TOP STORIES:

ಗೆಜ್ಜೆ ಗಿರಿ ಕ್ಷೇತ್ರದ ಸೇವಾ ಕಾರ್ಯಕರ್ತ ಪ್ರವೀಣ್ ನೆಟ್ಟರ್ ಅವರ ಅಂತಿಮ ನಮನ ಕಾರ್ಯದಲ್ಲಿ ಕ್ಷೇತ್ರದ ಆಡಳಿತ ಮಂಡಳಿಯ ಪಾಲ್ಗೊಂಡ ಬಗ್ಗೆ.


ಶ್ರೀ ಕ್ಷೇತ್ರಗೆಜ್ಜೆ ಗಿರಿಯ ಸೇವಕರಾಗಿ ಕ್ಷೇತ್ರದಲ್ಲಿ ಜರಗಿದ ಅಭೂತಪೂರ್ವ, ದಾಖಲೆಯ ಭಕ್ತರು ಸಂದರ್ಶಿಸಿದ್ದ ಬ್ರಹ್ಮಕಲಶೋತ್ಸವದಲ್ಲಿತನ್ನನ್ನು ತಾನು ಸಮರ್ಪಿಸಿಕೊಂಡು   ಜವಾಬ್ದಾರಿಯುತ ಕೆಲಸಗಳನ್ನು  ಅತ್ಯುತ್ತಮವಾಗಿ ತೊಡಗಿಸಿಕೊಂಡು ಸಮಾಜಮುಖಿಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದ ನಮ್ಮೆಲ್ಲರ ಆತ್ಮೀಯ ವಿ ಪ್ರವೀಣ್ ನೆಟ್ಟರ್ ರವರ ಅಗಲುವಿಕೆಯನ್ನು ನಾವು ಅರಗಿಸಿಕೊಳ್ಳಲುಸಾಧ್ಯವಿಲ್ಲ ಇಂತಹ ವ್ಯಕ್ತಿಯನ್ನು ಕಳೆದುಕೊಂಡ ನೋವು ನಮ್ಮ ಬಿಲ್ಲವ ಸಮುದಾಯದ ಯಾವೊಬ್ಬ ವ್ಯಕ್ತಿಯು ಮರೆಯಲಾಸಾಧ್ಯರಾಕ್ಷಸೀಯ ಪ್ರವೃತ್ತಿಯ ದುಷ್ಕೃತ್ಯಗಳಿಗೆ ಯಬಲಿಯಾದ ಪ್ರವೀಣ್ ನೆಟ್ಟಾರುರವರ ಅಂತಿಮ ಯಾತ್ರೆಯಲ್ಲಿ ಶ್ರೀ ಕ್ಷೇತ್ರದ  ಆಡಳಿತಸಮಿತಿಯ ಪದಾಧಿಕಾರಿಗಳು ಪ್ರಾರಂಭದಿಂದ ಕೊನೆಯವರೆಗೂ ಸಮಾಜದ ಒಂದು ಅಮೂಲ್ಯ ಮುತ್ತನ್ನು ಕಳೆದುಕೊಂಡನೋವಿನಿಂದಲೇ ಅಂತಿಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಮುದಾಯದ ವಿಧಿ ವಿಧಾನದಂತೆ ದಿವಂಗತ ಪ್ರವೀಣ್ ನೆಟ್ವರ್ ಅವರಅಂತ್ಯಕ್ರಿಯೆಯನ್ನು ನೆರವೇರಿಸಿವಲ್ಲಿ ಕ್ಷೇತ್ರದ ಗೌರವಾಧ್ಯಕ್ಷರಾದ ಜಯಂತ್ ನಡುಬೈಲ್ ಸ್ಥಳದಲ್ಲೇ ಇದ್ದು ಸೂಕ್ತ ವಾದಮಾರ್ಗದರ್ಶನ ನೀಡುತಿದ್ದರು‌. ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್ ಸೇರಿದ್ದ ಐದು ಸಾವಿರ ಕ್ಕಿಂತಲೂ ಅಧಿಕ ಪ್ರವೀಣ್ಅವರ ಆಪ್ತರು, ಸಂಘಪರಿವಾರ, ಪಕ್ಷದ ಪ್ರಮುಖರು, ಜನಪ್ರತಿನಿಧಿಗಳು, ಸಂಘಟನೆಗಳ ಮುಖಂಡರು ಕಾರ್ಯಕರ್ತರು, ಕುಟುಂಬಬಳಗ,ಅವರ ಮಿತ್ರ ವೃಂದ ಎಲ್ಲರಿಗೂ ಅಂತಿಮ ನಮನ ಸಲ್ಲಿಸಲು ಅವಕಾಶ ಕಲ್ಪಿಸಲು ಉಲ್ಲಾಸ್ ಹರಸಾಹಸ ಪಡುತಿದ್ದರು‌. ನಂತರ ಅವರ ಕುಟುಂಬಕ್ಕೂ ಆರ್ಥಿಕವಾಗಿ ಸಹಕಾರವಾಗಬೇಕು, ದುರ್ದೈವ ದಿಂದ ಕುಟುಂಬದ ದುಡಿಯುವ ಕೈಗಳೆ ಇಂದುಮರೆಯಾಗಿದೆ ಎಂದು ಪ್ರವೀಣ್ ನೆಟ್ಟಾರರವರ ಧರ್ಮ ಪತ್ನಿ ನೂತನ ಪ್ರವೀಣ್  ಯವರ ಖಾತೆಯನ್ನು ಸಾಮಾಜಿಕ ಜಾಲತಾಣದಲ್ಲಿಸಹಕಾರ ಕೋರಿ  ಹರಿಬಿಟ್ಟರು ಇದರ ಪರಿಣಾಮ ಒಂದು ಉತ್ತಮ ಮೊತ್ತ  ಸಂಗ್ರಹವಾಗಿ, ದಿವಂಗತರ ಕುಟುಂಬದ ಮುಂದಿನಜೀವನದ ನಿರ್ವಹಣೆಗೆ ಸರ್ಕಾರದ ಸಹಾಯ ಹಸ್ತವನ್ನು ಚಾಚುವ ಮಾನವೀಯ ದೃಷ್ಟಿಯಿಂದ  ಸಂದರ್ಭದಲ್ಲಿಯೋಚಿಸಿರುವುದು ಒಂದು ಉತ್ತಮ ಕೆಲಸವಾಗಿದೆ ಅಷ್ಟೇ ಅಲ್ಲದೆ ಉಸ್ತುವಾರಿ ಸಚಿವರಲ್ಲಿ ಶಾಸಕರುಗಳಲ್ಲಿ ಕುಟುಂಬಕ್ಕೆ ಹೆಚ್ಚಿನರೀತಿಯ ಸಹಕಾರವನ್ನು ಸರಕಾರದಿಂದ ನೀಡಬೇಕೆಂದು ಸಮಾಜದ ಪರವಾಗಿ ವಿನಂತಿಸಿ ಸರ್ವರ ಪ್ರೀತಿ ಚೋರ ಇಹಲೋಕತ್ಯಜಿಸಿದ ಪ್ರವೀಣ್ ಮನೆಗೆ ಮುಖ್ಯಮಂತ್ರಿಗಳು ಮತ್ತು ಗ್ರಹ ಸಚಿವರು ಭೇಟಿ ನೀಡಿ ಧೈರ್ಯ ತುಂಬ ಕೆಲಸವನ್ನು ಮಾಡಬೇಕೆಂದುಬೆಳ್ತಂಗಡಿ ಶಾಸಕರಲ್ಲಿ ಕೇಳಿಕೊಂಡರು ಜಯಂತ್ ನಡುಬೈಲ್. ಇದೆಲ್ಲವೂ ಒಬ್ಬ ಸಮಾಜದ ವ್ಯಕ್ತಿಯು ಅತ್ಯಂತ ಕಷ್ಟ ಸಂದರ್ಭದಲ್ಲಿನಮ್ಮ ಸಮಾಜದ ಶಕ್ತಿಪೀಠ ವಾದ ಶ್ರೀ ಕ್ಷೇತ್ರದ ಪದಾಧಿಕಾರಿಗಳ ಒಟ್ಟು ಸಮಾಜದ ಕಾಳಜಿಯ ಚಿಂತನೆಯ ಪ್ರತಿಫಲವಾಗಿ ಮುಖ್ಯಮಂತ್ರಿ, ಗೃಹಮಂತ್ರಿ, ರಾಷ್ಟ್ರ, ರಾಜ್ಯ, ಕೇರಳ ಬಿಜೆಪಿ ನಾಯಕರು, ಮೂರು ಸಚಿವರು ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು, ವಿಧಾನಪರಿಷತ್ ಸದಸ್ಯರು ಮಾಜಿ ಶಾಸಕರು ಬೇರೆ ಜಿಲ್ಲೆಗಳಿಂದ ಈಡಿಗ ಸಮುದಾಯದ ಶಾಸಕರು ಜಿಲ್ಲೆಯ ಹೆಚ್ಚಿನ ಜನ ಪ್ರತಿನಿಧಿಗಳು  ಎಲ್ಲರಿಗೂ ಅಂತ್ಯಕ್ರಿಯೆ  ಮತ್ತು ದುಃಖತ ಕುಟುಂಬಕ್ಕೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದರು.ಸಮಾಜದ  ಮೆಚ್ಚಿಗೆಯಕಾರ್ಯ.ಕ್ಷೇತ್ರದ ಅಧ್ಯಕ್ಷರಾದ ಶ್ರೀ ಪಿತಾಂಬರ ಹೇರಾಜೆ, ಪದಾಧಿಕಾರಿಗಳಾದ ರವಿ ಪೂಜಾರಿ ಚಿಲಿಂಬಿ, ಮೋಹನ್ ದಾಸ್,ದೀಪಕ್ಕೋಟ್ಯಾನ್, ಕ್ಷೇತ್ರದ ಟ್ರಸ್ಟಿಗಳು ಮತ್ತು ಸಿಬ್ಬಂದಿ ವರ್ಗ ಬಿಲ್ಲವ ಸಮಾಜದ ಗಣ್ಯರು ಮೃತ ಪ್ರವೀಣ್ ಅವರ ಅಂತಿಮ ದರ್ಶನಪಡೆದು ಕಂಬನಿ ಮಿಡಿದರು. ಮುಂದಿನ ದಿನಗಳಲ್ಲಿ ನಮ್ಮ ಸಮಾಜದ ಯುವಕರು ಉತ್ತಮ ರೀತಿಯಲ್ಲಿ ಸಜ್ಜನ ಜೀವನವನ್ನುನಡೆಸಲು ಉತ್ತಮ ರೀತಿಯ ಸಲಹೆ, ಮಾರ್ಗದರ್ಶನವನ್ನ ಹಂತ ಹಂತವಾಗಿ ಸಮಾಜದ ಯುವಕರಿಗೆ ತಲುಪಿಸಿ ನಮ್ಮ ಸಮಾಜಕ್ಕೆಶ್ರೀ ಕ್ಷೇತ್ರದಿಂದ ಒಂದು ಉತ್ತಮ ಮಾರ್ಗದರ್ಶನವನ್ನು ನೀಡಬೇಕು ಇದೇ ರೀತಿ ಅನೇಕ ಸಂದರ್ಭಗಳಲ್ಲಿ ಅಸಹಾಯಕಪರಿಸ್ಥಿತಿಯಲ್ಲಿರುವ ಎಲ್ಲರಿಗೂ ಸಹಾಯ ಮಾಡುವ ಶಕ್ತಿಯನ್ನು ಯೋಚನೆಯನ್ನು ಶ್ರೀ ಕ್ಷೇತ್ರದ ಶಕ್ತಿಗಳು ಕರುಣಿಸಲಿ ಎಂದು ಕ್ಷೇತ್ರದಭಕ್ತರ ಕೋರಿಕೆ.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »