TOP STORIES:

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸಾಮೂಹಿಕ ಯೋಗಾಸನ ಸಹಿತ ಹನುಮಾನ್ ನಮಸ್ಕಾರ ಹಾಗೂ ಹನುಮಾನ್ ಚಾಲೀಸಾ ಪಠಣ ಕಾರ್ಯಕ್ರಮ


ಎಸ್.ಪಿ.ವೈ.ಎಸ್.ಎಸ್ ಯೋಗ ಸಮಿತಿಯ ವತಿಯಿಂದ ಭಾನುವಾರ ಯೋಗಾಸನ ಸಹಿತ ಹನುಮಾನ್ ನಮಸ್ಕಾರ ಹಾಗೂ ಹನುಮಾನ್ ಚಾಲೀಸಾ ಪಠಣ ಹಾಗೂ ಅರ್ಚನೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಶ್ರೀ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಎಸ್.ಪಿ.ವೈ.ಎಸ್.ಎಸ್ ಜಿಲ್ಲಾ ಸಂಚಾಲಕರಾದ ಅಶೋಕ್ ಕುಮಾರ್ ಜೈನ್ , ಪ್ರಾಂತ ಸಂಚಾಲಕರಾದ ರವೀಶ್ ಕುಮಾರ್ ,ವಲಯ ಸಂಚಾಲಕರಾದ ಗೋಕುಲ್ ನಾಥ್ ಶೆಣೈ, ರಮಣೆ ಶೆಟ್ಟಿ ದೀಪ ಪ್ರಜ್ವಲನೆ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಬೆಳಗ್ಗೆ 4:45 ರಿಂದ 7:00 ಗಂಟೆಯವರೆಗೆ ಕಾರ್ಯಕ್ರಮ ನಡೆಯಿತು.

ಹನುಮಾನ್ ನಮಸ್ಕಾರ ಮತ್ತು ಹನುಮಾನ್ ಚಾಲಿಸ ಮಹತ್ವವನ್ನು ಕಾವೂರು ನಗರ ಸಂಚಾಲಕರಾದ ಕನಕ ಅಮೀನ್ ತಿಳಿಸಿದರು.
ಸಾವಿರಾರು ಯೋಗಪಟುಗಳು ಸಾರ್ವಜನಿಕರೊಂದಿಗೆ ಭಕ್ತಿಭಾವದಿಂದ ದೇವಾಲಯದ ಸುತ್ತಲೂ ಶಿಸ್ತುಬದ್ಧವಾಗಿ ಸಾಲಾಗಿ ಕುಳಿತು ಹನುಮಾನ್ ಚಾಲಿಸ ಪಠಿಸಿದರು.

ಪ್ರಾಂತ ಸಂಚಾಲಕರಾದ ಹರೀಶ್ ಕೋಟ್ಯಾನ್ , ಕ್ಷೇತ್ರದ ಕಾರ್ಯದರ್ಶಿ ಮಾಧವ,ವ್ಯವಸ್ಥಾಪಕ ವೀನಿತ್ ಜಿಲ್ಲಾ ಸಹಸಂಚಾಲಕರಾದ ಲಕ್ಷ್ಮೀನಾರಾಯಣ ,ಪ್ರತಾಪ್ ರಾವ್ ಜಿಲ್ಲಾ ಪ್ರಮುಖರಾದ ನಾರಾಯಣ ಶಬರಾಯ,ಚಂದ್ರಶೇಖರ, ನಗರ ಪ್ರಮುಖರಾದ ಹರೀಶ್ ಅಂಚನ್,ಆನಂದ ಕುಂಟಿನಿ, ಪ್ರಶಾಂತ್ ಈಶ್ವರ್ ಕೊಟ್ಟಾರಿ ಉಮೇಶ್,ವಸಂತ,ಪ್ರಸಾದ್ ಸಿದ್ದಕಟ್ಟೆ ಲೋಕೇಶ್ ಪೊಳಲಿ, ರೇಖಾ ,ಜಯಂತಿ ಕಟೀಲು,ಗೀತಾ ಶೆಟ್ಟಿ,ಜಯರಾಮ ಜೆಂಬುಗುಡ್ಡೆ ಪ್ರಭಾವತಿ ಭಾಗವಹಿಸಿದ್ದರು.ದಯಾನಂದ ಕಟೀಲು ಹಾಗೂ ತಂಡದವರು ಹನುಮಾನ್ ಚಾಲಿಸ ಪಠಣ ಮಾಡಿಸಿದರು. ಚೈತನ್ಯ ನಾಯಕ್ ನಿರೂಪಣೆ ಮಾಡಿದರು.

ಮಂಗಳೂರಿನ ಕದ್ರಿ,ಕಂಕನಾಡಿ, ಉಳ್ಳಾ ಲ, ಕಾವೂರು, ಸುರತ್ಕಲ್,ಪೊಳಲಿ ಮತ್ತು ಸುತ್ತಮುತ್ತಲಿನ ತಾಲೂಕು ಗಳಿಂದ ,ಬಿ.ಸಿ.ರೋಡ್, ಕಲ್ಲಡ್ಕದಿಂದ ಬಂದಿರುವ ಯೋಗಪಟುಗಳು ಭಾಗವಹಿಸಿದರು.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »