಯವಿಭಾಗದಲ್ಲಿ ಕಾಲಿಟ್ಟ ತಾಟೆ ಬಳಿಕ ಹಿಂದೆ ತಿರುಗಿ ನೋಡಲೇ ಇಲ್ಲ. ಹಗ್ಗ ಕಿರಿಯ ವಿಭಾಗದಲ್ಲಿ ನೂರಾರು ಪದಕಗಳನ್ನುಸಂಪಾದಿಸಿದ ಬಳಿಕ ನೇಗಿಲು ಹಿರಿಯ ವಿಭಾಗಕ್ಕೆ ಕಾಲಿಟ್ಟಾಗ ಎಂಟೂ ಮುಕ್ಕಾಲು ಲಕ್ಷ ರೂಪಾಯಿಗೆ ಕಂಬಳದ ಪ್ರಸಿದ್ಧಕೋಣಗಳ ಯಜಮಾನ ಇರುವೈಲು ಪಾಣಿಲ ಬಾಡ ಪೂಜಾರಿಯವರ ಮಡಿಲು ಸೇರಿದೆ. ಇಷ್ಟು ದೊಡ್ಡ ಮೊತ್ತದಲ್ಲಿ ಕೋಣಮಾರಾಟವಾಗಿದ್ದು ಕಂಬಳ ಕ್ಷೇತ್ರದಲ್ಲೇ ಭಾರಿ ಸಂಚಲನ ಮೂಡಿಸಿತ್ತು.

ಕಂಬಳದಲ್ಲಿ ಬೊಟ್ಟಿಮಾರ್ ಮತ್ತು ತಾಟೆ ಕೋಣಗಳ ಜೋಡಿ ಮೋಡಿ

ಇರುವೈಲುಗೆ ಬಂದ ಬಳಿಕ ಬೊಟ್ಟಿಮಾರ್ ಮತ್ತು ತಾಟೆ ಕೋಣಗಳ ಜೋಡಿ ಕಂಬಳ ಪ್ರೇಮಿಗಳನ್ನು ಮೋಡಿ ಮಾಡಿದೆ. ಹಲವುವರ್ಷಗಳ ಕಾಲ ಕೋಣಗಳ ಜೋಡಿ ಕಂಬಳ ಕೂಟದಲ್ಲಿ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಬಾಚಿದೆ. 2019ರಲ್ಲಿ ಮಂಗಳೂರಿನಐಕಳದಲ್ಲಿ ನಡೆದ ಕಾಂತಾಭಾರೆ ಬೂಧಭಾರೆ ಜೋಡುಕರೆ ಕಂಬಳಕೂಟದಲ್ಲಿ ಕಂಬಳ ಇತಿಹಾಸದ ಅತೀ ವೇಗದ ಓಟ ಓಡಿದಖ್ಯಾತ ಓಟಗಾರ ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡರ ಅಂದಿನ ಸಾಧನೆಗೆ ಕಾರಣ ಇದೇ ತಾಟೆ ಎನ್ನುವುದು ಕೂಡವಿಶೇಷವಾಗಿದೆ.

ತಾಟೆಯ ಓಟವನ್ನು ನೋಡಲೆಂದೇ ಕಂಬಳಕ್ಕೆ ಜನ ಸಾಗರ

ಕಂಬಳ ಕೂಟದಲ್ಲಿ ಎಲ್ಲರ ಕಣ್ಮನ ಸೆಳೆಯುವ ತಾಟೆ ಕೋಣ ಓಡುವ ರೀತಿಯೇ ಬಹಳ ವಿಶಿಷ್ಠವಾಗಿದೆ. ತಲೆ ಎತ್ತಿ ಓಡುವತಾಟೆ ವಿಜಯದ ಗುರಿಗೆ ಹಾರಿ ರೇಸ್‌ ಅನ್ನು ಅಂತಿಮ ಮಾಡುವುದೇ ವಿಶೇಷವಾಗಿದೆ. ಇಂದಿಗೂ ಜನ ಕಂಬಳಕ್ಕೆ ತಾಟೆಯಓಟವನ್ನು ನೋಡಲೆಂದೇ ಬರುವುದು. ಸದ್ಯ ನಾರಾವಿ ಯುವರಾಜ ಜೈನ್ ಅವರ ಯಜಮಾನಿಕೆಯ ತಂಡದಲ್ಲಿರುವ ತಾಟೆ, ಅಡ್ಡ ಹಲಗೆ ವಿಭಾಗದಲ್ಲಿ ಎರಡೂ ಕಂಬಳ ಕೂಟದಲ್ಲಿ ಪ್ರಥಮ ಸ್ಥಾನ ಗಳಿಸಿ ಯಜಮಾನನ ನಂಬಿಕೆ ಉಳಿಸಿದೆ.

ತಾಟೆ ಓಟ ಸಾಮಾಜಿಕ ಜಾಲತಾಣದಲ್ಲಿ ವೈರಲ್‌

ಒಟ್ಟಿನಲ್ಲಿ ಕರಾವಳಿಯಲ್ಲಿ ಕಂಬಳ ರಂಗು ಹೆಚ್ಚಾಗಿದೆ. ಓಟಗಾರನ ಪ್ರಸಿದ್ಧಿಗೆ ಓಡುವ ಕೋಣದ ಪ್ರಸಿದ್ಧಿಯೇಜಗದಗಲವಾಗಿದ್ದು ಕಂಬಳದ ಮೇಲಿರುವ ಜನರ ಪ್ರೀತಿಗೆ ಸಾಕ್ಷಿಯಾಗಿದೆ. ತಾಟೆಯ ಓಟದ ವಿಡಿಯೋಗಳು ಸಾಮಾಜಿಕಜಾಲತಾಣದಲ್ಲಿ, ರೀಲ್ಸ್‌ ಮೂಲಕ ಜನಪ್ರಿಯತೆ ಪಡೆಯುತ್ತಿದೆ. ಚಿಗರೆಯ ಓಟದ ತಾಟೆಯನ್ನು ಅಭಿಮಾನಿಗಳು ಪ್ರೀತಿಯಿಂದಕಿಂಗ್ ತಾಟೆ ಎಂದು ಬಿರುದು ನೀಡಿ ಅಭಿಮಾನ ತೋರಿಸಿದ್ದಾರೆ.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »