TOP STORIES:

ಚುಕ್ಕಿ ಚಿತ್ತಾರದಲ್ಲಿ ಮೂಡಿಬಂದ ಬಿರುವೆರ್ ಕುಡ್ಲ ಸಂಘಟನೆಯ ಸ್ಥಾಪಕ ಉದಯ್ ಪೂಜಾರಿ


ರಂಗೋಲಿ ಎಂಬುದು ಕಲೆ. ರಂಗೋಲಿ ರಂಗು ಇದ್ದರೇನೇ ಹಬ್ಬದ ಸಂಭ್ರಮಕ್ಕೆ ವಿಶೇಷ ಮೆರುಗು, ಚುಕ್ಕಿಗಳ ಮೂಲಕ ರಂಗೋಲಿ ಬಿಡಿಸುವುದು ಒಬ್ಬ ವ್ಯಕ್ತಿಗೆ ತಾಳ್ಮೆ ಇದ್ದರೆ ಮಾತ್ರ ಮನಸ್ಸಲ್ಲಿ ಹೂಹಿಸಿದ ಚಿತ್ರ ಬಿಡಿಸಲು ಸಾದ್ಯ. ರಂಗೋಲಿ ಬಿಡಿಸುವುದು ಮಹಿಳೆಯರಿಗಷ್ಟೇ ಸೀಮಿತವಾಗಿತ್ತು, ಆದರೆ ಈಗ ಪುರುಷರೂ ದೇವರ ಪೂಜೆ, ಹಬ್ಬ, ಇನ್ನಿತರ ಶುಭ ಸಂದರ್ಭಗಳಲ್ಲಿ ರಂಗೋಲಿ ಹಾಕಿ ಅಲಂಕಾರ ಮಾಡುತ್ತಾರೆ. ಭಿನ್ನವಾಗಿ ಯೋಚಿಸಿ, ರಂಗೋಲಿ ಕೇವಲ ಚುಕ್ಕಿ ಚಿತ್ತಾರವಲ್ಲ, ಅದರೊಳಗೊಂದು ಅಧ್ಯಾತ್ಮದ ಸಂದೇಶವಿದೆ. ರಂಗೋಲಿ ಚಿತ್ರ ಬರೆದ ಪ್ರತಿಭೆ ರಾಜೇಶ್ ಎಸ್ ಬಂಗೆರ, ಈ ಅಧ್ಯಾತ್ಮದ ಸಂದೇಶವಿರುವ ರಂಗೋಲಿ ಚಿತ್ತಾರದಲ್ಲಿ ಮೂಡಿಬಂದ ಚಿತ್ರ ಉದಯ್ ಪೂಜಾರಿ.ಕರ್ನಾಟಕದ ಕರಾವಳಿ, ಬೆಂಗಳೂರು, ಮುಂಬೈ ಮಹಾನಗರ ಹಾಗೂ ದುಬೈ ನಗರಗಳಲ್ಲಿ ಮನೆಮಾತಾಗಿರುವ ಬಲಿಷ್ಠ ಯುವಪಡೆಯ ಬಿರುವೆರ್ ಕುಡ್ಲ ಸಂಘಟನೆಯನ್ನು ಸಮರ್ಥ ರೀತಿಯಲ್ಲಿ ಮುನ್ನಡೆಸಿ, ಯುವಜನಾಂಗಕ್ಕೆ ಸೂಕ್ತ ಮಾರ್ಗದರ್ಶನ ಮತ್ತು ಪ್ರೋತ್ಸಾಹಕೊಟ್ಟು, ಸಮಾಜದ ಕಷ್ಟದಲ್ಲಿರುವ ಜನತೆಯ ಕೈಹಿಡಿಯುತ್ತಿರುವ ಸಂಘಟನೆಯಾಗಿದ್ದು ಇದನ್ನು ಉತ್ತಮ ರೀತಿಯಲ್ಲಿ ನಡೆಸುವಂತ ಸಾರಥಿ ಉದಯ್ ಪೂಜಾರಿ.ರಂಗೋಲಿ ಚುಕ್ಕಿ ಚಿತ್ತಾರ ಮಾಡಿದ ಪ್ರತಿಭೆ ರಾಜೇಶ್ ಎಸ್ ಬಂಗೆರ ಮೂಲತಃ ಪೂಂಜಾಲ್ ಕಟ್ಟೆ ನಿವಾಸಿ. ಸದ್ಯಕ್ಕೆ ದೇವರ ಪೂಜೆಯ ಕೆಲಸ ಮಾಡುತ್ತಿರುವ ಇವರು, ರಂಗೋಲಿ ಬಿಡಿಸುವುದು ಕಲಿತು, ಬಿಡುವಿನ ಸಮಯದಲ್ಲಿ ವಿಭಿನ್ನ ರೀತಿಯಲ್ಲಿ ರಂಗೋಲಿ ಬಿಡಿಸುತ್ತಾ ತನ್ನ ಪ್ರತೀಭೆಯನ್ನು ತೋರಿಸುತ್ತಿದ್ದಾರೆ. ಈಗಾಗಲೇ ಇವರು ರಾಮ ಮಂದಿರ, ಶ್ರೀ. ನಾರಾಯಣ ಗುರು, ಉದಯ್ ಪೂಜಾರಿ ಹಾಗು ಮೊದಲಾದವರ ದೇವರ ಚಿತ್ರಗಳನ್ನು ಬರೆದು ಎಲ್ಲರಿಂದ ಭೇಷ್‌ ಎನ್ನಿಸಿಕೊಂಡಿದ್ದಾರೆ. ರಂಗೋಲಿ ಬಿಡಿಸುವುದನ್ನು ಹವ್ಯಾಸವಾಗಿದೆ.

ಬರಹ: ಪುಷ್ಪರಾಜ್ ಪೂಜಾರಿ – Billavaswarriors.com


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »