TOP STORIES:

ಕತಾರ್: ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ತುಳುನಾಡಿನ ಮಹಿಳೆ ಪ್ರತಿಭಾ ಎನ್ ಪೂಜಾರಿ ಆಯ್ಕೆ.


ಬಂಟ್ವಾಳ ತಾಲೂಕಿನ ಪ್ರತಿಭಾ ಎನ್.ದರ್ಖಾಸು ಅವರಿಗೆ ವರ್ಲ್ಡ್ ಕಪ್ ಮೆಡಿಕಲ್ ಟೀಮಿನಲ್ಲಿ ಸೇವೆ ಸಲ್ಲಿಸುವ ಅವಕಾಶ

ಬಂಟ್ವಾಳ: ಕತಾರ್ ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ಸೇವೆ ಸಲ್ಲಿಸಲು ತುಳುನಾಡಿನ ಮಹಿಳೆಯೊರ್ವರು ಆಯ್ಕೆಯಾಗಿದ್ದಾರೆ...ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ ದೋಟ ದರ್ಖಾಸು ನಿವಾಸಿ ನವೀನ್ ಪೂಜಾರಿಯವರ ಪತ್ನಿ ಪ್ರತಿಭಾಎನ್.ದರ್ಖಾಸು ಎಂಬವರು ಇದೀಗ ಕತಾರಿನ ವರ್ಲ್ಡ್ ಕಪ್ ಮೆಡಿಕಲ್ ಟೀಮಿನಲ್ಲಿ ಸೇವೆ ಸಲ್ಲಿಸಲು ಆಯ್ಕೆಯಾದವರು.

ಮೂಲಕ ಇವರು ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ಆಯ್ಕೆಯಾದ ಕರ್ನಾಟಕದ ಏಕೈಕ ಮಹಿಳೆ ಎಂಬ ಗೌರವಕ್ಕೆಪಾತ್ರರಾಗಿದ್ದಾರೆ.

ಬಂಟ್ವಾಳ ತಾಲೂಕಿನ ಸಿದ್ಧಕಟ್ಟೆ ಸೂರಂಡೆ ನಿವಾಸಿಗಳಾದ ನಾರಾಯಣ ಪೂಜಾರಿ ಮತ್ತು ಶ್ರೀಮತಿ ದಂಪತಿಗಳ‌ ಪುತ್ರಿಯಾದ ಪ್ರತಿಭಾಅವರು ವಾಮದಪದವು ಸಮೀಪದ ಕುಡಂಬೆಟ್ಟು ದೋಟ ದರ್ಖಾಸು ನಿವಾಸಿ ನವೀನ್ ಪೂಜಾರಿಯವರನ್ನು ವಿವಾಹವಾಗಿದ್ದು, ಸಂಸಾರ ಸಹಿತ ಕಳೆದ ಕೆಲವು ವರ್ಷಗಳಿಂದ ದೋಹಾ ಕತಾರಿನಲ್ಲಿ ನೆಲೆಯಾಗಿದ್ದಾರೆ.

ಪ್ರತಿಭಾ ಎನ್.ದರ್ಖಾಸು ಅವರು ಕತಾರಿನ ಹಾಮದ್ ಮೆಡಿಕಲ್ ಕಾರ್ಪೋರೇಶನ್ ಸರಕಾರಿ ಅಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದು  ಕೊರೊನಾ ಸಹಿತ ಇತರ ಸಂದರ್ಭದಲ್ಲಿನ ಇವರ ವಿಶೇಷ ಸೇವೆಯನ್ನು ಗುರುತಿಸಿ ಈಗಾಗಲೇ  ಗೌರವಿಸಲಾಗಿತ್ತು.

ಇದೀಗ ಇವರು ಆರೋಗ್ಯ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿದ  ಅನನ್ಯ ಸೇವೆಯನ್ನು ಪರಿಗಣಿಸಿ ಕತಾರ್ ಪಿಫಾ ವರ್ಲ್ಡ್ ಕಪ್ ಮೆಡಿಕಲ್ಟೀಮಿನಲ್ಲಿ ನರ್ಸಿಂಗ್ ಇನ್ಚಾರ್ಜ್ ಆಗಿ ಸೇವೆ ಸಲ್ಲಿಸಲು ಆಯ್ಕೆ ಮಾಡಲಾಗಿದೆ.

ಅಪೂರ್ವ ಸೇವೆಗೆ ಆಯ್ಕೆಯಾದ ಪ್ರತಿಭಾ ಎನ್.ದರ್ಖಾಸು ಅವರಿಗೆ ತುಳುನಾಡಿನಾದ್ಯಾಂತ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »