TOP STORIES:

ಕರಾಟೆ ಪಟುವಿನಿಂದ ಆಧ್ಯಾತ್ಮಿಕ ಪಥದೆಡೆಗೆ – ಬಿಲ್ಲವ ಸಮಾಜದ ಶ್ರೀ ಬ್ರಹ್ಮಋಷಿ ಉಮಾಮಹೇಶ್ವರ ಸ್ವಾಮೀಜಿ ಜೀವನಗಾಥೆ


ಸಮಾಜದಲ್ಲಿ ಯಾರೂ ಮೇಲಲ್ಲ ಯಾರೂ ಕೀಳಲ್ಲ ಭಗವಂತನಿಗೆ ಎಲ್ಲರೂ ಸಮಾನರೆ. ಪರಸ್ಪರ ಸಹಾಯ ಮಾಡುವುದೇ ನಿಜವಾದ ಮಾನವೀಯತೆ ಎಂದು ನಂಬಿರುವವರೆ ಕಾರ್ಕಳದ ಕಲ್ಯಾ ಗ್ರಾಮದ ತ್ರಯಂಬಕೇಶ್ವರ ಅನ್ಮಪೂರ್ಣ ಮಠದ ಶ್ರೀ ಶ್ರೀ ಶ್ರೀ ಬ್ರಹ್ಮ ಋಷಿ ಉಮಾಮಹೇಶ್ವರ ಸ್ವಾಮೀಜಿ.

(Copyrights owned by: billavaswarriors.com )

ಮೂಲತಃ ಅಜೆಕಾರು ಹೆರ್ಮುಂಡೆ ಗ್ರಾಮದ ಬೊಬ್ಬರ್ಯ ಬಾಕ್ಯಾರ್ ಎಂಬ ಕೃಷಿ ಕುಟುಂಬದ ನಾರಾಯಣ ಪೂಜಾರಿ ಹಾಗು ಸುಂದರಿ ಪೂಜಾರಿ ದಂಪತಿಗಳ ಪುತ್ರನಾಗಿ ಜನಿಸಿದ ಇವರು ಯರ್ಲಪಾಡಿ ಗ್ರಾಮದಲ್ಲಿ ಬೆಳೆದರು. ಬಾಲ್ಯದಲ್ಲಿ ಬಹಳ ಚೇಷ್ಟೆ ಸ್ವಭಾವದವರಾಗಿದ್ದು ಐದನೇ ತರಗತಿಯವರೆಗಿನ ಶಿಕ್ಷಣ ಪಡೆದಿದ್ದಾರೆ.

(Copyrights owned by: billavaswarriors.com )

ಪೂರ್ವಶ್ರಮದಲ್ಲಿ ಉಮೇಶ್ ಕರ್ಕೇರ ಎಂಬ ಹೆಸರುಳ್ಳ ಇವರಿಗೆ ಆಧ್ಯಾತ್ಮಿಕ ಜೀವನಕ್ಕೆ ಸ್ಪೂರ್ತಿಯಾದವರು ಹಾಗು ಇವರಲ್ಲಿರುವ ಜ್ಞಾನದ ಶಕ್ತಿಯನ್ನು ಹೊರ ಹೊಮ್ಮುವಂತೆ ಮಾಡಿದವರು ಇವರ ಗುರುಗಳಾದ ಸುಂಕದಕಟ್ಟೆಯ ನಿರಂಜನ ಸ್ವಾಮೀಜಿಯವರು. ಮುಂಬಯಿಯಲ್ಲಿ ಉಮೇಶ ಕರ್ಕೇರವರು ನಿರಂಜನ ಸ್ವಾಮೀಜಿಯವರಿಂದ ದೀಕ್ಷೆ ಪಡೆದರು. ಮಹಾರಾಷ್ಟ್ರದಿಂದ ತವರೂರಿಗೆ ಬಂದು 2005 ರಲ್ಲಿ ಕಲ್ಯಾ ಗ್ರಾಮದಲ್ಲಿ ತ್ರಯಂಬಕೇಶ್ವರ ಅನ್ಮಪೂರ್ಣ ಮಠವನ್ನು ಸ್ಥಾಪಿಸಿದರು.ಜೀವನದಲ್ಲಿ ನಮಗೆ ತಿಳಿದಿರುವುದನ್ನು ಇತರರಿಗೂ ಕಲಿಸಬೇಕೆನ್ನುವ ಇವರು ಕರಾಟೆ ಭೋಧಕರಾಗಿದ್ದು. ಮಹಾರಾಷ್ಟ್ರದಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸದೆ ಕರಾಟೆ ಕಲಿಸುತ್ತಿದ್ದರು ಹಾಗು ಕಮಾಂಡೊಗಳಿಗೆ ತರಬೇತಿ ನೀಡುತ್ತಿದ್ದರು. ಇನ್ನು ಮುಂದೆಯೂ ಅನೇಕ ಕಲೆ ಹಾಗು ಆಟಗಳನ್ನು ಮಠದಲ್ಲಿಯೂ ಪ್ರಾರಂಭಿಸುವ ಯೋಜನೆ ಹೊಂದಿದ್ದಾರೆ.(Copyrights owned by: billavaswarriors.com )

ಮಾನವರು ಸ್ವಾರ್ಥಿಗಳು ಹಾಗು ಅವರು ನಿರೀಕ್ಷೆಗಳೊಂದಿಗೆ ಬದುಕುತ್ತಾರೆ ಆದರೆ ಭಗವಂತ ಮಾತ್ರ ಯಾವುದೇ ನಿರೀಕ್ಷೆಗಳಿಲ್ಲದೆ ನಮ್ಮನ್ನು ಪ್ರೀತಿಸುತ್ತಾನೆ. ಹಾಗೆಯೇ ಆಧ್ಯಾತ್ಮಿಕ ಗುರುವಾದವನು ಎಂದಿಗೂ ತನ್ನ ಭಕ್ತನಿಗೆ ಹಣದ ಬೇಡಿಕೆಯಿಡುವುದಿಲ್ಲ ಭಕ್ತ ತೋರಿಸುವ ಭಕ್ತಿಯೆ ದೊಡ್ಡ ಆಸ್ತಿಯಾಗಿರುತ್ತದೆ ಎನ್ನುತ್ತಾರೆ. ತಮ್ಮ ಮಠ ನೊಂದ ಜನರ ಸ್ವಾಂತನಕ್ಕಾಗಿ ಹಾಗು ಅವರ ಕಷ್ಟಗಳ ಪರಿಹಾರಕ್ಕಾಗಿ ಇದೆ. ಇದರ ಬೆಳವಣಿಗೆ ಇಲ್ಲಿನ ದೇವತೆಯೆ ಮಾಡುತ್ತಾರೆ ಎಂದು ನಂಬಿದ್ದಾರೆ. ಇಂದಿನ ಪೀಳಿಗೆಯ ಜನ ಹೆತ್ತವರನ್ನು ನಿರ್ಲಕ್ಷಿಸುತ್ತಿದ್ದಾರೆ. ಆದರೆ ಹೆತ್ತವರ ಆಶೀರ್ವಾದದ ವಿನಃ ನಾವು ಏನನ್ನೂ ಮಾಡಲು ಸಾಧ್ಯವಿಲ್ಲ. ಅವರೇ ಮೊದಲ ದೇವರು ಅವರಿಗೆ ಎಂದಿಗೂ ವಿಧೇಯರಾಗಿರಬೇಕು ಹಾಗು ಜೀವನದಲ್ಲಿ ಗುರುವಿನ ಪಾತ್ರ ಬಹಳ ಮುಖ್ಯವಾದುದು ಎಂಬ ಕಿವಿಮಾತನ್ನು ಜನತೆಗೆ ನೀಡುತ್ತಾರೆ.

(Copyrights owned by: billavaswarriors.com )

ಇಂತಹ ಆಧ್ಯಾತ್ಮಿಕ ಜ್ಞಾನಿ ನಮ್ಮ ಬಿಲ್ಲವ ಸಮಾಜದವರು ಎನ್ನುವುದು ಹೆಮ್ಮೆಯ ಸಂಗತಿ. ಎಲ್ಲರನ್ನು ಸಮಾನವಾಗಿ ಕಾಣುವ ಇವರ ಆಧ್ಯಾತ್ಮಿಕ ಬದುಕು ಸಮಾಜದ ಏಳಿಗೆಗೆ ಮಾರ್ಗದರ್ಶನವಾಗಲಿ ಎಂಬುದು ನಮ್ಮೆಲ್ಲರ ಆಶಯ.

ಬರಹ: ನಳಿನಿ ಎಸ್ ಸುವರ್ಣ ಜಾರ್ಕಳ ಮುಂಡ್ಲಿ.

(Copyrights owned by: billavaswarriors.com )


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »