TOP STORIES:

ಕರಾಟೆ ಪಟುವಿನಿಂದ ಆಧ್ಯಾತ್ಮಿಕ ಪಥದೆಡೆಗೆ – ಬಿಲ್ಲವ ಸಮಾಜದ ಶ್ರೀ ಬ್ರಹ್ಮಋಷಿ ಉಮಾಮಹೇಶ್ವರ ಸ್ವಾಮೀಜಿ ಜೀವನಗಾಥೆ


ಸಮಾಜದಲ್ಲಿ ಯಾರೂ ಮೇಲಲ್ಲ ಯಾರೂ ಕೀಳಲ್ಲ ಭಗವಂತನಿಗೆ ಎಲ್ಲರೂ ಸಮಾನರೆ. ಪರಸ್ಪರ ಸಹಾಯ ಮಾಡುವುದೇ ನಿಜವಾದ ಮಾನವೀಯತೆ ಎಂದು ನಂಬಿರುವವರೆ ಕಾರ್ಕಳದ ಕಲ್ಯಾ ಗ್ರಾಮದ ತ್ರಯಂಬಕೇಶ್ವರ ಅನ್ಮಪೂರ್ಣ ಮಠದ ಶ್ರೀ ಶ್ರೀ ಶ್ರೀ ಬ್ರಹ್ಮ ಋಷಿ ಉಮಾಮಹೇಶ್ವರ ಸ್ವಾಮೀಜಿ.

(Copyrights owned by: billavaswarriors.com )

ಮೂಲತಃ ಅಜೆಕಾರು ಹೆರ್ಮುಂಡೆ ಗ್ರಾಮದ ಬೊಬ್ಬರ್ಯ ಬಾಕ್ಯಾರ್ ಎಂಬ ಕೃಷಿ ಕುಟುಂಬದ ನಾರಾಯಣ ಪೂಜಾರಿ ಹಾಗು ಸುಂದರಿ ಪೂಜಾರಿ ದಂಪತಿಗಳ ಪುತ್ರನಾಗಿ ಜನಿಸಿದ ಇವರು ಯರ್ಲಪಾಡಿ ಗ್ರಾಮದಲ್ಲಿ ಬೆಳೆದರು. ಬಾಲ್ಯದಲ್ಲಿ ಬಹಳ ಚೇಷ್ಟೆ ಸ್ವಭಾವದವರಾಗಿದ್ದು ಐದನೇ ತರಗತಿಯವರೆಗಿನ ಶಿಕ್ಷಣ ಪಡೆದಿದ್ದಾರೆ.

(Copyrights owned by: billavaswarriors.com )

ಪೂರ್ವಶ್ರಮದಲ್ಲಿ ಉಮೇಶ್ ಕರ್ಕೇರ ಎಂಬ ಹೆಸರುಳ್ಳ ಇವರಿಗೆ ಆಧ್ಯಾತ್ಮಿಕ ಜೀವನಕ್ಕೆ ಸ್ಪೂರ್ತಿಯಾದವರು ಹಾಗು ಇವರಲ್ಲಿರುವ ಜ್ಞಾನದ ಶಕ್ತಿಯನ್ನು ಹೊರ ಹೊಮ್ಮುವಂತೆ ಮಾಡಿದವರು ಇವರ ಗುರುಗಳಾದ ಸುಂಕದಕಟ್ಟೆಯ ನಿರಂಜನ ಸ್ವಾಮೀಜಿಯವರು. ಮುಂಬಯಿಯಲ್ಲಿ ಉಮೇಶ ಕರ್ಕೇರವರು ನಿರಂಜನ ಸ್ವಾಮೀಜಿಯವರಿಂದ ದೀಕ್ಷೆ ಪಡೆದರು. ಮಹಾರಾಷ್ಟ್ರದಿಂದ ತವರೂರಿಗೆ ಬಂದು 2005 ರಲ್ಲಿ ಕಲ್ಯಾ ಗ್ರಾಮದಲ್ಲಿ ತ್ರಯಂಬಕೇಶ್ವರ ಅನ್ಮಪೂರ್ಣ ಮಠವನ್ನು ಸ್ಥಾಪಿಸಿದರು.ಜೀವನದಲ್ಲಿ ನಮಗೆ ತಿಳಿದಿರುವುದನ್ನು ಇತರರಿಗೂ ಕಲಿಸಬೇಕೆನ್ನುವ ಇವರು ಕರಾಟೆ ಭೋಧಕರಾಗಿದ್ದು. ಮಹಾರಾಷ್ಟ್ರದಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸದೆ ಕರಾಟೆ ಕಲಿಸುತ್ತಿದ್ದರು ಹಾಗು ಕಮಾಂಡೊಗಳಿಗೆ ತರಬೇತಿ ನೀಡುತ್ತಿದ್ದರು. ಇನ್ನು ಮುಂದೆಯೂ ಅನೇಕ ಕಲೆ ಹಾಗು ಆಟಗಳನ್ನು ಮಠದಲ್ಲಿಯೂ ಪ್ರಾರಂಭಿಸುವ ಯೋಜನೆ ಹೊಂದಿದ್ದಾರೆ.(Copyrights owned by: billavaswarriors.com )

ಮಾನವರು ಸ್ವಾರ್ಥಿಗಳು ಹಾಗು ಅವರು ನಿರೀಕ್ಷೆಗಳೊಂದಿಗೆ ಬದುಕುತ್ತಾರೆ ಆದರೆ ಭಗವಂತ ಮಾತ್ರ ಯಾವುದೇ ನಿರೀಕ್ಷೆಗಳಿಲ್ಲದೆ ನಮ್ಮನ್ನು ಪ್ರೀತಿಸುತ್ತಾನೆ. ಹಾಗೆಯೇ ಆಧ್ಯಾತ್ಮಿಕ ಗುರುವಾದವನು ಎಂದಿಗೂ ತನ್ನ ಭಕ್ತನಿಗೆ ಹಣದ ಬೇಡಿಕೆಯಿಡುವುದಿಲ್ಲ ಭಕ್ತ ತೋರಿಸುವ ಭಕ್ತಿಯೆ ದೊಡ್ಡ ಆಸ್ತಿಯಾಗಿರುತ್ತದೆ ಎನ್ನುತ್ತಾರೆ. ತಮ್ಮ ಮಠ ನೊಂದ ಜನರ ಸ್ವಾಂತನಕ್ಕಾಗಿ ಹಾಗು ಅವರ ಕಷ್ಟಗಳ ಪರಿಹಾರಕ್ಕಾಗಿ ಇದೆ. ಇದರ ಬೆಳವಣಿಗೆ ಇಲ್ಲಿನ ದೇವತೆಯೆ ಮಾಡುತ್ತಾರೆ ಎಂದು ನಂಬಿದ್ದಾರೆ. ಇಂದಿನ ಪೀಳಿಗೆಯ ಜನ ಹೆತ್ತವರನ್ನು ನಿರ್ಲಕ್ಷಿಸುತ್ತಿದ್ದಾರೆ. ಆದರೆ ಹೆತ್ತವರ ಆಶೀರ್ವಾದದ ವಿನಃ ನಾವು ಏನನ್ನೂ ಮಾಡಲು ಸಾಧ್ಯವಿಲ್ಲ. ಅವರೇ ಮೊದಲ ದೇವರು ಅವರಿಗೆ ಎಂದಿಗೂ ವಿಧೇಯರಾಗಿರಬೇಕು ಹಾಗು ಜೀವನದಲ್ಲಿ ಗುರುವಿನ ಪಾತ್ರ ಬಹಳ ಮುಖ್ಯವಾದುದು ಎಂಬ ಕಿವಿಮಾತನ್ನು ಜನತೆಗೆ ನೀಡುತ್ತಾರೆ.

(Copyrights owned by: billavaswarriors.com )

ಇಂತಹ ಆಧ್ಯಾತ್ಮಿಕ ಜ್ಞಾನಿ ನಮ್ಮ ಬಿಲ್ಲವ ಸಮಾಜದವರು ಎನ್ನುವುದು ಹೆಮ್ಮೆಯ ಸಂಗತಿ. ಎಲ್ಲರನ್ನು ಸಮಾನವಾಗಿ ಕಾಣುವ ಇವರ ಆಧ್ಯಾತ್ಮಿಕ ಬದುಕು ಸಮಾಜದ ಏಳಿಗೆಗೆ ಮಾರ್ಗದರ್ಶನವಾಗಲಿ ಎಂಬುದು ನಮ್ಮೆಲ್ಲರ ಆಶಯ.

ಬರಹ: ನಳಿನಿ ಎಸ್ ಸುವರ್ಣ ಜಾರ್ಕಳ ಮುಂಡ್ಲಿ.

(Copyrights owned by: billavaswarriors.com )


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »