TOP STORIES:

ಕುಂಬ್ರ :ಅಕ್ಷಯ ಗ್ರೂಪ್ ಸಮೂಹ ಸಂಸ್ಥೆಗಳ ಸುಸಜ್ಜಿತ ಅಕ್ಷಯ ಆರ್ಕೇಡ್ ಲೋಕಾರ್ಪಣೆ


  • ಪುತ್ತೂರು, ಅ. 17: ಉದ್ಯಮಿ ಜಯಂತ್ ನಡುಬೈಲು ಮಾಲಕತ್ವದ ಅಕ್ಷಯ ಗ್ರೂಪ್ ಸಮೂಹ ಸಂಸ್ಥೆಗಳ ಸುಸಜ್ಜಿತ ಅಕ್ಷಯ ಆರ್ಕೇಡ್ ರವಿವಾರ ( ಅ 17) ಕುಂಬ್ರದಲ್ಲಿ ಲೋಕಾರ್ಪಣೆಗೊಂಡಿತು.ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಕಚೇರಿ ಉದ್ಘಾಟಿಸಿದರು, ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕುಂಬ್ರ ಜಂಕ್ಷನ್‌ನಲ್ಲಿ ನಿರ್ಮಾಣಗೊಂಡಿರುವ ಸುಂದರ ಹಾಗೂ ಸುಸಜ್ಜಿತ ಅರ್ಕೆಡ್‌  ವಾಣಿಜ್ಯ ಹಾಗೂ  ವಸತಿ  ಸಂಕೀರ್ಣವನ್ನು ಹೊಂದಿದೆ. ಅಲ್ಲದೆ 250 ಆಸನಗಳ ಹವಾನಿಯಂತ್ರಿತ ಸಭಾಭವನ, 200 ಆಸನಗಳ ಮಿನಿಹಾಲ್, 1000  ಆಸನ ವ್ಯವಸ್ಥೆಯಿರುವ ಕಲ್ಯಾಣ ಮಂಟಪ ಮತ್ತು ಡೈನಿಂಗ್ ಹಾಲ್ ವ್ಯವಸ್ಥೆಯನ್ನು ಹೊಂದಿದೆ.  ಈ ಸಂಕೀರ್ಣವೂ ವಿಶಾಲವಾದ ಪಾರ್ಕಿಂಗ್ ಸೌಕರ್ಯ ಹೊಂದಿದ್ದು,ಇಲ್ಲಿ   ಸ್ವಚ್ಛತೆಗೆ ವಿಶೇಷ  ಆದ್ಯತೆ ನೀಡಲಾಗುತ್ತಿದೆ.

ಪುತ್ತೂರಿನ ಬೆಳವಣಿಗೆಗೆ ಪೂರಕವಾಗಿ ನಿರ್ಮಾಣಗೊಂಡಿರುವ ಅಕ್ಷಯ ಆರ್ಕೇಡ್ ಯಶಸ್ಸು ಕಾಣಲಿ ಎಂದು ಸಚಿವ ಕೋಟ ಶುಭ ಹಾರೈಸಿದರು ಬೆಂಗಳೂರು ಸೋಲೂರು ಮಠದ ಆರ್ಯ ಮಹಾಸಂಸ್ಥಾನದ ವಿಖ್ಯಾತನಂದ ಸ್ವಾಮೀಜಿಯವರು ನೂತನ ಸಂಕೀರ್ಣ ಉದ್ಘಾಟಿಸಿ ಸ್ವಪ್ರಯತ್ನ ಶ್ರದ್ಧೆಯ ಪ್ರಯತ್ನದಿಂದ ಯಶಸ್ಸು ಸಾಧ್ಯ ಅನ್ನುವುದನ್ನು ಜಯಂತ ನಡುಬೈಲು ಅವರು ತೋರಿಸಿಕೊಟ್ಟಿದ್ದಾರೆ ಎಂದರು ವಿಟ್ಲ ಕಣಿಯೂರು ಶ್ರೀ ಚಾಮುಂಡೇಶ್ವರಿ ಕ್ಷೇತ್ರದ  ಶ್ರೀ ಮಹಾಬಲ ಸ್ವಾಮೀಜಿ ಮಾತನಾಡಿ, ಇಚ್ಛಾಶಕ್ತಿ, ಕ್ರಿಯಾ, ಜ್ಞಾನ ಶಕ್ತಿಯಿಂದ ಯಶಸ್ಸು ಸಾಧ್ಯ ಎನ್ನುವುದಕ್ಕೆ ನಡುಬೈಲು ಅವರು ಉದಾಹರಣೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಸಂಜೀವ ಮಠಂದೂರು ಅವರು ಮಾತನಾಡಿ ಜಯಂತ ನಡುಬೈಲು ಅವರು ಶಿಕ್ಷಣ, ಧಾರ್ಮಿಕ, ಸಾಮಾಜಿಕ, ಉದ್ಯಮ ಕ್ಷೇತ್ರದಲ್ಲಿ ಸಾಕಷ್ಟು ಕೊಡುಗೆ ನೀಡಿದ್ದಾರೆ ಎಂದರು.ಕುಕ್ಕುಟೋದ್ಯಮದಲ್ಲಿ ಬಾರೀ ಯಶಸ್ವಿ ಗಳಿಸಿರುವ ನೂತನ ಸಂಕೀರ್ಣದ ಮಾಲಕ ಜಯಂತ್ ನಡುಬೈಲು ಅವರು  ಪ್ರಾಸ್ತವಿಕವಾಗಿ ಮಾತನಾಡಿ “ ಕೇವಲ ನೂರು ಕೋಳಿಗಳಿಂದ  ವ್ಯವಹಾರ ಜೀವನವನ್ನು ಆರಂಭಿಸಿದ ನಾನು ಇಂದು ಒಂದು  ಲಕ್ಷಕ್ಕೂ ಮಿಕ್ಕಿ ಕೋಳಿಗಳನ್ನು ಸ್ವತಃ ಉತ್ಪಾದನೆ ಮಾಡುತ್ತಿದ್ದೇನೆ . ಅಲ್ಲದೇ 150 ಕ್ಕೂ ಹೆಚ್ಚು  ಕೋಳಿ ಬೆಳೆಗಾರ ರೈತರ ಜತೆ  ಇಂಟಿಗ್ರೇಶನ್, ಕಾಂಟ್ರಾಕ್ಟ್ ಮಾಡಿಕೊಂಡು ಕೋಳಿಯನ್ನು ಉತ್ಫಾಧಿಸಲಾಗುತ್ತಿದೆ. ಕೆಲ ವರ್ಷಗಳ ಹಿಂದೆ ಆರಂಭಿಸಿದ ಅಕ್ಷಯ ಗ್ರೂಪ್‌ ಶಿಕ್ಷಣ ಸಂಸ್ಥೆಯೂ ಜಾಬ್ ಗ್ಯಾರಂಟಿ ವಿಜ್ಞಾನ ಹಾಗೂ ವಾಣಿಜ್ಯ ಕೋರ್ಸ್‌ಗಳನ್ನು ನಡೆಸುತ್ತಿದ್ದೂ ವಿದ್ಯಾರ್ಥಿಗಳ ಹಾಗೂ ಪೋಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಇದೇ ರೀತಿ ಈ ನೂತನ ಅರ್ಕೇಡ್‌ ಗೂ ಗ್ರಾಹಕರ ಪ್ರೀತಿ ವಿಶ್ವಾಸ ಸಿಗಲಿ ಎಂದು ಹೇಳಿದರು.

 

ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಕೆದಂಬಾಡಿ ಗ್ರಾ. ಪಂ.ಅಧ್ಯಕ್ಷ ರತನ್, ಒಳಮೊಗ್ರು ಗ್ರಾ.ಪಂ. ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಬ್ರಹಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ತಾಲೂಕು ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ, ಗೆಜ್ಜೆಗಿರಿ ಕ್ಷೇತ್ರದ ಉಪಾಧ್ಯಕ್ಷ ಪೀತಾಂಬರ ಹೆರಾಜೆ, ಸಂಪ್ಯ ಠಾಣೆಯ ಠಾಣಾಧಿಕಾರಿ ಎಂ. ವೈ. ಉದಯರವಿ, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಡಾ| ರಾಜಾರಾಂ ಕೆ.ಬಿ, ಉದ್ಯಮಿ ಕೆ. ಸಿ. ಸಾದಿಕ್, ಪುತ್ತೂರು ರೋಟರಿ ಪೂರ್ವ ಅಧ್ಯಕ್ಷ ಪುರಂದರ ರೈ, ಕುಂಬ್ರ ಶ್ರೀರಾಮ ಭಜನ ಮಂದಿರದ ಅಧ್ಯಕ್ಷ ಬಾಬು ಪೂಜಾರಿ ಬಡಕ್ಕೋಡಿ, ಡಾ| ಯು. ಪಿ.ಶಿವಾನಂದ, ಅಕ್ಷಯ ಗ್ರೂಪ್‌ನ ಕಲಾವತಿ ಜಯಂತ್ ಉಪಸ್ಥಿತರಿದ್ದರು.

ಈ ಸಂದರ್ಭ ಉದ್ಯಮಿ ಸಂತೋಷ್ ಕುಮಾರ್ ಕೊಟ್ಟಿಂಜ ಅವರನ್ನು ಸಮ್ಮಾನಿಸಲಾಯಿತು. ಶಶಿಧರ್ ಕಿನ್ನಿಮಜಲು ಮತ್ತು ಭವ್ಯಶ್ರೀ ಕೋಟ್ಯಾನ್ ನಿರೂಪಿಸಿದರು.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »