TOP STORIES:

ಚಳಿಗಾಲದಲ್ಲಿ ಸಿಹಿ ಪೊಟಾಟೋ ಪೌಷ್ಟಿಕಾಂಶ ಆಹಾರ


750BC ಯಿಂದಲೂ ಬಳಕೆಯಲ್ಲಿರುವ ಆಹಾರ ಗೆಣಸು. ಆದಿಮಾನವ ಕಾಡಿನಲ್ಲಿ ಹುಡುಕಿ ತಿನ್ನುತ್ತಿದ್ದು ಇದೇ ಗೆಣಸು. ಸಿಹಿ ಪೊಟಾಟೋ ಪೌಷ್ಟಿಕಾಂಶದ ಆಗರ ಎನ್ನುತ್ತಾರೆ ತಜ್ಞರು. ಹಸಿಯಾಗಿಯೂ ಸೇವಿಸಬಹುದಾದ ತರಕಾರಿ ಈ ಗೆಣಸು.

 

ಆದಿ ಮಾನವರೂ ಕೂಡ ಕಾಡುಗಳಲ್ಲಿ ಸಿಗುತ್ತಿದ್ದ ಗಡ್ಡೆಯ ಗೆಣಸನ್ನು ತಿಂದು ಬದುಕು ನಡೆಸುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಗೆಣಸು ತಿಂದರೆ ಗ್ಯಾಸ್ಟ್ರಿಕ್​ ಸಮಸ್ಯೆ ಕಾಡಬಹುದು ಎಂದು ಗೆಣಸಿನಿಂದ ದೂರ ಓಡುವವರೇ ಹೆಚ್ಚು. ಆದರೆ ಅದನ್ನು ಸರಿಯಾದ ಪ್ರಮಾಣದಲ್ಲಿ, ಸರಿಯಾದ ರೀತಿಯಲ್ಲಿ ಸೇವಸಿದರೆ ಪರಿಪೂರ್ಣ ಆಹಾರವಾಗಿಲಿದೆ. ಚಳಿಗಾಲದಲ್ಲಿ ದೇಹಕ್ಕೆ ಪೌಷ್ಟಿಕಾಂಶ ನೀಡುವ ಆಹಾರದ ಸೇವನೆ ಅಗತ್ಯ. ಹೀಗಾಗಿ ಅದಕ್ಕೆ ಸಿಹಿ ಆಲೂಗಡ್ಡೆ ಅಥವಾ ಗೆಣಸು ಉತ್ತಮ ಆಹಾರವಾಗಿದೆ. ಇದರಲ್ಲಿ ಯಥೇಚ್ಛವಾದ ಕಾರ್ಬೋಹೈಡ್ರೇಟ್​, ಕೊಲೆಸ್ಟ್ರಾಲ್​ ಸೋಡಿಯಮ್​ನಂತಹ ಅಂಶಗಳು ಇರುತ್ತವೆ. ಇವು ದೇಹವನ್ನು ಬೆಚ್ಚಗಿರಿಸಿ, ಚಳಿಗಾಲದಲ್ಲಿ ಕಾಡುವ ಸುಸ್ತು ಹಾಗೂ ಇನ್ನಿತರ ಕಾಯಿಲೆಗಳಿಂದ ರಕ್ಷಿಸುತ್ತದೆ.

 

ಚಳಿಗಾಲದಲ್ಲಿ ಗಡ್ಡೆಗಳ ಬಳಕೆ ದೇಹಕ್ಕೆ ಪೋಷಕಾಂಶವನ್ನು ನೀಡಿ ದೇಹದ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳುತ್ತದೆ. ಉದಾಹರಣೆಗೆ ಬಿಟ್ರೂಟ್​, ಕ್ಯಾರೆಟ್​ ಇತ್ಯಾದಿಗಳನ್ನು ಸೇವಿಸುವುದರಿಂದ ದೇಹಕ್ಕೆ ಬೇಕಾದ ಪೋಷಕಾಂಶಗಳನ್ನು ಒದಗಿಸುತ್ತದೆ. ಅದರಲ್ಲಿ ಸಿಹಿ ಪೊಟಾಟೋ ಅಥವಾ ಗೆಣಸು ಕೂಡ ಹೌದು. ಈ ಕುರಿತು ಪೌಷ್ಟಿಕ ತಜ್ಞರಾದ ರಜುತಾ ದಿವೇಕರ್​ ಎನ್ನುವವರು ಗೆಣಸಿನ ಉಪಯೋಗಗಳನ್ನು ತಿಳಿಸಿದ್ದಾರೆ. 750BC ಯಿಂದಲೂ ಬಳಕೆಯಲ್ಲಿರುವ ಆಹಾರ ಗೆಣಸು. ಆದಿಮಾನವ ಕಾಡಿನಲ್ಲಿ ಹುಡುಕಿ ತಿನ್ನುತ್ತಿದ್ದು ಇದೇ ಗೆಣಸು. ಸಿಹಿ ಪೊಟಾಟೋ ಪೌಷ್ಟಿಕಾಂಶದ ಆಗರ ಎನ್ನುತ್ತಾರೆ ತಜ್ಞರು. ಹಸಿಯಾಗಿಯೂ ಸೇವಿಸಬಹುದಾದ ತರಕಾರಿ ಈ ಗೆಣಸು. ಅಲ್ಲದೆ ಇದನ್ನು ವಿವಿಧ ರೀತಿಯ ಸಿಹಿತಿನಿಸುಗಳನ್ನು ತಯಾರಿಸಿಯೂ ಸೇವಿಸಬಹುದು. ಆದ್ದರಿಂದ ಸಿಹಿ ಪೊಟಾಟೊ ಒಂದು ಪರಿಪೂರ್ಣ ಆಹಾರವಾಗಿದೆ.

 

ಗೆಣಸಿನ ಉಪಯೋಗಗಳು

ಮಧುಮೇಹಿಗಳಿಗೆ ಗೆಣಸು ಉತ್ತಮ ಆಹಾರವಾಗಿದೆ. ಅಲ್ಲದೆ ಬೊಜ್ಜು, ಪಿಸಿಒಡಿ ಸಮಸ್ಯೆ ಇರುವವರಿಗೆ ಉತ್ತಮ ನಾರಿನ ತರಕಾರಿಯಾಗಿದೆ.

ನೀವು ಜಿಮ್​ಗಳಿಗೆ ಹೋಗುವವರಾದರೆ ಅಥವಾ ಇನ್ನಿತರ ಟ್ರೈನಿಂಗ್​ಗಳಿಗೆ ತೆರಳುವವರಾದರೆ ಸಂಜೆ ಸಮಯದಲ್ಲಿ ಗೆಣಸು ಉತ್ತಮ ಸ್ನಾಕ್ಸ್​ ಆಗಲಿದೆ. ಗೆಣಸಿನ ಪರೋಟ ಅಥವಾ ಅದನ್ನು ಬೇಯಸಿ ಹಾಗೆಯೇ ತಿನ್ನಬಹುದು.

ಗೆಣಸಿನಲ್ಲಿ ಯಥೇಚ್ಛವಾದ ವಿಟಮಿನ್​ ಎ ಅಂಶವಿದೆ. ವಿಟಮಿನ್​ ಎ ರೋಗದ ವಿರುದ್ಧ ಹೋರಾಡಲು ಸಹಾಯಕವಾಗಿದೆ.

ಗೆಣಸು ನಿಮ್ಮ ದೇಹದ ಚರ್ಮವನ್ನು ಮೃದುಗೊಳಿಸುಲು ಸಹಾಯ ಮಾಡುತ್ತದೆ. ದೇಹ ಉಬ್ಬುವಿಕೆ, ಆಮ್ಲೀಯತೆಯಿಂದಲೂ ಇದು ರಕ್ಷಿಸಲಿದೆ.

ಗೆಣಸು ನಿಮಗೆ ನಿದ್ದೆ ಬರಲು ಸಹಾಯ ಮಾಡುತ್ತದೆ. ಹೀಗಾಗಿ ನೀವೇನಾದರೂ ನಿದ್ದೆಗಡುವ ಕೆಲಸವೇನಾದರೂ ಮಾಡಿದ್ದರೆ ಗೆಣಸಿನ ಖಾದ್ಯವನ್ನು ಸೇವಿಸಿ ಮಲಗಿ ನಿದ್ದೆ ಚೆನ್ನಾಗಿ ಬರಲಿದೆ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »