TOP STORIES:

ಕಡು ಬಡತನದ ಕುಟುಂಬದಲ್ಲಿ ಹುಟ್ಟಿದ ಹುಡುಗಿ ಕರ್ನಾಟಕದ ಕೋಟ್ಯಂತರ ಜನರ ಮನ ಗೆದ್ದು, ಪ್ರಸ್ತುತ ಮುಂಬೈ ಮಹಾನಗರದ ವಾಸಿಯಾಗಿದ್ದಾರೆ..ಹರಿಣಿ ನಿಲೇಶ್ ಪೂಜಾರಿ


ಕಡು ಬಡತನದ ಕುಟುಂಬದಲ್ಲಿ ಹುಟ್ಟಿದ ಹುಡುಗಿ ಕರ್ನಾಟಕದ ಕೋಟ್ಯಂತರ ಜನರ ಮನ ಗೆದ್ದು, ಪ್ರಸ್ತುತ ಮುಂಬೈ ಮಹಾನಗರದವಾಸಿಯಾಗಿದ್ದಾರೆ.

ಹರಿಣಿ ನಿಲೇಶ್ ಪೂಜಾರಿ: ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬಜಗೋಳಿ    ಶ್ರೀ ರಘುನಾಥ್ ಸುವರ್ಣ ಮತ್ತುಶ್ರೀಮತಿ ಶೋಭಾ ದಂಪತಿಯ ಪುತ್ರಿ. ಬೆಳೆಯುವ ಸಿರಿ ಮೊಳಕೆಯಲ್ಲಿಯೇ ಎಂಬಂತೆ ಶಾಲಾ ದಿನಗಳಲ್ಲಿಯೇ ಹರಿಣಿ ಸಾಕಷ್ಟು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಬಾಗವಹಿಸಿ ಪ್ರಶಸ್ತಿ ಪಡೆಯುತ್ತಿದ್ದರು.. ಪ್ರಾಥಮಿಕ ಶಿಕ್ಷಣವನ್ನು ಸರ್ಕಾರಿ ಶಾಲೆಯಲ್ಲಿ ಮುಗಿಸಿದಹರಿಣಿ.. 12 ನೇ ತರಗತಿಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ.

ಹರಿಣಿ ನಿಲೇಶ್ ಪೂಜಾರಿ: ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬಜಗೋಳಿ    ಶ್ರೀ ರಘುನಾಥ್ ಸುವರ್ಣ ಮತ್ತುಶ್ರೀಮತಿ ಶೋಭಾ ದಂಪತಿಯ ಪುತ್ರಿ. ಬೆಳೆಯುವ ಸಿರಿ ಮೊಳಕೆಯಲ್ಲಿಯೇ ಎಂಬಂತೆ ಶಾಲಾ ದಿನಗಳಲ್ಲಿಯೇ ಹರಿಣಿ ಸಾಕಷ್ಟು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಬಾಗವಹಿಸಿ ಪ್ರಶಸ್ತಿ ಪಡೆಯುತ್ತಿದ್ದರು.. ಪ್ರಾಥಮಿಕ ಶಿಕ್ಷಣವನ್ನು ಸರ್ಕಾರಿ ಶಾಲೆಯಲ್ಲಿ ಮುಗಿಸಿದಹರಿಣಿ.. 12 ನೇ ತರಗತಿಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ.

ಮುಂದೆ ಆಳ್ವಾಸ್ ಕಾಲೇಜು ಮೂಡಬಿದ್ರೆಯಲ್ಲಿ M. Com ಪದವಿದರೆಯಾದ ಹರಿಣಿ  ಅಲ್ಲಿಂದ ನೇರಾ ಹೊರಟಿದ್ದು ಕಲಾಜಗತ್ತಿಗೆ.. ಆವತ್ತಿನ ನಂಬರ್ ಒನ್ ಕನ್ನಡ ಕಾಮಿಡಿ ಸೀರಿಯಲ್ ಪಂಚರಂಗಿ ಪೊಂ ಪೊಂ ಸಾವಿರ ಸಂಚಿಕೆಗಳಲ್ಲಿ ಅಭಿನಯಿಸಿದ ಕೀರ್ತಿಹರಿಣಿಗಿದೆ.. ಅಲ್ಲಿಂದ ಮುಂದೆ ಹರ ಹರ ಮಹಾದೇವ ಧಾರಾವಾಹಿಯಲ್ಲಿ ಇವರು ಮಾಡಿದ ಸರಸ್ವತಿ ದೇವಿಯ ಪಾತ್ರದಿಂದಜನಮಾನಸದಲ್ಲಿ ಹರಿಣಿ ಅಚ್ಚಳಿಯದೆ ಉಳಿದರು..ಮದುಬಾಲ, ಲಕ್ಷ್ಮಿ ಬಾರಮ್ಮ,ಮದುಮಗಳು ಹೀಗೆ ಸಾಲು ಸಾಲುಧಾರಾವಾಹಿಗಳಲ್ಲಿ ಹರಿಣಿ ಮಿಂಚಿದರು

ಕಂಚಿಲ್ದಾ ಬಾಲೆ ತುಳು ಸಿನಿಮಾದಲ್ಲಿ ಬಾಲಮಾಣಿಯಾಗಿ ಅಭಿನಯಿಸಿ ತುಳುಚಿತ್ರ ರಸಿಕರಿಗೆ ಮಾತ್ರವಲ್ಲದೆ ಆದ್ಯಾತ್ಮಿಕವಾದಿಗಳಿಗೂಹತ್ತಿರ

ವಾದರೂ.. ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಗೆ ಬಾಜನವಾದ ಅರ್ಜುನ್ ವೆಡ್ಸ್ ಅಮೃತ ತುಳು ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿಕಾಣಿಸಿಕೊಂಡರು.. ಸುವರ್ಣ ಸೂಪರ್ ಜೋಡಿ, ಡ್ರೀಮ್ ಗರ್ಲ್ಸ್ ಹೀಗೆ ಹಲವಾರು ರಿಯಾಲಿಟಿ ಶೋಗಳಲ್ಲಿ ಬಾಗವಹಿಸಿದರು..

ಬೆಸ್ಟ್ ಕಾಮಿಡಿ ಆಕ್ಟ್ರೆಸ್ಸ್, ಬೆಸ್ಟ್ ಪರ್ಫಾರ್ಮೆನ್ಸ್, ಹೀಗೆ ಹಲವಾರು ಪ್ರಶಸ್ತಿ, ಸನ್ಮಾನಗಳು ಹರಿಣಿಯನ್ನ ಹುಡುಕಿ ಬಂದವು.

ಮುಂದೆ ಬಿಲ್ಲವ ಅಸೋಸಿಯೇಷನ್ ಮುಂಬೈ ಯುವ ವಿಭಾಗದ ಕಾರ್ಯಧ್ಯಕ್ಷರಾದ ನಿಲೇಶ್ ಪೂಜಾರಿ ಪಲಿಮಾರು ಅವರಬಾಳಸಂಗಾತಿಯಾದ ಹರಿಣಿ ಸದ್ಯಕ್ಕೆ ಕಲಾಜಗತ್ತಿನಿಂದ ದೂರವಿದ್ದರೂ ಕೂಡ ಸಾಮಾಜಿಕ ಸೇವೆಯಲ್ಲಿ ತಮ್ಮನ್ನ ತಾವುನಿರಂತರವಾಗಿ ತೊಡಗಿಸಿಕೊಂಡಿದ್ದಾರೆ..ಜೊತೆಗೆ ಬರವಣಿಗೆಯಲ್ಲಿಯೂ ಹರಿಣಿ ತಮ್ಮ ಛಾಪನ್ನ ಮೂಡಿಸುವತ್ತ ಹೆಜ್ಜೆ ಇಡುತ್ತಿದ್ದಾರೆ.. ಜೆಸಿಐ ಸಂಸ್ಥೆಯ ವಾರ್ಷಿಕ ಪುಸ್ತಕ ಚೈತನ್ಯ ಸಂಪಾದಕಿಯಾಗಿಯೂ ಹರಿಣಿ ಕಾರ್ಯನಿರ್ವಾಹಿಸಿದ್ದಾರೆ. ನಿರೂಪಕಿಯಾಗಿಯೂಹರಿಣಿಯ ಹೆಸರು ಪ್ರಸಿದ್ದಿಯಾಗಿದೆ.

2018ರಲ್ಲಿ ಮಡಿಕೇರಿಯಲ್ಲಿ ಸಂಭವಿಸಿದ ನೆರೆ ಸಂದರ್ಭದಲ್ಲಿ ಮಡಿಕೇರಿಯಲ್ಲಿಸ್ವಯಂಸೇವಕಿಯಾಗಿ ಕೆಲಸ ಮಾಡಿದ ಹರಿಣಿ, ತಮ್ಮ ಮಗಳು ಸಹನಿ ಮೊದಲ ವರ್ಷದ ಹುಟ್ಟುಹಬ್ಬವನ್ನ ಮಾನಸಿಕ ಭಿನ್ನಸಾಮರ್ಥ್ಯದ ಮಕ್ಕಳ ವಿಜೇತ ವಿಶೇಷ ಶಾಲೆಯಲ್ಲಿ ಆಚರಿಸಿ ಮೆಚ್ಚುಗೆ ಪಡೆದಿದ್ದರು..

  ಸದ್ಯ ಸಹನಿ ಸ್ಟಾರ್ ಎಂಬ ಹೆಸರಿನ ಸಂಸ್ಥೆಯ ಮುಖ್ಯಸ್ತೆ ಯಾಗಿರುವ ಹರಿಣಿ ಹಲವಾರು ಸಮಾಜಮುಖಿ ಕಾರ್ಯಕ್ರಮಗಳಲ್ಲಿಬಾಗಿಯಾಗುವ ಇಂಗಿತಾ ಹೊಂದಿದ್ದಾರೆ..ಹಲವಾರು ಬಾರಿ ರಕ್ತದಾನ ಶಿಬಿರ ಆಯೋಜನೆ ಮಾಡಿರುವ ಹರಿಣಿ ಸ್ವತಃ 24 ಬಾರಿರಕ್ತದಾನ ಮಾಡಿ ಸಾಮಾಜಿಕ ಕಳಕಳಿ ತೋರಿದ್ದಾರೆ..

   ಹರಿಣಿ ಅವರ ಯಶಸ್ಸಿಗೆ ಸ್ಫೂರ್ತಿಯಾದ ಅಪ್ಪ, ಅಮ್ಮ ಅಣ್ಣ ಹರಿಪ್ರಸಾದ್, ತಮ್ಮ ನಿತೇಶ್ ಜೊತೆಗೆ ಗಂಡ ನಿಲೇಶ್ ಪೂಜಾರಿಫಲಿಮಾರ್ ಅವರ ಸಹಕಾರಕ್ಕೆ ಅಭಾರಿಯಾಗಿರುವ ಹರಿಣಿ ಸದ್ಯ ಕಲಾ ಜಗತ್ತಿನಿಂದ ದೂರವಿದ್ದರೂ ಅವರೂ ನವರಾತ್ರಿಸಂದರ್ಭದಲ್ಲಿ ಮಾಡಿಸಿದ ಶಾರದೆಯಾ ಫೋಟೋಶೂಟ್ ಎಲ್ಲೆಲ್ಲೂ ಮೆಚ್ಚುಗೆಗೆ ಪಾತ್ರವಾಗಿದೆ..

  ಶಾರದೆಯ ಫೋಟೋಶೂಟ್ ಗಾಗಿ 21 ದಿನ ಕಟ್ಟುನಿಟ್ಟಿನ ವೃತ ಆಚರಿಸಿದ ಹರಿಣಿಗೆ ಶಾರದೆಯ ಆಶೀರ್ವಾದ ಮಡಿಲು ಸೇರಲಿಎನ್ನುವುದು ನಮ್ಮ ಆಶಯ..

ನವೀನ್ ಪಡ್ಡು ಇನ್ನಾ

ಕಮಲ  ಕಲಾ ವೇದಿಕೆ ಮುಂಬೈ


Related Posts

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »