TOP STORIES:

FOLLOW US

ಕೂದಲು , ಚರ್ಮದ ಸಮಸ್ಯೆಗೆ ಬೆಳ್ಳುಳ್ಳಿ ಬಳಸಿ ಮ್ಯಾಜಿಕ್ ನೋಡಿ..


ಅಡಿಗೆ ಮನೆ  ಎಂದರೆ ಕೇವಲ ಆಹಾರ ತಯಾರಿಸಿ ಸೇವನೆ ಮಾಡುವ ಸ್ಥಳವಲ್ಲ , ನಮ್ಮ ಆರೋಗ್ಯವನ್ನು ಕಾಪಾಡುವ ಶಕ್ತಿ ಕೇಂದ್ರ ಎಂದರೆ ತಪ್ಪಾಗಲಾರದು. ಇದು ನಮ್ಮ ಎಲ್ಲ ಸೌಂದರ್ಯ ಮತ್ತು ಆರೋಗ್ಯ ಸಂಬಂಧಿ ಸಮಸ್ಯೆಗಳನ್ನು ಗುಣಪಡಿಸುವ ನೈಸರ್ಗಿಕ ಪರಿಹಾರಗಳನ್ನು ಹೇರಳವಾಗಿ ಹೊಂದಿರುವ ಸ್ಥಳ.

ಹಳದಿ ಮತ್ತು ಮೊಸರಿನಿಂದ ಶುಂಠಿ ಮತ್ತು ಬೆಳ್ಳುಳ್ಳಿಯವರೆಗೆ, ನಾವು ಅಡುಗೆಮನೆಯ ಎಲ್ಲಾ ಪದಾರ್ಥಗಳನ್ನು  ಔಷಧವಾಗಿ ಬಳಕೆ ಮಾಡಬಹುದು.  ಇಲ್ಲಿ ವಿಶೇಷವಾಗಿ ಬೆಳ್ಳುಳ್ಳಿಯ ಬಗ್ಗೆ ಹೇಳುವುದಾದರೇ,  ಇದನ್ನು ಕೇವಲ ನಮ್ಮ ಆಹಾರಕ್ಕೆ ಪರಿಮಳವನ್ನು ನೀಡಲು ಮಾತ್ರ ಬಳಸಲಾಗುವುದಿಲ್ಲ, ಆದರೆ ಇದು ಹಲವಾರು  ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಬೆಳ್ಳುಳ್ಳಿಯು ಹಲವಾರು ರೋಗಗಳನ್ನು ಗುಣಪಡಿಸಲು ಸಹಾಯ ಮಾಡುವ ವೈದ್ಯಕೀಯ ಗುಣಗಳನ್ನು ಹೊಂದಿದೆ.
ಬೆಳ್ಳುಳ್ಳಿಯಲ್ಲಿ ಅಲ್ಲಿಸಿನ್, ಸಲ್ಫರ್, ಸತು ಮತ್ತು ಕ್ಯಾಲ್ಸಿಯಂ ಸಮೃದ್ಧವಾಗಿದೆ, ಇದು ಸೌಂದರ್ಯದ ಪ್ರಯೋಜನಗಳನ್ನು ಹಾಗೂ ಆ್ಯಂಟಿಬಯಾಟಿಕ್ ಮತ್ತು ಆಂಟಿಫಂಗಲ್ ಗುಣಗಳನ್ನು ಹೊಂದಿದೆ. ಇದು ಕೂದಲು ಮತ್ತು ಚರ್ಮಕ್ಕೂ ಪ್ರಯೋಜನಕಾರಿ.  ಹೇಗೆ ಎಂಬುದು ಇಲ್ಲಿದೆ.
ನಾವು ಯಾವಾಗಲೂ ಕೂದಲು ಉದುರುವುದರ ಬಗ್ಗೆ ಹೆಚ್ಚು ಕಾಳಜಿವಹಿಸುತ್ತೇವೆ. ಅದನ್ನು ಗುಣಪಡಿಸಲು ಯಾವ ಉತ್ಪನ್ನಗಳನ್ನು ಬಳಸಬೇಕೆಂದು ಯೋಚಿಸುತ್ತೇವೆ. ನಾವು ಹಲವಾರು ಉತ್ಪನ್ನಗಳನ್ನು ಮತ್ತು ಮನೆಯಲ್ಲಿ ತಯಾರಿಸಿದ  ಮಾಸ್ಕ್ಗಳನ್ನು ಪ್ರಯತ್ನಿಸಿದರೂ ಸಹ  ಅದು ಏನೂ ಕೆಲಸ ಮಾಡುವುದಿಲ್ಲ.  ಹಾಗಾದ್ರೆ , ಈಗ, ಬೆಳ್ಳುಳ್ಳಿಯನ್ನು ಪ್ರಯತ್ನಿಸಿ ನಿಮ್ಮ ಕೂದಲಿನ ಮೇಲೆ ಮ್ಯಾಜಿಕ್ ಮಾಡುವುದನ್ನು ನೋಡಿ.

 

ಇಂಡಿಯನ್ ಜರ್ನಲ್ ಆಫ್ ಡರ್ಮಟಾಲಜಿ, ವೆನಿಯರಾಲಜಿ ಮತ್ತು ಲೆಪ್ರೊಲಜಿಯಲ್ಲಿನ ಅಧ್ಯಯನದ ಪ್ರಕಾರ, ಬೆಳ್ಳುಳ್ಳಿ ನಿಮ್ಮ ಕೂದಲು ಉದುರುವಿಕೆಯ ಸಮಸ್ಯೆಗಳಿಗೆ ಪರಿಹಾರ ಏಕೆಂದರೆ ಹೆಚ್ಚಿನ ಪ್ರಮಾಣದಲ್ಲಿ ಅಲಿಸಿನ್ ಮತ್ತು ಸಲ್ಫರ್ ಇರುತ್ತದೆ. ಬೆಳ್ಳುಳ್ಳಿಯ ಒಂದು ಎಸೆಳನ್ನು ತೆಗೆದುಕೊಂಡು ಅದನ್ನು ನಿಮ್ಮ ನೆತ್ತಿಯ ಮೇಲೆ ಉಜ್ಜಿ,  ಅದನ್ನು ಚನ್ನಾಗಿ ಹಿಂಡಿ ರಸ ತೆಗೆದು ಉಜ್ಜಿದರೆ ಹೆಚ್ಚಿನ ಪ್ರಯೋಜನ ನೀಡುತ್ತದೆ. ಬೆಳ್ಳುಳ್ಳಿ ಕೂಡ ತಲೆಹೊಟ್ಟು ತಡೆಯುವಲ್ಲಿ ಸಹಾಯ ಮಾಡುತ್ತದೆ.
ನೀವು ನೆತ್ತಿಯ ತುರಿಕೆಯ ಸಮಸ್ಯೆಯನ್ನು ಅನುಭವಿಸುತ್ತಿದ್ದರೆ, ಬೆಳ್ಳುಳ್ಳಿ ಮತ್ತು ಎಣ್ಣೆಯನ್ನು ಮಿಶ್ರಣ ಮಾಡಿ, ಅದನ್ನ ಮಸಾಜ್  ಮಾಡಿ. ಸ್ವಲ್ಪ ಸಮಯದ ನಂತರ ಅದನ್ನು ತೊಳೆಯಿರಿ. ಉತ್ತಮ ಫಲಿತಾಂಶ ಪಡೆಯಲು ಇದನ್ನು  ನಿಯಮಿತವಾಗಿ ಬಳಸಿ.  ಬೆಳ್ಳುಳ್ಳಿ ಕೂದಲು ಬೆಳವಣಿಗೆಗೆ ಸಹಾಯ ಮಾಡುತ್ತದೆ. ಬೆಳ್ಳುಳ್ಳಿಯಲ್ಲಿ ಲಭ್ಯವಿರುವ ಅಲ್ಲಿಸಿನ್ ರಕ್ತ ಪರಿಚಲನೆ ಹೆಚ್ಚಿಸಲು ಸಹಾಯ ಮಾಡುತ್ತದೆ ಅದು ನಿಮ್ಮ ಕೂದಲು ಬೆಳೆಯುವ ವೇಗವನ್ನು ಹೆಚ್ಚು ಮಾಡುತ್ತದೆ ಎನ್ನಲಾಗುತ್ತಿದೆ.

ಕೇವಲ ಕೂದಲಿಗೆ ಮಾತ್ರವಲ್ಲ, ಬೆಳ್ಳುಳ್ಳಿ ನಿಮ್ಮ ಚರ್ಮಕ್ಕೂ ಪ್ರಯೋಜನಕಾರಿ ಮತ್ತು ನಿಮಗೆ ತಾಜಾ ಮತ್ತು ಹೊಳೆಯುವ ಚರ್ಮವನ್ನು ನೀಡುತ್ತದೆ. ಇದು ರಂಜಕ, ಸತು, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ನಂತಹ ಖನಿಜಗಳಿಂದ ಸಮೃದ್ಧವಾಗಿದೆ, ಇದು ಚರ್ಮದ ಸಮಸ್ಯೆಗಳಿಗೆ ಅತ್ಯುತ್ತಮ ಆಯ್ಕೆಯಾಗಿದೆ.
ಮೊಡವೆಗಳಿಂದ ಪರಿಹಾರ ಪಡೆಯಲು ಬೆಳ್ಳುಳ್ಳಿ ಸಹಾಯ ಮಾಡುತ್ತದೆ. ಬೆಳ್ಳುಳ್ಳಿಯಲ್ಲಿರುವ ಆ್ಯಂಟಿಆಕ್ಸಿಡೆಂಟ್ಗಳು ಬ್ಯಾಕ್ಟೀರಿಯಾವನ್ನು ಕೊಲ್ಲಲು ಸಹಾಯ ಮಾಡುತ್ತದೆ. ಒಂದು ಬೆಳ್ಳುಳ್ಳಿ ಎಸಳನ್ನು ತೆಗೆದುಕೊಂಡು ನಿಮ್ಮ ಮೊಡವೆ ಮೇಲೆ ಉಜ್ಜಿ. ಬೆಳ್ಳುಳ್ಳಿಯಲ್ಲಿರುವ ಅಲಿಸಿನ್ ಮೊಡವೆಗಳಿಗೆ ಕಾರಣವಾಗುವ ಬ್ಯಾಕ್ಟೀರಿಯಾವನ್ನು ಕೊಲ್ಲಲು ಸಹಾಯ ಮಾಡುತ್ತದೆ.
ಇದು ರಕ್ತ ಪರಿಚಲನೆ ಮತ್ತು ಮೊಡವೆಗಳಿಂದ ಉಂಟಾಗುವ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಮದು ಸಾಬೀತಾಗಿದೆ. ಬೆಳ್ಳುಳ್ಳಿ ರಸವು  ಹುಣ್ಣುಗಳು, ದದ್ದುಗಳು ಮತ್ತು ಗುಳ್ಳೆಗಳನ್ನು ಸಹ ನಿವಾರಣೆ ಮಾಡಲು  ಪ್ರಯೋಜನಕಾರಿಯಾಗಿದೆ.


Share:

More Posts

Category

Send Us A Message

Related Posts

ಬಿಲ್ಲವಾಸ್ ಕತಾರ್ ಸಂಘದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ಬಿಲ್ಲವಾಸ್ ಕತಾರ್ ಸಂಘದ ವತಿಯಿಂದ ಸಂಘದ ನೂತನ ಅಧ್ಯಕ್ಷರಾದ ಶ್ರೀಮತಿ ಅಪರ್ಣ ಶರತ್ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 26.02.2025 ರಂದು ಕತಾರ್ ನ ಐ. ಸಿ. ಸಿ. ಮುಂಬೈ ಹಾಲ್ ನಲ್ಲಿ  ಶ್ರೀ


Read More »

ಸೌದಿ ಬಿಲ್ಲವಾಸ್ ದಮ್ಮಾಮ್ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ದಮ್ಮಾಮ್: ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾರ್ಚ್ 1ರಿಂದ ಮಾರ್ಚ್ 5 ರವರೆಗೆ ಜರಗುವ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಸೌದಿ ಬಿಲ್ಲವಾಸ್ ದಮ್ಮಾಮ್ ವತಿಯಿಂದ ಸೌದಿಯ


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಹಾ ಶಿವರಾತ್ರಿ ಮಹೋತ್ಸವಕ್ಕೆ ಚಾಲನೆ


Share       ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಫೆ.21ರಿಂದ 28ರವರೆಗೆ ಜರುಗುವ ವಾರ್ಷಿಕ ಮಹೋತ್ಸವ ಮತ್ತು ಮಹಾ ಶಿವರಾತ್ರಿ ಮಹೋತ್ಸವಕ್ಕೆ ಶುಕ್ರವಾರ ಧ್ವಜಾರೋಹಣ ನೆರವೇರುವ ಮೂಲಕ ಚಾಲನೆ ನೀಡಲಾಯಿತು. ಶುಕ್ರವಾರ ಗುರು ಪ್ರಾರ್ಥನೆ, ಪುಣ್ಯಾಹ ಹೋಮ,


Read More »

ಬಿಲ್ಲವ ಸಮಾಜ ಸೇವಾ ಸಂಘ ಪುಣೆ  ಆಶ್ರಯದಲ್ಲಿ ಏಪ್ರಿಲ್ ತಿಂಗಳಲ್ಲಿ ನಡೆಯಲಿದೆ “ವಿಶ್ವ ಬಿಲ್ಲವ ಕ್ರಿಕೆಟ್” ಪಂದ್ಯಾಟದ


Share       ಪುಣೆ : ಫೆ.19,ಬಿಲ್ಲವ ಸಮಾಜ ಸೇವಾ ಸಂಘ (ರಿ) ಪುಣೆ ಇದರ  ಆಶ್ರಯದಲ್ಲಿ ಮುಂಬರುವ ಎಪ್ರಿಲ್ ತಿಂಗಳಲ್ಲಿ ನಡೆಯಲಿರುವವಿಶ್ವ ಬಿಲ್ಲವ ಕ್ರಿಕೆಟ್ಪಂದ್ಯಾಟದ  ತಯಾರಿಯ ಬಗ್ಗೆ  ಎರಡನೇ ಪೂರ್ವಭಾವಿ ಸಭೆಯು ಇಂದು ಫೆ. 19ನೇ


Read More »

ಬಿಲ್ಲವಾಸ್ ಕತಾರ್ ನ ಅಧ್ಯಕ್ಷ ಶ್ರೀ ಸಂದೀಪ್ ಸಾಲಿಯಾನ್ ರವರಿಗೆ ವಿನಯಪೂರ್ವಕ ಬೀಳ್ಕೊಡುಗೆ


Share       ಬಿಲ್ಲವಾಸ್ ಕತಾರ್ ನ ನೇತೃತ್ವದಲ್ಲಿ ದಿನಾಂಕ ೮.೨.೨೦೨೫ ರಂದು ಎಂ. ಆರ್. ಎ, ಸಲ್ವ ರೋಡ್, ಕತಾರ್, ಔತಣಕೂಟ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಬಿಲ್ಲವಾಸ್ ಕತಾರ್ ನ ಅಧ್ಯಕ್ಷರಾದ ಶ್ರೀ ಸಂದೀಪ್


Read More »

ರಾಷ್ಟ್ರಮಟ್ಟದ ಪ್ರಶಸ್ತಿ ಸ್ವೀಕರಿಸಿದ ತುಳುನಾಡಿನ ಹೆಮ್ಮೆಯ ಸಾಹಿತಿ ಪ್ರಮೀಳ ದೀಪಕ್ ಪೆರ್ಮುದೆ


Share       ಮಂಗಳೂರು: ರಾಷ್ಟ್ರಮಟ್ಟದ ಪ್ರಶಸ್ತಿ ಸ್ವೀಕರಿಸಿದ ತುಳುನಾಡಿನ ಹೆಮ್ಮೆಯ ಸಾಹಿತಿ ಪ್ರಮೀಳ ದೀಪಕ್ ಪೆರ್ಮುದೆ. MRPL ಸಂಸ್ಥೆಯ ಉದ್ಯೋಗಿ ಆಗಿರುವ ಪ್ರಮೀಳ ದೀಪಕ್ ಪೆರ್ಮುದೆ ಇವರಿಗೆ ಸಾರ್ವಜನಿಕ ವಲಯದಲ್ಲಿ ಮಹಿಳೆಯರು ಪರಿಕಲ್ಪನೆಯಡಿ “ Woman


Read More »