TOP STORIES:

FOLLOW US

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ: ಬಿಲ್ಲವ ಈಡಿಗ ಸೇರಿ ಒಟ್ಟು 26 ಪಂಗಡಗಳ ಬೃಹತ್ ಜಾಗೃತ ಸಮಾವೇಶದ ಪೂರ್ವಭಾವಿ ಸಭೆ


ಬೆಂಗಳೂರಿನ ಅರಮನೆ ಮೈದಾನದಲ್ಲಿ ಡಿಸೆಂಬರ್ 10 ರಂದು ಸಮಾಜದ ಸಮಸ್ತ ಸ್ವಾಮಿಜಿಗಳ ಉಪಸ್ಥಿತಿಯಲ್ಲಿ ಕರ್ನಾಟಕ ಪ್ರದೇಶ ಆರ್ಯ ಈಡಿಗ ಸಂಘದ ಅಧ್ಯಕ್ಷರಾದ ಎಂ. ತಿಮ್ಮೇಗೌಡರ ಅಧ್ಯಕ್ಷತೆಯಲ್ಲಿ ಜರಗುವ ಬಿಲ್ಲವ ಈಡಿಗ ಸೇರಿ ಒಟ್ಟು 26 ಪಂಗಡಗಳ ಬೃಹತ್ ಜಾಗೃತ ಸಮಾವೇಶದ ಪೂರ್ವಭಾವಿ ಸಭೆ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಜರಗಿತು.

ಸಮಾವೇಶದಲ್ಲಿ ಎಲ್ಲರನ್ನೂ ಸೇರಿಸಿಕೊಂಡು ಒಗ್ಗಟ್ಟಿನಿಂದ ಸಮಾಜ ಕೆಲಸ ಮಾಡಬೇಕು, ತಳಮಟ್ಟದಲ್ಲಿ ಸಂಘಟನೆಯನ್ನು ಬಲಪಡಿಸ ಬೇಕು, ಬಿಲ್ಲವ ಸಂಘ ಯುವಸಂಘಟನೆಗಳು ಬಸ್ಸಿನ ವ್ಯವಸ್ಥೆ ಮಾಡಿಕೊಂಡು ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ತೆರಳುವ ಬಗ್ಗೆ ವಿವರವಾಗಿ ಚರ್ಚಿಸಲಾಯಿತು.

 

ಆರ್ಯ ಈಡಿಗ ಮಹಾಸಂಸ್ಥಾನ ಇದರ ಪೀಠಾಧಿಪತಿ ಶ್ರೀ ವಿಖ್ಯಾತನಂದ ಸ್ವಾಮೀಜಿ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷ ಸಾಯಿರಾಂ , ಕೋಶಾಧಿಕಾರಿ ಪದ್ಮರಾಜ್ ಆರ್, ಶ್ರೀ ನಾರಾಯಣ ಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ , ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ರಾಜೇಶ್ ಬಿ, ಶ್ರೀ ನಾರಾಯಣ ಗುರು ಯುವ ವೇದಿಕೆಯ ಎಂ ಎಸ್ ಕೋಟ್ಯಾನ್, ಮೂರ್ತೆದಾರ ಸಂಘದ ಅಧ್ಯಕ್ಷರಾದ ಬಿರ್ವ ಸಂಜೀವ ಪೂಜಾರಿ, ಚಿತ್ತರಂಜನ್ ಆತ್ಮಶಕ್ತಿ, ತೀಯ ಸಮಾಜದ ದಿನೇಶ್ ಕುಂಪಲ,ಗೋಕರ್ಣನಾಥ ಕ್ಷೇತ್ರದ ಟ್ರಸ್ಟಿ ಎಂ ಶೇಖರ್ ಪೂಜಾರಿ, ಬೆಳ್ತಂಗಡಿ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷರಾದ ಚಿದಾನಂದ ಪೂಜಾರಿ, ಆರ್ಯ ಈಡಿಗ ಮಹಾಸಂಸ್ಥಾನದ ಧರ್ಮ ವಿಜೀತ್, ಮೂಡಬಿದ್ರೆ ಬಿಲ್ಲವ ಸಂಘದ ಅಧ್ಯಕ್ಷರಾದ ಸುರೇಶ್ ಕೆ ಪೂಜಾರಿ, ಮಾಜಿ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ಪದ್ಮನಾಭ ಕೋಟ್ಯಾನ್,ಬಿಲ್ಲವ ಮಹಾಮಂಡಲದ ಪ್ರಧಾನ ಕಾರ್ಯದರ್ಶಿ ಗಂಗಾಧರ ಚೆಲ್ಯಾರ್,ಶ್ರೀ ಕ್ಷೇತ್ರ ಗೆಜ್ಜೆಗಿರಿ ಉಪಾಧ್ಯಕ್ಷ ರವಿಪೂಜಾರಿ ಚಿಲಿಂಬಿ, ಬಿಲ್ಲವ ಬ್ರಿಗೇಡ್ ಕೇಂದ್ರೀಯ ಮಂಡಳಿ ಅಧ್ಯಕ್ಷ ಸದಾನಂದ ಪೂಜಾರಿ, ಕಂಕನಾಡಿ ಬಿಲ್ಲವ ಸಂಘದ ಅಧ್ಯಕ್ಷರಾದ ದಿನೇಶ್ ಅಂಚನ್, ಉರ್ವ ಬಿಲ್ಲವ ಸಂಘದ ಅಧ್ಯಕ್ಷರಾದ ಹರಿಪ್ರಸಾದ್, ಯಶವಂತ್ ದೇರಾಜೆ ಗುತ್ತು, ಬೇಬಿ ಕುಂದರ್ ಬಂಟ್ವಾಳ ರವೀಂದ್ರ ಬಂಗೇರ ಕೊಣಾಜೆ, ಮಾಜಿ ಕಾರ್ಪೊರೇಟರ್ ಗಳಾದ ದೀಪಕ್ ಪೂಜಾರಿ, ರಾಧಾಕೃಷ್ಣ , ಮಂಗಳೂರು ವಲಯ ಉಳ್ಳಾಲ ವಲಯ, ಸುರತ್ಕಲ್ ವಲಯ, ನೀರ್ ಮಾರ್ಗ ಗುರುಪುರ ವಲಯ, ಮೂಡಬಿದ್ರೆ ವಲಯ, ಬಂಟ್ವಾಳ ವಲಯ, ಬೆಳ್ತಂಗಡಿ ವಲಯ ವಿವಿಧ ಬಿಲ್ಲವ ಸಂಘಗಳು, ಯುವಸಂಘಟನೆ ಮತ್ತು ಅದರ ಘಟಕಗಳ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.


Share:

More Posts

Category

Send Us A Message

Related Posts

ಶ್ರೀ ಸತೀಶ್ ಕುಮಾರ್ ಬಜಾಲ್ ರಿಗೆ “ ಬಿಲ್ಲವ ಸಂಜೀವಿನಿ “ ಬಿರುದು ಗೌರವ ಪ್ರಧಾನ – ಬಿಲ್ಲವ ಸಂಘ ಪುಣೆ


Share       ವರ್ಲ್ಡ್ ಬಿಲ್ಲವಾಸ್ ಪ್ರೀಮಿಯರ್ ಲೀಗ್ 2025 ನ ಅದ್ಭುತ ಕಾರ್ಯಕ್ರಮದಲ್ಲಿ ಸೌಧಿ ಬಿಲ್ಲವಾಸ್ ದಮ್ಮಾಮ್ ಸಂಘದ ಅಧ್ಯಕ್ಷರಾದ ಶ್ರೀ ಸತೀಶ್ ಕುಮಾರ್ ಅಂಚನ್ ಬಜಾಲ್ ರಿಗೆ ಬಿಲ್ಲವ ಸಂಘ ಪುಣೆ ಯು ಅತಿಥಿ


Read More »

ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ


Share       ಮಂಗಳೂರು: ಸಾಧಕರ ಜೊತೆ ಕದ್ರಿ ಶ್ರೀ ಮಂಜುನಾಥ ಕ್ಷೇತ್ರದ ಆಡಳಿತ ಸಮಿತಿಗೆ ನೇಮಕದ ಬಗ್ಗೆ ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ. ಕಲ್ಕೂರ ಪ್ರತಿಷ್ಠಾನದ ವತಿಯಿಂದ ಯುಗಾದಿ ಮಹೋತ್ಸವ, ವಿಷು


Read More »

ಪೊಲೀಸ್ ಸಬ್ ಇನ್ಸಸ್ಪೆಕ್ಟರ್ ಪ್ರದೀಪ್ ಪೂಜಾರಿಯವರಿಗೆ ಮುಖ್ಯಮಂತ್ರಿ ಚಿನ್ನದ ಪದಕ


Share       ಕೆಯ್ಯೂರು: ಕೆಯ್ಯೂರು ಗ್ರಾಮದ ಪಿ.ಎಸ್.ಐ ಪ್ರದೀಪ್ ಪೂಜಾರಿ 2023ನೇ ವರ್ಷದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಮೂರನೇ ಬೆಟಾಲಿಯನ್ ಫೆರೆಡ್ ಗ್ರೌಂಡ್ ಕೆಎಸ್ಆರ್ಪಿ  ಕೊರಮಂಗಲ ಬೆಂಗಳೂರಿನಲ್ಲಿ ಎ.2ರಂದು ಪ್ರಶಸ್ತಿ ಪ್ರಧಾನ ನಡೆಯಲಿದೆ ಪ್ರದೀಪ್ ಪೂಜಾರಿ


Read More »

ಕದ್ರಿ ಮಂಜುನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ರಾಜೇಂದ್ರ ಚಿಲಿಂಬಿ ಆಯ್ಕೆ


Share       ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಇವರು ಸಲ್ಲಿಸಿರುವ  ಸೇವೆಯನ್ನು ಪರಿಗಣಿಸಿ ಈ ಆಯ್ಕೆ ನಡೆದಿರುತ್ತದೆ. ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ  ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮಾಧ್ಯಮ ವಕ್ತಾರ, ಮಂಗಳೂರು ಚಿಲಿಂಬಿ ಸ್ವಾಮಿ


Read More »

ಜವಾಹರ್ ಬಾಲ್ ಮಂಚ್ ಇದರ ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಸಂಯೋಜಕರಾಗಿ ನ್ಯಾಯವಾದಿ ಶ್ರೀಮತಿ ಶೈಲಜಾ ರಾಜೇಶ್ ಆಯ್ಕೆ


Share       ಬಂಟ್ವಾಳ : ಕರ್ನಾಟಕ ಸರ್ಕಾರದ ಪ್ರತಿಷ್ಟಿತ ಕಿತ್ತೂರು ರಾಣಿ ಚೆನ್ನಮ್ಮ ಪುರಸ್ಕೃತರು, ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ರಿ ಇದರ ಸಂಸ್ಥಾಪಕರು, ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಅಧ್ಯಕ್ಷೆ,


Read More »

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »