TOP STORIES:

ಕಾರು ಅಪಘಾತವಾದರು, ಬೆಳಿಗ್ಗೆ ಮನೆಯಲ್ಲಿ ಸಾರ್ವಜನಿಕರ ಭೇಟಿಗೆ ಹಾಜರ್- ಇದು ಕೋಟಾ ಶ್ರೀನಿವಾಸ ಪೂಜಾರಿಯವರ ಪವರ್


ರಾತ್ರಿ ಬೆಂಗಳೂರಿನಲ್ಲಿ ಕಾರು ಅಪಘಾತ, ಬೆಳಿಗ್ಗೆ ಮನೆಯಲ್ಲಿ ಸಾರ್ವಜನಿಕರ ಭೇಟಿಗೆ ಹಾಜರ್-ಇದು ಕೋಟಾ ಶ್ರೀನಿವಾಸ ಪೂಜಾರಿಯವರ ಪವರ್

ಇತ್ತೀಚಿಗೆ ಖ್ಯಾತ ಮಹರ್ಷಿ ಆನಂದ ಗುರೂಜಿಯವರು ಕೋಟ ಶ್ರೀನಿವಾಸ ಪೂಜಾರಿಯವರ ಬಗ್ಗೆ ಒಂದು ಮಾತು ಹೇಳಿದ್ದರು. “ಬೆಳಿಗ್ಗೆ ಎದ್ದು ಸಚಿವರ ಮನೆಯ ಮುಂದೆ ಹೋದರೆ ಅಲ್ಲಿರುವ ಜನರ ಜಂಗುಳಿಯೇ ಅವರ ಕಾರ್ಯವೈಖರಿಯನ್ನು ಸಾರುತ್ತದೆ.

ಇಂತಹ ಸಚಿವರು ಟಾರ್ಚ್ ಹಾಕಿ ಹುಡುಕಿದರೂ ಸಿಗಲ್ಲ” ಎಂದು. ಈ ಬಾರಿ ಒಂದು ಅಹಿತಕರ ಘಟನೆಯೊಂದಿಗೆ ಅದು ಮತ್ತೆ ಸಾಬೀತಾಗಿದೆ. ನಿನ್ನೆ ಬೆಂಗಳೂರಿನಲ್ಲಿ ಅವಿರತ ಸರ್ಕಾರಿ ಸಭೆಗಳನ್ನು ಮುಗಿಸಿ ಊರಿನತ್ತ ಪ್ರಯಾಣ ಬೆಳೆಸುತ್ತಿರುವ ಸಂದರ್ಭದಲ್ಲಿ ತಮ್ಮ ಕಾರು ಅಪಘಾತಕ್ಕೀಡಾಗಿತ್ತು. ಅಪಘಾತ ಎಂದಮೇಲೆ ಅಲ್ಲಿ ನಂತರ ನಡೆಯುವ ಬೆಳವಣಿಗಳು ಗೊತ್ತೇ ಇದೆ. ‌ಪ್ರಕರಣ, ಸಮಾಧಾನ ಅದು ಇದು ಎಂದು ಕೆಲವೊಂದು ಫಾರ್ಮಲಿಟೀಸ್ ಇದೆ. ಎಲ್ಲಾ ಮುಗಿಸಿ ಬೇರೆ ಕಾರು ತರಿಸಿ ಕೋಟಾ ದ ತಮ್ಮ ಮನೆಗೆ ತಲುಪುವಾಗ ಮುಂಜಾನೆ 4 ಗಂಟೆ.

ಇಂದಿನ ದಿನಚರಿಯಲ್ಲಿ ಮನೆಯಲ್ಲಿ ಸಾರ್ವಜನಿಕ ಭೇಟಿ ಎಂದಿತ್ತು. ಬಹುಶಃ ಎಲ್ಲರೂ ಇದು ಅಸಾಧ್ಯ ಎಂದೆನಿಸಿರಬಹುದು.ಆದರೆ ಅವರು ಅದನ್ನೂ ಸಾಧಿಸಿ ತೋರಿಸಿದ್ದಾರೆ. ತಮ್ಮ ವೇಳಾಪಟ್ಟಿಯಂತೆ ಬೆಳಿಗ್ಗೆ 7 ಗಂಟೆಗೆ ಸಾರ್ವಜನಿಕರ ಭೇಟಿಗೆ ಹಾಜರಾಗಿದ್ದಾರೆ. 10 ಗಂಟೆಗೆ ಮಲಗಿ 7 ಗಂಟೆಗೆ ಏಳಲೂ ಕಷ್ಟವಾಗುವ ಈಗಿನ ಕಾಲದಲ್ಲಿ ಪ್ರತಿದಿನ ತಡರಾತ್ರಿ ಮಲಗಿ ಬೆಳಗೆದ್ದು ಸಾರ್ವಜನಿಕರ ಸಮಸ್ಯೆ ಆಲಿಸುವ ಸಚಿವರು ವಿಶೇಷವಾಗಿಯೇ ಕಾಣುತ್ತಾರೆ. ರಾಜ್ಯದಲ್ಲಿ ಅದೆಷ್ಟೇ ಸಜ್ಜನ ಸಚಿವರು ಇರಬಹುದು.

ಆದರೆ ಕೋಟ ಶ್ರೀನಿವಾಸ ಪೂಜಾರಿ ಎಲ್ಲರಿಗಿಂತಲೂ ಭಿನ್ನ ಅವರಿಗೆ ಅವರೇ ಸಾಟಿ.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »