TOP STORIES:

FOLLOW US

ಜೀವನದ ಸುದೀರ್ಘ ವರ್ಷಗಳನ್ನು ಕಾರಿನಲ್ಲಿ ಚಾಲಕನಾಗಿ ಕಳೆದ ವೇಣೂರಿನ ಭೈರಣ್ಣನಿಗೊಂದು ನುಡಿ ನಮನ…


ಹುಟ್ಟಿದ್ದು ಗುರುಪುರದಲ್ಲಿ. ಜೀವನದ ಸುದೀರ್ಘ ವರ್ಷಗಳನ್ನು  ಚಾಲಕನಾಗಿ ಕಳೆದದ್ದು ವೇಣೂರಿನಲ್ಲಿ. ಸರಿ ಸುಮಾರು 56 ವರ್ಷಗಳ ನಿರಂತರ ಚಾಲಕನಾಗಿ ಸೇವೆ ಸಲ್ಲಿಸಿದ್ದು ವೇಣೂರಿನ ಮಹಾಜನತೆಗೆ !

ಭೈರಣ್ಣನೇ ಹೇಳುವಂತೆ ಅವರು ವೇಣೂರಿಗೆ ಬಂದದ್ದು ಎಪ್ರಿಲ್ 9 , 1967 ರಂದು.  ವೇಣೂರಿನ ಖ್ಯಾತ ವರ್ತಕರಾದ   ಕಿಟ್ಟೆರ್  ಎಂದೇ ಖ್ಯಾತರಾದ  ಶ್ರೀ ಖಂಡಿಗ ನರಸಿಂಹ ಪೈ ( ಕೆ.ಎನ್. ಪೈ)ಯವರ ಚಾಲಕನಾಗಿ. ವೇಣೂರಿಗೆ ಬಂದ ಮೇಲೆ ಮತ್ತೆ ಗುರುಪುರಕ್ಕೆಮರಳಲು ಮನಸಾಗದೆ ವೇಣೂರಿನಲ್ಲೇ ಕಾರು ಚಾಲಕನಾಗಿ ನೆಲೆಯಾದವರು ಭೈರಣ್ಣ.

ಕಿಟ್ಟರ ಕಾರಿನ ಬಳಿಕ ಶ್ರೀ ನಾರಾಯಣ ಹೆಗ್ಡೆಯವರ ಕಾರಿನಲ್ಲಿ ಡ್ರೈವರ್ ಆಗಿ, ನಂತರ 1970 ರಿಂದ 1974 ವರೆಗೆ  ಕೆಳಗಿನಪೇಟೆಯ ಸಹನಾ ಟೆಕ್ಸ್ ಟೈಲ್ಸ್   ಮಾಲೀಕರಾದ ಶ್ರೀಸಂಜೀವ ಸಾಲ್ಯಾನ್ ಚಾಲಕರಾಗಿದ್ದ ಭೈರಣ್ಣ ನಂತರ ಸ್ವಂತ ಕಾರು ಖರೀದಿಸಿಬಾಡಿಗೆಗೆ ಕಾರು ಓಡಿಸಲು ಆರಂಭಿಸಿದರು.

ಭೈರಣ್ಣ ಕಲಿತದ್ದು ಎರಡನೇ ತರಗತಿಯವರೆಗೆ ಮಾತ್ರ. ಮನೆಯಲ್ಲಿ ಬಡತನವಿದ್ದ ಕಾರಣ ಮೊದಲು ಕೂಲಿ ಕೆಲಸ, ಬಳಿಕವಾಮಂಜೂರಿನಲ್ಲಿ ಸ್ವಲ್ಪ ಸಮಯ ಜೊಕಿಂ ಸೆರಾವೊ ಅವರಲ್ಲಿ ಕೆಲಸ, ಮಂಗಳೂರಿನ ಕೊಟ್ಟಾರದಲ್ಲಿ ಮಾಲಿಂಗ ಶೆಟ್ಟಿಯವರಮನೆಯಲ್ಲಿ ಕಾರು ತೊಳೆದು ಅದನ್ನು ಓಡಿಸಲು ಅಭ್ಯಾಸ ಮಾಡಿ ಪರಿಣತಿ ಪಡೆದವರು.

ಭೈರಣ್ಣ ಹೇಳುವಂತೆ ಅವರು ಹುಟ್ಟಿದ್ದು 1938ನೇ ವರ್ಷದ ಮಾಯಿಡ್ ಪದಿಮೂಜಿ ಪೋಯಿನಾನಿ. ತಂದೆ ಫಕೀರ ಪೂಜಾರಿ. ತಾಯಿ ಗೌರಿ. ದಂಪತಿಗಳ ನಾಲ್ವರು ಮಕ್ಕಳಲ್ಲಿ ಭೈರಣ್ಣ ಒಬ್ಬರು.  ಗುರುಪುರದಲ್ಲಿ ಒಂದೂಕಾಲು ಎಕರೆ ಜಾಗ ಅವರ ತಂದೆಗಿದ್ದಆಸ್ತಿ.

ಭೈರಣ್ಣ ವೇಣೂರಿಗೆ ಬಂದ ಮೇಲೆ ಅನೇಕ ಮಂದಿಯ ಪ್ರಾಣವನ್ನು ಉಳಿಸಿದ ಕೀರ್ತಿ ಅವರದು. 1970 ರಿಂದ 1990   ಕಾಲದಲ್ಲಿವೇಣೂರಿನಲ್ಲಿ ಬಾಡಿಗೆ ಕಾರು ಅಂದರೆ ಅದು ಭೈರಣ್ಣನ ಕಾರು ಅನ್ನುವಷ್ಟು ಪ್ರಸಿದ್ಧರಾಗಿದ್ದವರು ಅವರು. ಅತ್ಯಂತ ವಿನಯಶೀಲ, ದಿನದ ಇಪ್ಪತ್ತನಾಲ್ಕು ಗಂಟೆಗಳಲ್ಲಿ ಯಾವುದೇ ಹೊತ್ತಿನಲ್ಲಿ ಹೋಗಿ ಕರೆದರೂ ಸೇವೆಗೆ ಸದಾ ಸಿದ್ಧರಾಗಿದ್ದ ಭೈರಣ್ಣ ಯಾರೊಂದಿಗೂಸಿಡುಕಿದವರಲ್ಲ. ಎಷ್ಟೋ ಮಂದಿಯ ಮದುವೆ ದಿಬ್ಬಣ, ಆಫೀಸು ಕೆಲಸ, ಪುಣ್ಯಕ್ಷೇತ್ರ ದರ್ಶನ, ಕಾಜೂರು ಉರೂಸ್, ಅತ್ತೂರುಚರ್ಚ್ ಜಾತ್ರೆಗೆ ಜನರನ್ನು ಕರೆದೊಯ್ಯುವ ಕಾರ್ಯ,ಹಲವಾರು ಮಂದಿ ಗರ್ಭಿಣಿಯರನ್ನು ಹಾಗೂ ಅನಾರೋಗ್ಯ ಪೀಡಿತರನ್ನುಸಕಾಲಕ್ಕೆ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಕಾಪಾಡಿದ ಕೀರ್ತಿ ಭೈರಣ್ಣನದ್ದು.

ಕೆಲವೊಮ್ಮೆ ಭೈರಣ್ಣನ ಅಂಬಾಸಿಡರ್ ಕಾರ್ ನಿಧಾನವಾಗಿ ಹೋಗುತ್ತಿದೆಯೆಂದರೆ ಯಾರಿಗೋ ಏನೋ ಆಗಿದೆಯೆಂದೋ, ಮಣಿಪಾಲ ಆಸ್ಪತ್ರೆಗೆ ಹೊರಟಿದೆಯೆಂದೋ ಒಂದು ರೀತಿಯ ಅನೂಹ್ಯ ಭಯವೂ ಅಗುವುದಿತ್ತು!

ಕಳೆದ ಕೆಲವು ವರ್ಷಗಳಿಂದ ಕುಟುಂಬದವರು ಬಂದು ವಾರ್ಧಕ್ಯದ  ಸಮಯದಲ್ಲಿ ಗುರುಪುರದ ಮನೆಗೆ ಬರುವಂತೆಕೇಳಿಕೊಂಡರೂ ಅತ್ತ ಹೋಗಲು ಮನಸಾಗದೇ ವೇಣೂರಿನಲ್ಲಿ  ಶ್ರೀ ಕೇಶವ ಕಾಮತರ ಅಂಗಡಿಯ ಮೇಲಿದ್ದ ರೂಮಿನಲ್ಲೇವಾಸವಿದ್ದರು. ಶ್ರೀ ಕೇಶವ ಕಾಮತರ ಸುಪುತ್ರ ಶ್ರೀ ವೆಂಕಟರಮಣ ಕಾಮತರು ಕೊನೆಯವರೆಗೂ ಅವರಿಗೆ ಆಶ್ರಯವಿತ್ತುಸಹೃದಯತೆಯನ್ನು ತೋರಿದವರು. ಭೈರಣ್ಣನ ಶಿಷ್ಯರಾದ ಇಬ್ರಾಹಿಂರವರು ಭೈರಣ್ಣನನ್ನು ಅನಾರೋಗ್ಯದ ಸಮಯದಲ್ಲಿನೋಡಿಕೊಂಡು ಗುರುಭಕ್ತಿಯನ್ನು ಮೆರೆದಿದ್ದಾರೆ.

ಅವಿವಾಹಿತರಾಗಿಯೇ ಉಳಿದಿದ್ದ ಭೈರಣ್ಣ ಕೊನೆಯ ತನಕವೂ ವೇಣೂರಿನಲ್ಲಿಯೇ ಯಾರಿಗೂ ಹೊರೆಯಾಗದಂತೆ ಉಳಿದು   ಜೂನ್ 9, 2023ರಂದು ತಮ್ಮ 85 ನೇ ವಯಸ್ಸಿನಲ್ಲಿ ಭಗವಂತನ ಪಾದವನ್ನು ಸೇರಿದರು.

ವೇಣೂರಿನಲ್ಲಿ 56 ವರ್ಷಗಳ ಕಾಲ ಜನರಿಗೆ ಕಾರಿನ ಮೂಲಕ ಸೇವೆಯನ್ನು ನೀಡಿದ ಭೈರಣ್ಣನನ್ನು ಯಾವುದೇ ಸಂಘಸಂಸ್ಥೆಗಳಾಗಲೀ, ಶಾರದೋತ್ಸವ, ಗಣೇಶೋತ್ಸವ ಸಮಿತಿಯವರಾಗಲೀ ಗುರುತಿಸಿ ಗೌರವಿಸದೇ ಇದ್ದುದ್ದು ಮಾತ್ರ ವಿಷಾದನೀಯ.

ವೇಣೂರಿನ ಸ್ಮರಣೀಯ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದ ಭೈರಣ್ಣನಿಗೆ ಭಾವಪೂರ್ಣ ಶ್ರದ್ಧಾಂಜಲಿ.

ಡಾ. ಸುಬ್ರಹ್ಮಣ್ಯ ಭಟ್, ಕಜೆ ಮನೆ ವೇಣೂರು

ಮಾಹಿತಿ ಆಧಾರ:

. 23-09-2022 ರಂದು ನಾನು ನಡೆಸಿದ ಮೌಖಿಕ ಸಂದರ್ಶನದ ದಾಖಲಾತಿ

. ಶ್ರೀಮತಿ ಶಶಿಪ್ರಭಾ ಟೀಚರ್ ಅವರ ಮೌ


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »