TOP STORIES:

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬಿಲ್ಲವ ಸಮಾಜದ ಅಭ್ಯುದಯದ ಸಮಾಲೋಚನಾ ಸಭೆಯಲ್ಲಿ ಸಭೆಯಲ್ಲಿ 500 ಕ್ಕೂ ಹೆಚ್ಚು ಸಮಾಜದ ಪ್ರಮುಖರು ಭಾಗವಹಿಸಿದರು


ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಭಾನುವಾರ ಫೆಬ್ರವರಿ 27ರಂದು ಗೌರವಾನ್ವಿತ ಬಿ. ಜನಾರ್ದನ ಪೂಜಾರಿ ಉಪಸ್ಥಿತಿಯಲ್ಲಿನಡೆದ ಬಿಲ್ಲವ ಸಮಾಜದ ಅಭ್ಯುದಯದ ಸಮಾಲೋಚನಾ ಸಭೆಯಲ್ಲಿ 500 ಕ್ಕೂ ಹೆಚ್ಚು ಸಮಾಜದ ಪ್ರಮುಖರು ಭಾಗವಹಿಸಿಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಸಭೆಯಲ್ಲಿ ಉಡುಪಿ, .., ಕಾಸರಗೋಡು, ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ಬಿಲ್ಲವಸಂಘ/ಸಂಸ್ಥೆ/ಕ್ಷೇತ್ರಗಳ ಪದಾಧಿಕಾರಿಗಳು ಹಾಗೂ ಸದಸ್ಯರು  ಪಾಲ್ಗೊಂಡು, ಪ್ರಸ್ತುತ ಸಮಾಜ ಎದುರಿಸುತ್ತಿರುವ ಸಮಸ್ಯೆಗಳನ್ನುಮೆಟ್ಟಿನಿಂತು ಮುನ್ನಡೆಯಲು ಹಲವಾರು ಸಲಹೆ ಸೂಚನೆಗಳನ್ನು ನೀಡಿದರು. ಪ್ರಮುಖ ಅಂಶಗಳು :

1. ಬಿಲ್ಲವ ಸಮಾಜದ ಪ್ರಸ್ತುತ ಆರ್ಥಿಕ/ಸಾಮಾಜಿಕ/ಶೈಕ್ಷಣಿಕ ಸ್ಥಿತಿಗತಿಗಳನ್ನು ತಿಳಿಯಲು ಆಯಾ ಸಂಘದ ವ್ಯಾಪ್ತಿಯ ಗ್ರಾಮಮಟ್ಟದಲ್ಲಿ ಪ್ರತಿ ಕುಟುಂಬಗಳ ಸಮೀಕ್ಷೆ

2. ನಾರಾಯಣ ಗುರುಗಳ ತತ್ವದನುಸಾರ ಪ್ರತಿ ಸಂಘ ಸಂಸ್ಥೆಗಳು ಶಿಕ್ಷಣಕ್ಕೆ ಒತ್ತು ನೀಡಿ, ವಿಧ್ಯಾಭ್ಯಾಸಕ್ಕೆ ಸಹಕಾರ ಮತ್ತುಉದ್ಯೋಗಕ್ಕೆ ಪೂರಕವಾದ ತರಬೇತಿ ಒದಗಿಸುವುದು

3. ಬಿಲ್ಲವ ಸಮಾಜದ ಕ್ಷೇತ್ರ/ಮಂದಿರಗಳಲ್ಲಿ ಸಂಸ್ಕಾರಯುತ ಶ್ರೀ ನಾರಾಯಣ ಗುರು ತತ್ವಾದರ್ಶಗಳ ಧಾರ್ಮಿಕ ಶಿಕ್ಷಣ ಕೇಂದ್ರಆರಂಭಿಸುವುದು

4. ಸಂಘ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿನ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಸೂಕ್ತ ನೆರವು ದೊರಕುವಂತೆ ಸಹಕರಿಸುವುದು

5. ಸಮಾಜದ ಅಭಿವೃದ್ಧಿಗೆ ಅಗತ್ಯವಾದ ನಿಗಮ ಮಂಡಳಿಗಳ ಸ್ಥಾಪನೆಗೆ ಮನವಿ/ಒತ್ತಾಯ

6. ವಿಮಾನ ನಿಲ್ದಾಣ, ರೈಲ್ವೇ ನಿಲ್ದಾಣ, ಆಸ್ಪತ್ರೆ ಮುಂತಾದ ಪ್ರಮುಖ ಸಾರ್ವಜನಿಕ ಕೇಂದ್ರಗಳಿಗೆ ಬ್ರಹ್ಮಶ್ರೀ ನಾರಾಯಣಗುರುಹಾಗೂ ಕೋಟಿ ಚೆನ್ನಯರ ಹೆಸರು ಇಡುವಂತೆ ಒತ್ತಾಯ

7. ಸಮಾಜ ಬಾಂಧವರಿಗೆ ಉಪಯುಕ್ತವಾದ ಹಿಂದುಳಿದ ವರ್ಗಗಳಿಗೆ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ಹಾಗೂ ನೆರವು ನೀಡಲುಒಂದು ತಂಡದ ರಚನೆ

8. ಬಿಲ್ಲವ ಸಮಾಜದ ಸಂಘ ಸಂಸ್ಥೆಗಳಲ್ಲಿ ಯಾವುದೇ ಪಕ್ಷಗಳು ರಾಜಕೀಯ ಪ್ರೇರಿತ ವಿಚಾರಗಳ ಮೂಲಕ ಸಮಾಜವನ್ನುಒಡೆಯುವ ಪ್ರಯತ್ನ ನಡೆಸದಂತೆ ಎಚ್ಚರ ವಹಿಸುವುದು

ಕೊನೆಯದಾಗಿ ಮಾತನಾಡಿದ ಸನ್ಮಾನ್ಯ ಜನಾರ್ದನ ಪೂಜಾರಿಯವರು, ಸಭೆಯಲ್ಲಿ ಸೇರಿದ ಜನಸ್ತೋಮ ಕಂಡು ಸಂತಸವ್ಯಕ್ತಪಡಿಸುತ್ತಾ ಇಂತಹ ಸಮಾಜದ ಅಭಿವೃದ್ಧಿಯ ಚಟುವಟಿಕೆ ಗಳಿಗೆ ಶ್ರೀ ಗೋಕರ್ಣನಾಥ ದೇವರ ಮತ್ತು ಬ್ರಹ್ಮ ಶ್ರೀ ನಾರಾಯಣಗುರುಗಳ ಕೃಪಾಶೀರ್ವಾದ ಮಾಡಿದ್ದಾರೆ  ಇದರಿಂದಾಗಿಯೇ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಪ್ರಮುಖರು ಶ್ರೀ ಕ್ಷೇತ್ರದಲ್ಲಿ ಸೇರಿದ್ದಾರೆಎಂದರು. ಸಮಾಜದ ಅಭ್ಯುದಯಕ್ಕೆ ಸಂಕಲ್ಪ ತೊಟ್ಟಿರುವ ಎಲ್ಲರಿಗೂ ಕುದ್ರೋಳಿ ಗೋಕರ್ಣನಾಥ ಸಹಿತ ಪರಿವಾರ ದೇವತೆಗಳಹಾಗೂ ಬ್ರಹಶ್ರೀ ನಾರಾಯಣ ಗುರುಗಳ ಅನುಗ್ರಹವಿರಲಿ ಎಂದು ಹಾರೈಸಿದರು.

ವೇದಿಕೆಯಲ್ಲಿ  ಬ್ರಹ್ಮ ಶ್ರೀ ನಾರಾಯಣ ಗುರುಗಳ ಫೋಟೋ ಹಾಗೂ ಬಿಲ್ಲವ ಸಮಾಜದ ಅಗ್ರಮಾನ್ಯ ನಾಯಕರಾದ ಜನಾರ್ದನಪೂಜಾರಿಯವರು ಮಾತ್ರ ಇದ್ದು ಉಳಿದ ಸಮಾಜದ ಪ್ರಮುಖರೆಲ್ಲ ವೇದಿಕೆಯ ಮುಂಭಾಗದಲ್ಲಿ ಕುಳಿತು ಸಮಾಜ ಒಗ್ಗಟ್ಟಿನಿಂದಮಾಡ ಬೇಕಾದ ಕೆಲಸ ಕಾರ್ಯಗಳ ಬಗ್ಗೆ ಒಬ್ಬೊಬ್ಬರಾಗಿ ಮುಂದೆ ಬಂದು ತಮ್ಮ ಸಲಹೆಗಳನ್ನು ನೀಡಿದರು. ಸಲಹೆಗಳ ಆಧಾರದಮೇಲೆ, ಕಾರ್ಯಚಟುವಟಿಕೆಯ ಚೌಕಟ್ಟನ್ನು ರಚಿಸಿ, ಮುಂದಿನ ದಿನಗಳಲ್ಲಿ ಜಿಲ್ಲಾ/ತಾಲೂಕು ಮಟ್ಟದಲ್ಲಿ ಸಭೆಗಳನ್ನುನಡೆಸುವುದೆಂದು ತೀರ್ಮಾನಿಸಲಾಯಿತು.


Related Posts

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »