TOP STORIES:

ಕುದ್ರೋಳಿ ಗುರುಬೆಳದಿಂಗಳು ಫೌಂಡೇಶನ್ ಅಬ್ಬಕ್ಕ ಸಾಲು ಮರ ಯೋಜನೆ, ಬಡವರ ಸೇವೆ ಜತೆಗೆ ಪರಿಸರ ಕಾಳಜಿ


 

 

ಮಂಗಳೂರು: ಪರಿಸರ ಜಾಗೃತಿ, ಸ್ವಚ್ಛತೆ ಕಾರ್ಯಕ್ರಮ ಇಂದಿನ ಅಗತ್ಯ. ಬಡವರ ಸೇವೆ ಜತೆಗೆ ಪರಿಸರ ಕಾಳಜಿ ಮೂಡಿಸುತ್ತಿರುವ ಗುರುಬೆಳದಿಂಗಳು ಫೌಂಡೇಶನ್ ಕಾರ್ಯ ಶ್ಲಾಘನೀಯ ಎಂದು ಉಳ್ಳಾಲ ಶಾಸಕ ಯು.ಟಿ.ಖಾದರ್ ಹೇಳಿದರು.

ಗುರುಬೆಳದಿಂಗಳು ಫೌಂಡೇಶನ್ ಕುದ್ರೋಳಿ ವತಿಯಿಂದ ಮಂಗಳೂರು ವಲಯ ಅರಣ್ಯ ಇಲಾಖೆ, ಪರಿಸರ ಪ್ರೇಮಿ ಮಾಧವ ಉಳ್ಳಾಲ್ ಅವರ ಸಹಕಾರದಲ್ಲಿ ಉಳ್ಳಾಲ ಅಬ್ಬಕ್ಕನ ಪ್ರತಿಮೆಯಿಂದ ಉಳ್ಳಾಲಬೈಲ್ ಪ್ರದೇಶದವರೆಗೆ ‘ಅಬ್ಬಕ್ಕ ಸಾಲುಮರ ಯೋಜನೆ’ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಉಳ್ಳಾಲ ಕ್ಷೇತ್ರ ಎಲ್ಲ ಪ್ರಮುಖ ರಸ್ತೆಗಳ ಇಕ್ಕೆಲಗಳಲ್ಲಿ ಸಾಲು ಮರ ಅಭಿವೃದ್ಧಿಪಡಿಸುವ ಯೋಜನೆ ರೂಪಿಸುವ ಮೂಲಕ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಒತ್ತು ನೀಡಲಾಗುವುದು ಎಂದರು.

 

ಉಳ್ಳಾಲ ಸಯ್ಯದ್ ಮದನಿ ದರ್ಗಾ ಅಧ್ಯಕ್ಷ ಅಬ್ದುಲ್ ರಶೀದ್ ಮಾತನಾಡಿ, ಗುರುಬೆಳದಿಂಗಳು ಸಂಸ್ಥೆ ಶಾಂತಿ ಮತ್ತು ಸೌಹಾರ್ದತೆಯ ಕೊಂಡಿಯಾಗಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.

ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ ಪದ್ಮರಾಜ್ ಆರ್. ಅಧ್ಯಕ್ಷತೆ ವಹಿಸಿದ್ದರು. ವಲಯ ಅರಣ್ಯ ಇಲಾಖಾ ಅಧಿಕಾರಿ ಮಹಾಬಲ, ಅರಣ್ಯ ರಕ್ಷಕಿ ಸೌಮ್ಯಾ, ಉಳ್ಳಾಲ ನಗರಸಭೆ ಪೌರಾಯುಕ್ತೆ ವಿದ್ಯಾ, ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್, ಉದ್ಯಮಿಗಳಾದ ಧರ್ಮರಾಜ್ ಅಮ್ಮುಂಜೆ, ಸತೀಶ್ ಕುಮಾರ್ ಬಜಾಲ್, ಯುವವಾಹಿನಿ ಕೊಲ್ಯ ಘಟಕ ಅಧ್ಯಕ್ಷ ಮೋಹನ್ ಮಾಡೂರು, ಕಣಚೂರು ಮೆಡಿಕಲ್ ಕಾಲೇಜು ಲೆಕ್ಕಪರಿಶೋಧಕ ಯು.ಎ.ಪ್ರೇಮನಾಥ್, ಸಾಮಾಜಿಕ ಕಾರ್ಯಕರ್ತ ಉದಯ ಆರ್.ಕೆ, ಉಳ್ಳಾಲ ಮೊಗವೀರ ಸಂಘ ಅಧ್ಯಕ್ಷ ಮನೋಜ್ ಸಾಲ್ಯಾನ್, ಹೈಕೋರ್ಟ್ ವಕೀಲೆ ರಾಜಲಕ್ಷ್ಮೀ ಸುವರ್ಣ, ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ಅನಿಲ್ ಪೂಜಾರಿ, ಮಂಗಳೂರು ವಿಶ್ವವಿದ್ಯಾಲಯ ನಾರಾಯಣಗುರು ಅಧ್ಯಯನ‌ ಪೀಠ ಸದಸ್ಯೆ ನಮಿತಾ ಶ್ಯಾಮ್, ಬಿಲ್ಲವ ಸಂಘ ಬಂಡಿಕೊಟ್ಯ ಅಧ್ಯಕ್ಷ ಪ್ರಶಾಂತ್, ಕಾರ್ಯದರ್ಶಿ ಮಮತಾ, ಕೊಲ್ಯ ಬಿಲ್ಲವ ಸಂಘದ ಟ್ರಸ್ಟ್ ಅಧ್ಯಕ್ಷ ವೇಣುಗೊಪಾಲ್, ಕಾರ್ಯದರ್ಶಿ ಭಾಸ್ಕರ್ ಮಡ್ಯಾರ್ , ಧರ್ಮಸ್ಥಳ ಗ್ರಾಮಾಭಿವೃದ್ಧಿ ಉಳ್ಳಾಲ ಘಟಕ ಯೋಜನಾಧಿಕಾರಿ ಜಯಂತಿ, ಲೋಹಿತ್, ವಿವಿಧ ಸಂಸ್ಥೆಗಳ ಸದಸ್ಯರು ಇದ್ದರು. ಕುಸುಮಾಕರ್ ಕುಂಪಲ ಕಾರ್ಯಕ್ರಮ‌ ನಿರೂಪಿಸಿದರು. ಗುರು ಬೆಳದಿಂಗಳು ಫೌಂಡೇಶನ್ ಪ್ರಧಾನ‌ ಕಾರ್ಯದರ್ಶಿ ರಾಜೇಶ್ ಸುವರ್ಣ ವಂದಿಸಿದರು.


Related Posts

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »