TOP STORIES:

ಗರ್ಭಿಣಿ ಹೊಟ್ಟೆ ಆಕಾರ ನೋಡಿದ್ರೆ ಮಗು ಗಂಡೋ, ಹೆಣ್ಣೋ ಅಂತ ತಿಳಿಯತ್ತಾ?; ಪ್ರೆಗ್ನೆಸಿಯ ಸತ್ಯ ಮಿಥ್ಯಗಳು ಇಲ್ಲಿವೆ


ನವಜಾತ ಶಿಶು ಅಥವಾ ಜನಿಸಲಿರುವ ಶಿಶುವಿನ ಕುರಿತು ನೀಡುವ ಕೆಲವು ತಪ್ಪು ಮಾಹಿತಿಗಳು ಮತ್ತು ಆ ಕುರಿತ ವಾಸ್ತವ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ನವಜಾತ ಶಿಶುಗಳು ಅಥವಾ ಹುಟ್ಟಲಿರುವ ಶಿಶು ಯಾವುದು ಎಂಬ ಕುತೂಹಲ ಸಾಮಾನ್ಯ. ಅನೇಕರು ಗರ್ಭಿಣಿಯರ ಹೊಟ್ಟೆಯ ಆಕಾರ ನೋಡಿ ಅನೇಕರು ಹುಟ್ಟುವ ಮಗು ಗಂಡೋ ಅಥವಾ ಹೆಣ್ಣೋ ಎಂದು ಅಂದಾಜು ಮಾಡುತ್ತಾರೆ. ಅಲ್ಲದೇ ಅನೇಕ ಗರ್ಭಿಣಿಯರು ಕೂಡ ಈ ಕುರಿತು ವಿಚಾರವನ್ನು ಅಂತರ್ಜಾಲದಲ್ಲಿ ಹುಡುಕುತ್ತಾರೆ.  ಅಷ್ಟೇ ಅಲ್ಲದೇ ಗರ್ಭಾವಸ್ಥೆಯಲ್ಲಿನ ಅನೇಕ ವಿಚಾರಗಳ ಕುರಿತು ನಮ್ಮ ಸುತ್ತ ಮುತ್ತಲಿನವರು ಅನೇಕ ಸಲಹೆ ನೀಡುತ್ತಲೇ ಇರುತ್ತಾರೆ. ಆದರೆ ಅವೆಲ್ಲವೂ ಸತ್ಯವಾಗಿರುವುದಿಲ್ಲ, ಅವುಗಳಲ್ಲಿ ಸತ್ಯಕ್ಕೆ ದೂರವಾದ ಮತ್ತು ಅವೈಜ್ಞಾನಿಕವಾದ ಮಾಹಿತಿಗಳು ಬಹಳಷ್ಟಿರುತ್ತವೆ. ನವಜಾತ ಶಿಶುವಿನ ತಾಯಂದಿರು ಅಥವಾ ಸದ್ಯದಲ್ಲಿಯೇ ಶಿಶುವಿಗೆ ಜನ್ಮ ನೀಡಲಿರುವ ಭಾವಿ ಅಮ್ಮಂದಿರ ಸುತ್ತಮುತ್ತ ತರಾವರಿ ಸಲಹೆಗಳನ್ನು ನೀಡುವ ಅಥವಾ ಊಹೆಗಳನ್ನು ಮಾಡುವ ಜನರ ದಂಡೇ ಇರುತ್ತದೆ ಎಂಬುವುದು ಸರ್ವಕಾಲಿಕ ಸತ್ಯ.

 

ಒಂದು ನವಜಾತ ಶಿಶುವಿನ ತಾಯಿ ಅಥವಾ ಸದ್ಯದಲ್ಲಿಯೇ ಶಿಶುವಿಗೆ ಜನ್ಮ ನೀಡಲಿರುವ ಮಹಿಳೆ ಆದಾಗಲೇ ದುರ್ಬಲಳಾಗಿರಬಹುದು ಅಥವಾ ಹೊಸ ಅನುಭವದ ಒತ್ತಡದ ಮನಸ್ಥಿತಿಯಲ್ಲಿ ಇರಬಹುದು, ಅಂತಹ ಸಂದರ್ಭದಲ್ಲಿ ಆಧಾರವಿಲ್ಲದ ಸಲಹೆಗಳಿಗೆ ಕಿವಿ ಕೊಡದೆ, ತಜ್ಞರು ನೀಡುವ ಮಾಹಿತಿಗಳನ್ನು ನಂಬುವುದು ಬಹಳ ಅಗತ್ಯ. ನವಜಾತ ಶಿಶು ಅಥವಾ ಜನಿಸಲಿರುವ ಶಿಶುವಿನ ಕುರಿತು ನೀಡುವ ಕೆಲವು ತಪ್ಪು ಮಾಹಿತಿಗಳು ಮತ್ತು ಆ ಕುರಿತ ವಾಸ್ತವ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

 

 

ಮಿಥ್ಯ 1: ಗರ್ಭಿಣಿಯ ಹೊಟ್ಟೆ ಎಷ್ಟು ಉಬ್ಬಿದೆ ಎಂಬುದನ್ನು ಆಧರಿಸಿ ಅದರ ಲಿಂಗವನ್ನು ನಿರ್ಧರಿಸಲಾಗುತ್ತದೆ. ಗರ್ಭಿಣಿಯ ಹೊಟ್ಟೆ ಕಡಿಮೆ ಉಬ್ಬಿದ್ದರೆ ಒಳಗಿರುವುದು ಗಂಡು ಮಗು. ಹೊಟ್ಟೆ ದೊಡ್ಡದಿದ್ದರೆ ಅದು ಹೆಣ್ಣು ಮಗು.
ಸತ್ಯ: ರಾಷ್ಟ್ರೀಯ ಆರೋಗ್ಯ ಸೇವೆಯ (ಎನ್‍ಹೆಚ್‍ಎಸ್) ಪ್ರಕಾರ, ಈ ಊಹೆಗೆ ಯಾವುದೇ ವೈಜ್ಞಾನಿಕ ಆಧಾರವಿಲ್ಲ ಮತ್ತು ಹೊಟ್ಟೆಯ ಗಾತ್ರಕ್ಕೂ ಮಗುವಿನ ಲಿಂಗಕ್ಕೂ ಯಾವುದೇ ಸಂಬಂಧವಿಲ್ಲ. ಗರ್ಭಿಣಿಯ ಹೊಟ್ಟೆಯ ಗಾತ್ರ ಮತ್ತು ಆಕಾರವು ಆಕೆಯ ಸ್ನಾಯುವಿನ ಗಾತ್ರ, ರಚನೆ, ಭಂಗಿ ಮತ್ತು ಆಕೆಯ ಹೊಟ್ಟೆಯ ಸುತ್ತಲೂ ಸಂಗ್ರಹವಾಗಿರುವ ಕೊಬ್ಬನ್ನು ಅವಲಂಬಿಸಿದೆ.

ಮಿಥ್ಯ 2 : ಕೊಲಸ್ಟ್ರಮ್ ಅಥವಾ ತಾಯಿಯ ಆರಂಭದ ಎದೆಹಾಲನ್ನು ಮಗುವಿಗೆ ಕುಡಿಸಬಾರದು. ಅದು ಅಶುದ್ಧವಾಗಿರುತ್ತದೆ.

ಸತ್ಯ : ಕೊಲಸ್ಟ್ರಮ್ ಎಂದರೆ ಹಳದಿ ಬಣ್ಣವುಳ್ಳ , ತಾಯಿಯ ಪ್ರಪ್ರಥಮ ಎದೆ ಹಾಲು. ಅತ್ಯಧಿಕ ಪ್ರೊಟೀನ್ ಹೊಂದಿರುವ ಆ ಹಾಲು ಸೋಂಕು ನಿರೋಧಕ ಗುಣಗಳನ್ನು ಹೊಂದಿದೆ. ಆದ್ದರಿಂದ ಮಗುವಿಗೆ ಇದನ್ನು ಕುಡಿಸಲು ಸೂಚಿಸಲಾಗುತ್ತದೆ. ಆದರೆ, ಭಾರತದಲ್ಲಿ ಕೆಲವು ಮಹಿಳೆಯರು ಇದನ್ನು ಇಂದಿಗೂ ಅಶುದ್ಧವೆಂದು ಭಾವಿಸಿದ್ದು, ಮಗುವಿಗೆ ಕುಡಿಸಲು ನಿರಾಕರಿಸುತ್ತಾರೆ.

ಮಿಥ್ಯ 3: ನವಜಾತ ಶಿಶುವಿನ ಜೀವನ ಸಿಹಿಯಾಗಿರಬೇಕು ಎಂಬುದರ ಸಂಕೇತವಾಗಿ, ಅದಕ್ಕೆ ಪ್ರಥಮವಾಗಿ ಜೇನು ತುಪ್ಪವನ್ನು ನೆಕ್ಕಿಸುವುದು ಅತ್ಯಂತ ಪುರಾತನ ಸಂಪ್ರದಾಯ.

ಸತ್ಯ: ನವಜಾತ ಶಿಶುವಿನ ಪ್ರತಿರಕ್ಷಣಾ ವ್ಯವಸ್ಥೆ ತುಂಬಾ ನಾಜೂಕಾಗಿ ಇರುತ್ತದೆ. ಮಗುವಿಗೆ ಅದರ ಮೊದಲ ಹುಟ್ಟುಹಬ್ಬಕ್ಕಿಂತ ಮೊದಲು ಜೇನು ತುಪ್ಪವನ್ನು ನೀಡುವುದು ಅಪಾಯಕಾರಿ ಎಂದು ಪರಿಗಣಿಸಲಾಗುತ್ತದೆ. ಕಾರಣವೇನೆಂದರೆ, ಅದು ನವಜಾತ ಶಿಶುವಿನ ಅಪಕ್ವ ವ್ಯವಸ್ಥೆಯಲ್ಲಿ ಸೇರಿಕೊಳ್ಳಬಲ್ಲ ಬ್ಯಾಕ್ಟೀರಿಯಾವಾದ ಕ್ಲೋಸ್ಟ್ರಿಡಿಯಂ ಬೊಟುಲಿನಮ್ ಬೀಜಕಗಳನ್ನು ಹೊಂದಿರುತ್ತದೆ, ಮತ್ತು ಆ ಬ್ಯಾಕ್ಟೀರಿಯಾ ಶಿಶುವಿಗೆ ಮಾರಕ ರೋಗವನ್ನು ಉಂಟು ಮಾಡಬಹುದು.

ಮಿಥ್ಯ 4: ನವಜಾತ ಶಿಶುವಿನ ಆಹಾರ ಕ್ರಮದಲ್ಲಿ ಜ್ಯೂಸ್‍ಗಳನ್ನು ಕೂಡ ಸೇರಿಸಬೇಕು.
ಸತ್ಯ : ಹಣ್ಣಿನ ರಸದಲ್ಲಿ ವಿಟಮಿನ್ ಸಿ ಹೇರಳವಾಗಿರುತ್ತದೆ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಅದು ಮಗುವಿನ ಕರುಳಿನ ಮೇಲೆ ಪ್ರತಿಕೂಲ ಪರಿಣಾಮವನ್ನು ಬೀರಬಹುದು . ಏಕೆಂದರೆ ಆರಂಭದಲ್ಲಿ , ಅದರಲ್ಲೂ ಮುಖ್ಯವಾಗಿ ಜನಿಸಿದ ಒಂದು ವರ್ಷದವರೆಗೆ ಅವುಗಳಲ್ಲಿ ಹಣ್ಣಿನ ರಸವನ್ನು ಜೀರ್ಣ ಮಾಡಿಕೊಳ್ಳಬಲ್ಲ ಸಾಮರ್ಥ್ಯ ಇರುವುದಿಲ್ಲ.

 

ಮಿಥ್ಯ 5 : ಎರಡನೇ ಮತ್ತು ಮೂರನೆಯ ಶಿಶುಗಳಿಗೆ ಹೋಲಿಸಿದರೆ, ಮೊದಲ ಮಗು ತಡವಾಗಿ ಹೊರ ಬರುತ್ತದೆ ಎಂಬ ನಂಬಿಕೆ ಕೂಡ ಜನರಲ್ಲಿದೆ.

ಸತ್ಯ : ವಾಸ್ತವ ಏನೆಂದರೆ, ನಿಮ್ಮ ಋತುಚಕ್ರದ ಅವಧಿಯ ಉದ್ದವು ನಿಮ್ಮ ಮಗುವಿನ ಆಗಮನವನ್ನು ನಿರ್ಧರಿಸುತ್ತದೆ. ನಿಮ್ಮ ಋತುಚಕ್ರದ ಅವಧಿ ಕಡಿಮೆ ಇದ್ದರೆ ಹೆರಿಗೆ ಬೇಗ ಆಗಬಹುದು, ಉದ್ದನೆಯ ಋತುಚಕ್ರದ ಅವಧಿ ಇದ್ದಲ್ಲಿ ಹೆರಿಗೆ ಕೂಡ ತಡ ಆಗಬಹುದು.ಆದರೂ ಋತುಚಕ್ರದ ಅವಧಿ 28 ದಿನಗಳದ್ದಾಗಿದ್ದರೆ, ನಿಮಗೆ ಹೆರಿಗೆಗೆ ನಿಗದಿ ಪಡಿಸಿದ ದಿನಾಂಕದ ಹತ್ತಿರದ ತಾರೀಖಿನಲ್ಲೇ ಹೆರಿಗೆ ಆಗುವ ಸಾಧ್ಯತೆ ಇರುತ್ತದೆ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »