TOP STORIES:

ಚಳಿಗಾಲದಲ್ಲಿ ಚರ್ಮ ರಕ್ಷಣೆಗೆ ಇಲ್ಲಿದೆ ಮನೆ ಮದ್ದು


ಚಳಿಗಾಲದಲ್ಲಿ ಚರ್ಮ ಬೇಗನೆ ಕಾಂತಿ ಕಳೆದುಕೊಳ್ಳುತ್ತದೆ. ಇದಕ್ಕಾಗಿ ಮನೆಯಲ್ಲಿಯೇ ಹಲವಾರು ಕ್ರಮ ಕೈಗೊಳ್ಳಬಹುದು. ಅದು ಹೇಗೆ ಅಂತ ನೀವು ತಿಳಿಯಿರಿ.ಕಡಲೆಹಿಟ್ಟು ಹಾಗೂ ಅರಿಶಿಣ

ಒಣ ಚರ್ಮವಾಗಿದ್ದಲ್ಲಿ ಈ ಲೇಪನದಲ್ಲಿ ಕೆನೆ, ಮೊಸರು ಬಳಸಬಹುದು.

ಇಲ್ಲದಿದ್ದಲ್ಲಿ ನಿಂಬೆ ರಸ ಅಥವಾ ತಿಳಿಮಜ್ಜಿಗೆ ನೀರು ಬೆರೆಸಿ ಲೇಪನ ಮಾಡಿಕೊಳ್ಳಬೇಕು.

ಈ ಲೇಪನವನ್ನು ಮುಖ, ಕೈ-ಕಾಲುಗಳಿಗೆ ಲೇಪಿಸಿಕೊಂಡು, ಒಣಗಿದಂತೆ ಅನಿಸಿದಾಗ ಉಗುರು ಬೆಚ್ಚಗಿನ ನೀರನ್ನು ಬಳಸಿ ತೊಳೆದುಕೊಳ್ಳಬೇಕು.

ಲೋಳೆಸರ

ಯಾವ ಬಗೆಯ ಚರ್ಮದವರೂ ಧಾರಾಳವಾಗಿ ಇದನ್ನು ಬಳಸಬಹುದು. ಬಟ್ಟಲೊಂದಕ್ಕೆ ಲೋಳೆ ಸರದ ತಿರುಳನ್ನು ತೆಗೆದುಕೊಂಡು, ನಿಂಬೆ ರಸ ಹಾಗೂ ಅರಿಶಿಣವನ್ನು ಬೆರೆಸಿ, ಜೆಲ್‌ನಂತೆ ಇದನ್ನು ಮುಖಕ್ಕೆ, ಮೊಣಕೈ ತುದಿಗಳಿಗೆ ಲೇಪಿಸಿ, ಹದಿನೈದು ನಿಮಿಷಗಳ ನಂತರ ತೊಳೆದುಕೊಳ್ಳಿ.

ಆಲೂಗಡ್ಡೆ

ಇದು ಚರ್ಮವನ್ನು ಸ್ವಚ್ಛಗೊಳಿಸಿ, ಕೋಮಲಾಂಶ ನೀಡುತ್ತದೆ. ಆಲೂಗಡ್ಡೆಯನ್ನು ತುರಿದುಕೊಂಡು, ಆ ತುರಿಯನ್ನು ಮುಖಕ್ಕೆ ಉಜ್ಜಿಕೊಳ್ಳಬೇಕು. ಅದರ ನಂತರ ಐಸ್‌ ಕ್ಯುಬ್‌ ಅನ್ನು ಮುಖದ ತುಂಬಾ ಆಡಿಸಿಕೊಂಡರೆ ನುಣುಪು ನಿಮ್ಮ ಅನುಭವಕ್ಕೆ ಬರುತ್ತದೆ.

ಪಪ್ಪಾಯ

ಅತಿ ಹಣ್ಣಾಗಿ ಕಳೆತ ಪಪ್ಪಾಯದ ತಿರುಳನ್ನು ಅಂಗೈಯಲ್ಲಿ ಹಿಸುಕಿಕೊಳ್ಳಿ. ಒಣಚರ್ಮವಾದರೆ ಕೆನೆ, ಎಣ್ಣೆ ಚರ್ಮವಾದರೆ ನಿಂಬೆರಸ ಬೆರೆಸಿ, ಪೇಸ್ಟ್‌ ಮಾಡಿಕೊಳ್ಳಿ. ಈ ಲೇಪನವನ್ನು ಮುಖ, ಕತ್ತು, ಕೈಗಳಿಗೆ ಲೇಪಿಸಿಕೊಳ್ಳಿ. ಕಾಲು ಗಂಟೆಯ ನಂತರ ಚರ್ಮ ಬಿಗಿದುಕೊಂಡಂತೆ ಎನಿಸತೊಡಗುತ್ತದೆ. ಆಗ ಉಗುರು ಬಿಸಿ ನೀರಿನಿಂದ ಇದನ್ನು ತೊಳೆದುಕೊಳ್ಳಿ.

ಕೊಬ್ಬರಿ ಎಣ್ಣೆ

ಸ್ನಾನದ ಮೊದಲು ಕೊಬ್ಬರಿ ಎಣ್ಣೆ ಹಚ್ಚಿಕೊಂಡು ಉಗುರು ಬಿಸಿ ನೀರಿನಿಂದ ಸ್ನಾನ ಮಾಡಿದರೆ ನೈಸರ್ಗಿಕ ಮಾಯಿಶ್ಚರೈಸರ್‌ ನೀಡಿದಂತೆ ಆಗುತ್ತದೆ. ಸ್ನಾನಕ್ಕೆ ಮೊದಲು ಕೊಬ್ಬರಿ ಎಣ್ಣೆ ಹಚ್ಚಿಕೊಳ್ಳಲು ಆಗದಿದ್ದರೆ ಸ್ನಾನದ ಕೊನೆಯಲ್ಲಿ ಒಂದು ಲೋಟ ನೀರಿಗೆ ಒಂದಷ್ಟು ತೆಂಗಿನೆಣ್ಣೆಯ ಹನಿಗಳನ್ನು ಸೇರ್ಪಡೆಗೊಳಿಸಿ, ಅವನ್ನು ಕೈ, ಕಾಲು, ಬೆನ್ನು, ಹೊಟ್ಟೆಗೆ ಹಚ್ಚಿಕೊಂಡರೆ ಚಳಿಗಾಲದ ತುರಿಕೆ ಹಾಗೂ ಕೆರೆತವನ್ನು ಕಡಿಮೆ ಮಾಡಬಹುದು.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »